nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಸಂರಕ್ಷಿಸಿ: ಬಿ.ವಿ.ಅಶ್ವಿಜ
    ತುಮಕೂರು November 22, 2024

    ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಸಂರಕ್ಷಿಸಿ: ಬಿ.ವಿ.ಅಶ್ವಿಜ

    By adminNovember 22, 2024No Comments2 Mins Read
    vanamahithsava

    ತುಮಕೂರು: ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತ್ಯಜಿಸಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮೂಲಕ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದರು.

    ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಹಾಗೂ ತುಮಕೂರು ವಿಜ್ಞಾನ ಕೇಂದ್ರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ “ವನ ಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಮಾಲಿನ್ಯದಿಂದ ಜೀವ ಸಂಕುಲಗಳಿಗೆ ಹಾನಿ ಉಂಟಾಗುತ್ತಿದ್ದು, ಪ್ಲಾಸ್ಟಿಕ್ ಬದಲಿಗೆ ಜೈವಿಕ ವಸ್ತುಗಳನ್ನು ಬಳಸಬೇಕೆಂದು ಕರೆ ನೀಡಿದರು.


    Provided by
    Provided by

    ಅರಣ್ಯ ನಾಶದಿಂದ ಪರಿಸರ ಅಸಮತೋಲನ ಉಂಟಾಗಿ ಚಂಡಮಾರುತ, ಭೂಕಂಪ, ಅತೀವೃಷ್ಠಿ, ಅನಾವೃಷ್ಠಿಗೆ ಕಾರಣವಾಗಿ ಜೀವಸಂಕುಲಗಳು ಅಳಿವಿನಂಚಿಗೆ ತಲುಪುತ್ತಿವೆ. ಮನುಷ್ಯನು ತನ್ನ ಸ್ವಾರ್ಥಕ್ಕಾಗಿ ಅರಣ್ಯ ನಾಶ ಮಾಡುತ್ತಿದ್ದಾನೆ. ಉತ್ತಮ ಪರಿಸರ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಶುದ್ಧ ನೀರು, ಗಾಳಿ, ಆಹಾರ ದೊರೆಯುವಂತೆ ಮಾಡಬೇಕೆಂದು ತಿಳಿಸಿದರು.

    ಸಾರ್ವಜನಿಕರು ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿಕಸ–ಒಣಕಸವನ್ನು ಬೇರ್ಪಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ದಿನನಿತ್ಯ ಚಟುವಟಿಕೆಗಳಲ್ಲಿ ಪ್ಲಾಸ್ಟಿಕ್ ಬಳಸದೇ ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ರೂಪಿಸಲು ಮುಂದಾಗಬೇಕು ಎಂದರು.

    ಸಾಮಾಜಿಕ ಅರಣ್ಯ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ದೇವರಾಜ್ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಮರ ಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕು ಎಂದರಲ್ಲದೆ, ಕನ್ನಡ ನಾಡು–ನುಡಿ ಉಳಿಸಿ ಬೆಳೆಸಬೇಕು. ಇಂಗ್ಲಿಷ್ ವ್ಯಾಮೋಹದಿಂದ ಹೊರಬಂದು ಶುದ್ಧ ಕನ್ನಡವನ್ನೇ ಬಳಸಬೇಕು ಎಂದು ತಿಳಿಸಿದರು.

    ಬೆಂಗಳೂರಿನ ಕರ್ನಾಟಕ ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರದ ದಿಕ್ಸೂಚಿ ಭಾಷಣಕಾರ ಡಾ.ಕೆ.ಆರ್. ಶ್ರೀಹರ್ಷ ಮಾತನಾಡಿ, ಭೂ ಮರುಸ್ಥಾಪನೆ, ಮರು ಭೂಮೀಕರಣ ಹಾಗೂ ಬರ ತಡೆಯುವಿಕೆ ವಿಷಯದ ಬಗ್ಗೆ ತಿಳಿಸಿದರು.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಪರಿಸರ ಅಧಿಕಾರಿ ಬಿ.ಸಿ.ಶಿವಮೂರ್ತಿ ಮಾತನಾಡುತ್ತಾ, ಅತಿಯಾದ ಕೈಗಾರಿಕೆ ಮತ್ತು ಗಣಿಗಾರಿಕೆಯಿಂದ ಪರಿಸರ ಮಲಿನವಾಗುತ್ತಿದೆ. ಜಿಲ್ಲೆಯ ಕೈಗಾರೀಕರಣದಿಂದ ಪರಿಸರದ ಮೇಲೆ ದುಷ್ಪರಿಣಾಮಗಳುಂಟಾಗುತ್ತಿದೆ. ಪರಿಸರವನ್ನು ಸಂರಕ್ಷಿಸಲು ಅರಣ್ಯ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು ಎಂದು ಹೇಳಿದರು.

    ವಿಶ್ವಪರಿಸರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಸಿ ನೆಡುವ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

    ದಾವಣಗೆರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ವಲಯ ಕಚೇರಿ ಹಿರಿಯ ಪರಿಸರ ಅಧಿಕಾರಿ ರಮೇಶ್ ಡಿ. ನಾಯಕ್ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ಪ್ರೇರಕ ಭಾಷಣಕಾರ ಡಾ.ಪೃಥ್ವಿರಾಜ್ ಎಸ್. ಲಕ್ಕಿ, ತುಮಕೂರು ವಿಜ್ಞಾನ ಕೇಂದ್ರದ ಅಧ್ಯಕ್ಷ ಮರುಳಯ್ಯ ಹಾಗೂ ಉಪಾಧ್ಯಕ್ಷ ಸಿ.ಯತಿರಾಜ್, ಟಿ.ಡಿ.ಸಿ.ಸಿ.ಐ. ಅಧ್ಯಕ್ಷ ಟಿ.ಜೆ. ಗಿರೀಶ್, ವಿ.ಐ.ಎ. ಅಧ್ಯಕ್ಷ ಡಾ.ಸಿ.ವಿ. ಹರೀಶ್, ಬೆಳಗಾವಿ ಡಿ.ಸಿ.ಪಿ.(ಸಿ.ಎ.ಆರ್.) ಸಿದ್ದನಗೌಡ ವೈ. ಪಾಟೀಲ್, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.