Subscribe to Updates
Get the latest creative news from FooBar about art, design and business.
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
- ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
- ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
Author: admin
ಗೃಹಲಕ್ಷ್ಮಿಯೋಜನೆಯ ಫಲಾನುಭವಿ ಪ್ರತಿ ತಿಂಗಳು ಬಂದ ಹಣವನ್ನು ಕೂಡಿಟ್ಟು ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ಸಿದ್ದರಾಮಯ್ಯ ಅವರ ಫೋಟೋವನ್ನು ವಾಲ್ ಪೇಪರ್ ಗೆ ಹಾಕಿ ಸಂಭ್ರಮ ಹಂಚಿಕೊಂಡಿದ್ದಾರೆ. ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಸಿಎಂ ತೆರಳಿದ್ದಾಗ ಮಹಿಳೆ ಹೊಸ ಮೊಬೈಲ್ನೊಂದಿಗೆ ಬಂದಿದ್ದು, ಮಹಿಳೆಯ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿ.ವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತು ಖರೀದಿಸುತ್ತಿದ್ದಾರೆ ಎಂದಿದ್ದಾರೆ. ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆ ತಂದ ನನ್ನಲ್ಲಿ ಸಾರ್ಥಕಭಾವ ಮೂಡಿದೆ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಆಂಧ್ರಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜನಸೇನೆಯ ಎನ್ ಡಿಎ ಸರ್ಕಾರ ರಚನೆಯಾದ ಕೂಡಲೇ ಮೆಕ್ಕಾಗೆ ಭೇಟಿ ನೀಡುವ ಮುಸ್ಲಿಂ ಯಾತ್ರಾರ್ಥಿಗಳಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಟಿಡಿಪಿ ನಾಯಕ ಎನ್.ಚಂದ್ರಬಾಬು ನಾಯ್ಡು ಭಾನುವಾರ ಭರವಸೆ ನೀಡಿದ್ದಾರೆ. ನೆಲ್ಲೂರಿನಲ್ಲಿ ಮುಸ್ಲಿಂ ಸಮುದಾಯದೊಂದಿಗಿನ ಸಂವಾದದಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದ ಕೂಡಲೇ, ಹಜ್ ಯಾತ್ರೆಗೆ ಮೆಕ್ಕಾಗೆ ಭೇಟಿ ನೀಡುವ ಪ್ರತಿಯೊಬ್ಬ ಮುಸ್ಲಿಮರಿಗೆ 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಹೇಳಿದರು. ಹೈದರಾಬಾದ್ ಮುಸ್ಲಿಮರು ಇತರ ಸ್ಥಳಗಳ ತಮ್ಮ ಸಮುದಾಯದವರಿಗೆ ಹೋಲಿಸಿದರೆ ಬಹಳ ಮುಂದಿದ್ದಾರೆ. ಇದಕ್ಕೆ ನಮ್ಮ ಪಕ್ಷದ ನೀತಿಗಳೇ ಕಾರಣ. ಈ ಹಿಂದೆಯೂ ಟಿಡಿಪಿ ಎನ್ಡಿಎ ಭಾಗವಾಗಿದ್ದರೂ, ಸಮುದಾಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಲು ಎಂದಿಗೂ ಅವಕಾಶ ನೀಡಲ್ಲ ಎಂದು ನಾಯ್ಡು ವಾಗ್ದಾನ ನೀಡಿದರು. ಟಿಡಿಪಿ ಹೈದರಾಬಾದ್ ನಲ್ಲಿ ಉರ್ದು ವಿಶ್ವವಿದ್ಯಾಲಯವನ್ನು ಸ್ಥಾಪಿಸಿದೆ ಮತ್ತು ಹಜ್ ಹೌಸ್ಗಳನ್ನು ನಿರ್ಮಿಸಿದೆ. ಆದರೆ ವೈಎಸ್ಆರ್ಸಿಪಿ ಮುಖ್ಯಸ್ಥ…
ಸಾಕು ನಾಯಿ ಸಾವಿನಿಂದ ಮನನೊಂದ 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ಬಾಲಕಿ ತನ್ನ ಮನೆಯಲ್ಲಿ ನಾಯಿಯೊಂದನ್ನು ಸಾಕಿದ್ದಳು. ಆದರೆ ಆ ನಾಯಿ ಮೃತಪಟ್ಟಿದ್ದು ಇದರಿಂದಾಗಿ ಆಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬಾಲಕಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಘಟನೆ ಹಿನ್ನೆಲೆಯಲ್ಲಿ ಆಕೆಯ ತಾಯಿ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಮಾತನಾಡಿ, ಐದು ದಿನಗಳ ಹಿಂದೆ ತನ್ನ ಪ್ರೀತಿಯ ನಾಯಿ ಸಾವನ್ನಪ್ಪಿದ್ದರಿಂದ ಬಾಲಕಿ ನೊಂದಿದ್ದಳು. ಆಕೆಯ ಮನೆಯವರು ಆಕೆಯನ್ನು ಸಮಾಧಾನಪಡಿಸಲು ಪ್ರಯತ್ನಿಸಿದ್ದರು. ಆದರೂ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹನೂರು ವಿಧಾನಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದ ಮತಗಟ್ಟೆ ಸಂಖ್ಯೆ 146ರಲ್ಲಿ ಇಂದು ಲೋಕಸಭಾ ಚುನಾವಣೆಗೆ ಮರುಮತದಾನ ಆರಂಭವಾಗಿದೆ. ಏ.26ರಂದು ನಡೆದ ಚುನಾವಣೆ ವೇಳೆ ಮತಗಟ್ಟೆ ಕೇಂದ್ರದ ಬಳಿ ಉಂಟಾದ ಗಲಭೆಯಲ್ಲಿ ಇಲೆಕ್ಟ್ರಾನಿಕ್ ಮತಯಂತ್ರವನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನಲೆ ಕೇಂದ್ರ ಚುನಾವಣಾ ಆಯೋಗ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದರು. ಆದರೆ, ಶೂನ್ಯ ಮತದಾನವಾಗುವ ಭೀತಿಯಿಂದಾಗಿ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿ ಮತದಾನಕ್ಕೆ ಕರೆತಂದಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಕೇಂದ್ರದ ಮೇಲೆ ದಾಳಿ ಮಾಡಿದ್ದರು. ಮತಗಟ್ಟೆಗೆ ನುಗ್ಗಿದ ಕೆಲ ಮಂದಿ ಮತ ಯಂತ್ರ ಧ್ವಂಸ ಮಾಡಿದ್ದಲ್ಲದೆ, ಕಲ್ಲುತೂರಾಟ ನಡೆಸಿದ್ದರು. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಮಹಿಳೆಯರು, 13 ಪುರುಷರು ಸೇರಿ ಒಟ್ಟು 36 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಚೀನಾ ಮತ್ತು ಮ್ಯಾನ್ಮಾರ್ ನಲ್ಲಿ ಭೂಕಂಪ ಸಂಭವಿಸಿದೆ. ಚೀನಾದ ಕ್ಸಿಜಾಂಗ್ ನಲ್ಲಿ ರಿಕ್ಟರ್ ಮಾಪಕದಲ್ಲಿ 4.2 ರ ತೀವ್ರತೆಯ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.2ರಷ್ಟು ಭೂಕಂಪ ದಾಖಲಾಗಿದೆ. ಭೂಮಿಯಿಂದ 30 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರಬಿಂದುವಿದೆ ಎಂದು ಭೂಕಂಪ ವಿಜ್ಞಾನದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಕ್ಸಿಜಾಂಗ್ ನಲ್ಲಿ ಭೂಕಂಪ ಸಂಭವಿಸಿದ ಕೆಲವು ಗಂಟೆಗಳ ನಂತರ, ನೆರೆಯ ಮ್ಯಾನ್ಮಾರ್ನಲ್ಲಿ ಮತ್ತೊಂದು ಭೂಕಂಪದ ಅನುಭವವಾಯಿತು. ಮ್ಯಾನ್ಮಾರ್ನಲ್ಲಿ ತಡರಾತ್ರಿ 2:15 ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.2 ರಷ್ಟು ದಾಖಲಾಗಿದೆ. ಭೂಮಿಯಿಂದ 7 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರಬಿಂದುವಿದೆ ಎಂದು ಭೂಕಂಪ ವಿಜ್ಞಾನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಸದ್ಯದ ಮಾಹಿತಿಯ ಪ್ರಕಾರ ಎರಡು ದೇಶಗಳಲ್ಲಿ ಭೂಕಂಪದಿಂದ ಯಾವುದೇ ಹಾನಿಯಾಗಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಇರಾಕ್ ನ ಖ್ಯಾತ ಸಾಮಾಜಿಕ ಜಾಲತಾಣ ತಾರೆ ಘುಫ್ರಾನ್ ಸವಾದಿಯನ್ನು ಬಾಗ್ಧಾದ್ ನಿವಾಸದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘುಫ್ರಾನ್ ಸವಾದಿ ಉಮ್ ಫಾಹದ್ ಹೆಸರಿನಲ್ಲಿ ಖ್ಯಾತರಾಗಿದ್ದರು. ಬಾಗ್ದಾದ್ ನ ಪೂರ್ವದ ಝಯೌನಾ ಪ್ರದೇಶದಲ್ಲಿ ನಡೆದ ಈ ಘಟನೆಯು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಬೈಕ್ ನಲ್ಲಿ ಸ್ಥಳಕ್ಕಾಗಮಿಸುತ್ತಿರುವುದನ್ನು ಕಾಣಬಹುದು. ಸ್ವಲ್ಪ ಸಮಯದ ನಂತರ, ಅವನು ತನ್ನ ಬೈಕನ್ನು ನಿಲ್ಲಿಸಿ ಕಾರಿನ ಕಡೆಗೆ ಓಡಿ, ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗುತ್ತಾನೆ. ಪ್ರಕರಣದ ತನಿಖೆಗಳು ನಡೆಯುತ್ತಿದ್ದು, ಆರೋಪಿಗಳ ಗುರುತು ಪತ್ತೆಯಾಗಿಲ್ಲ. ಸವಾದಿ ಟಿಕ್ ಟಾಕ್ ಮೂಲಕ ಖ್ಯಾತಿ ಗಳಿಸಿದ್ದರು. ಅವರ ಕೆಲವು ವೀಡಿಯೊಗಳನ್ನು “ಅಶ್ಲೀಲ ಮತ್ತು ಅಸಭ್ಯ, ಸಾರ್ವಜನಿಕ ಸಭ್ಯತೆ ಮತ್ತು ನೈತಿಕತೆಯನ್ನು ಉಲ್ಲಂಘಿಸುವ” ಎಂದು ಪರಿಗಣಿಸಿದ ನಂತರ ಅವರು ಆರು ತಿಂಗಳ ಜೈಲು ಶಿಕ್ಷೆಗೆ ಒಳಗಾಗಿದ್ದರು. ಆದರೂ, ಅವರು ಪಾಪ್ ಸಂಗೀತಕ್ಕೆ ನೃತ್ಯ ಮಾಡುವ ವೀಡಿಯೊಗಳನ್ನು ಹಂಚಿಕೊಳ್ಳುವುದನ್ನು ಮುಂದುವರೆಸಿದ್ದರು. ಹಿಂದಿನ ಸೆಪ್ಟೆಂಬರ್…
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗಾಗಿ ಇಂದಿನಿಂದ ಪರೀಕ್ಷೆ ಆರಂಭವಾಗಲಿದೆ. ಕಳೆದ ತಿಂಗಳಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಫೇಲ್ ಆದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ. 29 ರಿಂದ ಮೇ 16ರವರೆಗೆ ಪಿಯುಸಿ ಪರೀಕ್ಷೆ –2 ನಡೆಯಲಿದ್ದು, ದಾಖಲೆಯ ಪ್ರಮಾಣದಲ್ಲಿ ಪಿಯು ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದಾರೆ. ವಿಶೇಷ ಅಂದ್ರೆ ಪಿಯುಸಿ ಮೊದಲ ಪರೀಕ್ಷೆಯಲ್ಲಿ ಪಾಸ್ ಆಗಿದ್ರೂ ಕೂಡಾ ಹಳೆಯ ಫಲಿತಾಂಶ ಚಾಲೆಂಜ್ ಮಾಡಲು 32 ಸಾವಿರ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಸೋಮವಾರದಿಂದ ಶುರುವಾಗುವ ದ್ವಿತೀಯ ಪಿಯುಸಿ –2 ಪರೀಕ್ಷೆಗೆ ರಾಜ್ಯದಲ್ಲಿ ಒಟ್ಟು 149300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 32 ಸಾವಿರ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣವಾಗಿದ್ರೂ ಫಲಿತಾಂಶ ಹೆಚ್ಚಿಸಲು ಮರು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ಪ್ರತಿಯೊಂದು ವಿಷಯದ ಪರೀಕ್ಷೆಯು ಮಧ್ಯಾಹ್ನ 2:15 ರಿಂದ ಸಂಜೆ 4:30 ಗಂಟೆವರೆಗೆ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ (76) ವಿಧಿವಶರಾಗಿದ್ದಾರೆ. ತಡರಾತ್ರಿ 1:20ಕ್ಕೆ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಹಳೆ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀನಿವಾಸ್ ಪ್ರಸಾದ್ ಅವರು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಹಾಗೂ ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಏಪ್ರಿಲ್ 22ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಿಸದೇ ತೀವ್ರ ಹೃದಯಾಘಾತ ನಿಧನರಾಗಿದ್ದಾರೆ. ಕಳೆದೊಂದು ವಾರದಿಂದ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶ್ರೀನಿವಾಸ್ ಪ್ರಸಾದ್ ಅವರು ಪಾರ್ಥಿವ ಶರೀರವನ್ನು ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ರವಾನೆ ಮಾಡಲಾಗಿದೆ. ಇಂದು ಮೈಸೂರಿನಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದ ಅವರು, ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೆಯೇ, ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಬೈಕ್ ಕಳ್ಳತನದ ಪ್ರಕರಣಗಳು ಹೆಚ್ಚಾಗಿದ್ದು, ಬೈಕ್ ಕಳ್ಳತನ ಮಾಡಿ ಬಸ್ ನಿಲ್ದಾಣದ ಪಕ್ಕದ ಪೇ&ಪಾರ್ಕಿಂಗ್ ನಲ್ಲಿ ಪಾರ್ಕ್ ಮಾಡಿ ಕಳ್ಳರು ಪರಾರಿಯಾಗುತ್ತಿರುವ ವಿಚಾರ ಮೆಜೆಸ್ಟಿಕ್ ನಲ್ಲಿ ಬೆಳಕಿಗೆ ಬಂದಿದೆ. ಪಾರ್ಕ್ ಮಾಡಿ ಐದಾರು ತಿಂಗಳಾದರೂ ಬೈಕ್ ಗಳನ್ನು ತೆಗೆದುಕೊಂಡು ಹೋಗದೇ ಇದ್ದಾಗ ಅನುಮಾನ ಮೂಡಿ ಅಲ್ಲಿನ ಸಿಬ್ಬಂದಿ ಸುಮಾರು 30 ಬೈಕ್ ಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ. ಹಿಂದೆ ಬೈಕ್ ಕಳ್ಳತನ ಮಾಡಿದ ಬಳಿಕ ಕಳ್ಳರು ಬೈಕಿನ ಜೊತೆಯೇ ಪರಾರಿಯಾಗುತ್ತಿದ್ದರು. ಆದರೆ ಈಗ ಸಿಸಿಟಿವಿಗಳು ಎಲ್ಲೆಡೆ ಇರುವ ಕಾರಣ ಸುಲಭವಾಗಿ ಸಿಕ್ಕಿ ಬೀಳುತ್ತಿದ್ದಾರೆ. ಹೀಗಾಗಿ ಬಂಧನಗೊಳ್ಳುವ ಭಯದಲ್ಲಿ ಪಾರ್ಕಿಂಗ್ ನಲ್ಲಿ ಕಳ್ಳರು ಬೈಕ್ ಪಾರ್ಕ್ ಮಾಡಿ ಹೋಗುತ್ತಿದ್ದಾರೆ. ಈ ರೀತಿ ಪಾರ್ಕ್ ಮಾಡಿ ಹೋದವರು ಆರು ತಿಂಗಳು ಕಳೆದರು ಮರಳಿ ಬರದೇ ಇರುವ ಕಾರಣ ಪಾರ್ಕಿಂಗ್ ಸಿಬ್ಬಂದಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ ಕೆಲವು ಬೈಕ್ ಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪಾರ್ಕಿಂಗ್ ಸಿಬ್ಬಂದಿ ಒಪ್ಪಿಸಿರುವ…
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವೈರಲ್ ಪ್ರಕರಣದ ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ನಾನಾಗಲಿ, ಹೆಚ್.ಡಿ. ದೇವೇಗೌಡರಾಗಲಿ ಈ ರೀತಿಯ ಕೆಲಸ ಮಾಡಿಲ್ಲ. ಹೆಣ್ಣುಮಕ್ಕಳ ವಿಚಾರದಲ್ಲಿ ಗೌರವ ಕೊಟ್ಟು ಅವರ ಸಮಸ್ಯೆ ಬಗೆಹರಿಸಿ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಕೇಸ್ ಕುರಿತು ಮಾತನಾಡಿದ ಅವರು, ಈಗಾಗಲೇ ಸಿಎಂ ಎಸ್ ಐಟಿ (SIT) ತನಿಖೆಗೆ ಆದೇಶ ನೀಡಿದ್ದಾರೆ ಎಂದು ಗಮನಿಸಿದ್ದೇನೆ. ಹಾಸನ ಚುನಾವಣಾ ಪ್ರಚಾರ ವೇಳೆ ಪ್ರಕರಣ ಆರಂಭವಾಗಿದೆ. ವಾಸ್ತವಾಂಶ ಹೊರಬರಲಿ. ತನಿಖೆ ಆದಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ನೆಲದ ಕಾನೂನಲ್ಲಿ ತಪ್ಪು ಮಾಡಿದವನು, ಉಪ್ಪು ತಿಂದವನು ನೀರು ಕುಡಿಯಲೇಬೇಕು. ನಾವು ತಪ್ಪು ಮಾಡಿದವರನ್ನು ಕ್ಷಮಿಸುವುದಿಲ್ಲ. ಹೀಗಾಗಿ ತನಿಖೆ ವರದಿ ಬರಲಿ. ಬಂದ ಮೇಲೆ ಮಾತನಾಡುತ್ತೇನೆ. ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿದ್ದರೆ ನನಗೆ ಸಂಬಂಧವಿಲ್ಲ. ಎಸ್ ಐಟಿ ತನಿಖೆಗೆ ಆದೇಶಿಸಿದ್ದಾರೆ. ಎಸ್ ಐಟಿ ಅಧಿಕಾರಿಗಳನ್ನು ನೇಮಿಸಿದ್ದಾರೆ. ವಿದೇಶಕ್ಕೆ ಹೋಗಿದ್ದರೆ ಕರೆದುಕೊಂಡು ಬರುವ ಜವಾಬ್ದಾರಿ ಅವರದ್ದು, ನಾನು ಉತ್ತರಿಸಲ್ಲ…