Author: Ganesh Tumkuru

ಕೊರಟಗೆರೆ: ಸರ್ಕಾರದ ಮಹತ್ವಾಕಾಂಕ್ಷೆಯ ಜನಸ್ನೇಹಿ ಯೋಜನೆಯಾದ ‘ಪ್ರಜಾಸೇವೆ ಅಭಿಯಾನ’ದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ ಸ್ಥಳದಲ್ಲೇ ಪರಿಹರಿಸುವ ಘೋಷಣೆ ಮಾಡಲಾಗಿದ್ದರೂ, ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾತ್ರ ಇನ್ನೂ ಅನೇಕ ಸಾರ್ವಜನಿಕ ಸಮಸ್ಯೆಗಳು ಇತ್ಯರ್ಥಗೊಳ್ಳದೆ ಬಾಕಿ ಉಳಿದಿರುವುದು ಜನರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಜನರ ಬಳಿಗೇ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ರಾಜ್ಯ ಸರ್ಕಾರವು ‘ಪ್ರಜಾಸೇವೆ ಅಭಿಯಾನ’ಕ್ಕೆ ಚಾಲನೆ ನೀಡಿದೆ. ಈ ಅಭಿಯಾನದಡಿ ಕಂದಾಯ ಇಲಾಖೆಯ ದಾಖಲೆಗಳು, ಭೂಮಿ ಸಮಸ್ಯೆಗಳು, ಸಾಮಾಜಿಕ ಭದ್ರತಾ ಪಿಂಚಣಿಗಳು, ಪಡಿತರ ಚೀಟಿ ತಿದ್ದುಪಡಿ ಹಾಗೂ ವಿವಿಧ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಆದರೆ, ಕೊರಟಗೆರೆ ತಾಲೂಕಿನಲ್ಲಿ ಈ ಅಭಿಯಾನದ ಪರಿಣಾಮಕಾರಿ ಅನುಷ್ಠಾನದ ಕುರಿತು ಸಾರ್ವಜನಿಕರಿಂದ ಭಾರಿ ದೂರುಗಳು ಕೇಳಿಬರುತ್ತಿವೆ. ಸಭೆಗಳಲ್ಲಿ ಮತ್ತು ಅಭಿಯಾನದ ವೇಳೆ ಸಾರ್ವಜನಿಕರು ಸಲ್ಲಿಸಿದ ಹಲವಾರು ಅರ್ಜಿಗಳು ಕೇವಲ ದಾಖಲೆಗಳಿಗೆ ಮಾತ್ರ ಸೀಮಿತವಾಗಿವೆ ಹೊರತು, ತಳಮಟ್ಟದಲ್ಲಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅರ್ಜಿಗಳು…

Read More

ಬೆಂಗಳೂರು: ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿದ್ದ ಹಾಗೂ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಹೊಸ ಪಿಂಚಣಿ ಯೋಜನೆಯನ್ನು (NPS) ರದ್ದುಗೊಳಿಸಿ ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆಯನ್ನು (OPS) ಮರು ಅನುಷ್ಠಾನಗೊಳಿಸಲಾಗುವುದೆಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೆಲವು ತಾಂತ್ರಿಕ ಹಾಗೂ ಅನಿವಾರ್ಯ ಕಾರಣಗಳಿಂದ ಹಳೆ ಪಿಂಚಣಿ ಯೋಜನೆಯನ್ನು ಇದುವರೆಗೆ ಮರುಜಾರಿಗೆ ತರಲು ಸಾಧ್ಯವಾಗಿರಲಿಲ್ಲ. ಆದರೆ, ಮುಖ್ಯಮಂತ್ರಿಗಳು ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವ ಕುರಿತು ಒಲವು ಹೊಂದಿದ್ದು, ಸದ್ಯದಲ್ಲೇ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ ಮಾಡಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಡಿಸಿಎಂ ತಿಳಿಸಿದರು. ಶಿಕ್ಷಕರಿಗೆ ‘Tr’ ಗೌರವನಾಮ: ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈದ್ಯರು ತಮ್ಮ ಹೆಸರಿನ…

Read More

ಬೆಂಗಳೂರು: ನೇಪಾಳ–ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಿಲುಕಿ ನಾಪತ್ತೆಯಾಗಿರುವ ಕರ್ನಾಟಕದ ನಿವಾಸಿಗಳ ಗುರುತು ಪತ್ತೆ ಹಚ್ಚಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನಾಪತ್ತೆಯಾದವರ ಹತ್ತಿರದ ಸಂಬಂಧಿಕರ ಡಿಎನ್‌ ಎ (DNA) ಮಾದರಿ ಸಂಗ್ರಹಣೆ ಹಾಗೂ ಪರಿಶೀಲನೆಗಾಗಿ ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯನ್ನು ಅಧಿಕೃತ ‘ನೋಡಲ್ ಕೇಂದ್ರ’ವನ್ನಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಘೋಷಿಸಿದೆ. ನೇಪಾಳದಲ್ಲಿ ಪತ್ತೆಯಾಗುತ್ತಿರುವ ಮೃತದೇಹಗಳನ್ನು ಗುರುತಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸುವಂತೆ ನೇಪಾಳ ಸರ್ಕಾರ ಹಾಗೂ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಡಿಎನ್‌ ಎ ಪ್ರೊಫೈಲ್ ಪರಿಶೀಲನೆ ಹೇಗೆ? ಗುರುತಿಸಲಾಗದ ಮೃತದೇಹಗಳ ಡಿಎನ್‌ ಎ ಪ್ರೊಫೈಲ್‌ ಗಳನ್ನು ನೇಪಾಳದಲ್ಲಿ ಸಿದ್ಧಪಡಿಸಲಾಗುತ್ತಿದ್ದು, ಅವುಗಳನ್ನು ಪರಿಶೀಲಿಸಲು ಸಂತ್ರಸ್ತರ ರಕ್ತ ಸಂಬಂಧಿಕರ ಡಿಎನ್‌ ಎ ಮಾದರಿಗಳ ಅಗತ್ಯವಿದೆ. ನಾಪತ್ತೆಯಾಗಿರುವವರ ಮೊದಲ ಹಂತದ ಸಂಬಂಧಿಕರಾದ (ತಂದೆ, ತಾಯಿ, ಮಗ, ಮಗಳು ಅಥವಾ ಪತಿ/ಪತ್ನಿ) ಕುಟುಂಬದವರು ಬೌರಿಂಗ್ ಆಸ್ಪತ್ರೆಯನ್ನು ಸಂಪರ್ಕಿಸಬಹುದಾಗಿದೆ. ಸಂಬಂಧಿಕರು…

Read More

ವಿಜಯನಗರ:  ಗ್ರಾಮೀಣ ಮತ್ತು ಬಡ ಕುಟುಂಬಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಕನಸಿಗೆ ದೊಡ್ಡ ಮಟ್ಟದ ಬಲ ತುಂಬುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹಾಗೂ ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳಲ್ಲಿ ಶೇಕಡಾ 7.5 ರಷ್ಟು ವಿಶೇಷ ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಹಾಗೂ ಸಾಮಾನ್ಯ ವರ್ಗದ ಮಕ್ಕಳಿಗೆ ಶೈಕ್ಷಣಿಕ ಮತ್ತು ವೃತ್ತಿಪರ ರಂಗಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಸರಕಾರಿ ಶಾಲೆಗಳಲ್ಲಿ ಕಲಿಯುವ ಬಹುತೇಕ ಮಕ್ಕಳು ಗ್ರಾಮೀಣ ಹಾಗೂ ಬಡ ಹಿನ್ನೆಲೆಯಿಂದ ಬಂದವರಾಗಿರುತ್ತಾರೆ. ಆರ್ಥಿಕ ಅಡಚಣೆ ಹಾಗೂ ತೀವ್ರ ಸ್ಪರ್ಧೆಯಿಂದಾಗಿ ಉನ್ನತ ವ್ಯಾಸಂಗ ಮತ್ತು ಉತ್ತಮ ಉದ್ಯೋಗ ಪಡೆಯುವಲ್ಲಿ ಈ ಮಕ್ಕಳು ಹಿಂದೆ ಉಳಿಯುತ್ತಿದ್ದಾರೆ. ಇದನ್ನು ಮನಗಂಡಿರುವ…

Read More

ತುಮಕೂರು: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೀ ಒಬ್ಬ ವ್ಯಕ್ತಿಯಾಗಿರದೇ ಈ ನಾಡಿನ ಶಕ್ತಿಯಾಗಿದ್ದರು. ಬಲಿಷ್ಠ ಭಾರತವನ್ನು ನಿರ್ಮಿಸುವಲ್ಲಿ ಅವರ ಕೊಡುಗೆ ಅಪಾರವಾದದ್ದು ಎಂದು ಜಿಲ್ಲೆಯ ಹಿರಿಯ ಹರಿಕಥಾ ವಿದ್ವಾಂಸ, ಕೇಂದ್ರ ನಾಟಕ ಸಂಗೀತ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಡಾ. ಲಕ್ಷ್ಮಣ್ ದಾಸ್ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಎಸ್ ಐಎಫ್ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಬುಧವಾರ ನಗರದ ಉತ್ತರ ಬಡಾವಣೆ ಶಿರಾ ರಸ್ತೆಯಲ್ಲಿರುವ ಕೆ.ಎಸ್ .ಐ.ಎಫ್. ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಭಾರತರೆತ್ನ ಡಾ: ಬಿ.ಆರ್. ಅಂಬೇಡ್ಕರ್ ಓದು ಮತ್ತು ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತುಳಿತಕ್ಕೆ ಒಳಗಾಗಿದ್ದ ಎಲ್ಲಾ ಸಮುದಾಯಗಳ ಪ್ರತಿನಿಧಿಯಾಗಿ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ಅಂಬೇಡ್ಕರ್ ಸೇವೆ ಸಲ್ಲಿಸಿದ್ದರು. ಭಾರತದ ಸಂವಿಧಾನ ರಚನಾ ಸಮಿತಿಯ ಕರಡು ಅಧ್ಯಕ್ಷರಾಗಿ ಅವರು ಬೃಹತ್ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿದರು. ಅಸ್ಪೃಶ್ಯತೆ ನಿವಾರಣೆಗೆ, ಮಹಿಳೆಯರ…

Read More

ಬೀದರ್: ಔರಾದ್ (ಬಾ) ತಾಲೂಕಿನ ಸಂತಪೂರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಪ್ರಜಾ ಸೇವಾ’ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ವತಿಯಿಂದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಯಿತು. ಸಂತಪೂರ ಹಾಗೂ ಸುತ್ತಮುತ್ತಲಿನ ಸುಮಾರು 35 ಗ್ರಾಮಗಳ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೂಡಲೇ ಸರ್ಕಾರಿ ಪಿಯುಸಿ ಹಾಗೂ ಪದವಿ ಕಾಲೇಜುಗಳನ್ನು ಮಂಜೂರು ಮಾಡಬೇಕು. ಪ್ರಸ್ತುತ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ದೂರದ ಬೀದರ್ ನಗರಕ್ಕೆ ಅಲೆಯುವಂತಾಗಿದೆ. ಸಂತಪೂರದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರ ಕೊರತೆಯಿಂದಾಗಿ ಗರ್ಭಿಣಿಯರು ಹಾಗೂ ಗ್ರಾಮೀಣ ಭಾಗದ ಮಹಿಳೆಯರು ತುರ್ತು ಚಿಕಿತ್ಸೆಗೆ ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ವೈದ್ಯರನ್ನು ನೇಮಿಸಬೇಕು. ಬೀದರ್ ಸಹಾಯಕ ಆಯುಕ್ತರಾದ ಮೊಹಮ್ಮದ್ ಶಕೀಲ್ (KAS), ತಹಶೀಲ್ದಾರ್ ಮಹೇಶ್ ಪಾಟೀಲ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (EO) ಕಿರಣ್ ಪಾಟೀಲ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಈ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿಎಸ್ ಎಸ್ (ಭೀಮಮಾರ್ಗ) ತಾಲೂಕು ಸಂಚಾಲಕರಾದ ತುಕಾರಾಮ ಹಸನ್ಮುಖಿ ಮಾತನಾಡಿ,…

Read More

ತುಮಕೂರು: ಸುಪ್ರೀಂ ಕೋರ್ಟ್ ಆದೇಶಂತೆ ನಗರಪಾಲಿಕೆ ಅಧಿಕಾರಿಗಳು ನಗರದಲ್ಲೇ ಫುಟ್‌ ಪಾತ್ ಅಂಗಡಿಗಳನ್ನು ತೆರವು ಮಾಡಿಸಿದ್ದಾರೆ. ಈ ಕ್ರಮದಿಂದ ನಗರದ ಎರಡೂವರೆ ಸಾವಿರಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಕುಟುಂಬಗಳು ಬದುಕು ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಿರುವುದು ಅಮಾನವೀಯ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್ ಹೇಳಿದರು. ನಗರದಲ್ಲಿ ಸಮೃದ್ಧಿ ಬೀದಿಬದಿ ವ್ಯಾಪಾರಿಗಳ ಸಂಘದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಕನ್ನಡ ಸೇನೆ ಹಾಗೂ ವಿವಿಧ ಸಂಘಟನೆಗಳು ಬೆಂಬಲ ನೀಡಿವೆ. ತಮ್ಮ ವ್ಯಾಪಾರ ಕಳೆದುಕೊಂಡಿರುವ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗದ ವ್ಯವಸ್ಥೆ ಮಾಡದಿದ್ದರೆ ಬರುವ ಸೋಮವಾರ ನಗರಾಪಾಲಿಕೆ ಕಚೇರಿ ಎದುರು ತಮಟೆ ಚಳವಳಿ ನಡೆಸಲಾಗುವುದು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಪಾದಯಾತ್ರೆ ತೆರಳಿ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ನೀಡಲಾಗುವುದು ಎಂದರು. ನಗರದ ವಿವಿಧ ರಸ್ತೆಗಳ ಫುಟ್‌ ಪಾತ್‌ ಗಳಲ್ಲಿ ಪಾದಚಾರಿಗಳ ಓಡಾಟಕ್ಕೆ ತೊಂದರೆ ಆಗದಂತೆ ಹಲಾವರು ವರ್ಷಗಳಿಂದ ಸಣ್ಣ ಪ್ರಮಾಣದ ವ್ಯಾಪಾರ…

Read More

ತುಮಕೂರು: ತಾಲೂಕಿನ ಗ್ರಾಮವೊಂದರಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದ್ದು, ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಶುಕ್ರವಾರ ನಡೆದಿದೆ. ಬಾಲಕಿಯ ಸಂಬಂಧಿ ಸಾಹಿಲ್ ಎಂಬಾತನಿಂದ ಅತ್ಯಾಚಾರದ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗೆ ಇಬ್ಬರು ಪತ್ನಿಯರಿದ್ದು, ಎರಡನೇ ಪತ್ನಿಯ ಮಗಳೇ ಸಂತ್ರಸ್ತ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಆಕ್ರೋಶಗೊಂಡು ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಅವರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಹೊಳೆನರಸೀಪುರ: ಅಧಿಕಾರದ ಮದ, ಕಾನೂನು ಉಲ್ಲಂಘನೆ ಮತ್ತು ಅಧಿಕಾರಿಗಳ ದುರುಪಯೋಗ — ಹೊಳೆನರಸೀಪುರದ ತಾಲ್ಲೂಕು ಕಚೇರಿ ಮುಂಭಾಗದ ಸಾರ್ವಜನಿಕ ರಸ್ತೆ ಮುಚ್ಚಿದ ಪ್ರಕರಣ ಈಗ ಜೆಡಿಎಸ್ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ! ಅಂದು ‘ತಮ್ಮದೇ ಆಡಳಿತ’ ಎಂಬ ಅಹಂನಲ್ಲಿ ಸಾರ್ವಜನಿಕ ರಸ್ತೆಯನ್ನೇ ನಕಲಿ ದಾಖಲೆ ಸೃಷ್ಟಿಸಿ ಬಂದ್ ಮಾಡಿದ್ದ ನಾಯಕರಿಗೆ, ಈಗ ಲೋಕಾಯುಕ್ತ ತನಿಖೆಯ ಬಿಸಿ ತಟ್ಟಲಾರಂಭಿಸಿದೆ. ಪುರಸಭೆಯ 23 ವಾರ್ಡ್ ಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆಂಬ ಏಕೈಕ ಕಾರಣಕ್ಕೆ, ಸಾರ್ವಜನಿಕ ಹಿತಾಸಕ್ತಿಯನ್ನು ಬಲಿಕೊಟ್ಟು ತಾಲ್ಲೂಕು ಕಚೇರಿಯ ಪೂರ್ವ ಭಾಗದ ಮುಖ್ಯ ರಸ್ತೆಗೆ ಬೀಗ ಜಡಿಯಲಾಗಿತ್ತು. ನಿಯಮಗಳನ್ನು ಗಾಳಿಗೆ ತೂರಿ, ಅಧಿಕಾರಿಗಳನ್ನು ಹೆದರಿಸಿ–ಬೆದರಿಸಿ ಕಾನೂನುಬಾಹಿರ ಕೆಲಸ ಮಾಡಿಸಲಾಯಿತು. ಆದರೆ, ಈ ‘ಪಾಳೇಗಾರಿ ಆಡಳಿತ’ದ ವಿರುದ್ಧ ಸಲ್ಲಿಕೆಯಾಗಿದ್ದ ದೂರುಗಳ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸುತ್ತಿದ್ದಂತೆ, ಬಣ್ಣ ಬಯಲಾಗುತ್ತಿದ್ದು, ಉತ್ತರಿಸಲಾಗದೆ ಅಧಿಕಾರಿಗಳು ಬೆವರುತ್ತಿದ್ದಾರೆ. ಸಾಲು ಸಾಲು ಅಕ್ರಮಗಳ ಪಟ್ಟಿ! ಬಿಇಒ ಕರ್ತವ್ಯಲೋಪ ಸಾಬೀತು: ಶಾಲೆಯ ಆಟದ ಮೈದಾನದಲ್ಲೇ ಅನಧಿಕೃತ ಕಟ್ಟಡ ತಲೆಎತ್ತುತ್ತಿದ್ದರೂ ಕಣ್ಣುಮುಚ್ಚಿ ಕುಳಿತಿದ್ದ ಕ್ಷೇತ್ರ…

Read More

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಶಕಗಳ ಬೇಡಿಕೆಯಾಗಿದ್ದ ಅಭಿವೃದ್ಧಿ ಕಾಮಗಾರಿಗೆ ಅಧಿಕೃತ ಚಾಲನೆ ದೊರೆತಿದೆ. ಗ್ರಾಮದಲ್ಲಿ ವಿಬಿ-ಜಿ ರಾಮ್ ಜಿ (ವಿಶೇಷ/ಮಹಾತ್ಮಾ ಗಾಂಧಿ ನರೇಗಾ ಅಥವಾ ಸಂಬಂಧಿತ) ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ತಿರುವು ಕಾಲುವೆ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶರಣಪ್ಪ ಗಾದ್ದಗೆ ಅವರು ಶುಕ್ರವಾರ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಔರಾದ್ ತಾಲೂಕಿನ ಬೆಳಕುಣಿ (ಚೌದ್ರಿ) ಗ್ರಾಮದಲ್ಲಿ ಕಳೆದ ಸುಮಾರು 40 ವರ್ಷಗಳಿಂದ ಯಾವುದೇ ಮಹತ್ವದ ಯೋಜನೆಯ ಕೆಲಸಗಳು ಆರಂಭಗೊಂಡಿರಲಿಲ್ಲ. ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡು ಬಂದ ಕೆಲವೇ ದಿನಗಳಲ್ಲಿ (ಒಂದೇ ತಿಂಗಳಲ್ಲಿ) ಪಿಡಿಒ ಶರಣಪ್ಪ ಗಾದ್ದಗೆ ಅವರು ಸಕ್ರಿಯವಾಗಿ ಸ್ಪಂದಿಸಿ, ಗ್ರಾಮದಲ್ಲಿ ತಿರುವು ಕಾಲುವೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ದೀರ್ಘಕಾಲದ ಬಳಿಕ ಗ್ರಾಮದಲ್ಲೇ ಉದ್ಯೋಗ ದೊರೆತಿರುವುದರಿಂದ ಬಡ ಕುಟುಂಬಗಳ ಕೂಲಿ ಕಾರ್ಮಿಕರು ನಿರಾಳರಾಗಿದ್ದಾರೆ. ತಮಗೆ ಕೆಲಸ ಕಲ್ಪಿಸಿಕೊಟ್ಟ ಪಿಡಿಒ ಅವರಿಗೆ ಕಾರ್ಮಿಕರು ಧನ್ಯವಾದ ಹಾಗೂ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಪರಿಶೀಲನಾ ಸಂದರ್ಭದಲ್ಲಿ…

Read More