Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿ ಹುಬ್ಬಳ್ಳಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ನನ್ನ ಮತ್ತು ನಮ್ಮ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದರೆ ನಾನು ಸುಮ್ಮನಿರುವುದಿಲ್ಲ. ಎಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರು ಆರೋಪಕ್ಕೆ ಸಂಬಂಧಿಸಿದಂತೆ SIT ತನಿಖೆ ನಡೆಯುತ್ತಿದೆ. ತನಿಖೆ ನಡೆದು ಸತ್ಯ ಹೊರಬರಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಅಂತಾನೇ ನಾನು ಹೇಳಿದ್ದೇನೆ. ಸುಖಾಸುಮ್ಮನೆ ಈ ಪ್ರಕರಣದಲ್ಲಿ ನನ್ನ ಮತ್ತು ಎಚ್.ಡಿ.ದೇವೇಗೌಡರ ಹೆಸರು ತರುವುದು ಸರಿಯಲ್ಲ’ವೆಂದು ಕಿಡಿಕಾರಿದ್ದಾರೆ. ಚುನಾವಣೆ ಸಮಯದಲ್ಲಿ ನಮ್ಮ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದ ಎಚ್ಡಿಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದರು. ಸಿದ್ದರಾಮಯ್ಯನವೇ ನಿಮ್ಮ ಮನೆಯಲ್ಲಿ ನಡೆದಿರುವ ದುರ್ಘಟನೆಯನ್ನು ಮರೆಯಬೇಡಿ. ರಾಕೇಶ್ ಸಿದ್ದರಾಮಯ್ಯ ಸಾವನ್ನಪ್ಪಿದಾಗ ಪ್ರಧಾನಿ ಮೋದಿ ಮತ್ತು ಸುಷ್ಮಾ ಸ್ವರಾಜ್ ಸಹಾಯ ಮಾಡಿದ್ದನ್ನು…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್ ವೊಂದರ ಆವರಣದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ಹೋಟೆಲ್ ನಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತಿತ್ತು. ‘ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶಕ್ಕೆ ವಾಪಸ್ ಕರೆತರಬೇಕು’ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೋರ್ ಕಮಿಟಿ ಸಭೆ, ಸುದ್ದಿಗೋಷ್ಠಿ ಮುಗಿಸಿಕೊಂಡು ಹೊರ ಬಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮತ್ತು ಪ್ರತಿಭಟನಾನಿರತರು ಮುಖಾಮುಖಿಯಾದರು. ಆಗ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ‘ಗೋ ಬ್ಯಾಕ್ ಕುಮಾರಸ್ವಾಮಿ’ ಎಂದು ಕಾಂಗ್ರೆಸ್ ನವರು ಘೋಷಣೆ ಕೂಗಿದರೆ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡರು…
ಮಾನಸಿಕ ಅಸ್ವಸ್ಥ 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ 44 ವರ್ಷದ ವ್ಯಕ್ತಿಯೊಬ್ಬನಿಗೆ ಕೇರಳ ನ್ಯಾಯಾಲಯವು ಸೋಮವಾರ ವಿವಿಧ ಪ್ರಕರಣಗಳ ಅಡಿಯಲ್ಲಿ ಒಟ್ಟು 106 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ದೇವಿಕುಲಂ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿರಾಜುದ್ದೀನ್ ಪಿ.ಎ. ಅವರು ಸಂತ್ರಸ್ತೆಯ ತಾಯಿಯ ಸ್ನೇಹಿತನಾಗಿದ್ದ ವ್ಯಕ್ತಿಗೆ ಒಟ್ಟು 106 ವರ್ಷಗಳ ಕಾಲ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ವಿವಿಧ ಶಿಕ್ಷೆಗಳನ್ನು ವಿಧಿಸಿದ್ದಾರೆ ಎನ್ನಲಾಗಿದೆ. ಆರೋಪಿಯು ದಂಡವನ್ನು ಪಾವತಿಸಿದರೆ ಇಡುಕ್ಕಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂತ್ರಸ್ತ ಪರಿಹಾರ ಯೋಜನೆಯಿಂದ ಬಾಲಕಿಗೆ ಪರಿಹಾರವಾಗಿ ಪಾವತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. 2022ರಲ್ಲಿ ತ್ರಿಶೂರ್ ಮೂಲದ ಆರೋಪಿ ಕೆಲಸದ ನಿಮಿತ್ತ ಅಡಿಮಾಲಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಹುಡುಗಿಯ ತಾಯಿಯೊಂದಿಗೆ ಹೊಟೇಲ್ ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದ ಈತ ಆಕೆಯ ಜೊತೆ ಸ್ನೇಹ ಬೆಳೆಸಿದ ಅನಂತರ ಆಕೆಯ ಮನೆಯಲ್ಲಿಯೇ ಇದ್ದ…
ಚಿಲ್ಲರೆ ಹಣಕ್ಕಾಗಿ ಕರ್ತವ್ಯ ನಿರತ ಮಹಿಳಾ ಕಂಡೆಕ್ಟರ್ ಮೇಲೆ ಯುವಕನೊಬ್ಬ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ನಗರದ 2ನೇ ಘಟಕದಲ್ಲಿ ನಿರ್ವಾಹಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶೋಭಾ ಗಾಣಗಿ ಎಂಬುವರು ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ. ಬೆಳಗಾವಿ ಹಾಗೂ ಹೊನಗಾ ನಡುವೆ ಸಂಚರಿಸುವ ನಗರ ಸಾರಿಗೆ ಬಸ್ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಯಮನಾಪೂರ ಗ್ರಾಮದಿಂದ ಬಸನಲ್ಲಿ ಸಂಚರಿಸುತ್ತಿದ್ದ ಯುವಕ ಮಹಿಳಾ ನಿರ್ವಾಹಕಿಯೊಂದಿಗೆ ಬಸ್ ನಲ್ಲಿ ಚಿಲ್ಲರೆ ಕೊಡುವ ವಿಚಾರದಲ್ಲಿ ಯುವಕ ಗಲಾಟೆ ನಡೆಸಿದ್ದಾನೆ. ಅಲ್ಲದೇ ಯುವಕ ಅವ್ಯಾಚ್ಛ ಶಬ್ಧಗಳಿಂದ ನಿಂದಿಸುವಾಗ ಯಾರಿಗೆ ಬೈಯುತ್ತಿರುವೆ ಎಂದು ಜೋರು ಮಾಡಿ ಕಂಡಕ್ಟರ್ ಕೇಳಿದ್ದಾರೆ ಅಷ್ಟಕ್ಕೇ ಯುವಕ ಲೇಡಿ ಕಂಡಕ್ಟರ್ ಗೆ ಕಪಾಳಮೋಕ್ಷ ಮಾಡಿದ್ದಾನೆ. ಬಳಿಕ ನಿರ್ವಾಹಕಿಗೆ ಅವ್ಯಾಚ್ಛ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳ ಶವ ಅನುಮಾನಾಸ್ಪದವಾಗಿ ಮನೆಯ ಬೆಡ್ ರೂಮ್ ನಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ತಾಲ್ಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಸುನೀತಾ (26) ಎಂದು ಗುರುತಿಸಲಾಗಿದ್ದು, ಯುವತಿಯ ಶವ ರೂಮ್ ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದ್ದು, ಯುವತಿ ದೇಹದ ಮೇಲೆ ಚಾಕುವಿನಿಂದ ಹಲ್ಲೆಯಾದ ಗುರುತುಗಳು ಕಂಡು ಬಂದಿದೆ. ಯುವತಿಯ ಸಾವು ಕೊಲೆ ಎಂಬ ಸಂಶಯ ವ್ಯಕ್ತಪಡಿಸಿ ಆಕೆಯ ಅಕ್ಕ ದೂರು ದಾಖಲಿಸಿದ್ದಾರೆ. ಇತ್ತೀಚೆಗಷ್ಟೇ ಯುವತಿಯ ನಿಶ್ಚಿತಾರ್ಥವಾಗಿತ್ತು. ಒಲ್ಲದ ಮನಸ್ಸಿನಿಂದ ಯುವತಿ ಮದುವೆಗೆ ಒಪ್ಪಿಕೊಂಡಿದ್ದಳು ಎನ್ನಲಾಗಿದೆ. ಮನೆಯವರ ಮದುವೆ ಪ್ರಸ್ತಾಪಕ್ಕೆ ಯುವತಿ ಮನನೊಂದಿದ್ದಳು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆದರೆ ಸಾವಿನ ರೀತಿ ಬೇರೆಯೇ ಕಥೆ ಹೇಳುವಂತಿತ್ತು. ಈ ಸಂಬಂಧ ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಮತದಾನ ಮಾಡಲು ಗಲ್ಫ್ ರಾಷ್ಟ್ರದ ಮುಸ್ಲಿಂ ಮತದಾರರಿಗೆ ಭಟ್ಕಳ ಜಮಾಯತ್ ಗಳು ಗಾಳ ಹಾಕುತ್ತಿರುವ ವಿಚಾರವೊಂದು ವರದಿಯಾಗಿದೆ. ವಿದೇಶದಲ್ಲಿ ಇರುವ ಮುಸ್ಲಿಂ ಮತದಾರರಿಗೆ ವಿಮಾನ ಟಿಕೆಟ್ ಆಫರ್ ನೀಡಲಾಗುತ್ತಿದೆ ಎಂಬ ಆರೋಪವೊಂದು ಕೇಳಿಬಂದಿದೆ. ಗಲ್ಫ್ ನಲ್ಲಿ ಭಟ್ಕಳದ 1250 ಕ್ಕೂ ಹೆಚ್ಚು ಮತದಾರರು ಇದ್ದಾರೆ. ಮುಸ್ಲಿಂ ಮತದಾನದ ಸಂಖ್ಯೆ ಹೆಚ್ಚಳವಾಗಬೇಕು. ಜಾತ್ಯಾತೀತ ವ್ಯಕ್ತಿಗಳು ಆಯ್ಕೆಯಾಗಬೇಕು ಎಂಬ ಉದ್ದೇಶದಿಂದ ಈ ಆಫರ್ ನೀಡಲಾಗುತ್ತಿದೆ ಎನ್ನಲಾಗಿದೆ. ಜಮಾಯತ್ ಈಗಾಗಲೇ ಸೌದಿ ಅರೇಬಿಯಾದಲ್ಲಿ ತಮ್ಮ ಸದಸ್ಯರು ಮತದಾನ ಮಾಡುವಂತೆ ಮನವಿ ಮಾಡುವ ಮೂಲಕ ಪ್ರಕಟಣೆ ಹೊರಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಇಡೀ ಕುಟುಂಬ ಮದುವೆಯ ಸಡಗರದಲ್ಲಿ ಸಂಭ್ರಮಿಸುತ್ತಿದ್ದರೆ, ಆ ಕುಟುಂಬಕ್ಕೆ ನೇಣು ಹಾಕಿಕೊಂಡು ಶಾಕ್ ನೀಡಿದ್ದರು ಖ್ಯಾತ ಭೋಜಪುರಿ ನಟಿ ಅಮೃತಾ ಪಾಂಡೆ. ಮುಂಬೈನಲ್ಲಿ ವಾಸವಿದ್ದ ಅಮೃತಾ, ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾಗಲ್ಪುರಕ್ಕೆ ಬಂದಿದ್ದರು. ಈ ಸಮಯದಲ್ಲಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಇಂಥದ್ದೇ ಕಾರಣ ಎಂದು ತಿಳಿದು ಬಂದಿಲ್ಲ. ಆದರೆ, ಸಾವಿಗೂ ಮುನ್ನ ಅವರು ವಾಟ್ಸಪ್ ಸ್ಟೇಟಸ್ ಹಾಕಿದ್ದು, ಅದು ಅನುಮಾನ ಮೂಡಿಸುವಂತಿತ್ತು. ಸ್ಟೇಟಸ್ ಹಾಕಿ ಒಂದು ಗಂಟೆ ನಂತರ ಅಮೃತಾ ಶವವಾಗಿ ಪತ್ತೆಯಾಗಿದ್ದರು. ಈ ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ದೋಣಿಯ ಕುರಿತಾದ ಬರಹವಿತ್ತು. ಅವನ ಜೀವನ 2 ದೋಣಿಯಲ್ಲಿ ನಡೆಯುತ್ತಿದೆ. ನಾನು ನನ್ನ ದೋಣಿಯನ್ನು ಮುಳುಗಿಸಿಕೊಳ್ಳುವ ಮೂಲಕ, ಅವನ ದೋಣಿಗೆ ಸುಗಮ ದಾರಿ ಮಾಡಿಕೊಡುವೆ ಎಂದು ಬರೆದುಕೊಂಡಿದ್ದರು. ಈ ದೋಣಿಯ ಅರ್ಥ ಅವರ ಪತಿ ಎಂದು ಹೇಳಲಾಗುತ್ತಿದೆ. ನಟಿಯ ಪತಿಗೆ ಮತ್ತೊಂದು ಸಂಬಂಧವಿತ್ತಾ? ಇದೇ ಕಾರಣಕ್ಕೆ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ…
ಸೂಪರ್ ಪವರ್ ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿ, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ. ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್…
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ವಿರುದ್ಧ ಸಹೋದರ ಕುಮಾರ್ ಬಂಗಾರಪ್ಪ ವಾಗ್ದಾಳಿ ನಡೆಸಿದ್ದು, ಗ್ರಾಮ ಪಂಚಾಯ್ತಿ ಚುನಾವಣೆಗೆ ನಿಂತ್ರೂ ಗೀತಾ ಗೆಲ್ಲಲ್ಲ ಎಂದು ಗುಡುಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಗೀತಾ ಗ್ರಾಮ ಪಂಚಾಯ್ತಿ ಚುನಾವಣೆಗೆ ನಿಂತ್ರೂ ಗೆಲ್ಲಲ್ಲ ಅಂತ ವ್ಯಂಗ್ಯವಾಡಿದರು. ಡಾ. ರಾಜಕುಮಾರ್ ರವರಿಗೆ ರಾಜಕೀಯದ ಮೇಲೆ ಆಸೆ ಇತ್ತು. ಅದಕ್ಕೆ ಅವರ ಸೊಸೆಯನ್ನು ನಾವು ರಾಜಕೀಯಕ್ಕೆ ತಂದಿದ್ದೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಡಾ. ರಾಜ್ ಕುಮಾರ್ ಅವರಿಗೆ ಈ ರೀತಿಯ ಆಸೆ ಇರಲಿಲ್ಲ ಅಂತ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಕಾಂಗ್ರೆಸ್ ಅವರು ತಂದಿದ್ದು ಬರಗಾಲ. ಚುನಾವಣೆಗೆ ನಿಲ್ಲುವವರ ಮತವೇ ಇಲ್ಲಿ ಇಲ್ಲ. ಚುನಾವಣೆಗೆ ನಿಲ್ಲಬೇಕು ಎಂದು ಗೊತ್ತಿತ್ತು ಅಲ್ವಾ? ಆಗಲಾದರೂ ಸಹ ತಮ್ಮ ಮತವನ್ನು ಬದಲಾಯಿಸಲಿಲ್ಲ. ಈಗ ಅವರ ಮತ ಇಲ್ಲಿ ಇಲ್ಲ, ಇನ್ನೂ ನಮ್ಮ ಮತ ಹೇಗೆ ಬರುತ್ತದೆ ಎಂದು ಕುಮಾರ್ ಬಂಗಾರಪ್ಪ ಪ್ರಶ್ನಿಸಿದರು.…
ಹಾವೇರಿ: ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ರೋಡ್ ಬ್ಯಾಡಗಿಯಲ್ಲಿ ಶೋದಲ್ಲಿ ಭಾಗವಹಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕಮಿಷನ್ ಎಂದರ್ಥ ಎಂದು ಲೇವಡಿ ಮಾಡಿದ ಅವರು, ಕುಟುಂಬ ರಾಜಕಾರಣ ಮತ್ತು ಭ್ರಷ್ಟರನ್ನು ರಕ್ಷಿಸಲು INDIA ಮೈತ್ರಿಕೂಟ ಮಾಡಿಕೊಳ್ಳಲಾಗಿದೆ ಎಂದು ಆರೋಪ ಮಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ನಮ್ಮ ನಾಯಕ ಮೋದಿ ಪ್ರಧಾನಿಯಾಗುತ್ತಾರೆ ಎಂದು ನಾವು ಹೇಳುತ್ತೇವೆ. ಒಂದು ವೇಳೆ ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐದು ಪ್ರಧಾನಿಗಳು ಇರಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು. ವಿರೋಧ ಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರು? ಅವರಿಗೆ ಕೋವಿಡ್ ನಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿದ ನರೇಂದ್ರ ಮೋದಿ ಅವರಂತಹ ನಾಯಕರಿದ್ದಾರೆಯೇ? ಎಂದು ಪ್ರಶ್ನಿಸಿದ ಜೆಪಿ ನಡ್ಡಾ, ವಿಪಕ್ಷಗಳ ಮೈತ್ರಿಕೂಟ ಕೇವಲ ಅಧಿಕಾರಕ್ಕಾಗಿ, ಅವರು ನಿಮ್ಮೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ರಕ್ಷಿಸುವ…