Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ವೈ.ಎನ್.ಹೊಸಕೋಟೆ ಪುಟ್ ಬಾಲ್ ಕ್ಲಬ್ ನ ವತಿಯಿಂದ ಮೂರನೇ ವರ್ಷದ ಹೊನಲು ಬೆಳಕಿನ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪಂದ್ಯಾವಳಿಯನ್ನು ನಿವೃತ್ತ ದೈಹಿಕ ಶಿಕ್ಷಕರಾದ ಫಕೃದ್ಧೀನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೈಮನಸ್ಸುಗಳನ್ನು ಮರೆಸಿ ಆರೋಗ್ಯವನ್ನು ನೀಡುವುದು ಆರೋಗ್ಯ ಕ್ಷೇತ್ರ. ಕ್ರೀಡಾಪಟುಗಳು ಸಹಜವಾಗಿ ಆರೋಗ್ಯವಂತರಾಗಿರುತ್ತಾರೆ ಮತ್ತು ಮಾನಸಿಕವಾಗಿ ಸಧೃಢರಾಗಿರುತ್ತಾರೆ. ತಾವು ಬೆಳೆಯುತ್ತಾ ಗ್ರಾಮಕ್ಕೆ ನಾಡಿಗೆ ದೇಶಕ್ಕೆ ಕೀರ್ತಿ ತಂದು ಕೊಡುವ ಶಕ್ತಿಯನ್ನು ಹೊಂದುತ್ತಾರೆ ಎಂದರು. ಗ್ರಾಮದಲ್ಲಿ ನಡೆಯುತ್ತಿರುವ ಪುಟ್ ಬಾಲ್ ಕ್ರೀಡಾಕೂಟದಲ್ಲಿ ಅನೇಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿನ ತೊಡಗಿಸಿಕೊಳ್ಳುವ ಗುಣವನ್ನು ತೋರಿಸುತ್ತದೆ. ಜೊತೆಗೆ ಪಂದ್ಯಾವಳಿಗಳ ಮೂಲಕ ನೋಡುಗರಿಗೆ ಮನೋರಂಜನೆಯನ್ನು ಉತ್ಸಾಹವನ್ನು ತುಂಬುತ್ತದೆ ಎಂದರು. ಹಿರಿಯ ಕ್ರೀಡಾಪಟು ಅಬ್ದುಲ್ ಶುಕೂರ್ ಮಾತನಾಡಿ, ತಾಲ್ಲೂಕಿನಲ್ಲಿ ಕ್ರೀಡೆಗಳಲ್ಲಿ ಹೆಚ್ಚು ಹೆಸರು ಗಳಿಸಿರುವುದು ವೈ.ಎನ್.ಹೊಸಕೋಟೆಯಾಗಿದ್ದು, ತಾಲ್ಲೂಕಿನ ಕ್ರೀಡಾ ತವರು ಆಗಿದೆ. ಇಲ್ಲಿ ತಲೆಮಾರುಗಳಿಂದ ವಾಲಿಬಾಲ್, ಕಬಡ್ಡಿ, ಖೋಖೋ ಇತ್ಯಾದಿ ಪಂದ್ಯಾವಳಿಗಳನ್ನು ಆಡುತ್ತಾ ಜನಮನ್ನಣೆ…
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ಮುನಿಯೂರು ಗ್ರಾಮದಲ್ಲಿ ಸ್ವಚ್ಚತೆ ಎಂಬುದು ಬಹಳ ದೂರದ ಮಾತಾಗಿದೆ. ಮೂಲಸೌಕರ್ಯಗಳನ್ನು ಒದಗಿಸುವಲ್ಲಿಯೂ ಇಲ್ಲಿನ ಗ್ರಾಮ ಪಂಚಾಯಿತಿ ವಿಫಲವಾಗಿದೆ. ಇಲ್ಲಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಸ್ವಚ್ಛತೆ ಪದದ ಅರ್ಥವೇ ಗೊತ್ತಿಲ್ಲದ ಹಾಗೆ ಸಾರ್ವಜನಿಕರ ಜೀವದ ಜೊತೆ ಆಟವಾಡುತ್ತಿದ್ದಾರೆ. ಇನ್ನು ಇದೇ ಗ್ರಾಮದ ತುರುವೇಕೆರೆ ತಾಲೂಕಿನ ಮಾಜಿ ಶಾಸಕ ಎಂ ಡಿ ಲಕ್ಷ್ಮೀನಾರಾಯಣ್ ಅವರು ಕೂಡ ಇದೇ ಗ್ರಾಮದವರಾಗಿದ್ದು,ಸ್ವಚ್ಚತೆ ಕನಸಿನ ಮಾತಾಗಿದೆ. ಆದರೂ ಮಾಜಿ ಶಾಸಕರ ತವರೂರಲ್ಲೇ ಗ್ರಾಮ ಪಂಚಾಯಿತಿಯಿಂದ ಸ್ವಚ್ಛತೆಗೆ ಗಮನಹರಿಸದ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗೆ ನಾಚಿಕೆಗೇಡಿನ ಸಂಗತಿ. ಈಗಾಗಲೇ ಮುನಿಯೂರಿನ ಗ್ರಾಮಸ್ಥರು ಮೂಲಸೌಕರ್ಯದ ಬಗ್ಗೆ ಅದೆಷ್ಟೋ ಬಾರಿ ಮನವಿ ಸಲ್ಲಿಸಿದರು ಕೂಡ ಸ್ವಚ್ಛತೆಯ ಬಗ್ಗೆ ಕಾಳಜಿ ಇಲ್ಲದೆ ಅಧಿಕಾರದ ಗುಂಗಿನಲ್ಲೇ ಕಾಲ ಕಳೆಯುತ್ತಿದ್ದಾರೆ ಅಧಿಕಾರಿಗಳು, ಮತ್ತು ಜನಪ್ರತಿನಿಧಿಗಳು. ಮುನಿಯೂರು ಗ್ರಾಮದ ಚರಂಡಿಯನ್ನು ನೋಡಿದರೆ ಖಂಡಿತ ಈ ಗ್ರಾಮದಲ್ಲಿ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಒಟ್ಟಾರೆ ಈ ಗ್ರಾಮದಲ್ಲಿ…
ಕಥೆ, ಪಾತ್ರಕ್ಕೆ ಬೇಕಾದರೆ ಗ್ಲಾಮರ್ ಸೀನ್, ಕಿಸ್ ಸೀನ್ ಗಳಲ್ಲಿ ನಟಿಸಲು ಸಿದ್ಧ ಎನ್ನುತ್ತಾರೆ ಬಹುತೇಕ ನಾಯಕಿಯರು. ಆದರೆ ಅಂತಹ ದೃಶ್ಯಗಳಿಗೆ ನೋ ಹೇಳುವ ನಾಯಕಿಯರು ಕೆಲವೇ ಕೆಲವು ಮಂದಿ. ನಾಯಕಿ ಮೃಣಾಲ್ ಠಾಕೂರ್ ಕೂಡ ಗ್ಲಾಮರ್ ದೃಶ್ಯಗಳು ಮತ್ತು ಚುಂಬನದ ದೃಶ್ಯಗಳಲ್ಲಿ ನಟಿಸಲು ನಾನು ಒಪ್ಪುವುದಿಲ್ಲ ಎಂದಿದ್ದಾರೆ. ಮರಾಠಿ ಚೆಲುವೆ ‘ಸೀತಾ ರಾಮ್’ (2022) ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿಗೆ ಪಾದರ್ಪಣೆ ಮಾಡಿದರು. ಮೃಣಾಲ್ ತನ್ನ ಮೊದಲ ಚಿತ್ರದಲ್ಲೇ ತನ್ನ ಸೌಂದರ್ಯ ಮತ್ತು ನಟನೆಯಿಂದ ಸೂಪರ್ ಹಿಟ್ ಹೀರೋಯಿನ್ ಎಂಬ ಖ್ಯಾತಿಯನ್ನು ಪಡೆದರು. ಅದಾದ ನಂತರ ತೆಲುಗಿನ ನಾನಿ ಜೊತೆ ‘ಹಾಯ್ ನನ್ನ’ ಮತ್ತು ವಿಜಯ್ ದೇವರಕೊಂಡ ಜೊತೆ ‘ಫ್ಯಾಮಿಲಿ ಸ್ಟಾರ್ ಸಿನಿಮಾಗಳಲ್ಲಿ ನಟಿಸಿ ತೆಲುಗು ಪ್ರೇಕ್ಷಕರಲ್ಲಿ ತಮ್ಮದೇ ಆದ ವಿಶೇಷ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಮೃಣಾಲ್ ಠಾಕೂರ್ ”ನಾನು ತೀವ್ರವಾದ ಚುಂಬನದ ದೃಶ್ಯಗಳು ಮತ್ತು ಮಲಗುವ ಕೋಣೆ ದೃಶ್ಯಗಳಲ್ಲಿ ನಟಿಸಲು ಇಷ್ಟಪಡುವುದಿಲ್ಲ. ಮೇಲಾಗಿ ನನ್ನ ತಂದೆ-ತಾಯಿಗೆ ಕೂಡ…
ಚಲಿಸುತ್ತಿರುವ ರೈಲಿನಿಂದ ಇಳಿಯುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ಕೊನೆಯುಸಿರೆಳೆದ ಪ್ರಯಾಣಿಕರ ಕುಟುಂಬಕ್ಕೆ ಪರಿಹಾರ ನೀಡುವ ಹೊಣೆ ರೈಲ್ವೆ ಇಲಾಖೆಯದ್ದೇ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಅಸುನೀಗಿದ ಮಹಿಳೆಯ ಕುಟುಂಬಕ್ಕೆ ವಾರ್ಷಿಕ ಶೇ.7 ಬಡ್ಡಿಯೊಂದಿಗೆ 4 ಲಕ್ಷ ರೂ. ಪರಿಹಾರ ಪಾವತಿಸುವಂತೆ ರೈಲ್ವೆ ಇಲಾಖೆಗೆ ಆದೇಶ ಹೊರಡಿಸಿದೆ. ಇದರಿಂದಾಗಿ ನ್ಯಾಯಾಲಯದ ಮೊರೆ ಹೋಗಿದ್ದವರಿಗೆ ಪರಿಹಾರ ಸಿಕ್ಕಂತಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ನಿವಾಸಿ ರೋಜಮಣಿ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಚ್. ಪಿ. ಸಂದೇಶ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ತೀರ್ಪು ನೀಡಿದೆ. ಜಯಮ್ಮ ಕೊನೆಯುಸಿರೆಳೆದದ್ದಕ್ಕೆ ರೈಲ್ವೆಯಿಂದ 8 ಲಕ್ಷ ರೂ. ಪರಿಹಾರ ಕೋರಿದ್ದರು. ಆದೇಶದಲ್ಲಿ ಪೀಠವು ಪತ್ರಿವಾದಿಗಳು 4 ಲಕ್ಷ ರೂ.ಗಳನ್ನು ವಾರ್ಷಿಕ ಶೇ.7 ಬಡ್ಡಿಯೊಂದಿಗೆ ಪಾವತಿಸುವಂತೆ ಹೇಳಿದೆ. ಈ ಒಟ್ಟು ಮೊತ್ತ 8 ಲಕ್ಷ ರೂ. ತಲುಪದೆ ಹೋದಲ್ಲಿ ಪ್ರತಿವಾದಿಗಳು ಅರ್ಜಿದಾರರ ಮನವಿಯಂತೆ 8 ಲಕ್ಷ ರೂ. ಪಾವತಿಸಬೇಕು ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರ ಪರ ವಕೀಲರು,…
ಲೋಕಸಭೆ ಚುನಾವಣೆ ಬಳಿಕ ಮಠಾಧೀಶರು, ದಲಿತರು, ಮುಸ್ಲಿಂರ ಮೂರನೇ ಶಕ್ತಿ ಹುಟ್ಟು ಹಾಕುತ್ತೇವೆ ಜೊತೆಗೆ ಒಬ್ಬರು ಬ್ರಹ್ಮಾಚಾರಿಗೆ ಶಕ್ತಿ ಕೊಡುತ್ತೇವೆ ಎಂದು ಸಿಎಂ ಇಬ್ರಾಹಿಂ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ ಮುಂದೆ ಕರ್ನಾಟಕದಲ್ಲಿ ಮೂರನೇ ಶಕ್ತಿ ಹೊಸ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು. ಈ ಕುರಿತು ನಾನು ದಿಂಗಾಲೇಶ್ವರ ಸ್ವಾಮೀಜಿ ಜೊತೆ ಮೂರು ಗಂಟೆ ಮಾತಾಡಿದ್ದೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ ತಪ್ಪಿನಿಂದ ಬಿಜೆಪಿ ಬೆಳೆಯುತ್ತಿದೆ. ಇವತ್ತು ಬಸವತತ್ವದ ಆಧಾರದ ಮೇಲೆ ಸಂಘಟನೆ ಮಾಡಬೇಕಿದೆ. ನಾವು ಇದನ್ನು ತೀರ್ಮಾನ ಮಾಡಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿ ಕೆಲವೇ ದಿನಗಳಲ್ಲಿ ಈ ಕುರಿತು ಹೇಳುತ್ತಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿ ರಾಜಕೀಯ ನಡೆ ಕುರಿತು ಸಿಎಮ್ ಇಬ್ರಾಹಿಂ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ 600 ಜನ ಹುಡ್ಗೀರಿಗೆ ಸೀರೆ ಎಳೆದಿದ್ದಾನೆ, ಪಿನ್ ಚುಚ್ಚಿದ್ದಾನೆ. ಆದರೂ ಯಡಿಯೂರಪ್ಪ, ಜೋಶಿ ಯಾಕೆ ಮಾತಾಡಿಲ್ಲ?, ಇದೇನಾ ಅಚ್ಚೇದಿನ್ ಎಂದು ಸಿಎಂ ಇಬ್ರಾಹಿಂ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ರನ್ನ ಪಕ್ಷದಿಂದ ಹೊರಗಡೆ ಹಾಕುತ್ತೀವಿ ಎನ್ನುತ್ತಾರೆ.…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೂ ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ. ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಯತ್ನ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತವಾಗಿ ಕಾಂತೇಶ್ ಅವರು ಮಾಧ್ಯಮಗಳಲ್ಲಿ ಮಾನಹಾನಿಕರ ದೃಶ್ಯ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಹೊರಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಆಗಿವೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಎಸ್ಐಟಿ ತನಿಖೆ ನಡೆಸಿದೆ. ಇದರ ಮಧ್ಯೆ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಫೋಟೋಗೆ ಬೇರೊಂದು ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಲಾಗಿದ್ದು, ಇದೀಗ ಆ ಎಡಿಟ್ ಫೋಟೋವನ್ನು ವೈರಲ್ ಮಾಡಲಾಗಿದೆ. ಫೇಸ್ಬುಕ್, ಯೂಟ್ಯೂಬ್, ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ. ಹೀಗಾಗಿ ಕಾನೂಕ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್,…
ರಾಜ್ಯದಲ್ಲಿ ಭೀಕರ ಬರದಿಂದ ಕುಡಿಯುವ ನೀರಿನ ಸಮಸ್ಯೆಯಾಗಿದೆ , ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಈ ಮಧ್ಯೆ ತಮಿಳುನಾಡಿನಿಂದ ಮತ್ತೆ ಕ್ಯಾತೆ ತೆಗೆದಿದೆ.ಕಾವೇರಿ ನದಿ ನೀರು ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿದೆ. ಕುಡಿಯಲು 0.5 ಟಿಎಂಸಿ ನೀರು ಸಾಕು, ಕುಡಿಯುವ ನೀರಿನ ನೆಪದಲ್ಲಿ ನೀರು ಬಿಡುಗಡೆಗೆ ನಿರಾಕರಿಸದೆ, ನಮ್ಮ ತಿಂಗಳ ಪಾಲು 2.5 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ನೆನ್ನೆ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಒತ್ತಾಯಿಸಿದ್ದಾರೆ. ಇನ್ನು ತಮಿಳುನಾಡಿನ ಒತ್ತಾಯಕ್ಕೆ ವಿರೋಧಿಸಿ, ‘ರಾಜ್ಯದಲ್ಲಿ ಭೀಕರ ಬರದಿಂದ ಕುಡಿಯುವ ನೀರಿನ ಸಮಸ್ಯೆಯಾಗಿದೆ. ನೀರು ಹರಿಸಲು ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲವೆಂದು ವಾದ ಮಾಡಿದ್ದಾರೆ. ಕರ್ನಾಟಕ, ತಮಿಳುನಾಡು ರಾಜ್ಯಗಳ ವಾದ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ, ಮೇ 16ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಇದರ ಜೊತೆಗೆ ಮೇ ತಿಂಗಳ ಕೊನೆ ವಾರದಲ್ಲಿ ಸಿಡಬ್ಲ್ಯೂಎಮ್ಎ ಸಭೆ ನಡೆಸಲಿದೆ. ನಮ್ಮತುಮಕೂರಿನ…
ಆರು ವರ್ಷದ ಬಾಲಕಿಯ ಮೇಲೆ ನಾಯಿವೊಂದು ಅಟ್ಯಾಕ್ ಮಾಡಿರೋ ಶಾಕಿಂಗ್ ಘಟನೆ ಘಾಜಿಯಾಬಾದ್ನ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದೆ. ನಾಯಿ ಏಕಾಏಕಿ ಬಾಲಕಿ ಮೇಲೆ ಅಟ್ಯಾಕ್ ಮಾಡುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಶ್ವಾನದ ಮಾಲೀಕರ ಮೇಲೆ ಆಕ್ರೋಶ ಹೊರ ಹಾಕುತ್ತಿದ್ದಾರೆ. ವನ್ಯಾ ಚೌಹಾನ್ ಎಂಬ ಬಾಲಕಿ ಸೈಕಲ್ನಲ್ಲಿ ಹೋಗುತ್ತಿದ್ದಳು. ಇದೇ ವೇಳೆ ಜರ್ಮನ್ ಶೆಫರ್ಡ್ ತಳಿಯ ಶ್ವಾನ ಏಕಾಏಕಿ ಬಾಲಕಿಯ ಮೇಲೆ ದಾಳಿ ಮಾಡಿದೆ. ಕೂಡಲೇ ಅಲ್ಲೇ ನಿಂತಿದ್ದ ಬಾಲಕಿ ತಾಯಿ ನಮಿತಾ ಚೌಹಾಣ್ ಆಕೆಯ ರಕ್ಷಣೆಗೆ ಧಾವಿಸಿದ್ದಾರೆ. ಬಳಿಕ ಶ್ವಾನದಿಂದ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆದರೆ ಶ್ವಾನ ಬಾಲಕಿಯ ಮೇಲೆ ದಾಳಿ ಮಾಡುತ್ತಿದ್ದಾಗ ಅದನ್ನು ನಿಯಂತ್ರಿಸಲು ಮಾಲೀಕರು ಹರಸಾಹಸ ಪಡುವಂತ ಸ್ಥಿತಿ ನಿರ್ಮಾಣಗೊಂಡಿತ್ತು. ಸದ್ಯ ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ನಾಯಿ ದಾಳಿಗೆ ಒಳಗಾದ ಬಾಲಕಿಗೆ ಕೈಗೆ ಹಾಗೂ ಸೊಂಟದ ಭಾಗದಲ್ಲಿ ಗಾಯಗಳಾಗಿವೆ. ಕೂಡಲೇ ಬಾಲಕಿ ತಾಯಿ ಆಕೆಯನ್ನು…
ಅಮೆರಿಕದ ವಿವಿಧ ಕ್ಯಾಂಪಸ್ಗಳಲ್ಲಿ ಪ್ಯಾಲೆಸ್ತೀನ್ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಇಸ್ರೇಲ್ ಬೆಂಬಲಿಗರು ಮತ್ತು ಇಸ್ರೇಲ್ ನ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ ಕೂಗಿದ್ದಾರೆ. ವಾರಾಂತ್ಯದಲ್ಲಿ ಯುಸಿಎಲ್ಎಯಲ್ಲಿ ಪ್ಯಾಲೆಸ್ತೀನ್ ಪರ ಮತ್ತು ಇಸ್ರೇಲ್ ಪರ ಪ್ರತಿಭಟನಾಕಾರರ ನಡುವಿನ ಘರ್ಷಣೆಗಳು ತೀವ್ರಗೊಂಡಿದ್ದವು. ಈ ಗೊಂದಲದ ಮಧ್ಯೆ ಅಮೆರಿಕದ ರಾಷ್ಟ್ರೀಯವಾದಿಯೊಬ್ಬರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುವ ಮೂಲಕ ಗಮನ ಸೆಳೆದಿದ್ದಾರೆ. ಸಾಮಾನ್ಯವಾಗಿ ಈ ಘೋಷಣೆಯನ್ನು ಭಾರತದಲ್ಲಿ ಹಿಂದುಗಳಿಗೆ ಸಂಬಂಧಿಸಿದ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಕೂಗಲಾಗುತ್ತದೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…