Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ದೇಶಾದ್ಯಂತ ಹೀಟ್ ವೇವ್ ಜೋರಾಗಿದೆ. ಬಿಸಿಲಿನ ತಾಪಕ್ಕೆ ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆಗಳಲ್ಲಿ ಶಾಲಾ ಮಕ್ಕಳಿಗೆ ರಜೆಯನ್ನು ಘೋಷಿಸಿದ್ದಾರೆ. ಆದರೆ ಉತ್ತರಪ್ರದೇಶದ ಸರ್ಕಾರಿ ಶಾಲೆಯಲ್ಲಿ ವಿಭಿನ್ನ ಉಪಾಯವೊಂದನ್ನು ಮಾಡಿದ್ದಾರೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿ ಕೊಠಡಿಯನ್ನು ಈಜುಕೊಳವನ್ನಾಗಿ ಮಾಡಲಾಗಿದೆ. ಶಾಲಾ ಮಕ್ಕಳು ಸಮವಸ್ತ್ರದಲ್ಲಿಯೇ ನೀರಿನಲ್ಲಿ ಈಜುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವೀಡಿಯೋವನ್ನು ಬಳಕೆದಾರರೊಬ್ಬರು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಬಿರು ಬೇಸಿಗೆಯ ನಡುವೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಈ ಐಡಿಯಾವನ್ನು ಮಾಡಿದ್ದಾರೆ. ಯುಪಿಯ ಕನೌಜ್ನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿಯನ್ನು ವಿದ್ಯಾರ್ಥಿಗಳಿಗೆ ಈಜುಕೊಳವನ್ನಾಗಿ ಮಾಡಲಾಗಿದೆ. ಶಾಲಾ ಅಧಿಕಾರಿಗಳ ಪ್ರಕಾರ, ಬೆಳೆ ಕೊಯ್ಲು ಮತ್ತು ವಿಪರೀತ ಬಿಸಿಲಿನಿಂದಾಗಿ ಮಕ್ಕಳು ಶಾಲೆಗೆ ಬರಲು ಹಿಂಜರಿಯುತ್ತಾರೆ. ಹೀಗಾಗಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಾಪಾಡಿಕೊಳ್ಳಲು ಇದನ್ನು ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು,…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ನೆನ್ನೆ ಬಿಸಿಲಿನ ತಾಪಕ್ಕೆ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಬಿದ್ದಿದ್ದಾರೆ. ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು. ಇಲ್ಲಿಗೆ ಜಾಧವ್ ಭೇಟಿ ನೀಡಿದ್ದರು. ಈ ವೇಳೆ ಬಿಸಿಲಿನ ತಾಪಕ್ಕೆ ತಲೆಸುತ್ತು ಬಂದು ರಸ್ತೆಯಲ್ಲಿಯೇ ಕುಸಿದು ಬಿದ್ದರು. ಬಳಿಕ ಅವರನ್ನು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇದಕ್ಕೂ ಮುನ್ನ ಕಲಬುರಗಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಜಾಧವ್, ಕಲಬುರಗಿಯಲ್ಲಿ ಲಾ ಆಂಡ್ ಸಂಪೂರ್ಣವಾಗಿ ಸತ್ತು ಹೋಗಿದೆ. ರಾಮ ಮಂದಿರ ಉದ್ಘಾಟನೆ ಮರುದಿನ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಆಗಿತ್ತು. ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಆರೋಪಿಗಳಿಗೆ ನಿನ್ನೆ ಜಾಮೀನು ಮಂಜೂರು ಆಗಿದೆ. ಜಾಮೀನಿನ ಮೇಲೆ ಹೊರ ಬಂದ ಆರೋಪಿಯ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದಾರೆ ಎಂದಿದ್ದರು. ಜನವರಿ 23 ರಂದು ಕಲಬುರಗಿ ಬಂದ್ ಮಾಡಿ ಭಯದ ವಾತಾವರಣ ಸೃಷ್ಟಿ ಮಾಡಿದ್ರು. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ ಹೋಗಿದೆ. ಆದರೆ ಅಂದು ಗಲಾಟೆ…
ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕುರಿತು ಇದೀಗ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರ ಆಗುತ್ತಿದ್ದು, ಮತ್ತೊಂದು ಕಡೆ ಸಾಮಾಜಿಕ ಜಾಲತಾಣಗಳಲ್ಲಿ ಜನ ವಿಪರೀತ ಆಕ್ರೋಶ ಹೊರಹಾಕುತ್ತಿದ್ದಾರೆ. ಹಾಸನದಲ್ಲಿ ರೋಡ್ ನಲ್ಲಿ ಸಿಗುತ್ತಿರುವ, ಪಾರ್ಕ್ & ಕ್ರೀಡಾಂಗಣದಲ್ಲಿ ಚೆಲ್ಲಾಪಿಲ್ಲಿ ಆಗಿ ಬಿದ್ದಿದ್ದ ಪೆನ್’ಡ್ರೈವ್ ಒಳಗೆ, ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಖಾಸಗಿ ವಿಡಿಯೋ ಇವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ಸಮಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕೂಡ ಘಟನೆ ಗಂಭೀರವಾಗಿ ಪರಿಗಣಿಸಿ, ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಕೂಡ ಆದೇಶ ನೀಡಿದೆ. ಹೀಗಿದ್ದಾಗಲೇ ವಿದೇಶದಲ್ಲಿ ಕೂಡ, ಪ್ರಜ್ವಲ್ ರೇವಣ್ಣ ಸುದ್ದಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಶ್ಲೀಲ ವಿಡಿಯೋ ವೈರಲ್ ಕೇಸ್ ಬಗ್ಗೆ ವಿದೇಶಿ ಮಾಧ್ಯಮಗಳು ಚರ್ಚೆ ಮಾಡುತ್ತಿವೆ. ಸಿಂಗಪುರದ ಪ್ರಮುಖ ಮಾಧ್ಯಮ ಒಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನಿಂದ ಈ ಕೃತ್ಯ ನಡೆದಿರುವ ಬಗ್ಗೆ ಚರ್ಚೆ ಮಾಡಿದೆ. ಅಲ್ಲದೆ…
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್ ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಅವನನ್ನು ಆಸ್ಪತ್ರೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಆತನ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಗುಂಡಿನ ದಾಳಿ ಮಾಡಿದವರನ್ನು ಅರೆಸ್ಟ್ ಮಾಡಲಾಗಿತ್ತು. ನಂತರ ಗನ್ ಅನ್ನು ನದಿಯಲ್ಲಿ ಬೀಸಾಕಿದ್ದನ್ನು ಪತ್ತೆ ಹಚ್ಚಿ, ಗನ್ ಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಆಮೇಲೆ ಗನ್ ಸಪ್ಲೈ ಮಾಡಿದವರನ್ನೂ ಪೊಲೀಸರು ಬಂಧಿಸಿದ್ದರು. ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಗನ್ ಸರಬರಾಜು ಮಾಡಿದ್ದು ಸುಭಾಷ್ ಚಂದರ್ ಮತ್ತು ಅನುಜ್ ಥಾಪಸ್ ಎಂದು ಗೊತ್ತಾಗಿತ್ತು. ಈ ಇಬ್ಬರನ್ನೂ ಪಂಜಾಬ್ನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಮಾರ್ಚ್ 15ರಂದು ಆರೋಪಿಗಳಿಗೆ ಇವರು ಪಿಸ್ತೂಲ್ ಮತ್ತು ಕಾಟ್ರಿಜ್ ಗಳನ್ನು ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದರು. ಈ ಇಬ್ಬರು ವ್ಯಕ್ತಿಗಳಲ್ಲಿ ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ನಡುವೆ…
ಹಾಸನ ಸಂಸದ (Hassan MP), ಜೆಡಿಎಸ್ ಮುಖಂಡ ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ತಮ್ಮ ಅಶ್ಲೀಲ ವಿಡಿಯೊ ಎನ್ನಲಾದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೇ ಮೊದಲ ಬಾರಿಗೆ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ತಾವು ಬೆಂಗಳೂರಿನಲ್ಲಿ ಇಲ್ಲದ ಕಾರಣ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡಬೇಕು ಎಂದು ಸಿಐಡಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” (As I am not in Bangalore to attend the enquiry, I have communicated to C.I.D Bangalore through my Advocate. Truth will prevail soon) ಎಂದು ಬರೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ವಿಚಾರವಾಗಿ ವಿಚಾರಣೆಗೆ ಹಾಜರಾಗಲು…
ವಿಜಯಪುರ: ಇಬ್ಬರು ಯುವಕರು ಗೃಹಿಣಿಯೊಬ್ಬಳಿಗೆ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದು, ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ವಿಷಯಕ್ಕೆ ಮನನೊಂದು ಎ.27 ರಂದು ಸಂತ್ರಸ್ತೆ ತನ್ನ ಮಗನೊಂದಿಗೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜಿಲ್ಲೆ ವಿಜಯಪುರದ ಬಸವನಬಾಗೇವಾಡಿ ತಾಲೂಕಿನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲೇ ಅತ್ಯಾಚಾರ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ. 32 ವರ್ಷದ ಗೃಹಿಣಿಯನ್ನು ಅದೇ ಗ್ರಾಮದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಗೆ ಕರೆದೊಯ್ದು ಜೀವಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆಕಾಶ ಹಡಗಲಿ ಹಾಗೂ ಅಭಿಷೇಕ ಸಜ್ಜನ ಎಂಬ ಇಬ್ಬರು ಗೃಹಿಣಿಯನ್ನು ಬೆದರಿಸಿ ಆಕಾಶ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅತ್ಯಾಚಾರ ಘಟನೆಯನ್ನು ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಹರಿಬಿಟ್ಟಿದ್ದಾರೆ. ಅತ್ಯಾಚಾರ ಹಾಗೂ ವಿಡಿಯೋ ಮಾಡಿರುವುದನ್ನು ಯಾರಿಗಾದರೂ ಹೇಳಿದರೆ ಸಾಮಾಜಿಕ ಜಾಲತಾಣದ ಮೂಲಕ ವಿಡಿಯೋ ಹಂಚುವುದಾಗಿ ಹಾಗೂ ಕೊಲೆ ಮಾಡಿ ಶವವೂ ಸಿಗದಂತೆ ಮಾಡುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಲಾಗಿದೆ. ಸದರಿ ಲೈಂಗಿಕ ದೌರ್ಜನ್ಯದ…
ಕೋವಿಡ್-19 ನಿಯಂತ್ರಣಕ್ಕಾಗಿ ಪಡೆದುಕೊಂಡವರು ಕೋವಿಶೀಲ್ಡ್ ಲಸಿಕೆ ಪಡೆದವರು ಥ್ರೊಂಬೋಸಿಸ್ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸುದ್ದಿಯು ಲಸಿಕೆ ಪಡೆದವರಲ್ಲಿ ಆತಂಕಕ್ಕೆ ಕಾರಣವಾಗಿದೆ. ವೈದ್ಯರ ಪ್ರಕಾರ, ‘ಲಸಿಕೆ ತೆಗೆದುಕೊಂಡ ಪ್ರತಿಯೊಬ್ಬರ ಮೇಲೆ ಪರಿಣಾಮ ಬೀರುವುದಿಲ್ಲ. ಆದ್ದರಿಂದ, ಪ್ಯಾನಿಕ್ ರಿಯಾಕ್ಷನ್ ಅಗತ್ಯವಿಲ್ಲ, ಆದರೆ ಸಿಂಡ್ರೋಮ್ ಗೆ ಸಂಬಂಧಿಸಿದ ಯಾವುದೇ ರೋಗಲಕ್ಷಣಗಳು ಕಂಡು ಬಂದರೆ ಜಾಗರೂಕರಾಗಿರಿ’ ಎಂದಿದ್ದಾರೆ. ನಿರಂತರವಾದ ರೋಗಿಯ ಮೇಲ್ವಿಚಾರಣೆಯಿಂದ ಸರಿಯಾದ ವೈದ್ಯಕೀಯ ಅಥವಾ ಶಸ್ತ್ರಚಿಕಿತ್ಸೆಯಿಂದ ರೋಗಿಯನ್ನು ಬದುಕುಳಿಸಬಹುದಾಗಿದೆ. ಲಸಿಕೆ ಪಡೆದವರಲ್ಲಿ ಹೆಚ್ಚಾಗಿ ಸಣ್ಣ ವಯಸ್ಸಿನವರಲ್ಲಿ ಹಾಗೂ ಮೊದಲ ಡೋಸ್ ಸ್ವೀಕರಿಸುವವರಲ್ಲಿ ಈ ರೋಗಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆಯಿರುತ್ತದೆ. ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕೆಲವೊಮ್ಮೆ ರಕ್ತಸ್ರಾವದಿಂದ ಕಾಣಿಸಿಕೊಳ್ಳಬಹುದು’ ಎಂದಿದ್ದಾರೆ. ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ದೇಹದಲ್ಲಿ ರಕ್ತದ ಹೆಪ್ಪುಗಟ್ಟುವಿಕೆಯನ್ನು ಉಂಟು ಮಾಡುತ್ತದೆ. ರಕ್ತ ಹೆಪ್ಪುಗಟ್ಟುವಿಕೆಯ ಪರಿಣಾಮವಾಗಿ ಪಾರ್ಶ್ವವಾಯು, ಹೃದಯಘಾತವಾಗುವ ಸಾಧ್ಯತೆಯು ಅಧಿಕವಾಗಿದೆ. ಅದಲ್ಲದೇ ಪ್ಲೇಟ್ಲೆಟ್ಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ ಎನ್ನಲಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ತಾನು ಅಭಿವೃದ್ಧಿಪಡಿಸಿದ್ದ ‘ಕೋವಿಶೀಲ್ಡ್’ ಲಸಿಕೆಯಿಂದ ಮಾರಣಾಂತಿಕ ಆರೋಗ್ಯದ ಸಮಸ್ಯೆ…
ಕಾರಾಗೃಹಗಳಲ್ಲಿ ನಿಷೇಧಿತ ವಸ್ತುಗಳ ಬಳಕೆ ಮಾಡಲು ಕೈದಿಗಳು ಒಂದಿಲ್ಲೊಂದು ತಂತ್ರಗಾರಿಕೆ ಮಾಡುತ್ತಾರೆ. ಮೇಲಾಧಿಕಾರಿಗಳ ತಪಾಸಣೆ ವೇಳೆ ನಿಷೇಧಿತ ವಸ್ತುಗಳನ್ನು ಮುಚ್ಚಿಡಲು ಹೊಸ ಹೊಸ ಐಡಿಯಾ ಹುಡುಕುವುದು ಸಾಮಾನ್ಯ. ಇಲ್ಲೊಬ್ಬ ಕೈದಿ ಜೈಲಿನಲ್ಲಿ ಮೊಬೈಲ್ ಬಚ್ಚಿಟ್ಟುಕೊಳ್ಳಲು ಆಗದೆ ಅದನ್ನು ನುಂಗಿದ್ದು ಇದೀಗ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯಲಾಗಿದೆ ಎಂದು ವರದಿ ತಿಳಿಸಿದೆ. ಶಿವಮೊಗ್ಗ ರಾಜೀವ್ ಗಾಂಧಿ ಬಡಾವಣೆಯ ನಿವಾಸಿ, ಸೋಗಾನೆಯ ಕೇಂದ್ರ ಕಾರಗೃಹದ ಕೈದಿ ಪರಶುರಾಮ ಅಲಿಯಾಸ್ ಚಿಂಗಾರಿ ಮೊಬೈಲ್ ನುಂಗಿದ್ದವರು. ಮಾ.28ರಂದು ಹೊಟ್ಟೆನೋವಿನಿಂದ ಒದ್ದಾಡುತ್ತಿದ್ದ ಆತನಿಗೆ ಜೈಲಿನ ಸಿಬ್ಬಂದಿ ಕಾರಾಗೃಹದೊಳಗಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಹೊಟ್ಟೆನೋವು ಜಾಸ್ತಿ ಆಗುತ್ತಿರುವುದಾಗಿ ಪರಶುರಾಮ ತಿಳಿಸಿದ್ದ. ಅದೇ ದಿನ ರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನನ್ನು ಪರೀಕ್ಷಿಸಿದ ವೈದ್ಯರು ಆತ ಕಲ್ಲಿನಂತಹ ವಸ್ತು ನುಂಗಿರುವ ಸಾಧ್ಯತೆ ಇದೆ ಎಂದು ವರದಿ ನೀಡಿದ್ದರು. ಏ.1ರಂದು ಜೈಲಿನ ವೈದ್ಯಾಧಿಕಾರಿಗಳ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲು ನಿರ್ಧರಿಸಿ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿತ್ತು. ಏ.3ರಂದು ಬೆಂಗಳೂರು ಕೇಂದ್ರ ಕಾರಾಗೃಹದ…
ಬೆಂಗಳೂರು: ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಲು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್.ಡಿ.ರೇವಣ್ಣ ವಿರುದ್ಧ ಹೊಳೆನರಸೀಪುರದ ಟೌನ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಲು ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರಾಗಿರುವ ಬಿ.ಎನ್.ಜಗದೀಶ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಮುಂದಿನ ಆದೇಶದವರೆಗೆ ನೇಮಕ ಮಾಡಿ ಮಂಗಳವಾರ ಆದೇಶಿಸಲಾಗಿದೆ. ದಂಡ ಪ್ರಕ್ರಿಯಾ ಸಂಹಿತೆ 1975ರ ಸೆಕ್ಷನ್ 24ರ ಉಪ ಸೆಕ್ಷನ್ 8ರ ಅಡಿಯಲ್ಲಿ ಜಗದೀಶ್ ಅವರ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಬೆಂಗಳೂರು: ಹಾಸನದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳಡಿ ಸಿಲುಕಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಸಂಸದ ಹಾಗೂ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಅನ್ನು ಕೂಡಲೇ ರದ್ದುಪಡಿಸಿ, ದೇಶಕ್ಕೆ ಕರೆತರಲು ಅಂತರಾಷ್ಟ್ರೀಯ ಪೊಲೀಸ್ ಸಹಕಾರವನ್ನು ಒದಗಿಸಿಕೊಡಲು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ( SIT) ಕೂಡ ತನಿಖೆ ಕೈಗೊಂಡಿದ್ದು. ನಿಮಗೆ ತನಿಖೆಯ ಅಗತ್ಯ ಮಾಹಿತಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ನರೇಂದ್ರ ಮೋದಿ ಅವರೇ ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಅವರು ಗಂಭೀರ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಿಲುಕಿರುವುದು ನಿಮ್ಮ ಗಮನಕ್ಕೆ ಬಂದಿರಬಹುದು. ಅವರು ಹಾಲಿ ಹಾಸನದ ಸಂಸದ ಹಾಗೂ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯೂ ಹೌದು. ಪ್ರಜ್ವಲ್ ರೇವಣ್ಣ ಅವರು ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡು ಲೈಂಗಿಕ ದೌರ್ಜನ್ಯ ಎಸಗಿರುವ ರೀತಿ ನಿಜಕ್ಕೂ ಭೀಕರ ಹಾಗೂ…