Author: admin

ಯಾವಾಗಲೂ ಮುಖದ ಮೇಲಿನ ಕಲೆಗಳು, ಕುತ್ತಿಗೆಯ ಭಾಗದಲ್ಲಿ ಕಪ್ಪು ಕಲೆಗಳು, ಅಲ್ಲಲ್ಲಿ ಗುಳ್ಳೆಗಳು ಸೌಂದರ್ಯವನ್ನು ಹಾಳು ಮಾಡುತ್ತದೆ. ಸೂರ್ಯನ ಬಿಸಿಲಿನಿಂದ ಕುತ್ತಿಗೆ ಸುತ್ತ ಕಪ್ಪು ಕಲೆಗಳು ಉಂಟಾಗುತ್ತದೆ. ಈ ಕಪ್ಪು ಕಲೆಗಳನ್ನು ಹೈಪರ್ಪಿಗ್ಮೆಂಟೇಶನ್ ಎಂದು ಕರೆಯಲಾಗುತ್ತದೆ. ವಿಶೇಷವಾಗಿ ಬೇಸಿಗೆಯಲ್ಲಿ ಈ ಸಮಸ್ಯೆ ಹೆಚ್ಚಾಗಿರುತ್ತದೆ. ಇದಲ್ಲದೇ ಅನೇಕ ಮಂದಿ ತಮ್ಮ ಮುಖ ಅಥವಾ ಕುತ್ತಿಗೆಯ ಮೇಲೆ ಸನ್ಸ್ಕ್ರೀನ್ ಅನ್ನು ಹಚ್ಚುವುದಿಲ್ಲ. ಇದರ ಪರಿಣಾಮ ಸೂರ್ಯನ ಬಿಸಿಲಿನಿಂದ ಕುತ್ತಿಗೆ ಸುತ್ತ ಕಪ್ಪು ಕಲೆಗಳು ಉಂಟಾಗುತ್ತದೆ. ಈ ಕಪ್ಪು ಕಲೆಗಳನ್ನು ಹೈಪರ್ ಪಿಗ್ಮೆಂಟೇಶನ್ ಎಂದು ಕರೆಯಲಾಗುತ್ತದೆ. ಅಕಾಂತೋಸಿಸ್ ನಿಗ್ರಿಕಾನ್ಸ್, ಹಾರ್ಮೋನ್ ಸಮಸ್ಯೆ, ಕುತ್ತಿಗೆಯ ಸುತ್ತಾ ಕಪ್ಪು ಕಲೆಗಳನ್ನು ಉಂಟು ಮಾಡುತ್ತದೆ. ಈ ಸಮಸ್ಯೆಯನ್ನು ನಿಭಾಯಿಸಲು ಅನೇಕ ಮಂದಿ ವಿವಿಧ ರೀತಿಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಸೌಂದರ್ಯವರ್ಧಕಗಳನ್ನು ಬಳಸುತ್ತಾರೆ. ಆದರೆ ನಾವು ಬಳಸುವ ರಾಸಾಯನಿಕ ಉತ್ಪನ್ನಗಳು ಕೆಲವೊಮ್ಮೆ ನಮ್ಮ ಮೇಲೆ ಅಡ್ಡ ಪರಿಣಾಮ ಬೀರಬಹುದು ಎಂಬುದನ್ನು ನೆನಪಿಟ್ಟುಕೊಳ್ಳಿ. ಹಾಗಾಗಿ ಕುತ್ತಿಗೆಯ ಮೇಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಹರಸಾಹಸ ಪಡುವ ಬದಲು…

Read More

ಐಪಿಎಲ್ 2024ರಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ಆರ್ ​ಸಿಬಿ ತಂಡದ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಆರ್ ​ಸಿಬಿ ತಂಡದ ಮಾಜಿ ಆಟಗಾರ ಕ್ರಿಸ್ ಗೇಲ್​ ಹೆಸರಿನಲ್ಲಿದ್ದ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. ಇದೀಗ 64 ರನ್ ​ಗಳೊಂದಿಗೆ ಈ ದಾಖಲೆಯನ್ನು ಮುರಿಯುವಲ್ಲಿ ಫಾಫ್ ಡುಪ್ಲೆಸಿಸ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಪವರ್ ​ಪ್ಲೇನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಪಂದ್ಯದಲ್ಲಿ RCB ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ಸ್ಪೋಟಕ ದಾಂಡಿಗ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಶಕದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು…

Read More

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೋಲಾಹಲ ಸೃಷ್ಟಿಸಿದ ಘಟನೆಯಲ್ಲಿ ಹೆಚ್‌.ಡಿ. ರೇವಣ್ಣ ಬಂಧನವಾಗಿದೆ. ಇದರ ಬೆನ್ನಲ್ಲೇ ಮಗ ಪ್ರಜ್ವಲ್ ಕೂಡ ಶರಣಾಗಲು ರೆಡಿಯಾಗಿದ್ದಾರೆ ಎನ್ನಲಾಗಿದೆ. ಅಪ್ಪನ ಅರೆಸ್ಟ್ ಬೆನ್ನಲ್ಲೇ ದುಬೈ ನಲ್ಲಿರುವ ಪ್ರಜ್ವಲ್ ರೇವಣ್ಣ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಇದೆ. ಇತ್ತ ಎಸ್ಐಟಿ(SIT) ತಂಡ ವಿಮಾನ ನಿಲ್ದಾಣದಲ್ಲೇ ಬಂಧಿಸಲು ತಯಾರಿ ನಡೆಸಿದೆ. ಹೆಚ್‌.ಡಿ. ರೇವಣ್ಣ ಬಂಧನವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕುಸಿದು ಹೋಗಿದ್ದು, ಇನ್ನು ಹೆಚ್ಚು ಸತಾಯಿಸಿದರೆ ಉಳಿಗಾಲವಿಲ್ಲ ಎಂದು ಸರೆಂಡರ್ ಆಗುವ ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ. ವೀಡಿಯೋ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಪ್ರಜ್ವಲ್ ರೇವಣ್ಣ ಹಾಗೂ ಹೆಚ್‌.ಡಿ. ರೇವಣ್ಣ ಕುಟುಂಬಕ್ಕೆ ಸಂಕಷ್ಟಗಳು ಹೆಚ್ಚಾಗುತ್ತಿದೆ. ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿ ಕೂಡ ವಜಾ ಆಗಿದ್ದು, ಬಚಾವ್ ಆಗುವ ದಾರಿಗಳು ಸದ್ಯಕ್ಕೆ ಮುಚ್ಚಿದ್ದು, ಸರೆಂಡರ್ ಆಗುವ ಮಾರ್ಗವೊಂದೇ ಉಳಿದಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇದ್ದು, ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ. ಇದರ ನಡುವೆ ಇನ್ನೂ ಕೆಲವೇ ಹೊತ್ತಿನಲ್ಲಿ ಈ ಜಿಲ್ಲೆಗಳಿಗೆ ಮಳೆರಾಯ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನ ಬೆಂದಿದ್ದ ರಾಜ್ಯ ರಾಜಧಾನಿ ಕಳೆದ ಎರಡು ದಿನಗಳಿಂದ ಸಂಜೆ ಹೊತ್ತಿಗೆ ಮಳೆರಾಯನ ಕೃಪೆಯಿಂದ ತಂಪಾಗಿದೆ. ಇನ್ನು ನಿನ್ನೆ  ನಗರದಲ್ಲಿ ಮಧ್ಯಾಹ್ನದ ವೇಳೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಬಂದಿದೆ. ಅರ್ಧ ಗಂಟೆ ಭರಪೂರ ಮಳೆ ಸುರಿದಿದೆ. ಅಷ್ಟೇ ಅಲ್ಲದೆ, ಇನ್ನೂ ಕೆಲವೇ ಹೊತ್ತಿನಲ್ಲಿ ಗಡಿಜಿಲ್ಲೆ ಚಾಮರಾಜನಗರ, ಕೋಲಾರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆರಾಯ ಕಾಲಿಡಲಿದ್ದಾನೆ ಎಂದು ಬೆಂಗಳೂರು ಹವಾಮಾನ ಕಚೇರಿ ತನ್ನ ಅಧಿಕೃತ ಟ್ವೀಟ್‌ ಮೂಲಕ ಮಾಹಿತಿ ರವಾನಿಸಿದೆ. ಇನ್ನು…

Read More

ಮೂರು ದಿನಗಳ ಹಿಂದೆ ವೊರ್ಸೆಸ್ಟರ್‌ ಶೈರ್‌ ಪರವಾಗಿ 66 ರನ್ ಗೆ 6 ವಿಕೆಟ್‌ ಪಡೆದು ಅಸಾಮಾನ್ಯ ಬೌಲಿಂಗ್​ ಪ್ರದರ್ಶನ ತೋರಿದ್ದ ಇಂಗ್ಲೆಂಡ್​ ಉದಯೋನ್ಮುಖ ಆಟಗಾರ, 20 ವರ್ಷದ ಜೋಶ್ ಬೇಕರ್‌ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬುಧವಾರ ಪಂದ್ಯವನ್ನಾಡಿದ ಬಳಿಕ ಬೇಕರ್‌ ಯಾವುದೇ ಸಂಪರ್ಕಕ್ಕೆ ಸಿಗಲಿಲ್ಲ. ಫೋನ್‌ ಮಾಡಿದರೂ ಕೂಡ ರಿಸೀವ್‌ ಮಾಡಿರಲಿಲ್ಲ. ಬಳಿಕ ಅವರು ತಮ್ಮ ಸ್ನೇಹಿತನ ಮನೆಯಲ್ಲಿ  ಮೃತರಾಗಿ ಪತ್ತೆಯಾಗಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಇವರ ಸಾವಿಗೆ ಇಂಗ್ಲೆಂಡ್​ ಮತ್ತು ವೇಲ್ಸ್​ ಕ್ರಿಕೆಟ್​ ಮಂಡಳಿ, ಐಸಿಸಿ ಸೇರಿ ಅನೇಕ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಕಂಬನಿ ಮಿಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ ನಲ್ಲಿ 22 ಪಂದ್ಯ ಆಡಿರುವ ಜೋಶ್ 43 ವಿಕೆಟ್​ ಪಡೆದಿದ್ದಾರೆ. ಬ್ಯಾಟಿಂಗ್​ನಲ್ಲಿ 411 ರನ್​ ಗಳಿಸಿದ್ದಾರೆ. 84ಕ್ಕೆ 5 ವಿಕೆಟ್​ ಉತ್ತಮ ವೈಯಕ್ತಿಕ ಸಾಧನೆಯಾಗಿದೆ. ಲಿಸ್ಟ್​ ಎ ಕ್ರಿಕೆಟ್​ನಲ್ಲಿ 17 ಪಂದ್ಯಗಳಿಂದ 24 ವಿಕೆಟ್​, ಟಿ20 ಕ್ರಿಕೆಟ್ ​ನಲ್ಲಿ 8…

Read More

ಲೈಂಗಿಕ ಹಗರಣಗಳ ಭಾರೀ ಸುಳಿಗೆ ಸಿಲುಕಿಕೊಂಡು ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟಂತೆ ತನಿಖೆಯನ್ನು ಕೈಗೆತ್ತಿಕೊಂಡಿರುವ SIT ಇದೀಗ ‘ಬ್ಲೂ ಕಾರ್ನರ್’ ನೋಟಿಸ್ ಅನ್ನು ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದೆ. ಸದ್ಯ SIT ಮೇಲೆ ಈ ಪ್ರಕರಣವನ್ನು ಭೇದಿಸುವಂತಹ ಬಹು ದೊಡ್ಡ ಜವಾಬ್ದಾರಿ ಇದೆ. ಬೆನ್ನಲ್ಲೇ ಸರ್ಕಾರದ ಕಡೆಯಿಂದಲೂ ಒತ್ತಡವಿದೆ. ಸದ್ಯ ಸಂತ್ರಸ್ತ ಮಹಿಳೆಯರು ಒಬ್ಬೊಬ್ಬರಾಗಿಯೇ ತನಿಖೆಗೆ ಸಹಕಾರ ನೀಡುತ್ತಿರುವುದರಿಂದ ಒಂದಷ್ಟು ಕಡೆ ಮಾಹಿತಿಯ ಸಂಗ್ರಹಗಳು ಕೂಡ ನಡೆಯುತ್ತಿದೆ. ಈ ನಡುವೆ ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ಸಂತ್ರಸ್ತೆಯರಲ್ಲಿ ಒಬ್ಬರಾಗಿರುವ ಮಹಿಳೆಯನ್ನು ಕರೆದುಕೊಂಡು ಹೋಗಿ ಮಾಹಿತಿಯನ್ನ ಕಲೆ ಹಾಕುವಂತಹ ಕೆಲಸ ಕೂಡ ನಡೆಯುತ್ತಿದೆ. ಅಪರಾಧ ಪ್ರಕರಣದಲ್ಲಿ ಬೇಕಾಗಿರುವವರ ಮಾಹಿತಿ ಪಡೆಯಲು ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗುತ್ತದೆ. ಇಂಟರ್ ಪೋಲ್ ಅಪರಾಧಿ ಯಾವ ದೇಶಕ್ಕೆ ಸೇರಿದವನು ಮತ್ತು ಯಾವ ದೇಶದಲ್ಲಿ ಇದ್ದಾನೆಯೋ ಆ ದೇಶಗಳಿಗೆ ಮಾತ್ರ ನೋಟಿಸ್ ನೀಡುತ್ತದೆ. ಬ್ಲೂ ಕಾರ್ನರ್ ನೋಟಿಸ್ ಜಾರಿಯಾದ…

Read More

ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​.ಡಿ.ರೇವಣ್ಣ ಅವರನ್ನು SIT ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ಹೆಚ್.ಡಿ.ದೇವೇಗೌಡರ ಮನೆಯಿಂದ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಕೆಆರ್​ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಯುವಕನೊಬ್ಬ ಕೀಮಾ ಎಂಬ ಹೊಸ ಫ್ಲೇವರ್ ನ ದೋಸೆ ಮಾಡುವ ಮೂಲಕ ತಿಂಗಳಿಗೆ 50 ಸಾವಿರ ರೂ. ಗಳಿಸುತ್ತಿದ್ದಾನೆ. ಕೀಮಾ ದೋಸೆ ಕೇವಲ 80 ರೂ. ರುಚಿಯೂ ಕೂಡ ಸೂಪರ್ ಆಗಿದೆ. ಆಹಾರ ಪ್ರಿಯರು ದೋಸೆ ತಿನ್ನಲು ಆಸಕ್ತಿ ತೋರುತ್ತಿದ್ದಾರೆ. ಕಳೆದ ಆರು ತಿಂಗಳಿಂದ ನವೀನ್ ಅವರು ಸಾರ್ವಜನಿಕರಿಗೆ ಕೀಮಾ ದೋಸೆಯನ್ನು ಪರಿಚಯಿಸುವ ಮೂಲಕ ತಿಂಗಳಿಗೆ ರೂ.50 ಸಾವಿರ ಗಳಿಸುತ್ತಿದ್ದಾರೆ. ನವೀನ್ ಅವರು ನಿಜಾಮಾಬಾದ್ ಜಿಲ್ಲಾ ಕೇಂದ್ರದಲ್ಲಿರುವ ಪ್ರಗತಿನಗರ ಎಂಡಾಲ ಟವರ್‌ನಲ್ಲಿ ತಿರುಮಲ ಟಿಫಿನ್‌ಗಳನ್ನು ಆರಂಭಿಸಿದರು. ಆರು ತಿಂಗಳ ಹಿಂದೆ ಟಿಫಿನ್ ಸೆಂಟರ್ ತೆರೆಯಲಾಗಿದೆ. ಆದರೆ ಕೀಮಾ ಎರಡು ತಿಂಗಳಿಗೆ ಗ್ರಾಹಕರಿಗೆ ದೋಸೆ ಪರಿಚಯಿಸಿದರು. ಇದರಿಂದಾಗಿ ಗ್ರಾಹಕರು ಕೀಮಾ ದೋಸೆ ತಿನ್ನಲು ಆಸಕ್ತಿ ತೋರುತ್ತಿದ್ದಾರೆ. ಕೀಮಾ ದೋಸೆ 80 ರೂಪಾಯಿಗೆ ನೀಡಲಾಗುತ್ತಿದ್ದು, ಒಮ್ಮೆ ಟ್ರೈ ಮಾಡಿದವರು ಮತ್ತೊಮ್ಮೆ ಪ್ರಯತ್ನಿಸಲು ಬರುತ್ತಿದ್ದಾರೆ. ಕೀಮಾ ದೋಸೆಗೆ ಬೇಡಿಕೆ ಹೆಚ್ಚಿದೆ ಎನ್ನುತ್ತಾರೆ ನವೀನ್. ನನಗೆ ಸ್ವಲ್ಪ ವ್ಯಾಪಾರ ಮಾಡುವ ಐಡಿಯಾ ಬಂತು. ಸಣ್ಣ ಹೂಡಿಕೆಯೊಂದಿಗೆ ಟಿಫಿನ್…

Read More

ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಏಪ್ರಿಲ್ 23 ರಂದು ಗಂಭೀರವಾದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಎಸ್‌ ಯುವಿ ಮೂರು ಬಾರಿ ಪಲ್ಟಿ ಹೊಡೆದಿದೆ ಎಂದು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿಯನ್ನು ತಡವಾಗಿ ಹಂಚಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ(ಎಎಪಿ) ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷರೂ ಆಗಿದ್ದ ಬೆಂಗಳೂರಿನ ಮಾಜಿ ಪೋಲೀಸ್ ಅಧಿಕಾರಿ, ಸದ್ಯ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗಂಭೀರ ಅಪಘಾತದಲ್ಲಿ ಅವರ ಪಕ್ಕೆಲುಬುಗಳು ಮುರಿದಿದ್ದು, ಬೆನ್ನು ಮೂಳೆ ಮತ್ತು ಅಂಗಾಲಿಗೆ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಭಾಸ್ಕರ್ ರಾವ್ ಟೊಯೊಟಾ ಇನ್ನೋವಾ ಹೈಬ್ರಿಡ್ ಹೈಕ್ರಾಸ್ ‌ನಲ್ಲಿ ಇತರ ಮೂವರೊಂದಿಗೆ ಆಂಧ್ರಪ್ರದೇಶದ ಅನಂತಪುರ ಮತ್ತು ಕದ್ರಿ ನಡುವೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಟ್ರಕ್‌ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದಾಗಿ ಕಾರು ಮೂರು ಬಾರಿ ಪಲ್ಟಿ ಹೊಡೆದಿದೆ. ಸೀಟ್ ಬೆಲ್ಟ್ ಮತ್ತು ಕಾರಿನ ಏರ್‌ ಬ್ಯಾಗ್ ‌ಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರಿನಲ್ಲಿದ್ದ ವೆಂಕಿ ಎನ್ನುವವರು ತೀವ್ರವಾಗಿ ಗಾಯಗೊಂಡು…

Read More

ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗೋ ವೀಡಿಯೋಗಳು ಒಮ್ಮೊಮ್ಮೆ ನಮಗೆ ನಿಜಕ್ಕೂ ಆಘಾತ ಉಂಟುಮಾಡುತ್ತದೆ. ಅಂತೆಯೇ ಇದೀಗ ಇಂತದ್ದೇ ಒಂದು ವಿಡಿಯೋ ವೈರಲ್ ಆಗಿದ್ದು ಪೆಟ್ರೋಲ್ ಹಾಕಿಸಲು ಬಂಕ್ ಗೆ ಬಂದ ಯುವತಿಯೊಬ್ಬಳು ಸ್ಕೂಟರ್‌ ನಿಂದ ಇಳಿದು ಪ್ಯಾಂಟ್ ಬಿಚ್ಚಿ ತೋರಿಸಿದ್ದಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ. ಎಂದಿನಂತೆ ಪೆಟ್ರೋಲ್ ಪಂಪ್‌ ನಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಸ್ಕೂಟರ್ ಮೂಲಕ ಇಬ್ಬರು ಯುವತಿಯರು ಆಗಮಿಸಿದ್ದಾರೆ. ಆಗ ಒಬ್ಬಳು ಹುಡುಗಿ ಏಕಾಏಕಿ ಸ್ಕೂಟರ್‌ ನಿಂದ ಇಳಿದು ಪೆಟ್ರೋಲ್ ಹಾಕುತ್ತಿದ್ದ ಸಿಬ್ಬಂದಿ ಬಳಿ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸುವ ಪ್ರಯತ್ನ ಮಾಡಿದ್ದಾಳೆ. ಈ ಘಟನೆ ವೀಡಿಯೋ ಭಾರಿ ವೈರಲ್ ಆಗಿದ್ದು, ಯುವತಿಯ ಅಸಭ್ಯ ವರ್ತನೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಈ ಘಟನೆ ಎಲ್ಲಿ ನಡೆದಿದೆ ಎಂದು ತಿಳಿದುಬಂದಿಲ್ಲ. ಆದರೆ ಪೆಟ್ರೋಲ್ ಪಂಪ್ ‌ನ ಸಿಸಿಟಿವಿ(CCTV)ಯಲ್ಲಿ ಈ ದೃಶ್ಯ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯುವತಿ…

Read More