ಕೊರಟಗೆರೆ: ಕೊರಟಗೆರೆ ಮತ್ತು ಮಧುಗಿರಿ ರಾಜ್ಯ ಹೆದ್ದಾರಿ ರಸ್ತೆಯ ಸಿದ್ದೇಶ್ವರ ಸಮುದಾಯ ಭವನದ ಹತ್ತಿರ ಬೈಪಸ್ ರಸ್ತೆ ನಿರ್ಮಾಣ ಮಾಡಿದ್ದು, ಬೈಪಾಸ್ ರಸ್ತೆಗೂ ಕೊರಟಗೆರೆ ಪಟ್ಟಣ ಸಂಪರ್ಕಿಸುವ ರಸ್ತೆಯು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಮಾಡಲಾಗಿದೆ. ಇದರಿಂದಾಗಿ ಇದೀಗ ಇಲ್ಲಿ ಪ್ರತಿನಿತ್ಯ ಸಣ್ಣ ಪುಟ್ಟ ಅಪಘಾತಗಳು ನಡೆಯುತ್ತಲೇ ಇವೆ.
ಇಂದು ಈ ರಸ್ತೆಯ ಪಕ್ಕದಲ್ಲೇ ಹೋಗುತ್ತಿದ್ದ ದ್ವಿಚಕ್ರವಾಹನ ವಾಹನಕ್ಕೆ ಕೆಎಸ್ಸಾರ್ಟಿಸಿ ಬಸ್ ಗುದ್ದಿದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿ ಎಎಸ್ ಐ ಯೋಗೇಶ್ ಹಾಗೂ ಅವರ ತಂಡ ಸರ್ಕಾರಿ ಆಸ್ಪತ್ರೆಗೆ ತಮ್ಮ 112 ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ .
ಕೊರಟಗೆರೆ ಪಟ್ಟಣದಿಂದ ಮಧುಗಿರಿಗೆ ಹಾದು ಹೋಗುವ ರಸ್ತೆಯಲ್ಲಿ ಹಾಂಪ್ ನಿರ್ಮಾಣವಾಗಿದ್ದು, ಮಧುಗಿರಿ ಕಡೆಗೆ ಹೋಗುವ ಲಘು ವಾಹನಗಳು ಹಾಗೂ ಭಾರಿ ವಾಹನ ಸೇರಿದಂತೆ ಪ್ರತಿನಿತ್ಯ ಸಂಚರಿಸುವ ಬೆಂಗಳೂರು-ಪಾವಗಡ ಮತ್ತು ತುಮಕೂರು-ಪಾವಗಡ ಮಾರ್ಗವಾಗಿ ಸಂಚರಿಸುವ ಸರ್ಕಾರಿ ಮತ್ತೂ ಖಾಸಗಿ ಬಸ್ ಚಾಲಕರು ವಿರುದ್ದವಾಗಿ ವಾಹನಗಳನ್ನು ಚಲಾಯಿಸುತ್ತಿದ್ದಾರೆ. ಇದರಿಂದಾಗಿ ಎದುರಿಗೆ ಬರುವ ವಾಹನ ಸವಾರರಿಗೆ ಗೊಂದಲಮಯ ಉಂಟಾಗಿ ದಿಕ್ಕು ತೋಚದೇ ಗಾಬರಿ ಗೊಂಡು ಅಪಘಾತಗಳು ಉಂಟಾಗುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ.
ಈ ರಸ್ತೆಯಲ್ಲಿ ಒಂದು ಕಡೆ ಮಾತ್ರ ಹಂಪ್ ಹಾಕಿದ್ದು ಮತ್ತೊಂದು ಕಡೆ ಹಾಗೆಯೇ ಬಿಟ್ಟಿರುವ ಕಾರಣ ಎಲ್ಲ ವಾಹನಗಳು ವಿರುದ್ಧ ದಿಕ್ಕಿನಲ್ಲಿಯೇ ಸಂಚಾರ ಮಾಡುತ್ತಿರುವುದರಿಂದ ಅಪಘಾತ ಸಂಭವಿಸುತ್ತಿವೆ.
ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕಾನೂನು ರೀತಿ ಕ್ರಮ ಕೈ ಕೊಂಡು ಅಪಘಾತಗಳನ್ನ ತಪ್ಪಿಸಲು ಸಾರ್ವಜನಿಕರು ಮನವಿ ಮಾಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5