Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಪೆನ್ ಡ್ರೈವ್, ಸಿಡಿ ವಿಶ್ವವಿದ್ಯಾಲಯವನ್ನೇ ತೆರೆದಿದ್ದಾರೆ. ಡಿಕೆಗೆ ಎದುರಾಳಿಗಳನ್ನು ಹೇಗೆ ಬಗ್ಗು ಬಡಿಯಬೇಕು ಎಂದು ಗೊತ್ತಿದೆ. ಕೆಲವರಿಗೆ ಬೆದರಿಕೆಯ ಅಸ್ತ್ರ, ಕೆಲವರಿಗೆ ಸಿಡಿ ಅಸ್ತ್ರ ಬಳಸುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜು ಗೌಡ ವಾಗ್ದಾಳಿ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿ, “ಡಿಕೆ ಶಿವಕುಮಾರ್ ಹೀಗೆ ಮಾಡಿಯೇ ಮಾಜಿ ಸಚಿವ ರಮೇಶ ಜಾರಕಿಹೊಳಿಯವರ ಸಿಡಿ ತಯಾರಿಸಿ ಮನೆಗೆ ಕಳುಹಿಸಿದ್ದಾರೆ. ಸಮಯ ಬಂದಾಗ ಎದುರಾಳಿಗೆ ಏನೆಲ್ಲಾ ಕೊಡಬೇಕೋ ಅದನ್ನು ಡಿಕೆ ಶಿವಕುಮಾರ್ ಕೊಡುತ್ತಾರೆ. ಈಗ ಪ್ರಜ್ವಲ್, ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಅಸ್ತ್ರ ಪ್ರಯೋಗಿಸಿದ್ದಾರೆ ” ಎಂದು ಆರೋಪಿಸಿದ್ದಾರೆ. ಡಿಕೆ ಶಿವಕುಮಾರ ಸಿಡಿ ಮಾಡೋದ್ರಲ್ಲಿ ಎಕ್ಸ್ಪರ್ಟ್. ಇಂತಹವರನ್ನು ಪಕ್ಕದಲ್ಲಿ ಕರೆದುಕೊಂಡು ಯಾರೂ ಓಡಾಡಬೇಡಿ. ಸಿದ್ದರಾಮಯ್ಯ ಸರ್, ನೀವು ಕೂಡಾ ಹುಷಾರಾಗಿರಿ” ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ರಾಜು ಗೌಡ…
ಬಿಗ್ ಬಾಸ್ ಒಟಿಟಿ ವಿನ್ನರ್ ಎಲ್ವಿಶ್ ಯಾದವ್ ವಿರುದ್ಧ ಅಕ್ರಮವಾಗಿ ಹಣ ಸಾಗಾಣಿಕೆ ವಿಚಾರವಾಗಿ, ಜಾರಿ ನಿರ್ದೇಶನಾಲಯವು ಕೇಸ್ ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆ ಕುರಿತಂತೆ ಉತ್ತರ ಪ್ರದೇಶದ ಗೌತಮ್ ಬುದ್ಧನಗರ ಜಿಲ್ಲೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ದಾಖಲಾದ ಎಫ್.ಐ.ಆರ್ ಮತ್ತು ಜಾರ್ಜ್ ಶೀಟ್ ಗಳ ಆಧಾರದಲ್ಲಿ ಇಡಿ ಪ್ರಕರಣವನ್ನು ದಾಖಲಿಸಿಕೊಂಡಿದೆ. ಈ ಹಿಂದೆ ಎಲ್ವಿಶ್ ಪಾರ್ಟಿಯೊಂದರಲ್ಲಿ ಹಾವಿನ ವಿಷ ಬಳಸಿದ ಪ್ರಕರಣದಲ್ಲಿ ನೋಯ್ಡಾ ಪೊಲೀಸರು ಬಂಧಿಸಿದ್ದರು. ರೇವ್ ಪಾರ್ಟಿಗಳಲ್ಲಿ ಹಾವಿನ ವಿಷವನ್ನು ಪೂರೈಸಲು ಅವರು ಭಾರಿ ಮೊತ್ತದ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು. ಪೊಲೀಸರು ಸಲ್ಲಿಸಿದ್ದ ಜಾರ್ಜ್ ಶೀಟ್ ನಲ್ಲಿ ಅಕ್ರಮ ಹಣದ ಕುರಿತಂತೆ ಉಲ್ಲೇಖವಾಗಿತ್ತು. ಹಾಗಾಗಿ ಈ ಪ್ರಕರಣಕ್ಕೆ ಇಡಿ ಎಂಟ್ರಿ ಕೊಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹಾಸನ: ಸಂತ್ರಸ್ತ ಮಹಿಳೆಯನ್ನ ಮನೆಯೊಳಗೆ ಕರೆದೊಯ್ದ ವಿಶೇಷ ತನಿಖಾ ತಂಡ, ಮನೆಯೊಳಗೆ ಅಡುಗೆ ಮನೆ, ಬೆಡ್ ರೂಂ ಹಾಗೂ ಸ್ಟೋರ್ ರೂಂನಲ್ಲಿ ಮಹಜರ್ ನಡೆಸಿದ್ದಾರೆ. ಮನೆಯಲ್ಲಿ ಭವಾನಿ ರೇವಣ್ಣ ಇಲ್ಲದ ವೇಳೆ, ಈ ಮೂರು ಕಡೆ ದೌರ್ಜನ್ಯ ನಡೆಸಿದ್ದ ಬಗ್ಗೆ ಸಂತ್ರಸ್ಥೆ ಆರೋಪ ಮಾಡಿದ್ದಾರೆ. ಹಾಗಾಗಿ ಮನೆಯೊಳಗೆ, ವಿವಿಧ ಕಡೆ ಸಂತ್ರಸ್ತ ಮಹಿಳೆಯಿಂದ ಮಾಹಿತಿ ಪಡೆದು, ತನಿಖಾ ತಂಡ ಸ್ಥಳ ಮಹಜರ್ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ಧಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಚಾಮರಾಜನಗರ: ಇವಿಎಂ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿದ್ದ ಗ್ರಾಮಸ್ಥರು ಪೊಲೀಸರ ಭಯದಿಂದ ತಲೆಮರೆಸಿಕೊಂಡಿದ್ದಾರೆ. ಗ್ರಾಮಸ್ಥರು ಮನೆಗಳಿಗೆ ಬೀಗ ಹಾಕಿ ಹೋಗಿದ್ದರಿಂದ ಕಟ್ಟಿ ಹಾಕಿದ ಎರಡು ಎಮ್ಮೆಗಳು ಸ್ಥಳದಲ್ಲೇ ಸಾವಪ್ಪಿದ್ದು, ನೀರು ಹಾಗೂ ಮೇವು ಕೊಡುವವರು ಇಲ್ಲದೆ ಎಮ್ಮೆಗಳು ಧಾರುಣವಾಗಿ ಮೃತಪಟ್ಟಿವೆ ಎಂದು ತಿಳಿದು ಬಂದಿದೆ. ಘಟನೆ ನಡೆದ ದಿನದಿಂದ ಮೇವು, ನೀರಿಲ್ಲದೆ ಕಟ್ಟಿ ಹಾಕಿದ ಸ್ಥಳದಲ್ಲೇ ಮೂಕ ಪ್ರಾಣಿಗಳು ಪ್ರಾಣ ಬಿಟ್ಟಿವೆ. ಇರುವ ಬೆರಳೆಣಿಕೆಯಷ್ಟು ಜನರೂ ಕೂಡ ಊಟಕ್ಕೂ ಪರದಾಟ ನಡೆಸುತ್ತಿದ್ದಾರೆ. ಈಗಾಗಲೇ 200ಕ್ಕೂ ಹೆಚ್ಚು ಜನರ ವಿರುದ್ದ ವಿವಿಧ ಪ್ರಕರಣಗಳು ದಾಖಲಾಗಿವೆ. ಈ ವರೆಗೆ 33 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಿಯೊ ಗ್ರಾಂಡೆ ಡೊ ಸುಲ್: ಬ್ರೆಜಿಲ್ ನ ದಕ್ಷಿಣ ರಾಜ್ಯ ರಿಯೊ ಗ್ರಾಂಡೆ ಡೊ ಸುಲ್ ನಲ್ಲಿ ಭಾರೀ ಮಳೆ ಮತ್ತು ಮಣ್ಣಿನ ಕುಸಿತದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ 74 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸಹಾಯ ಮಾಡಲು 626 ಸೈನಿಕರ ಜೊತೆಗೆ 12 ವಿಮಾನಗಳು, 45 ವಾಹನಗಳು ಮತ್ತು 12 ದೋಣಿಗಳನ್ನು ನಿಯೋಜಿಸಲಾಗಿದೆ. ಫೆಡರಲ್ ಸಹಾಯವನ್ನು ಈಗಾಗಲೇ ಸಜ್ಜುಗೊಳಿಸಲಾಗಿದೆ. ರಸ್ತೆಗಳನ್ನು ತೆರವುಗೊಳಿಸುವುದು, ಆಹಾರ, ನೀರು ಮತ್ತು ಹಾಸಿಗೆಗಳಂತಹ ಅಗತ್ಯ ಸಾಮಗ್ರಿಗಳನ್ನು ವಿತರಿಸುವುದು ಮತ್ತು ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಆಶ್ರಯವನ್ನು ಸ್ಥಾಪಿಸುವ ಕೆಲಸ ಮಾಡಲಾಗುತ್ತಿದೆ. ರಾಜ್ಯದ ಪ್ರಮುಖ ಗೈಬಾ ನದಿಯು ಆತಂಕಕಾರಿ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. ಇದರಿಂದ…
ಬೆಂಗಳೂರಿನಲ್ಲಿ ನೆನ್ನೆ ಸಿಡಿಲು ಸಮೇತ ದೊಡ್ಡ ಮಳೆ ಬಿದ್ದಿದೆ. ಈ ಸಂದರ್ಭ ಸಿಡಿಲು ಬಡಿದು ಮಹಿಳೆ ಹಾಗೂ 20 ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಆ ಗ್ರಾಮದ ರತ್ಮಮ್ಮ ಸಿಡಿಲಿಗೆ ಬಲಿಯಾದ ಮಹಿಳೆ. ಬೆಂಗಳೂರು ಮತ್ತು ಸುತ್ತಮುತ್ತ ದಿಢೀರ್ ಮಳೆ ಶುರುವಾಗಿದ್ದು, ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದಲ್ಲಿ ಬೇವಿನ ಮರದಡಿ ಮೇಕೆಗಳ ಜೊತೆ ನಿಂತಿದ್ದಾಗ ಜೋರಾಗಿ ಸಿಡಿಲು ಬಡಿದಿದೆ. ಆಗ ರತ್ನಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಅಲ್ಲಿದ್ದ ಮೇಕೆಗಳು ಕೂಡ ಸಿಡಿಲಿಗೆ ಬಲಿಯಾಗಿವೆ. ಗ್ರಾಮದಲ್ಲಿ ಗಾಳಿ ಮಳೆಯ ಆರ್ಭಟ ಜೋರಾಗಿದ್ದು ಮಳೆ ಅಲ್ಲಲ್ಲಿ ಮುಂದುವರೆದಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಪ್ರಾಪ್ತೆ ಹಿಂದೂ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಸದ್ದಾಂ ಹುಸೇನ್ ಬಂಧಿತ ಆರೋಪಿ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಟ್ಟೆ ನೋವು ಹಿನ್ನೆಲೆ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವುದು ದೃಢವಾಗಿದೆ. ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಗೆ ಚಿಕಿತ್ಸೆ ನೀಡಲಾಗಿದೆ. ಮುಸ್ಲಿಂ ಯುವಕನ ವಿರುದ್ಧ ಅಪ್ರಾಪ್ತೆ ಪೋಷಕರು ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿರುವುದಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಪ್ರತಿಭಟನೆ ಕಾವು ಜೋರಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸ್ ಇಲಾಖೆ ಎಸಿಪಿ ಶಿವಪ್ರಕಾಶ್ ನಾಯ್ಕ್ ಸಮ್ಮುಖದಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಈ ವೇಳೆ ಆರೋಪಿ ಬಂಧನಕ್ಕೆ ಆಗ್ರಹಿಸಿ ನವನಗರ ಠಾಣೆ ಮುಂದೆ ಹಿಂದೂಪರ ಸಂಘಟನೆ ಮತ್ತು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗಿದೆ. ಪ್ರತಿಭಟನೆ ಹಿನ್ನಲೆ ನವನಗರ ಠಾಣೆಗೆ ಕಾನೂನು ಸುವ್ಯವಸ್ಥೆ…
ಉಂಡ ಮನೆಗೆ ಕನ್ನ ಹಾಕಿದ್ದ ಚಾಲಕಿ ಕಳ್ಳಿಯನ್ನು ಜೆಪಿನಗರ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ (38) ಬಂಧಿತ ಆರೋಪಿಯಾಗಿದ್ದು, ರೇಖಾ ಕಿರಣ್ ಎಂಬುವವರ ಮನೆಯಲ್ಲಿ 8 ವರ್ಷದಿಂದ ಕೆಲಸ ಮಾಡಿಕೊಂಡಿದ್ದಳು. ಮನೆಯಲ್ಲಿ ಸಾಕಷ್ಟು ಚಿನ್ನಾಭರಣ ಇದ್ದ ಬಗ್ಗೆ ಹಾಗೂ ಬೀರು ಕೀ ಸಹ ಎಲ್ಲಿ ಇಟ್ಟಿರ್ತಾರೆ ಎಂಬುದನ್ನು ಅರಿತಿದ್ದಳು. ಕಳೆದ ಮಾರ್ಚ್ ತಿಂಗಳಲ್ಲಿ ಮನೆಯವರು ಹೊರಗೆ ಹೋಗುವುದನ್ನು ಕಾದು ಕುಳಿತಿದ್ದ ಮಂಜುಳಾ, ಮನೆ ಬೀರುವಿನಲ್ಲಿದ್ದ 34 ಲಕ್ಷ ಮೌಲ್ಯದ ಚಿನ್ನ, ವಜ್ರದ ಆಭರಣದ ಜೊತೆ ಒಂದು ಲಕ್ಷ ಕ್ಯಾಶ್ ಎಗರಿಸಿದ್ದಳು. ಕಳ್ಳತನ ಮಾಡಿದ್ದ ಆಭರಣಗಳನ್ನು ತನ್ನೂರು ಹೆಚ್ ಡಿ ಕೋಟೆಯಲ್ಲಿ ಇಟ್ಟಿದ್ದಳು. ನಂತರ ರೇಖಾ ಕಿರಣ್ ಮನೆಯಲ್ಲಿಯೇ ಕೆಲಸ ಮುಂದುವರೆಸಿದ್ದಳು. ರೇಖಾ ಕಿರಣ್ ಕಳ್ಳತನದ ಬಗ್ಗೆ ಪ್ರಶ್ನೆ ಮಾಡಿದಾಗ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದಳು. ಆದ್ದರಿಂದ ಮನೆಯೊಡತಿ ಅನುಮಾನಗೊಂಡು ಜೆಪಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರ ತನಿಖೆ ವೇಳೆ ಮಂಜುಳಾ ಕಳ್ಳಾಟ ಬಯಲಾಗಿದ್ದು, ಸದ್ಯ ಆರೋಪಿಯಿಂದ 34 ಲಕ್ಷ ಮೌಲ್ಯದ ಚಿನ್ನ,…
ವಾಹನ ಚಲಾವಣೆ, ರಸ್ತೆ ನಿಯಮಗಳ ಕುರಿತು ಆಗಾಗ ಹೊಸ ನಿಯಮಗಳನ್ನು ಜಾರಿಗೆ ತರುವ ಸಾರಿಗೆ ಇಲಾಖೆಯು ಇದೀಗ ಡ್ರೈವಿಂಗ್ ಲೈಸೆನ್ಸ್ (DL) ಹಾಗೂ RC ಬಗ್ಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಈ ಹೊಸ ನಿಯಮ ಹೊಸದಾಗಿ ಲೈಸೆನ್ಸ್ ಮಾಡಿಸುವವರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಇದುವರೆಗೂ ನೀವು ಡ್ರೈವಿಂಗ್ ಲೈಸೆನ್ಸ್ ಬೇಕು ಅಂದರೆ RTO ನಲ್ಲಿ ಕ್ಯೂ ನಿಂತು ಟೆಸ್ಟ್ ಡ್ರೈವ್ ನೀಡಿ ಪಡೆದುಕೊಳ್ಳಬೇಕಿತ್ತು. ಅದರಿಗ ಸರ್ಕಾರ ಈ ನಿಯಮದಲ್ಲಿ ಕೆಲ ಬದಲಾವಣೆಗಳನ್ನು ತರಲು ತೀರ್ಮಾನಿಸಿದ್ದು, ಇನ್ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆದುಕೊಳ್ಳಲು ಆರ್ ಟಿಓ ಆಫೀಸ್ ಬಳಿಯೇ ಹೋಗಬೇಕಿಲ್ಲ, ಬದಲಿಗೆ ಯಾವುದಾದರೂ ಖಾಸಗಿ ಸಂಸ್ಥೆಯಲ್ಲಿ ಡ್ರೈವ್ ಟೆಸ್ಟ್ ಮಾಡಿಸಿ ಸರ್ಟಿಫಿಕೇಟ್ ಪಡೆದುಕೊಳ್ಳಬಹುದು. ಈ ಹೊಸ ನಿಯಮವನ್ನು ಜೂನ್ 1ನೇ ತಾರೀಕು 2024ರಂದು ಸರ್ಕಾರ ಜಾರಿಗೆ ತರಲಿದ್ದು, ಅದಾಗಲೇ ಇದರ ನೋಟಿಸನ್ನು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬ್ರೋಕರ್ ಗಳ ಕಾಟವೂ ತಪ್ಪಲಿದೆ ಜೊತೆಗೆ ಪದೇ ಪದೇ RTO ಆಫೀಸ್ ಗೆ ಅಲೆಯುವ…