Author: admin

ಗೃಹ ಸಚಿವ ಜಿ. ಪರಮೇಶ್ವರ್ ಆಪ್ತ ಹಾಗೂ ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಬೆಳಗ್ಗೆಯಿಂದ ಸ್ವಲ್ಪವೂ ಬಿಡುವು ಮಾಡಿಕೊಳ್ಳದ ಅಧಿಕಾರಿಗಳು, ಅಲ್ಲಿಗೇ ತಿಂಡಿ ತರಿಸಿಕೊಂಡು ಕೆಲಸ ಮುಂದುವರಿಸಿದ್ದಾರೆ. ವಿವಿಧ ದಾಖಲೆ ಪತ್ರಗಳನ್ನ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲೇ ಇದ್ದ ವೇಣುಗೋಪಾಲ್ ಅಧಿಕಾರಿಗಳಿಗೆ ಸಹಕರಿಸಿದ್ದಾರೆ. ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ವೇಣುಗೋಪಾಲ್ ಮನೆ ಮೇಲೆ 15 ಅಧಿಕಾರಿಗಳ ತಂಡ ದಾಳಿ ನಡೆಸಿದೆ. 3 ಇನ್ನೋವಾ ಕಾರಿನಲ್ಲಿ ಬಂದಿದ್ದ ಐಟಿ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ದಾಳಿ ನಡೆಸಿ, ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮೋದಿಗೆ ಕಾಂಗ್ರೆಸ್ ನಲ್ಲಿ ಸರಿಸಮಾನವಾದ ವ್ಯಕ್ತಿ ಇಲ್ಲವೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.  ಈ ಸಂಬಂಧ ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರೂ ನಾಯಕರಿಲ್ಲ. ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಅಂತ ಅವರ ಕಣ್ಣಮುಂದೆ ಇಲ್ಲ. ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್‌ ನಲ್ಲಿ ಯಾರೂ ಇಲ್ಲ’ ಎಂದು ಹೇಳಿದರು. ರಾಜ್ಯದ 28 ಕ್ಷೇತ್ರಗಳಲ್ಲಿ ಈಗಾಗಲೇ ಪ್ರವಾಸ ಮಾಡಿದ್ದೇನೆ. ರಾಜ್ಯದಲ್ಲಿನ 28 ಕ್ಷೇತ್ರಗಳನ್ನೂ ಗೆಲ್ಲುವ ವಿಶ್ವಾಸ ಇದೆ. ಮೋದಿ ಹೆಸರಿನಲ್ಲಿ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಜನರು ಬಿಜೆಪಿಗೆ ಬೆಂಬಲಿಸುತ್ತಾರೆ. ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಎರಡು ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುತ್ತಾರೆ’ಎಂದರು. ಬಿಜೆಪಿಗೆ ಮತ ಹಾಕಿದರೆ ಗ್ಯಾರಂಟಿಗಳನ್ನು ರದ್ದು ಮಾಡುತ್ತಾರೆ ಎಂಬ ಶಾಸಕ ರಾಜು ಕಾಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಅಭಿವೃದ್ಧಿ ಕಡೆಗೆ ವಿಶೇಷ ಗಮನ ನೀಡುತ್ತೇವೆ. ಆದರೆ, ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದ ಮೇಲೆ…

Read More

ನಡು ರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಪತ್ನಿಯನ್ನ ಕೊಲೆ ಮಾಡಿದ ಭೀಕರ ಘಟನೆ  ಬೆಂಗಳೂರಿನ ಕೋರಮಂಗಲ ಪೊಲೀಸ್‌ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಪತಿ ಸೆಲ್ವಿನ್ ಫ್ರಾನ್ಸಿಸ್ ಹಾಗೂ ಮೃತ ಪತ್ನಿ ಇಂದು ಇಬ್ಬರ ನಡುವಿನ ಭಿನ್ನಾಭಿಪ್ರಾಯದಿಂದ 6 ತಿಂಗಳಿಂದ ದೂರವಾಗಿದ್ದರು. ನೆನ್ನೆ ಪತ್ನಿ ಜೊತೆ ಜಗಳ ತೆಗೆದು ಡಿಸಿಪಿ ಕಚೇರಿಯ ಪಕ್ಕದ ರಸ್ತೆಯಲ್ಲಿ ಇರಿದು ಕೊಂದಿದ್ದಾನೆ. ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲ ತಿಂಗಳಿಂದ ಗಂಡನಿಂದ ದೂರವಿದ್ದರೂ, ತಾನು ಕೆಲಸ ಮಾಡುವ ಸ್ಥಳದಲ್ಲಿ ಸಮಸ್ಯೆ ಮಾಡುತ್ತಿದ್ದಾನೆಂದು ಪತಿ ವಿರುದ್ಧ ಕೋರಮಂಗಲ ಠಾಣೆಗೆ ನಿನ್ನೆ ಮಧ್ಯಾಹ್ನ ಬಂದು ಪತ್ನಿ ದೂರು ನೀಡಿದ್ದಾರೆ. ದೂರು ಹಿನ್ನೆಲೆ ಪತಿ ಸೆಲ್ವಿನ್ ಫ್ರಾನ್ಸಿಸ್ ​ಗೆ ಕೋರಮಂಗಲ ಠಾಣೆಯಿಂದ ಕರೆ ಬಂದಿದೆ. ಈ ವೇಳೆ ನಾನು ದೂರದಲ್ಲಿದ್ದೇನೆ ಎಂದು ಪೊಲೀಸರಿಗೆ ಹೇಳಿ, ಠಾಣೆ ಬಳಿಯೇ ಸೆಲ್ವಿನ್ ಬಂದಿದ್ದಾನೆ. ಪತ್ನಿ ಠಾಣೆಯಿಂದ ಹೊರ ಬರುವುದನ್ನೇ ಕಾದು ಕುಳಿತಿದ್ದ ಆತ, ಪತ್ನಿ ಹೊರ ಬರುತ್ತಿದ್ದಂತೆ ಮಾತನಾಡಿ…

Read More

ಜನಸಾಮಾನ್ಯರು ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಹೊಂದಿರಲೇಬೇಕು ಎಂಬ ನಿಯಮ ದೇಶದಾದ್ಯಂತ ಇದೆ. ಇದೀಗ ನಾಯಿಗಳು ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮ ದೆಹಲಿಯಲ್ಲಿ ಜಾರಿಗೆ ಬಂದಿರುವುದು ವಿಚಿತ್ರವಾಗಿದೆ. ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೂ ಆಧಾರ್ ಕಾರ್ಡ್ ಅನ್ನು ನೀಡಲಾಗಿದೆ. ದಾರಿತಪ್ಪಿದ ನಾಯಿಗಳನ್ನು ರಕ್ಷಿಸಲು ಮತ್ತು ಅವುಗಳನ್ನು ಸ್ಥಳಾಂತರ ಮಾಡಲು ಎನ್ ಜಿಓ ಈ ಕ್ರಮಗಳನ್ನು ಜಾರಿಗೆ ತಂದಿದೆ. ಈಗಾಗಲೇ ದೆಹಲಿಯಲ್ಲಿ 100 ನಾಯಿಗಳಿಗೆ ತಮ್ಮದೇ ಆದ ಆಧಾರ್ ಕಾರ್ಡ್ ಅನ್ನು ನೀಡಲಾಗಿದೆ ಎಂಬುದಾಗಿ ತಿಳಿದುಬಂದಿದೆ. ವರದಿ ಪ್ರಕಾರ ಈ 100 ನಾಯಿಗಳು ದೆಹಲಿಯ ಟರ್ಮಿನಲ್ 1 ವಿಮಾನ ನಿಲ್ದಾಣ, ಇಂಡಿಯಾ ಗೇಟ್ ಮತ್ತು ಪ್ರಾಣಿ ಕಾರ್ಯಕರ್ತೆ ಮಾನವಿ ರೈ ನಡೆಸುತ್ತಿರುವ ದೆಹಲಿಯ ನಾಯಿ ಆಶ್ರಯ ಸೇರಿದಂತೆ ವಿವಿಧ ಸ್ಥಳಗಳಿಗೆ ಸೇರಿವೆ ಎನ್ನಲಾಗಿದೆ. ಏಪ್ರಿಲ್ 27ರಂದು ನಾಯಿಗಳಿಗೆ ಆಧಾರ್ ಕಾರ್ಡ್ ನೀಡುವ ಕ್ರಮಕ್ಕೆ ಚಾಲನೆ ನೀಡಿದ್ದು, ಇದಕ್ಕೆ ಸಂಬಂಧಪಟ್ಟ ನಾಯಿಗಳಿಗೆ ಆಧಾರ್ ಕಾರ್ಡ್ ಟ್ಯಾಗ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಪ್ರಾಣಿ…

Read More

ವಿವಾಹಿತೆಯನ್ನು ಮದುವೆ ಆಗು ಅಂತ ಪಾಗಲ್ ಪ್ರೇಮಿ ಪೀಡಿಸಿದ್ದು, ಮದುವೆ ಆಗೋದಿಲ್ಲ ಅಂದಿದ್ದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟಿರುವಂತಹ ಘಟನೆ ಬೆಂಗಳೂರಿನ ಸಾರಾಯಿಪಾಳ್ಯದಲ್ಲಿ ನಡೆದಿದೆ. ಅರ್ಬಾಜ್ ಮಹಿಳೆ ಮನೆಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿಯಾಗಿದ್ದಾರೆ. ಮಹಿಳೆಯ ದೂರದ ಸಂಬಂಧಿಯಾಗಿದ್ದ ಅರ್ಬಾಜ್, ಮದುವೆ ಆಗು ಎಂದು ಮಹಿಳೆ ಹಿಂದೆ ಬಿದ್ದಿದ್ದ. ಈ ಬಗ್ಗೆ 2 ಕುಟುಂಬದ ಹಿರಿಯರು ಬುದ್ಧಿ ಹೇಳಿದ್ದರು. ಹಿರಿಯರ ಬುದ್ಧಿಮಾತಿಗೂ ಬಗ್ಗದ ಅರ್ಬಾಜ್​, ಮುಂಜಾನೆ 4 ಗಂಟೆ ಸುಮಾರಿಗೆ ಮಹಿಳೆ ಮನೆಗೆ ಬೆಂಕಿ ಹಚ್ಚಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಕ್ಕೆ ಭಾರೀ ಅನಾಹುತ ತಪ್ಪಿದೆ. ಬೆಂಕಿ ಇಟ್ಟಿದ್ದರಿಂದ ಮನೆಯಲ್ಲಿದ್ದ ಬಟ್ಟೆಗಳು, ಟಿವಿ, ಫ್ರಿಡ್ಜ್ ವಸ್ತುಗಳು ಬೆಂಕಿಗಾಹುತಿ ಆಗಿವೆ ಎನ್ನಲಾಗಿದೆ. ಕೇಸ್ ದಾಖಲಿಸಿಕೊಂಡು ಅರ್ಬಾಜ್​ ನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ವಾರಣಾಸಿ: ಜಿಮ್ ನಲ್ಲಿ ವರ್ಕ್ ಔಟ್ ಮಾಡಿ ಕುಳಿತ್ತಿದ್ದ ವ್ಯಕ್ತಿಯೊಬ್ಬರು ಇದ್ದಕಿದ್ದಂತೆ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನೆನ್ನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ದೀಪಕ್ ಗುಪ್ತ(32) ಎಂದು ಗುರುತಿಸಲಾಗಿದ್ದು, ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದೀಪಕ್ ಗುಪ್ತಾ ಜಿಮ್ ನಲ್ಲಿ ವ್ಯಾಯಾಮ ಮಾಡಿ ಬಳಿಕ ಅಲ್ಲೇ ಕುಳಿತ್ತಿದ್ದರು ಈ ವೇಳೆ ಇದ್ದಕಿದ್ದಂತೆ ಕುಸಿದು ಬಿದ್ದಿದ್ದಾರೆ ಈ ಸಮಯದಲ್ಲಿ ಅಲ್ಲಿದ್ದ ಇತರ ಸಹದ್ಯೋಗಿಗಳು ಸಹಾಯಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಪರಿಶೀಲಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆ ನಡೆಸಿದ ವೈದ್ಯರು ದೀಪಕ್ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅಲ್ಲದೆ ಜಿಮ್ ನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ದೀಪಕ್ ತಲೆಗೆ ಕೈ ಹಿಡಿದುಕೊಂಡಿರುವುದು ಕಾಣಿಸಿಕೊಂಡಿದೆ. ಇತ್ತೀಚೆಗೆ ಕೋವಿಶೀಲ್ಡ್ ತೆಗೆದುಕೊಂಡವರಿಗೂ ಇಂತಹ ಲಕ್ಷಣಗಳಿರುವ ಬಗ್ಗೆ ಕಂಪನಿಯೇ ಒಪ್ಪಿಕೊಂಡಿತ್ತು. ಸದ್ಯ ಪ್ರಕರಣ ದಾಖಲಾಗಿದ್ದು ದೀಪಕ್ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ವರದಿ ಎಂದು ತಿಳಿಸಿದೆ. ನಮ್ಮತುಮಕೂರಿನ ಕ್ಷಣ…

Read More

ಚಲಿಸುತ್ತಿರುವ ರೈಲಿನಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್ ಹೇಳಿ ಶಾಕ್ ನೀಡಿದ್ದಾನೆ. ಇದಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಕೂದಲು ಹಿಡಿದು ಥಳಿಸಿ, ಓಡಿ ಹೋಗಿದ್ದಾನೆ ಎನ್ನಲಾಗಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ವಿಚಿತ್ರ ಘಟನೆ ವರದಿಯಾಗಿದೆ. ಸಂತ್ರಸ್ತೆ ತನಗೆ ನ್ಯಾಯ ಕೊಡಿಸುವಂತೆ ಸಿಎಂ ಯೋಗಿ ಆದಿತ್ಯನಾಥ್‌ ಗೆ ಮನವಿ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಭೋಗನಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಒಳಗಾದ ಅತ್ತೆಯಂದಿರಿಂದ ರಕ್ಷಣೆ ನೀಡುವಂತೆ ಒತ್ತಾಯಿಸಿ ಸಂತ್ರಸ್ತೆ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಅರ್ಷದ್ ಎನ್ನುವ ವ್ಯಕ್ತಿ ಉತ್ತರ ಪ್ರದೇಶದ ಕಾನ್ಪುರ ಕೊಟ್ವಾಲಿ ಪ್ರದೇಶದ ಪುಖ್ರಾಯ ಪಟ್ಟಣದಿಂದ ಬಂದವರು ಮತ್ತು ರಾಜಸ್ಥಾನದ ಕೋಟಾದಲ್ಲಿ ಮಹೀಂದ್ರಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಕೆಲವು ಸಮಯದಿಂದ ಭೋಪಾಲ್‌ನಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದನು. ಅರ್ಷದ್…

Read More

ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಮೀಸೆ, ಗಡ್ಡ ಬಿಟ್ಟಿದ್ದಾರೆ ಎಂಬ ನೆಪ ಹೇಳಿ ಎಲ್ಲರನ್ನೂ ಹೊರಗೆ ಕಳುಹಿಸಿ ಕೆಲಸದಿಂದ ವಜಾಗೊಳಿಸಿದ ಘಟನೆ ಹಿಮಾಚಲ ಪ್ರದೇಶದ ಪರ್ವಾನೂ ಇಂಡಸ್ಟ್ರಿಯಲ್ ಏರಿಯಾದ ಕಂಪನಿಯೊಂದಲ್ಲಿ ನಡೆದಿದೆ. ಕಂಪನಿಗಳಲ್ಲಿ ಉದ್ಯೋಗಿಗಳನ್ನು ವಜಾಗೊಳಿಸುವುದರ ಹಿಂದೆ ಬಲವಾದ ಕಾರಣವಿರುತ್ತದೆ. ಆದರೆ ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಂಪನಿಯೊಂದು ವಿಚಿತ್ರ ಕಾರಣ ನೀಡಿ 80 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದೆ. ಹಿಮಾಚಲ ಪ್ರದೇಶದ ಪರ್ವಾನೂ ಇಂಡಸ್ಟ್ರಿಯಲ್ ಏರಿಯಾದ ಕಂಪನಿಯೊಂದು ಕೆಲವು ವರ್ಷಗಳ ಹಿಂದೆ 80 ಕಾರ್ಮಿಕರನ್ನು ವಜಾಗೊಳಿಸಿತ್ತು. ಇದು ಬಹಳ ತಡವಾಗಿ ಬೆಳಕಿಗೆ ಬಂದಿದೆ. ತನ್ನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳು ಮೀಸೆ, ಗಡ್ಡ ಬಿಟ್ಟಿದ್ದಾರೆ ಎಂಬ ನೆಪ ಹೇಳಿ ಎಲ್ಲರನ್ನೂ ಹೊರಗೆ ಕಳುಹಿಸಿದ್ದರು. ಕಾರ್ಮಿಕರು ಆಡಳಿತ ಮಂಡಳಿಯೊಂದಿಗೆ ಮಾತನಾಡಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ. ಇದರಿಂದ ಕಾರ್ಮಿಕರು ಕಂಪನಿ ಎದುರು ಧರಣಿ ನಡೆಸಿದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿತು. ಗಡ್ಡ, ಮೀಸೆ ತೆಗೆದರೆ ಮಾತ್ರ ಡ್ಯೂಟಿಗೆ ಸೇರಿಸಲಾಗುವುದು,…

Read More

ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ಅವರ ಸಂಪ್ರದಾಯದಂತೆ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2–3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಇವೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿವೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲ ತಾಪಕ್ಕೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ರಾಯಚೂರು: ರಾಜ್ಯದಲ್ಲಿ ಬಿರು ಬಿಸಿಲಿನ ತಾಪಕ್ಕೆ  ರೈತನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದ ಹನುಮಂತು(45) ಎಂಬ ರೈತ, ಹೊಲದಲ್ಲಿ ಕೆಲಸಕ್ಕೆಂದು ತೆರಳಿದ್ದರು. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆದ ಬಳಿಕ, ನೀರು ಕುಡಿಯುತ್ತಿದ್ದಂತೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. ರೈತ ಹನುಮಂತು ಬಿಸಿಲ ತಾಪಕ್ಕೆ ಬಸವಳಿದು ಕುಸಿದು ಬಿದ್ದು ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಈ ಹಠಾತ್ ರೈತ ಹನುಮಂತು ಸಾವಿನಿಂದಾಗಿ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More