nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಟೋ ಡ್ರೈವರ್ ಆದ ನಾನು, ಮತ ಬೇಡುವ ಅವರು..!
    ಲೇಖನ December 16, 2021

    ಆಟೋ ಡ್ರೈವರ್ ಆದ ನಾನು, ಮತ ಬೇಡುವ ಅವರು..!

    By adminDecember 16, 2021No Comments2 Mins Read
    vivekananda hk

    ಆಟೋ ಡ್ರೈವರ್ ಆದ ನಾನು ಇತ್ತೀಚಿನ ಚುನಾವಣಾ ಸಮಯದಲ್ಲಿ ನನ್ನ 10 ವರ್ಷದ ಮಗನೊಂದಿಗೆ

    ತರಕಾರಿ ತರಲು ಮಾರ್ಕೆಟ್ ಗೆ ಕಾಲು ನಡಿಗೆಯಲ್ಲಿ ಹೋಗಿದ್ದೆ……….

    ಹಿಂದಿರುಗಿ ಬರುವಾಗ ಒಂದು ಪಕ್ಷದ ಚುನಾವಣಾ ಪ್ರಚಾರ ಸಭೆ ನಡೆಯುತ್ತಿತ್ತು. ಜನರ ಗುಂಪು ನೋಡಿ ನನ್ನ ಮಗ ಅದನ್ನು ತೋರಿಸು ಎಂದು ಹಠ ಹಿಡಿದ. ನಾನು ಗುಂಪಿನಲ್ಲಿ ಹೋಗಿ ಕುಳಿತೆ.

    ಆ ಕ್ಷೇತ್ರದ ಅಭ್ಯರ್ಥಿ ಭಾಷಣ ಮಾಡುತ್ತಿದ್ದ.

    ” ಅಕ್ಕ ತಂಗಿಯರೇ, ಅಣ್ಣ ತಮ್ಮಂದಿರೇ, ನಾನು ನಿಮ್ಮ ಮನೆ ಮಗ, ಇಲ್ಲೇ ಹುಟ್ಟಿ ಬೆಳೆದ ಬಡ ರೈತನ ಮಗ,

    ನನಗೆ ಗೊತ್ತು ಬಡತನ ಎಷ್ಟು ಕಷ್ಟ ಅಂತ. ಒಳ್ಳೆಯ ರಸ್ತೆ ಇಲ್ಲ, ಬೀದಿ ದೀಪ ಇಲ್ಲ, ಕುಡಿಯುವ ನೀರಿಲ್ಲ, ಎಲ್ಲೆಲ್ಲೂ ಗಲೀಜು,ಬೀದಿ ನಾಯಿ ಕಾಟ, ಕಾಮುಕರು, ರೌಡಿಗಳ ತೊಂದರೆ, ಲಂಚ ಅತಿಯಾಗಿದೆ. ಹಬ್ಬ ಉತ್ಸವಗಳನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸುತ್ತೇನೆ. ದೇವ ಮಂದಿರಗಳನ್ನು ಕಟ್ಟಿಸುತ್ತೇನೆ. ನೀವು ನನ್ನನ್ನು ಗೆಲ್ಲಿಸಿದರೆ 24 ಗಂಟೆಯು ನಾನು ನಿಮಗೆ ಸೇವೆ ಸಲ್ಲಿಸುತ್ತೇನೆ. ನಾನು ನಿಮ್ಮ ಸೇವಕ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತೇನೆ. ನಿಮ್ಮ ಕಾಲಿಡಿದು ಕೇಳಿಕೊಳ್ಳುತ್ತೇನೆ ನನಗೇ ಮತ ನೀಡಿ.” ಎಂದು ಕಣ್ಣೀರು ಸುರಿಸಿದ.

    ನನ್ನ ಮಗನ ಕಣ್ಣಿನಲ್ಲಿಯೂ ನೀರು. ಏಕೆಂದು ಕೇಳಿದೆ.

    ” ಅಪ್ಪಾ ಇವರು ಎಷ್ಟು ಒಳ್ಳೆಯವರು. ನಮ್ಮ ಕಷ್ಟ ಎಲ್ಲಾ ಪರಿಹರಿಸುತ್ತಾರಂತೆ. ನಿನ್ನ ಓಟು ಇವರಿಗೇ ಹಾಕಪ್ಪ ”

    ಅವನ ಮುಗ್ಧತೆಗೆ ಮನದಲ್ಲೇ ನಕ್ಕು ಆಗಲಿ ಎಂದು ಹೇಳಿ ಮನೆ ಕಡೆ ಹೊರಟೆ. ಕರಳು ಚುರಕ್ ಎಂದಿತು. ಅವನು ಕೇಳದಿದ್ದರೂ ನಾನೇ ಐಸ್ ಕ್ರೀಮ್ ಕೊಡಿಸಿದೆ. ತಿನ್ನುತ್ತಾ ಬರುತಿರುವಾಗ ಸ್ವಲ್ಪ ದೂರದ ಮ್ಯೆದಾನದಲ್ಲಿ ಮತ್ತೊಂದು ಪಕ್ಷದ ಸಭೆ ನಡೆಯುತ್ತಿತ್ತು. ಅದಕ್ಕೂ ಹಠ ಮಾಡಿದ. ಹೋಗಲಿ, ಹೇಗಿದ್ದರೂ ಭಾನುವಾರ ಪರವಾಗಿಲ್ಲ ಎಂದು ಅಲ್ಲಿಗೂ ಕರೆದೊಯ್ದೆ.

    ಅಲ್ಲಿನ ಅಭ್ಯರ್ಥಿಯೂ ಮಾತನಾಡುತ್ತಿದ್ದ. “ಮಹನೀಯರೆ, ಮಹಿಳೆಯರೆ, ಹುಟ್ಟಿನಿಂದಲೇ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ನನಗೆ ನಿಮ್ಮ ಸೇವೆಯನ್ನು ಹೆಚ್ಚಿಗೆ ಮಾಡಲು ಚುನಾವಣೆಗೆ ನಿಂತಿರುವೆ. ನಾನೇನಾದ್ರು ಆಯ್ಕೆಯಾದರೆ ನಿಮ್ಮ ಮನೆಬಾಗಿಲಿಗೆ ಉಚಿತ ಅಕ್ಕಿ, ರಾಗಿ, ಜೋಳ, ಎಣ್ಣೆ, ಬಟ್ಟೆ, ತಾಳಿ, ಟಿವಿ, ಲ್ಯಾಪ್ ಟಾಪ್ ಇನ್ನೂ ಎಲ್ಲಾ ಕೊಡುತ್ತೇನೆ. ನಿಮಗೆ ಆರೋಗ್ಯ, ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ, ವೃದ್ಧರಿಗೆ ಪಿಂಚಣಿ ಎಲ್ಲಾ ಕೊಡಿಸುತ್ತೇನೆ. ದಯವಿಟ್ಟು ನಿಮ್ಮ ಅಮೂಲ್ಯ ಓಟು ನನಗೇ ಕೊಡಿ.”

    ಜನರ ಜೋರು ಚಪ್ಪಾಳೆ. ನಡುವೆ ಮಗನನ್ನು ನೋಡುತ್ತೇನೆ. ಅವನು ಮತ್ತೆ ಕಣ್ಣೀರು.

    “ಅಪ್ಪಾ ಇವರು ಇನ್ನೂ ಒಳ್ಳೆಯವರು. ಎಲ್ಲಾ ಉಚಿತ ಕೊಡುತ್ತಾರೆ. ನಿನ್ನ ಓಟು ಇವರಿಗೇ ಕೊಡು”

    ಆಯ್ತು ಮಗ ಎಂದು ಹೇಳಿ ಮನೆಗೆ ಬಂದೆವು.

    ರಾತ್ರಿ  ಮಲಗಿರುವಾಗ ಕೇಳಿದ,

    ” ಅಪ್ಪಾ ಇಷ್ಟೊಂದು ಒಳ್ಳೆಯ ಜನ ಚುನಾವಣೆಗೆ ನಿಲ್ಲುವಾಗ ನೀನ್ಯಾಕೆ ಯಾವಾಗಲೂ ರಾಜಕಾರಣಿಗಳನ್ನು ಬಯ್ಯುತ್ತೀಯ. ಪಾಪ ಅವರು ಒಳ್ಳೆಯವರು. ನೀನೇ  ಸರಿಯಿಲ್ಲ. “ಎಂದ.

    ” ಮಗನೇ ನನಗೆ ಸುಮಾರು 50 ವರ್ಷ ಸಮೀಪಿಸುತ್ತಿದೆ. ನಾನು 20 ರಿಂದ 25 ಚುನಾವಣೆಗಳನ್ನು

    ನೋಡಿದ್ದೇನೆ. ಎಲ್ಲಾ ಅಭ್ಯರ್ಥಿಗಳು, ಪಕ್ಷಗಳೂ ಹೀಗೇ ಹೇಳುತ್ತವೆ. ಚುನಾವಣೆ ಮುಗಿದು ಗೆದ್ದಮೇಲೆ

    ನಾವು ಅವರನ್ನು ಭೇಟಿಯಾಗುವುದು ಅಸಾಧ್ಯ. ಒಂದು ವೇಳೆ ಭೇಟಿಯಾದರು  ಎರಡು ನಿಮಿಷ ಮಾತನಾಡಿ ಸಾಗುಹಾಕುತ್ತಾರೆ. ಅವರ ಕೆಲವು ಹಿಂಬಾಲಕರಿಗೆ ಬಿಟ್ಟರೆ ಯಾರಿಗೂ ಏನೂ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಮೊಸಳೆ ಕಣ್ಣೀರು ಸುರಿಸುತ್ತಾರೆ.” ಎಂದು ಹೇಳುತ್ತಿದ್ದಂತೆ ಮನೆಯ ಕಾಲಿಂಗ್ ಬೆಲ್ ಶಬ್ದವಾಯಿತು.

    ಬಾಗಿಲು ತೆಗೆದರೆ ಒಬ್ಬ,…..

    ” ಅಣ್ಣಾ ತಗೋ 2000 ರೂಪಾಯಿ, ಅಕ್ಕನಿಗೆ ಒಂದು ಸೀರೆ ಇದೆ. ಕವರ್ ಒಳಗೆ

    ಒಂದು ಎಣ್ಣೇ ಬಾಟಲ್ ಇಟ್ಟಿದ್ದೇನೆ. ನಮ್ಮ ಅಭ್ಯರ್ಥಿಯನ್ನ ಮರೆಯಬೇಡ “ಎಂದು ಹೇಳಿ  ಕ್ಯೆಮುಗಿದು

    ಹೊರಟ. ಇನ್ನೊಬ್ಬ ನನ್ನ ಮಗನನ್ನು ನೋಡಿ ಅವನಿಗೂ 100 ರ ನೋಟು ನೀಡಿದ.

    ಮಗನಿಗೆ ಏನೂ ಅರ್ಥವಾಗಲಿಲ್ಲ. 100 ನೋಟು ನೋಡಿ ಖುಷಿಯಾಯಿತು.

    ನನಗೆ ನನ್ನ ಮಗನ ಭವಿಷ್ಯ ನೆನಪಾಗಿ ಭಯವಾಯಿತು.

    ನಿಮಗೆ,…..

    ಏಳಿ ಎದ್ದೇಳಿ ಜಾಗೃತಗೊಳ್ಳಿ, ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ, …….

     

    -ವಿವೇಕಾನಂದ. ಹೆಚ್.ಕೆ.

    9844013068

    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.