Author: admin

ಲೋಕ ಸಭಾ ಚುನಾವಣೆ ಕರ್ನಾಟಕದಲ್ಲಿ ಮೊದಲ ಹಂತದ ಯಶಸ್ವಿಯಾಗಿ ನಡೆದಿದೆ. ಈ ಬೆನ್ನಲ್ಲೇ ಒಕ್ಕಲಿಗ ನಾಯಕರ ಚಿತ್ತ ಹಳೆ ಮೈಸೂರಿನ ಕಡೆ ಹೊರಳಿದೆ. ಈ ನಡುವೆ ಸಮುದಾಯದ ನಾಯಕರ ಪರಸ್ಪರ ರಾಜಕೀಯ ಕೆಸರೆರಚಾಟ, ಟೀಕೆಗಳ ಸುರಿಮಳೆ ನಡೆದಿದೆ. ಒಕ್ಕಲಿಗ ನಾಯಕರಾದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಚೆಲುವರಾಯ ಸ್ವಾಮಿ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿದೆ. ಮಾಧ್ಯಮಗಳ ಮುಂದೆ ಮಾತನಾಡಿರುವ ಸಚಿವ ಚೆಲುವರಾಯ ಸ್ವಾಮಿ, ‘ಶ್ರೀ ನಿರ್ಮಲನಂದನಾಥ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿಸಿದ್ದು ಯಾರು..? ಜೆಡಿಎಸ್ ಸರ್ಕಾರ ಅಲ್ವಾ..? ಇದನ್ನು ಮಾಡಿಸಿದ್ದು ಯಾಕೆ..? ಇದಕ್ಕಿಂತ ದೊಡ್ಡ ಅಪಚಾರ ಒಕ್ಕಲಿಗರ ಪೀಠಕ್ಕೆ ಬೇಕಾ..? ಎಂದು ಪ್ರಶ್ನಿಸಿದ್ದಾರೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಮಂಡ್ಯ ಲೋಕ ಸಭಾ ಕ್ಷೇತ್ರದಿಂದ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಪಕ್ಷದಿಂದ ಸ್ಪರ್ಧೆಗಿಳಿದಿರುವ ಅವರು ಬಹಳಷ್ಟು ತೀಕ್ಷ್ಣ ಪದಗಳಿಂದ ಹಾಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಗುಡುಗಿದ್ದಾರೆ.…

Read More

ಭಾರತದಲ್ಲಿ ‘777 ಚಾರ್ಲಿ’ (777 Charlie) ಸಿನಿಮಾ ಬಹಳ ಮೋಡಿ ಮಾಡಿತ್ತು. ಪ್ರಾಣಿಪ್ರಿಯರು ಈ ಸಿನಿಮಾ ನೋಡಿ ಖುಷಿಪಟ್ಟಿದ್ದರು. ತುಳುನಾಡಿನ ನಟ ರಕ್ಷಿತ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದರು. ‘ಪರಂವಃ ಸ್ಟುಡಿಯೋಸ್’ ಮೂಲಕ ನಿರ್ಮಾಣವಾದ ‘777 ಚಾರ್ಲಿ’ ಸಿನಿಮಾ ತಂಡದಿಂದ ಒಂದು ವಿಶೇಷ ಸುದ್ದಿ ಕೇಳಿಬಂದಿದೆ. ಈಗ ಜಪಾನ್ ನಲ್ಲಿ ಈ ಚಿತ್ರ ಬಿಡುಗಡೆ ಆಗಲು ಸಿದ್ಧವಾಗಿದೆ. ಕನ್ನಡದ ಈ ಸಿನಿಮಾ ಜಪಾನೀಸ್ ಭಾಷೆಗೆ ಡಬ್ ಆಗಿ ಬಿಡುಗಡೆ ಆಗುತ್ತಿದೆ. ಜೂನ್ 28ರಂದು ಜಪಾನ್ (Japan) ದೇಶದ ಹಲವು ನಗರಗಳಲ್ಲಿ ‘777 ಚಾರ್ಲಿ’ ರಿಲೀಸ್ ಆಗಲಿದೆ ಎಂದು ವರದಿ ತಿಳಿಸಿದೆ. ಬಾಲಿವುಡ್ ಹಾಗೂ ಟಾಲಿವುಡ್ ನ ಸಿನಿಮಾಗಳು ಜಪಾನ್ ನಲ್ಲಿ ಬಿಡುಗಡೆ ಆಗಿ ಯಶಸ್ಸು ಕಂಡಿದ್ದವು. ಈಗ ಕನ್ನಡದ ಒಂದು ಸಿನಿಮಾ ಜಪಾನ್ ನಲ್ಲಿ ತೆರೆ ಕಾಣಲು ಸಜ್ಜಾಗಿರುವುದು ಹೆಮ್ಮೆಯ ವಿಷಯ. ಜಪಾನ್ ಚಿತ್ರರಂಗದ ದೊಡ್ಡ ಸಂಸ್ಥೆ ‘ಶೋಚಿಕೋ ಮೂವೀ’ ಕಿರಣ್ ರಾಜ್ ನಿರ್ದೇಶನದ ‘777 ಚಾರ್ಲಿ’ ಚಿತ್ರವನ್ನು ಜಪಾನಿನಲ್ಲಿ…

Read More

ವಿಜಯಪುರ:  ಬಿ.ಎಸ್.ಯಡಿಯೂರಪ್ಪನವರ ಪುತ್ರ ಪ್ರೇಮದ ವಿಚಾರವಾಗಿ ಸ್ವಪಕ್ಷದವರೇ ನೀಡಿರುವ ಹೇಳಿಕೆಗೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆ ಪ್ರಚಾರ ಸಭೆಯಲ್ಲಿ ಬಿಎಸ್ ವೈ ಟಕ್ಕರ್ ಕೊಟ್ಟರು. ನನಗೆ ಮಗ ಬಿ.ವೈ. ರಾಘವೇಂದ್ರ ಆದ್ಯತೆ ಅಲ್ಲ. ನನಗೆ ನೀವು ಮುಖ್ಯ, ನೀವು ಅಗತ್ಯ ಎಂದು ಯಡಿಯೂರಪ್ಪ ಹೇಳಿದ್ದು, ನನ್ನ ಮಗ ಶಿವಮೊಗ್ಗದಲ್ಲಿ ಸ್ಪರ್ಧಿಸಿದ್ದಾನೆ. ಅಲ್ಲಿ ನಾನು ಸಭೆಯಲ್ಲಿ ಇರಬೇಕಾಗಿತ್ತು. ಆದ್ರೆ, ಅದನ್ನೆಲ್ಲ ಬಿಟ್ಟು ನಾನು ಮುದ್ದೇಬಿಹಾಳಕ್ಕೆ ಬಂದಿದ್ದೇನೆ. ನನಗೆ ನನ್ನ ಮಗ ಆದ್ಯತೆ ಅಲ್ಲ ಎಂದರು. ನರೇಂದ್ರ ಮೋದಿ ಅವರು ಪ್ರಧಾನಿ ಆಗಿ 10 ವರ್ಷವಾಯಿತು. ಒಂದೇ ದಿನ ಕೂಡಾ ಅವರು ವಿಶ್ರಾಂತಿ ತಗೆದುಕೊಂಡಿಲ್ಲ. ಈ ಬಾರಿ ರಾಜ್ಯದಲ್ಲಿ 28 ಕ್ಕೆ 28 ಮತಕ್ಷೇತ್ರ ಗೆಲ್ಲುವ ವಾತಾವರಣ ಇದೆ. ನಿನ್ನೆ ನಡೆದ ಚುನಾವಣೆಯಲ್ಲಿ 14ಕ್ಕೆ 14 ಕ್ಷೇತ್ರಗಳನ್ನು ಸಹ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಬೀದರ್: ಔರಾದ ಮತ ಕ್ಷೇತ್ರದ  ಬೆಳಕುಣಿ ಚೌಧರಿ  ಚಿಕ್ಲಿ, ಜಂಬಗಿ, ಮಾಹಾರಾಜವಾಡಿ, ವಲ್ಲೆಪೂರ, ಸೋರಳ್ಳಿ, ಕಂದಗೂಳ, ವಡಗಾಂವ, ಮಸ್ಕಲ, ನಾಗೂರ (ಬಿ)  ಗ್ರಾಮದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಾಗರ್ ಖಂಡ್ರೆ ಪರ ಮನೆಮನೆಗಳಿಗೆ ತೆರಳಿ ಪ್ರಚಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರ ಡಾ.ಭೀಮಸೇನರಾವ ಸಿಂಧೆ, ರಾಜಕುಮಾರ ಹಲ್ಬುರ್ಗೆ, ಮಲ್ಲಿಕಾರ್ಜುನ ಪಾಟೀಲ, ಶಿವರಾಜ ದೇಶಮುಖ, ಪರಮೇಶ್ವರ ಮೆತ್ರ,  ಗ್ರಾಮ ಪಂಚಾಯತ್ ಸದಸ್ಯರು ದೇವಿದಾಸ ಮಾಳಗೆ ಗ್ರಾ.ಪಂ. ಸದಸ್ಯ ಕರಬಸಪ್ಪಾ ಸೊರಾಳೆ, ಎಂ.ಡಿ. ನಯೂಮ್, ಅಲಾವವುದ್ದೀನ್, ಮಾಜಿ ಗ್ರಾ.ಪಂ. ಅಧ್ಯಕ್ಷರು  ದೇವಿದಾಸ ಧೋಳ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಯಾವ ದೊಣ್ಣೆ ನಾಯಕ ನೀನು. ನಿನ್ನ ಮನೆಯಿಂದ ದುಡ್ಡು ತಂದಿಯೇನಪ್ಪಾ. ಯಾವ ದೇಶದ ಮಹಾರಾಜ ನೀನು. ರಾಮ ಮಂದಿರ ಕಟ್ಟು, ಆದ್ರೆ ನಾನ್ ಕೇಳ್ತಿರೋದು ರಾಮ ರಾಜ್ಯ ಎಲ್ಲಿ ಅಂತ. ನಮ್ಮ ಮಕ್ಕಳಿಗೆ ಉದ್ಯೋಗ, ನಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಯಾಕಿಲ್ಲ ಒಳ್ಳೆಯ ಶಿಕ್ಷಣ. ನೀನು ನಿಜವಾಗಲೂ ಕೆಲಸ ಮಾಡಿದ್ರೆ ಇಷ್ಟು ದುಡ್ಡು ಖರ್ಚು ಮಾಡುವ ಅವಶ್ಯಕತೆ ಏನಿದೆ ಎಂದು ಪ್ರಧಾನಿ ಮೋದಿ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಈಗ ಬರ ಪರಿಹಾರ ಘೋಷಿಸಿದೆ. ಡಿಸೆಂಬರ್‌ನಲ್ಲಿ ಬರ ಪರಿಹಾರ ಕೊಡಿ ಅಂದ್ರು ಯಾಕೆ ಕೊಡಲಿಲ್ಲ. ನಮ್ಮ 28 ಸಂಸದರು ಯಾಕೆ ಮಾತಾಡಲಿಲ್ಲ. ಹಲ್ಲು ಕಿಸಿದುಕೊಂಡು ನಿಂತಿದ್ರು ಎಂದು ಕಿಡಿಕಾರಿದ್ದಾರೆ. ಮಹಾಪ್ರಭುಗಳು 2015ರಲ್ಲಿ ನೂರು ಸ್ಮಾರ್ಟ್ ಸಿಟಿ ಕೊಡ್ತೀನಿ ಅಂದ್ರಲ್ಲ. ಈಗ ಹತ್ತಾದ್ರು ಸ್ಮಾರ್ಟ್ ಸಿಟಿಯನ್ನ ತೋರಿಸಿ. ಯಾಕೆ ಸುಳ್ಳು ಹೇಳಿಕೊಂಡು ಓಡಾಡುತ್ತೀರಿ. ಈಗ ಮತ್ತೊಂದು ಗ್ಯಾರಂಟಿ ಹೇಳ್ತಿದ್ದೀರಿ. ಮೊದಲು…

Read More

ಬೃಹತ್‌ ಮಾನವ ಕಳ್ಳ ಸಾಗಾಟ ಜಾಲವೊಂದು ಬೆಳಕಿಗೆ ಬಂದಿದೆ. ಬಿಹಾರದಿಂದ ಉತ್ತರಪ್ರದೇಶಕ್ಕೆ ಸಾಗಾಟವಾಗುತ್ತಿದ್ದ 95ಕ್ಕೂ ಅಧಿಕ  ಮಕ್ಕಳನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಸರ್ವೇಶ್ ಅವಸ್ಥಿ ಮಾಹಿತಿ ನೀಡಿದ್ದಾರೆ, ಇವರು ಹೇಳಿರುವ ಪ್ರಕಾರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಉತ್ತರಪ್ರದೇಶ ಮಕ್ಕಳ ಹಕ್ಕುಗಳ ಆಯೋಗ ಸದಸ್ಯೆ ಸುಚಿತ್ರಾ ಚತುರ್ವೇದಿ ಕರೆ ಮಾಡಿ, ಬಿಹಾರದಿಂದ ಸಹರಾನ್ ಪುರಕ್ಕೆ ಮಕ್ಕಳನ್ನು ಅಕ್ರಮವಾಗಿ ಸಾಗಾಟ ಆಗುತ್ತಿದೆ. ಮಕ್ಕಳು ಸದ್ಯ ಗೋರಖ್ ಪುರದಲ್ಲಿದ್ದು, ಅಯೋಧ್ಯೆ ಮೂಲಕ ಅವರನ್ನು ಬೇರೆಡೆ ಸಾಗಿಸಾಗುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು ಎಂದು ತಿಳಿಸಿದರು. ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸರ್ವೇಶ್ ಅವಸ್ಥಿ ಪೊಲೀಸರ ಸಹಾಯದಿಂದ ಮಕ್ಕಳ ರಕ್ಷಿಸಿದ್ದು, ಅವರಿಗೆ ಆಹಾರ ಮತ್ತು ಔಷಧ ಪೂರೈಕೆ ಮಾಡಿದ್ದಾರೆ. ಇನ್ನು ಈ ಮಕ್ಕಳು 4-12 ವರ್ಷ ವಯೋಮಿತಿಯವರಾಗಿದ್ದು, ಅವರನ್ನು ಕರೆದುಕೊಂಡು ಬಂದವರ ಬಳಿಕ ಮಕ್ಕಳ ಪೋಷಕರ ಒಪ್ಪಿಗೆ ಪತ್ರವಾಗಲೀ, ಇತರೆ ಯಾವುದೇ ದಾಖಲೆಗಳು ಇರಲಿಲ್ಲ. ಅಷ್ಟೇ ಅಲ್ಲದೇ ಮಕ್ಕಳನ್ನು…

Read More

ಉತ್ತರ ಪತ್ರಿಕೆಯನ್ನು ಸೂಕ್ತ ಉತ್ತರ ಬರೆಯುವುದನ್ನು ನೋಡಿದ್ದೇವೆ. ಉತ್ತರ ಗೊತ್ತಿಲ್ಲದಿದ್ದರೂ ಕೆಲವರು ಪುಟಗಟ್ಟಲೆ ಬಾಯಿಗೆ ಬಂದದ್ದನ್ನೆಲ್ಲ ಬರೆಯುವುದರ ಬಗ್ಗೆಯೂ ಕೇಳಿದ್ದೇವೆ. ಆದರೆ ಇಲ್ಲಿ ಕೆಲವರು ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯಲ್ಲಿ ಜೈ ಶ್ರೀ ರಾಮ್ ಎಂದು ಬರೆದಿದ್ದಾರೆ. ವಿಶೇಷವೆನೆಂದರೆ ಹೀಗೆ ಬರೆದ ವಿದ್ಯಾರ್ಥಿಗಳನ್ನು ಅಧ್ಯಾಪಕರು ಹೆಚ್ಚಿನ ಅಂಕ ನೀಡಿ ಪಾಸ್ ಮಾಡಿದ್ದಾರೆ. ಇದೀಗ ಈ ಘಟನೆಯೇ ಭಾರಿ ಚರ್ಚೆಗೆ ಕಾರಣವಾಗಿದೆ. ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯವೊಂದರಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಉತ್ತರಗಳ ಬದಲು “ಜೈ ಶ್ರೀ ರಾಮ್” ಘೋಷಣೆ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದು ಪರೀಕ್ಷೆ ಮುಗಿಸಿದ್ದಾರೆ. ಅವರೇನೋ ಪಾಸಾಗಿದ್ದಾರೆ. ಆದರೆ ನಂತರ ಕಾನೂನು ಉರುಳು ಪ್ರಾಧ್ಯಾಪಕರನ್ನು ಸುತ್ತಿಕೊಂಡಿದೆ. ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು, ಮ್ಯೂಸಿಕ್‌ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದು, ಅದಕ್ಕೆ ಅಂಕಗಳನ್ನು ನೀಡುವುದಕ್ಕಾಗಿ ವಿದ್ಯಾರ್ಥಿಗಳಿಂದ ಹಣವನ್ನು ಲಂಚ ಪಡೆದ ಆರೋಪದ ಮೇಲೆ ಜೌನ್ ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ.…

Read More

ಬಾಲಿವುಡ್ ನ ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ ನಮಗೆಲ್ಲರಿಗೂ ಗೊತ್ತು. ಎಂ. ಎಸ್. ಧೋನಿ ಸಿನಿಮಾದಲ್ಲಿ ಅತ್ಯದ್ಭುತ ನಟನೆಯ ಮೂಲಕ ನಮ್ಮೆಲ್ಲರ ಗಮನ ಸೆಳೆದವರು. ಅವರ ನಿಗೂಢ ಸಾವಿನ ಬಗ್ಗೆ ಇನ್ನೂ ಹಲವಾರು ಅನುಮಾನಗಳು ಕಾಡುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಇನ್ನಷ್ಟು ಬಿಗಿಯಾಗಿ ನಡೆಯಬೇಕೆಂಬ ಕಾರಣಕ್ಕೆ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ನ್ಯಾಯಕ್ಕಾಗಿ ಆನ್‌ ಲೈನ್ ಅಭಿಯಾನವನ್ನು ಆರಂಭಿಸಿದ್ದಾರೆ. ಈ ಬಗ್ಗೆ ಇನ್‌ ಸ್ಟಾದಲ್ಲಿ ‘ನ್ಯಾನಿ 4 ಎಸ್‌ ಎಸ್‌ ಆರ್ ಜಾನ್ ಆಂದೋಲನ್’ (Nany 4 SSR Jan Andolan) ಎಂದು ಘೋಷಿಸಿದ್ದಾರೆ. ಈ ಅಭಿಯಾನದ ಭಾಗವಾಗಿ, ಪ್ರತಿಯೊಬ್ಬರೂ ತಮ್ಮ ಮಣಿಕಟ್ಟಿಗೆ ಅಥವಾ ಹಣೆಯ ಮೇಲೆ ಕೆಂಪು ಬಟ್ಟೆಯನ್ನು ಕಟ್ಟಿಕೊಳ್ಳಬೇಕೆಂದು ಶ್ವೇತಾ ಒತ್ತಾಯಿಸಿದ್ದಾರೆ. ಜತೆಗೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ನಟನಿಗೆ ನ್ಯಾಯ ನೀಡುವಂತೆ ವಿನಂತಿಸಿದ್ದಾರೆ, ಪೋಸ್ಟ್‌ ನ ಶೀರ್ಷಿಕೆಯಲ್ಲಿ ʻʻಸಿಬಿಐ ತನಿಖೆಯನ್ನು ಇನ್ನಷ್ಟು ಕಠಿಣಗೊಳಿಸಬೇಕು. ಮತ್ತು ಸತ್ಯವನ್ನು…

Read More

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಏರುತ್ತಿದ್ದಾಗ ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಹೆಲಿಕಾಪ್ಟರ್ ಏರಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಮುಂದಾದಾಗ ನಿಯಂತ್ರಣ ಕಳೆದುಕೊಂಡು ಮಮತಾ ಬಿದ್ದುಬಿಟ್ಟರು. ಮುಖ್ಯಮಂತ್ರಿಗೆ ಸಣ್ಣಪುಟ್ಟ ಗಾಯವಾಗಿದೆ. ತಕ್ಷಣ ಅವರ ಭದ್ರತಾ ಸಿಬ್ಬಂದಿ ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. ನಂತರ ಮಮತಾ ತಮ್ಮ ಮುಂದಿನ ಪ್ರಯಾಣವನ್ನು ಅಸನ್ಸೋಲ್ ಗೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಬಿದ್ದು ಗಾಯಗೊಂಡಿರುವುದು ಇದು ಎರಡನೇ ಬಾರಿ. ಮಾರ್ಚ್ 14ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದೊಳಗೆ ಬಿದ್ದು ಹಣೆ ಮತ್ತು ಮೂಗಿನ ಮೇಲೆ ಗಂಭೀರವಾದ ಗಾಯ ಮಾಡಿಕೊಂಡಿದ್ದರು. ಮಮತಾ ಅವರನ್ನು ಹಲವು ಗಂಟೆಗಳ ಕಾಲ ಆಸ್ಪತ್ರೆಗೆ ಸೇರಿಸಬೇಕಾಗಿ ಬಂದಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಬಾವನ ಮದುವೆಯಲ್ಲಿ ಪತ್ನಿ ಡ್ಯಾನ್ಸ್ ಮಾಡಿದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬ ತನ್ನ ತಲೆಯನ್ನು ರೈಲಿಗೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬಿಹಾರದ ಬದಾರಿಯಾದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಹುಲಾ ಗ್ರಾಮದ ನಿವಾಸಿ 35 ವರ್ಷದ ಗೋಪಾಲ್‌ ಸಿಂಗ್‌ ರಸೂಲ್ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬರುವ ಮಹೇಂದ್ರ ನಾಥ್ ಹಾಲ್ಟರ್ ರೈಲು ನಿಲ್ದಾಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಗೋಪಾಲ್‌ ಸಿಂಗ್‌ ಬೇನತ್ ಗ್ರಾಮದಲ್ಲಿ ತನ್ನ ಪತ್ನಿಯ ಸಹೋದರನ ಮದುವೆ ಸಮಾರಂಭಕ್ಕೆ ತೆರಳಿದ್ದ. ಈ ವೇಳೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಪತ್ನಿಯನ್ನು ನೋಡಿ ಅಸಮಾಧಾನಗೊಂಡಿದ್ದ ಗೋಪಾಲ್‌ ಆಕೆಯನ್ನು ತಡೆದಿದ್ದಾನೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಗೋಪಾಲ್‌ ಡಾನ್ಸ್ ಮಾಡುತ್ತಿದ್ದ ತನ್ನ ಪತ್ನಿಯನ್ನು ಸುಮ್ಮನಿರುವಂತೆ ಸೂಚಿಸಿದ್ದ. ಆದರೆ ಆಕೆ ಮಾತ್ರ ಆತನ ಮಾತಿಗೆ ಒಪ್ಪಲಿಲ್ಲ. ಈ ವೇಳೆ ಇಬ್ಬರ ನಡುವೆ ಸಣ್ಣ ಜಗಳ ಆಗಿತ್ತು. ಅಷ್ಟೇ ಅಲ್ಲದೇ ಪತಿ ಪತ್ನಿಯರ ಜಗಳಕ್ಕೆ ಗೋಪಾಲ್‌ ಬಾವ ಕೂಡ ಎಂಟ್ರಿ ಕೊಟ್ಟಿದ್ದ. ಆಗ ಬಾವ–ಬಾಮೈದರ ನಡುವೆ ಮಾತಿಗೆ ಮಾತು ಬೆಳೆದು…

Read More