nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

    April 12, 2026

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    • ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ
    • ‘ಒಳ ಮೀಸಲಾತಿ ಕುರಿತು ಪರಮೇಶ್ವರ ಹೇಳಿಕೆ ದುರದೃಷ್ಟಕರ’: ಬಿಜೆಪಿ ಟೀಕೆ
    • ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು
    • ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕ್ರಮಕ್ಕೆ ಸಿಪಿಎಂ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಟೋ ಡ್ರೈವರ್ ಆದ ನಾನು, ಮತ ಬೇಡುವ ಅವರು..!
    ಲೇಖನ December 16, 2021

    ಆಟೋ ಡ್ರೈವರ್ ಆದ ನಾನು, ಮತ ಬೇಡುವ ಅವರು..!

    By adminDecember 16, 2021No Comments2 Mins Read
    vivekananda hk

    ಆಟೋ ಡ್ರೈವರ್ ಆದ ನಾನು ಇತ್ತೀಚಿನ ಚುನಾವಣಾ ಸಮಯದಲ್ಲಿ ನನ್ನ 10 ವರ್ಷದ ಮಗನೊಂದಿಗೆ

    ತರಕಾರಿ ತರಲು ಮಾರ್ಕೆಟ್ ಗೆ ಕಾಲು ನಡಿಗೆಯಲ್ಲಿ ಹೋಗಿದ್ದೆ……….


    Provided by
    Provided by

    ಹಿಂದಿರುಗಿ ಬರುವಾಗ ಒಂದು ಪಕ್ಷದ ಚುನಾವಣಾ ಪ್ರಚಾರ ಸಭೆ ನಡೆಯುತ್ತಿತ್ತು. ಜನರ ಗುಂಪು ನೋಡಿ ನನ್ನ ಮಗ ಅದನ್ನು ತೋರಿಸು ಎಂದು ಹಠ ಹಿಡಿದ. ನಾನು ಗುಂಪಿನಲ್ಲಿ ಹೋಗಿ ಕುಳಿತೆ.

    ಆ ಕ್ಷೇತ್ರದ ಅಭ್ಯರ್ಥಿ ಭಾಷಣ ಮಾಡುತ್ತಿದ್ದ.

    ” ಅಕ್ಕ ತಂಗಿಯರೇ, ಅಣ್ಣ ತಮ್ಮಂದಿರೇ, ನಾನು ನಿಮ್ಮ ಮನೆ ಮಗ, ಇಲ್ಲೇ ಹುಟ್ಟಿ ಬೆಳೆದ ಬಡ ರೈತನ ಮಗ,

    ನನಗೆ ಗೊತ್ತು ಬಡತನ ಎಷ್ಟು ಕಷ್ಟ ಅಂತ. ಒಳ್ಳೆಯ ರಸ್ತೆ ಇಲ್ಲ, ಬೀದಿ ದೀಪ ಇಲ್ಲ, ಕುಡಿಯುವ ನೀರಿಲ್ಲ, ಎಲ್ಲೆಲ್ಲೂ ಗಲೀಜು,ಬೀದಿ ನಾಯಿ ಕಾಟ, ಕಾಮುಕರು, ರೌಡಿಗಳ ತೊಂದರೆ, ಲಂಚ ಅತಿಯಾಗಿದೆ. ಹಬ್ಬ ಉತ್ಸವಗಳನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸುತ್ತೇನೆ. ದೇವ ಮಂದಿರಗಳನ್ನು ಕಟ್ಟಿಸುತ್ತೇನೆ. ನೀವು ನನ್ನನ್ನು ಗೆಲ್ಲಿಸಿದರೆ 24 ಗಂಟೆಯು ನಾನು ನಿಮಗೆ ಸೇವೆ ಸಲ್ಲಿಸುತ್ತೇನೆ. ನಾನು ನಿಮ್ಮ ಸೇವಕ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತೇನೆ. ನಿಮ್ಮ ಕಾಲಿಡಿದು ಕೇಳಿಕೊಳ್ಳುತ್ತೇನೆ ನನಗೇ ಮತ ನೀಡಿ.” ಎಂದು ಕಣ್ಣೀರು ಸುರಿಸಿದ.

    ನನ್ನ ಮಗನ ಕಣ್ಣಿನಲ್ಲಿಯೂ ನೀರು. ಏಕೆಂದು ಕೇಳಿದೆ.

    ” ಅಪ್ಪಾ ಇವರು ಎಷ್ಟು ಒಳ್ಳೆಯವರು. ನಮ್ಮ ಕಷ್ಟ ಎಲ್ಲಾ ಪರಿಹರಿಸುತ್ತಾರಂತೆ. ನಿನ್ನ ಓಟು ಇವರಿಗೇ ಹಾಕಪ್ಪ ”

    ಅವನ ಮುಗ್ಧತೆಗೆ ಮನದಲ್ಲೇ ನಕ್ಕು ಆಗಲಿ ಎಂದು ಹೇಳಿ ಮನೆ ಕಡೆ ಹೊರಟೆ. ಕರಳು ಚುರಕ್ ಎಂದಿತು. ಅವನು ಕೇಳದಿದ್ದರೂ ನಾನೇ ಐಸ್ ಕ್ರೀಮ್ ಕೊಡಿಸಿದೆ. ತಿನ್ನುತ್ತಾ ಬರುತಿರುವಾಗ ಸ್ವಲ್ಪ ದೂರದ ಮ್ಯೆದಾನದಲ್ಲಿ ಮತ್ತೊಂದು ಪಕ್ಷದ ಸಭೆ ನಡೆಯುತ್ತಿತ್ತು. ಅದಕ್ಕೂ ಹಠ ಮಾಡಿದ. ಹೋಗಲಿ, ಹೇಗಿದ್ದರೂ ಭಾನುವಾರ ಪರವಾಗಿಲ್ಲ ಎಂದು ಅಲ್ಲಿಗೂ ಕರೆದೊಯ್ದೆ.

    ಅಲ್ಲಿನ ಅಭ್ಯರ್ಥಿಯೂ ಮಾತನಾಡುತ್ತಿದ್ದ. “ಮಹನೀಯರೆ, ಮಹಿಳೆಯರೆ, ಹುಟ್ಟಿನಿಂದಲೇ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ನನಗೆ ನಿಮ್ಮ ಸೇವೆಯನ್ನು ಹೆಚ್ಚಿಗೆ ಮಾಡಲು ಚುನಾವಣೆಗೆ ನಿಂತಿರುವೆ. ನಾನೇನಾದ್ರು ಆಯ್ಕೆಯಾದರೆ ನಿಮ್ಮ ಮನೆಬಾಗಿಲಿಗೆ ಉಚಿತ ಅಕ್ಕಿ, ರಾಗಿ, ಜೋಳ, ಎಣ್ಣೆ, ಬಟ್ಟೆ, ತಾಳಿ, ಟಿವಿ, ಲ್ಯಾಪ್ ಟಾಪ್ ಇನ್ನೂ ಎಲ್ಲಾ ಕೊಡುತ್ತೇನೆ. ನಿಮಗೆ ಆರೋಗ್ಯ, ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ, ವೃದ್ಧರಿಗೆ ಪಿಂಚಣಿ ಎಲ್ಲಾ ಕೊಡಿಸುತ್ತೇನೆ. ದಯವಿಟ್ಟು ನಿಮ್ಮ ಅಮೂಲ್ಯ ಓಟು ನನಗೇ ಕೊಡಿ.”

    ಜನರ ಜೋರು ಚಪ್ಪಾಳೆ. ನಡುವೆ ಮಗನನ್ನು ನೋಡುತ್ತೇನೆ. ಅವನು ಮತ್ತೆ ಕಣ್ಣೀರು.

    “ಅಪ್ಪಾ ಇವರು ಇನ್ನೂ ಒಳ್ಳೆಯವರು. ಎಲ್ಲಾ ಉಚಿತ ಕೊಡುತ್ತಾರೆ. ನಿನ್ನ ಓಟು ಇವರಿಗೇ ಕೊಡು”

    ಆಯ್ತು ಮಗ ಎಂದು ಹೇಳಿ ಮನೆಗೆ ಬಂದೆವು.

    ರಾತ್ರಿ  ಮಲಗಿರುವಾಗ ಕೇಳಿದ,

    ” ಅಪ್ಪಾ ಇಷ್ಟೊಂದು ಒಳ್ಳೆಯ ಜನ ಚುನಾವಣೆಗೆ ನಿಲ್ಲುವಾಗ ನೀನ್ಯಾಕೆ ಯಾವಾಗಲೂ ರಾಜಕಾರಣಿಗಳನ್ನು ಬಯ್ಯುತ್ತೀಯ. ಪಾಪ ಅವರು ಒಳ್ಳೆಯವರು. ನೀನೇ  ಸರಿಯಿಲ್ಲ. “ಎಂದ.

    ” ಮಗನೇ ನನಗೆ ಸುಮಾರು 50 ವರ್ಷ ಸಮೀಪಿಸುತ್ತಿದೆ. ನಾನು 20 ರಿಂದ 25 ಚುನಾವಣೆಗಳನ್ನು

    ನೋಡಿದ್ದೇನೆ. ಎಲ್ಲಾ ಅಭ್ಯರ್ಥಿಗಳು, ಪಕ್ಷಗಳೂ ಹೀಗೇ ಹೇಳುತ್ತವೆ. ಚುನಾವಣೆ ಮುಗಿದು ಗೆದ್ದಮೇಲೆ

    ನಾವು ಅವರನ್ನು ಭೇಟಿಯಾಗುವುದು ಅಸಾಧ್ಯ. ಒಂದು ವೇಳೆ ಭೇಟಿಯಾದರು  ಎರಡು ನಿಮಿಷ ಮಾತನಾಡಿ ಸಾಗುಹಾಕುತ್ತಾರೆ. ಅವರ ಕೆಲವು ಹಿಂಬಾಲಕರಿಗೆ ಬಿಟ್ಟರೆ ಯಾರಿಗೂ ಏನೂ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಮೊಸಳೆ ಕಣ್ಣೀರು ಸುರಿಸುತ್ತಾರೆ.” ಎಂದು ಹೇಳುತ್ತಿದ್ದಂತೆ ಮನೆಯ ಕಾಲಿಂಗ್ ಬೆಲ್ ಶಬ್ದವಾಯಿತು.

    ಬಾಗಿಲು ತೆಗೆದರೆ ಒಬ್ಬ,…..

    ” ಅಣ್ಣಾ ತಗೋ 2000 ರೂಪಾಯಿ, ಅಕ್ಕನಿಗೆ ಒಂದು ಸೀರೆ ಇದೆ. ಕವರ್ ಒಳಗೆ

    ಒಂದು ಎಣ್ಣೇ ಬಾಟಲ್ ಇಟ್ಟಿದ್ದೇನೆ. ನಮ್ಮ ಅಭ್ಯರ್ಥಿಯನ್ನ ಮರೆಯಬೇಡ “ಎಂದು ಹೇಳಿ  ಕ್ಯೆಮುಗಿದು

    ಹೊರಟ. ಇನ್ನೊಬ್ಬ ನನ್ನ ಮಗನನ್ನು ನೋಡಿ ಅವನಿಗೂ 100 ರ ನೋಟು ನೀಡಿದ.

    ಮಗನಿಗೆ ಏನೂ ಅರ್ಥವಾಗಲಿಲ್ಲ. 100 ನೋಟು ನೋಡಿ ಖುಷಿಯಾಯಿತು.

    ನನಗೆ ನನ್ನ ಮಗನ ಭವಿಷ್ಯ ನೆನಪಾಗಿ ಭಯವಾಯಿತು.

    ನಿಮಗೆ,…..

    ಏಳಿ ಎದ್ದೇಳಿ ಜಾಗೃತಗೊಳ್ಳಿ, ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ, …….

     

    -ವಿವೇಕಾನಂದ. ಹೆಚ್.ಕೆ.

    9844013068

    admin
    • Website

    Related Posts

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)

    April 6, 2026

    ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು

    April 1, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

    April 12, 2026

    ತಿಪಟೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ನಗರ ಪ್ರದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಿಗೂ ಮಿಗಿಲಾದ ಸಾಧನೆ ಮಾಡಬಲ್ಲರು ಎಂಬುದನ್ನು…

    ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

    April 12, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.