Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಚಾಮರಾನಗರ: ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ನಿಧನದ ಹಿನ್ನೆಲೆ ಏಪ್ರಿಲ್ 30ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ. ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024ರಂದು ರಜೆ ಘೋಷಣೆ ಮಾಡಲಾಗಿದೆ. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಹೆಚ್.ಬಿ ಈ ಆದೇಶ ಹೊರಡಿಸಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಏಪ್ರಿಲ್ 30 ಮಧ್ಯಾಹ್ನದ ಬಳಿಕ ಮೈಸೂರಿನಲ್ಲೇ ಬೌದ್ಧಧರ್ಮದ ವಿಧಿವಿಧಾನದಂತೆ ಸಕಲ ಗೌರವಗಳೊಂದಿಗೆ ವಿ.ಶ್ರೀನಿವಾಸ ಪ್ರಸಾದ್ ಅವರ ಅಂತ್ಯಕ್ರಿಯೆ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಗ್ರಾಮದ ಸುಬ್ರಹ್ಮಣೇಶ್ವರ ದೇಗುಲದ ಬಳಿಯಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಪಶುಪಾಲನಾ ಇಲಾಖೆ ನೇತೃತ್ವದಲ್ಲಿ ತೆರೆಯಲಾಗಿರುವ ಮೇವಿನ ಬ್ಯಾಂಕ್ ಗೆ ಇಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೇವು ಖರೀದಿಗೆ ಆಗಮಿಸಿದ್ದ ರೈತರೊಂದಿಗೆ ಇದೇ ವೇಳೆ ಮಾತನಾಡಿದ ಅವರು, ಮೇವು ವಿತರಣಾ ಸ್ಥಳದಲ್ಲಿ ಕುಡಿಯುವ ನೀರು, ಅಗ್ನಿ ಶಾಮಕ ದಳ ಸಿಬ್ಬಂದಿ ನೇಮಕ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಒಂದು ಜಾನುವಾರಿಗೆ ದಿನಕ್ಕೆ 6 ಕೆ.ಜಿ.ಯಂತೆ ವಾರಕ್ಕೆ 42 ಕೆ.ಜಿ. ಮೇವು ವಿತರಿಸಲಾಗುತ್ತಿದ್ದು, ಒಂದು ಕೆ.ಜಿ. ಮೇವಿಗೆ ₹2 ನಿಗದಿಪಡಿಸಲಾಗಿದೆ ಎಂದರು. ಇದೇ ಸಂದರ್ಭ ಮೇವು ಖರೀದಿಸಿ ಹೊರಟಿದ್ದ ತಿಮ್ಮಪುರದ ಉಮಾ ಎಂಬ ಮಹಿಳೆಯನ್ನೂ ಮಾತನಾಡಿಸಿದ ಜಿಲ್ಲಾಧಿಕಾರಿಗಳು, ಮೇವು ಬ್ಯಾಂಕ್ ತೆರೆದಿರುವುದರಿಂದ ಆಗಿರುವ ಅನುಕೂಲದ ಬಗ್ಗೆ ಅಭಿಪ್ರಾಯ ಪಡೆದುಕೊಂಡರು. ಇದಕ್ಕೂ ಮುನ್ನ ಮಿಡಗೇಶಿಯಲ್ಲಿ ತೆರೆಯಲಾಗಿರುವ ಮೇವು ಬ್ಯಾಂಕ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತದ ನಂತರ ಪಾವಗಡ ಪಟ್ಟಣದ…
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ: ಕುಡಿಯಲು ಶುದ್ಧ ನೀರಿಲ್ಲದೇ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸಲುಕುಂಟೆ ಗ್ರಾಮಸ್ಥರು ಕಂಗಾಲಾಗಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುರಂಕೋಟೆ ಗ್ರಾಮ ಪಂಚಾಯಿತಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ವಿಫಲವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು 5 ತಿಂಗಳಾದರೂ ಇನ್ನೂ ಅದನ್ನು ಸರಿಪಡಿಸುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ ಮಾಡುವಲ್ಲಿ ಅಭಿವೃದ್ಧಿ ಅಧಿಕಾರಿಗಳು ವಿಫಲವಾದ ಪರಿಣಾಮ ಐದು ತಿಂಗಳಿಂದ ದಾಸಲುಕುಂಟೆ ಗ್ರಾಮದ ಜನರು ಶುದ್ಧ ಕುಡಿಯುವ ನೀರಿಲ್ಲದೆ ಪರದಾಟ ನಡೆಸುತ್ತಿದ್ದಾರೆ. ಪಕ್ಕದ ಊರಿನಿಂದ ಕುಡಿಯುವ ನೀರನ್ನು ತರುವ ಪರಿಸ್ಥಿತಿ ಸದ್ಯ ನಿರ್ಮಾಣವಾಗಿದೆ. ಕಳೆದ ಒಂದು ವರ್ಷದಿಂದ ಇಲ್ಲಿಗೆ ವಾಟರ್ ಮ್ಯಾನ್ ಕೂಡ ಇಲ್ಲ, ಗ್ರಾಮದಲ್ಲಿ ಜಲ ಜೀವನ್ ಯೋಜನೆ ಅನುಷ್ಠಾನ ಮಾಡುವಲ್ಲಿ ಸ್ಥಳೀಯ ಪ್ರಾಧಿಕಾರ ವಿಫಲವಾಗಿದೆ.…
ನೊಂದ ಕುಟುಂಬಗಳಿಗೆ ಕರುಣೆ ತೋರಿ ಮಾದರಿಯಾದ ಸ್ವಾಮೀಜಿಗಳು ಕೊರಟಗೆರೆ : ಚುನಾವಣೆ ನೀತಿಸಂಹಿತೆ ಮುಗಿದ ತಕ್ಷಣವೇ ಚಿಂಪುಗಾನಹಳ್ಳಿಯ 9 ಎಕರೇ 30 ಗುಂಟೆ ಸರಕಾರಿ ಜಮೀನಿನಲ್ಲಿ ಪಶು ಆಸ್ಪತ್ರೆ, ಸರಕಾರಿ ಶಾಲೆ ಮತ್ತು ಬಡವರಿಗೆ ನಿವೇಶನಕ್ಕೆ ಲೇಔಟ್ ನಿರ್ಮಾಣ ಮಾಡ್ತಿನಿ. ಗುಡಿಸಲು ಕಳೆದುಕೊಂಡ ಜನರಿಗೆ ಕುಡಿಯುವ ನೀರು, ವಿದ್ಯುತ್ ಮತ್ತು ಮೂಲಸೌಲಭ್ಯ ಪೂರೈಸಲು ತಕ್ಷಣ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದರು. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಂಪುಗಾನಹಳ್ಳಿ ಸಮೀಪ ವಿದ್ಯುತ್ ಅವಘಡದಿಂದ ಬೆಂಕಿಗೆ ಆಹುತಿಯಾಗಿದ್ದ ಸ್ಥಳಕ್ಕೆ ಭಾನುವಾರ ಸಿದ್ದರಬೇಟ್ಟ ಶ್ರೀಗಳ ಜೊತೆಯಲ್ಲಿ ಭೇಟಿ ನೀಡಿ ಸ್ಥಳಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು. ವರ್ಷದಲ್ಲಿ ಎರಡನೇ ಸಲ ಗುಡಿಸಲಿಗೆ ಬೆಂಕಿ ಬಿದ್ದು ಪ್ರಸ್ತುತ 10ಗುಡಿಸಲು ಸುಟ್ಟುಹೋಗಿ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಧವಸದಾನ್ಯ ನಾಶವಾಗಿವೆ. ಕಳೆದ ವರ್ಷವೇ ಭೇಟಿ ನೀಡಿ ನಿವೇಶನ ನೀಡುವ ಭರವಸೆ ನೀಡಿದ್ದೆ. ಈಗ ಪ್ರತಿ ಕುಟುಂಬಕ್ಕೆ 5 ಸಾವಿರ ಹಣ ನೀಡಿದ್ದೇನೆ.…
ತುಮಕೂರು: ಜಿಲ್ಲೆಯ ಪಾವಗಡ ತಾಲೂಕು, ನಿಡಗಲ್ಲು ಹೋಬಳಿಯ ಹರಿಹರಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮನೆಗೆ ವಿಶಿಷ್ಟವಾಗಿ ಗೃಹ ಪ್ರವೇಶ ನೆರವೇರಿಸಲಾಯಿತು. ನಿರ್ಮಲ ಮತ್ತು ತಿಪ್ಪೇಸ್ವಾಮಿ ಎಚ್.ಈ. ಇವರು ನಿರ್ಮಿಸಿರುವ ಗೂಳಿರು ಈರಣ್ಣ ನಿಲಯದ ಗೃಹಪ್ರವೇಶವು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತೋರಿದ ಬೌದ್ಧ ದಮ್ಮದ ಅನುಸಾರ ವಿಶಿಷ್ಟ ಬುದ್ಧ ವಂದನೆ ಕಾರ್ಯಕ್ರಮದೊಂದಿಗೆ ನೆರವೇರಿತು. ಬೌದ್ಧ ಬಿಕ್ಕು ಪೂಜ್ಯ ನ್ಯಾನಲೋಕ ಬಂತೇಜಿ ಅವರು ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಭಾರತೀಯ ಪರಿವರ್ತನ ಸಂಘ ರಾಜ್ಯಾಧ್ಯಕ್ಷರು ಹಾಗೂ ಹೈಕೋರ್ಟ್ ವಕೀಲರಾದ ಹರಿರಾಮ್ ಎ. ಅವರು ಭಾಗವಹಿಸಿದ್ದರು. BPS ತುಮಕೂರು ಜಿಲ್ಲಾಧ್ಯಕ್ಷ, ಚಿಕ್ಕತಿಮ್ಮನಹಟ್ಟಿ ಗ್ರಾಮದ ಹೆಚ್.ಕೆಂಚರಾಯ, ಪಾವಗಡ ತಾಲೂಕು ಸಂಯೋಜಕರಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣ, ಕಲಾವಿದರಾದ ನಾಗರಾಜ್, ನರಸಿಂಹಮೂರ್ತಿ, BPS ಕಾರ್ಯಕರ್ತರಾದ ತುಮಕುಂಟೆ ಗ್ರಾಮದ ತಿಪ್ಪೇಶ್, DSS ತುಮಕೂರು ಜಿಲ್ಲಾ ಸಂಚಾಲಕರಾದ ಸಿ.ಕೆ.ತಿಪ್ಪೇಸ್ವಾಮಿ, ಪಾವಗಡ ಚೈತ್ರ ಪ್ರಿಂಟರ್ಸ್ ಮಾಲೀಕರಾದ ಡಿ.ಎನ್.ತಿಪ್ಪೇಸ್ವಾಮಿ ಹಾಗೂ ನಿರ್ಮಲ ತಿಪ್ಪೇಸ್ವಾಮಿ ವರ ಕುಟುಂಬಸ್ಥರು ಹಾಗೂ ಊರಿನ ಗ್ರಾಮಸ್ಥರು…
ಸೌಂದರ್ಯವನ್ನು ಹೆಚ್ಚಿಸಲು ವಿವಿಧ ರೀತಿಯ ಚಿಕಿತ್ಸೆಗಳನ್ನು ತೆಗೆದುಕೊಳ್ಳಲಾಗುತ್ತದೆ. ಸೌಂದರ್ಯವನ್ನು ಕಾಪಾಡಿಕೊಳ್ಳುವುದಾಗಿ ಹೇಳಿಕೊಳ್ಳುವ ಸಲೂನ್ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅನೇಕ ರೀತಿಯ ಚರ್ಮದ ಆರೈಕೆ ಚಿಕಿತ್ಸೆಗಳು ಲಭ್ಯವಿದೆ. ಅಂತೆಯೇ ಇಂಥ ಸಾಮಾನ್ಯ ಆಸೆಯಿಂದ ಪಾರ್ಲರ್ ಗೆ ಹೋದ ಮೂವರು ಮಹಿಳೆಯರು ಎಚ್ ಐವಿ(HIV) ಸೋಂಕಿಗೆ ಒಳಗಾಗಿದ್ದಾರೆ !! ಮಹಿಳೆಯರು, ಸುಕ್ಕು ಗಟ್ಟಿದ ಚರ್ಮದ ಕಾಂತೀಯತೆಯನ್ನು ಸೂಜಿಯ ಮೂಲಕವೇ ಹೆಚ್ಚಿಸುವುದು ಇದರ ಪ್ರಮುಖ ವಿಧಾನವಾಗಿದೆ. ಚರ್ಮದಲ್ಲಿ ಕಾಲಜಿನ್ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್ ಆಗಿದೆ. ಆದರೆ, ಇದು ಮಾರಣಾಂತಿಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತಿರುವುದು ಆತಂಕ ಹೆಚ್ಚಿಸಿದೆ. ಇದೀಗ ಇಂತದ್ದೇ ಒಂದು ಅಘಾತಕಾರಿ ವಿಚಾರ ಬೆಳಕಿಗೆ ಬಂದಿದ್ದು ಅಮೆರಿಕಾದ ನ್ಯೂ ಮೆಕ್ಸಿಕೋದ ಸ್ಪಾವೊಂದರಲ್ಲಿ ವ್ಯಾಂಪೈರ್ ಫೇಶಿಯಲ್( Vampire Facial) ಪಡೆದ ಕನಿಷ್ಠ ಮೂವರು ಮಹಿಳೆಯರಿಗೆ ಎಚ್ ಐವಿ ಸೋಂಕು ತಗಲಿರುವ ಆಘಾತಕಾರಿ ಘಟನೆ ನಡೆದಿದೆ. ಅಮೆರಿಕದ(America) ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಈ ಬಗ್ಗೆ ಮಾಹಿತಿ ನೀಡಿದ್ದು, ಅಮೆರಿಕದ ನ್ಯೂ…
ಪತ್ನಿಯ ವರದಕ್ಷಿಣೆಯ ಮೇಲೆ ಪತಿಗೆ ಯಾವುದೇ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ, ಒಂದು ವೇಳೆ ಸಂಕಷ್ಟದ ಸಮಯದಲ್ಲಿ ಅದನ್ನು ಬಳಸಿದರೂ ಅದನ್ನು ಹೆಂಡತಿಗೆ ಹಿಂತಿರುಗಿಸಬೇಕು, ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಪೀಠ ಮಹಿಳೆ ಕಳೆದುಕೊಂಡ ಚಿನ್ನಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಪತಿಗೆ ಗುರುವಾರ ಆದೇಶಿಸಿದೆ. ಇಷ್ಟಕ್ಕೂ ನಡೆದಿರುವ ಘಟನೆ ಏನೆಂದರೆ, ಕೇರಳದ ಮಹಿಳೆಯೊಬ್ಬರು ತಮ್ಮ ತಂದೆ– ತಾಯಿ ಕೊಟ್ಟ 89 ಗ್ರಾಂ ಚಿನ್ನವನ್ನು ಪತಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ಮದುವೆಯಾದ ಮೊದಲ ರಾತ್ರಿಯೇ ಪತಿ ತನ್ನ ಎಲ್ಲಾ ಆಭರಣಗಳನ್ನು ತೆಗೆದುಕೊಂಡು ತನ್ನ ತಾಯಿಗೆ ಹಸ್ತಾಂತರಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ. ಚಿನ್ನವನ್ನು ಈಗಾಗಲೇ ತಮ್ಮ ಕುಟುಂಬದ ಸಾಲ ತೀರಿಸಲು ಬಳಸಲಾಗಿದೆ ಎಂದು ಅವರು ಹೇಳಿದರು. 2011ರಲ್ಲಿ ಆಕೆಯ ಪತಿ ಮತ್ತು ಚಿಕ್ಕಮ್ಮ ಚಿನ್ನದ ಬಗ್ಗೆ ಕೇಳಿದರೆ ಬೆದರಿಕೆ ಹಾಕುತ್ತಿದ್ದರು ಎಂದು ಕುಟುಂಬದವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪತಿ ಮಾಡಿದ್ದು ತಪ್ಪು ಎಂದು ಕೌಟುಂಬಿಕ ನ್ಯಾಯಾಲಯ ತೀರ್ಪು ನೀಡಿದೆ.…
ಚೆನ್ನೈ: ಅಪಾರ್ಟ್ಮೆಂಟ್ ಬಾಲ್ಕನಿಯಿಂದ ಮಗುವೊಂದು ಕೆಳಗೆ ಬೀಳಲಿರುವ ಸಮಯದಲ್ಲಿ ನೆರೆಹೊರೆಯವರು ಸಮಯಪ್ರಜ್ಞೆ ಮೆರೆದು ಮಗುವಿನ ಜೀವ ಉಳಿಸಿರುವ ಘಟನೆ ಚೆನ್ನೈನಲ್ಲಿ ಭಾನುವಾರ ನಡೆದಿದೆ. ಅಕ್ಕಪಕ್ಕದ ಮನೆಯವರ ಸಂಘಟಿದ ಕಾರ್ಯದಿಂದ ಮಗುವಿನ ಜೀವ ರಕ್ಷಿಸಲಾಗಿದ್ದು, ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಅಪಾರ್ಟ್ಮೆಂಟ್ ಒಂದರ ಮಹಡಿಯಲ್ಲಿ ವಾಸವಾಗಿದ್ದ ಕುಟುಂಬದ ಮಗುವೊಂದು ಆಕಸ್ಮಾತ್ತಾಗಿ ಬಾಲ್ಕನಿಯಿಂದ ಅಂಬೆಗಾಲಿನಲ್ಲಿ ತೆವಳುತ್ತಾ ಹೊರಗೆ ಬಂದಿತ್ತು. ಕೂಡಲೇ ಅಕ್ಕಪಕ್ಕದ ನಿವಾಸಿಗಳು ಕಿರುಚಿ ಸಾರ್ವಜನಿಕರ ಗಮನ ಸೆಳೆದಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಜನರು ಕೆಳಗೆ ಮಗು ಬಿದ್ದರೆ ಪೆಟ್ಟಾಗದಂತೆ ದೊಡ್ಡ ಗಾತ್ರದ ಬಟ್ಟೆಯೊಂದನ್ನು ಹಿಡಿದು ಸನ್ನದರಾಗಿ ನಿಂತರು. ಆದರೆ ಮಗು ಒಂದು ವೇಳೆ ಕೆಳಗೆ ಬಿದ್ದಿದ್ದರೆ ಅಪಾರ್ಟ್ಮೆಂಟ್ ನೇರವಾಗಿ ಬಟ್ಟೆಯ ಮೇಲೆ ಬೀಳದೆ, ಮಧ್ಯದಲ್ಲಿ ಕಟ್ಟಡಕ್ಕೆ ತಗುಲಿ ಪೆಟ್ಟು ಮಾಡಿಕೊಳ್ಳುವ ಸಾಧ್ಯತೆಯಿತ್ತು. ಈ ವೇಳೆ ಕೆಳಗಿನ ಮಹಡಿಯಲ್ಲಿದ್ದ ಕೆಲವು ಯುವಕರು ತಮ್ಮ ಬಾಲ್ಕನಿಯಿಂದ ಸಾಹಸ ಪಟ್ಟು ಮೇಲೇರಿ ಮಗುವನ್ನು ಹಿಡಿದು ಜೀವ ಉಳಿಸಿದ್ದಾರೆ. ಯುವಕರ ಸಾಹಸಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದ್ದು, ಈ…
ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದು, ಮೈಸೂರಿನ ನಿವಾಸಕ್ಕೆ ಅವರು ಪಾರ್ಥಿವ ಶರೀರವನ್ನು ತರಲಾಗಿದೆ. ಮೈಸೂರಿನಲ್ಲೇ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಆರು ಬಾರಿ ಸಂಸದ ಹಾಗೂ ಎರಡು ಬಾರಿ ಶಾಸಕರಾಗಿದ್ದ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ದಲಿತ ದಮನಿತರ ಪರವಾದ ದಿಟ್ಟ ದನಿ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ- ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ…
ತಿಪಟೂರು: ಮುಂದೆ ಚಲಿಸುತ್ತಿದ್ದ ವಾಹನವೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಬೆಂಗಳೂರು– ಶಿವಮೊಗ್ಗ ರಸ್ತೆ ಹೆದ್ದಾರಿಯ ಬಿದರೆಗುಡಿಯ ಬಳಿ ನಡೆದಿದೆ. ಧನುಷ್ (19,) ಮುತ್ತುರಾಜ್ (19) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. ಇವರು ಅಯ್ಯನಬಾವಿ ಗ್ರಾಮಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಹೊನ್ನವಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಜೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮುಂದೆ ಚಲಿಸುತ್ತಿದ್ದ ವಾಹನ ಯಾವುದೆಂದು ಸದ್ಯ ಮಾಹಿತಿ ತಿಳಿದು ಬಂದಿರುವುದಿಲ್ಲ. ಮೇಲ್ನೋಟಕ್ಕೆ ಬೈಕ್ ಸವಾರರೇ ಮುಂದೆ ಹೋಗುತ್ತಿರುವ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಕಂಡು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296