Author: Ganesh Tumkuru

ಔರಾದ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ಬಂದ್ ಮಾಡಬೇಕು ಮತ್ತು ಇದರಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಭೀಮ ಆರ್ಮಿ ಭಾರತ ಏಕತಾ ಮಿಷನ್ ತಾಲೂಕು ಅಧ್ಯಕ್ಷ ಗೌತಮ್ ಪಿ. ಮೇತ್ರೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ರಾಮೀಣ ಭಾಗಗಳಲ್ಲಿ ಅಕ್ರಮ ಸಾರಾಯಿ ಹಾವಳಿ ಮಿತಿಮೀರಿದ್ದು, ಸಾರ್ವಜನಿಕ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಅಕ್ರಮ ಮದ್ಯದ ಹಾವಳಿಯಿಂದಾಗಿ ಹದಿಹರೆಯದ ಯುವಕರು ಮದ್ಯವ್ಯಸನಕ್ಕೆ ತಳ್ಳಲ್ಪಡುತ್ತಿದ್ದು, ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ.  ಸಾಮಾಜಿಕ ಹಾಗೂ ಆರ್ಥಿಕ ಸಂಕಷ್ಟ: ಅಕ್ರಮ ಮದ್ಯ ಮಾರಾಟದಿಂದ ಗ್ರಾಮಗಳಲ್ಲಿ ಶಾಂತಿ-ಸುವ್ಯವಸ್ಥೆ ಹದಗೆಡುತ್ತಿದೆ. ಬಡ ಕುಟುಂಬಗಳು ಸಾಲದ ಸುಳಿಗೆ ಸಿಲುಕಿ ಆರ್ಥಿಕವಾಗಿ ನಲುಗುತ್ತಿದ್ದು, ಕೆಲ ಕುಟುಂಬಗಳು ಜೀವನೋಪಾಯಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. “ಮಕ್ಕಳನ್ನು ಕಳೆದುಕೊಂಡ ಪೋಷಕರ ನೋವನ್ನು ಕೇಳುವವರೇ ಇಲ್ಲದಂತಾಗಿದೆ. ಅಕ್ರಮ ಮದ್ಯ ಮಾರಾಟಗಾರರ…

Read More

ಕೂಡ್ಲಿಗಿ (ವಿಜಯನಗರ):  “ದೇಶ ಸೇವೆಯೇ ಈಶ ಸೇವೆ ಎಂಬ ನಾಣ್ಣುಡಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮನಗಾಣಬೇಕಾಗಿದೆ” ಎಂದು ಮಾಜಿ ಸೈನಿಕ ಕಾಟೇರ ರಮೇಶ್ ಕರೆ ನೀಡಿದರು. ಜುಲೈ 26ರಂದು ಪಟ್ಟಣದ ಬಿಸಿಎಂ ಬಾಲಕಿಯರ ಹಾಸ್ಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕಾರ್ಗಿಲ್ ವಿಜಯ ದಿವಸ’ ಕಾರ್ಯಕ್ರಮದಲ್ಲಿ ಅವರು ಮುಖ್ಯ ವಕ್ತಾರರಾಗಿ ಭಾಗವಹಿಸಿ ಮಾತನಾಡಿದರು. “ನಮ್ಮೆಲ್ಲರಿಗೂ ಒಂದೇ ದೇವರು, ಅದುವೇ ನಮ್ಮ ದೇಶ. ದೇಶ ಸೇವೆಯಲ್ಲಿಯೇ ನಿಜವಾದ ದೇವರ ಸೇವೆಯಿದೆ. ಸೈನಿಕನಾಗುವುದು ಒಂದೇ ದೇಶಸೇವೆಯಲ್ಲ; ಸಾಮಾಜಿಕ ಸೇವೆ, ಜನಪರ ಕಾರ್ಯಗಳು ಹಾಗೂ ಸರ್ಕಾರಿ ಹುದ್ದೆಯಲ್ಲಿದ್ದು ನಿಷ್ಠೆ-ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವುದೂ ಕೂಡ ದೇಶಸೇವೆಯೇ ಆಗಿದೆ. ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ, ದೇಶಕ್ಕಾಗಿ ನಾವೇನು ಕೊಡುಗೆ ನೀಡಿದ್ದೇವೆ ಎಂಬುದು ಮುಖ್ಯ” ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಹಾಸ್ಟೆಲ್ ವಿದ್ಯಾರ್ಥಿನಿಯರು ಹಾಗೂ ಗಣ್ಯರು ಸೇರಿ ಭಾರತಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಗೈದರು. ನಂತರ ಉರಿಯುವ ಮೇಣದಬತ್ತಿಗಳನ್ನು ಹಿಡಿದು ಕೆಲಕಾಲ ಮೌನಾಚರಣೆ ಮಾಡುವ ಮೂಲಕ, ಯುದ್ಧದಲ್ಲಿ ವೀರಮರಣವನ್ನಪ್ಪಿದ ವೀರ ಯೋಧರ…

Read More

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL) ಪಡಿತರ ಚೀಟಿ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯದ ಮಿತಿಯನ್ನು ಪ್ರಸ್ತುತ ಇರುವ ₹1.20 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಅವರ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ಹಂಚಿಕೊಂಡರು. ಆದಾಯ ಮಿತಿ ಹೆಚ್ಚಳ: ಆಡಳಿತಾತ್ಮಕ ಸುಧಾರಣಾ ಆಯೋಗದ ಶಿಫಾರಸಿನಂತೆ ಬಿಪಿಎಲ್ ಕಾರ್ಡ್‌ಗೆ ಅರ್ಹತೆ ಪಡೆಯುವ ವಾರ್ಷಿಕ ಆದಾಯದ ಮಿತಿಯನ್ನು ₹3 ಲಕ್ಷಕ್ಕೆ ಹೆಚ್ಚಿಸುವ ಪ್ರಕ್ರಿಯೆ ನಡೆಯುತ್ತಿದೆ. ಯಾವ ಕಾರ್ಡ್‌ಗಳೂ ರದ್ದಾಗಲ್ಲ: ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಪಡಿತರ ಚೀಟಿಗಳ ಪರಿಶೀಲನೆ ನಡೆಯುತ್ತಿದ್ದು, ಅರ್ಹರ ಕಾರ್ಡ್ ರದ್ದುಪಡಿಸುವುದಿಲ್ಲ. ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ಎಪಿಎಲ್ (APL) ವರ್ಗಕ್ಕೆ ಬದಲಾಯಿಸಲಾಗುತ್ತಿದೆ ಎಂದರು. ರಾಜ್ಯದ ಸುಮಾರು 4.42 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ 10…

Read More

ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಬರ ನಿರ್ವಹಣೆ ವೈಫಲ್ಯ, ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ, ಪಡಿತರ ಅಕ್ಕಿ ಕಳ್ಳಸಾಗಣೆ ಹಾಗೂ ಬೆಲೆ ಏರಿಕೆಯಂತಹ ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಜಂಟಿಯಾಗಿ ತೊಳೆಯಲು ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗುವುದು ಎಂದರು. ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಕಾರಣಕ್ಕೆ ಈವರೆಗೆ ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗಿರಲಿಲ್ಲ. ಶೀಘ್ರದಲ್ಲೇ ಅವರೊಂದಿಗೆ ಚರ್ಚಿಸಿ, ಅಧಿವೇಶನದಲ್ಲಿ ಜಂಟಿಯಾಗಿ ಹೋರಾಟ ನಡೆಸಲು ತಂತ್ರ ರೂಪಿಸಲಾಗುವುದು ಎಂದರು. ಕೆಪಿಎಸ್‌ ಸಿ ಅಕ್ರಮ ಆರೋಪ: ಕೆಪಿಎಸ್‌ ಸಿ ನಡೆಸಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಆಯೋಗದಲ್ಲಿ ಸುಧಾರಣೆ ತರುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ ಎಂದು ವಿಜಯೇಂದ್ರ ಕಿಡಿಕಾರಿದರು. ಕಾಂಗ್ರೆಸ್…

Read More

ತುಮಕೂರು: ನಗರದ ಬೆಳಗುಂಬ ಬಳಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ರೌಡಿಶೀಟರ್‌ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗುಂಬ ನಿವಾಸಿಯಾಗಿದ್ದ ಮಲ್ಲ ಅಲಿಯಾಸ್‌ ವೀರಣ್ಣ (42) ಕೊಲೆಯಾದ ದುರದೃಷ್ಟಕರ. ಈತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ. ರಾತ್ರಿ ಸುಮಾರು 8:30ರ ವೇಳೆಗೆ ಬೆಳಗುಂಬ ಸಮೀಪದ ಗರುಡ ಕೆಫೆ ಮುಂಭಾಗ ನಾಲ್ಕೈದು ಮಂದಿ ದುಷ್ಕರ್ಮಿಗಳ ಗ್ಯಾಂಗ್ ಮಲ್ಲನ ಮೇಲೆ ಏಕಾಏಕಿ ಅಟ್ಯಾಕ್ ಮಾಡಿದೆ. ಆತನ ಮನೆ ಸಮೀಪವೇ ವಿಕೃತವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ, ಗುರುತೇ ಸಿಗದಂತೆ ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಯಾದ ಮಲ್ಲ 2008ರಲ್ಲಿ ವಡ್ಡರಹಳ್ಳಿ ಕ್ರಾಸ್ ಬಳಿ ನಡೆದಿದ್ದ ಗಡ್ಡ ರಾಜು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯಾಗಿದ್ದು, ಆ ಬಳಿಕ ಆತನ ವಿರುದ್ಧ ರೌಡಿಪಟ್ಟಿ ತೆರೆಯಲಾಗಿತ್ತು. ಹಳೆಯ ವೈಷಮ್ಯದ ಹಿನ್ನೆಲೆಯಲ್ಲೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ…

Read More