nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    • ಸಾಮಾಜಿಕ ಜಾಲತಾಣಗಳಿಂದ ನಿಜವಾದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬ ನಾಗರಿಕನಿಗೂ ಲಭಿಸಿದೆ: ಡಾ.ಎ.ಎಸ್. ಬಾಲಸುಬ್ರಮಣ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲ್ಯ ವಿವಾಹಗಳನ್ನು ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    ರಾಜ್ಯ ಸುದ್ದಿ July 31, 2024

    ಬಾಲ್ಯ ವಿವಾಹಗಳನ್ನು ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    By adminJuly 31, 2024No Comments2 Mins Read
    shilpa sharma

    ಬೀದರ್: ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳನ್ನು ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

    ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಬಾಲ್ಯ ವಿವಾಹ ಮಾಡುವ ಪಾಲಕರ ವಿರುದ್ಧ ಪೋಕ್ಷೊ ಪ್ರಕರಣ ದಾಖಲಿಸಬೇಕೆಂಬ ನಿಯಮವಿದ್ದು, ಅದನ್ನು ಮಾಡಿದಾಗ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತವೆʼ ಎಂದರು.


    Provided by
    Provided by

    ʼಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದುವೆ ನಡೆಯುವ ಕಲ್ಯಾಣ ಮಂಟಪ ಹಾಗೂ ಸಾಮೂಹಿಕ ವಿವಾಹ ನಡೆಯುವ ಸ್ಥಳಗಳ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಅಧಿಕಾರಿಗಳು ಕಾಟಾಚಾರಕ್ಕೆ ಕೆಲಸ ಮಾಡದೇ ಜವಾಬ್ದಾರಿಯಿಂದ ಮಾಡಿದರೆ ಮಾತ್ರ ಬಾಲ್ಯ ವಿವಾಹ ಸೇರಿದಂತೆ ಇತರೆ ಹಲವಾರು ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡಬಹುದುʼ ಎಂದು ಹೇಳಿದರು.

    ʼಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಸರಕಾರದಿಂದ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಿ, ಆಗಾಗ ಸಭೆ ನಡೆಸಿ ಮಾಹಿತಿ ಪಡೆಯಬೇಕುʼ ಎಂದು ತಹಶಿಲ್ದಾರರಿಗೆ ಸೂಚಿಸಿದರು.

    ಜಿಲ್ಲೆಯಲ್ಲಿ 49 ಬಾಲ ಗರ್ಭಿಣಿ ಪ್ರಕರಣ:

    ʼಹೋಟೆಲ್, ಗ್ಯಾರೇಜ್ ಹಾಗೂ ಫ್ಯಾಕ್ಟರಿಗಳಲ್ಲಿ ಬಾಲ ಕಾರ್ಮಿಕ ಮಕ್ಕಳು ಕಂಡು ಬಂದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಕ್ಷಣ ಕ್ರಮ ವಹಿಸಬೇಕು. ಬಾಲಕರನ್ನು ಯಾರೂ ದುಡಿಮೆಗೆ ಹಚ್ಚಬಾರದು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ದಾಖಲಾದ 49 ಬಾಲ ಗರ್ಭಿಣಿ ಪ್ರಕರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ಹರಿಸುವುದರ ಜೊತೆಗೆ ಇಂತಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

    ಪ್ರೌಢ ಶಾಲೆ ಮತ್ತು ಪಿಯುಸಿ ತರಗತಿಯಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಕುರಿತು ಮಾಹಿತಿ ಸಂಗ್ರಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸಹಾಯವಾಣಿ ನಾಮಫಲಕ ಹಾಕುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಾಂತ್ವನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ಭೇಟಿ ಮಾಡಿಸಿ ಮತ್ತು ಕ್ರೀಡಾ ಇಲಾಖೆಯಿಂದ ಆ ಮಕ್ಕಳಿಗೆ ಕ್ರೀಡಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಶುದ್ಧ ನೀರು ಕುಡಿಯಲು ಆರ್ಒ ಪ್ಲಾಂಟ್ ಇಲ್ಲ ಎಂಬ ದೂರಿದೆ, ಅದನ್ನು ಸರಿಪಡಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ʼಮಕ್ಕಳ ಹಕ್ಕುಗಳು ಹಾಗೂ ಅರಿವಿನ ಕುರಿತು ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಬೇಕು. ಈ ಕಾರ್ಯಕ್ರಮಗಳು ಬೀದರ ನಗರದಲ್ಲಿ ಅಷ್ಟೇ ಅಲ್ಲದೇ ತಾಲೂಕಿನಲ್ಲಿ ಸಹ ತಾಲೂಕು ಮಟ್ಟದ ಅಧಿಕಾರಿಗಳು ಆಯೋಜಿಸಬೇಕುʼ ಎಂದು ಹೇಳಿದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ತುರುವೇಕೆರೆ: ಒಳಮೀಸಲಾತಿಯನ್ನು ಜಾರಿಗೆ ತರದೆ ರಾಜ್ಯ ಸರ್ಕಾರವು ಏಕಾಏಕಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಮುಂದಾಗಿರುವುದನ್ನು ಖಂಡಿಸಿ, ಮಾದಿಗ ಸಮುದಾಯದ ಮುಖಂಡರು…

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.