ಪಾವಗಡ: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯು ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಶೇಕಡಾ 92% ರಷ್ಟು ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಗಳಿಸಿದ ಶಾಂತಿ ನಗರದ ಮಾಧವಿ ರವರನ್ನು ಇಂದು ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಮತ್ತು ಬಳಗದವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿರುವುದು ಅತೀ ಹೆಚ್ಚು ಸಂತೋಷ ಮತ್ತು ಹೆಮ್ಮೆ ಪಡುವ ವಿಚಾರ. ಇಂತಹ ಮಕ್ಕಳಿಗೆ ಮುಂದಿನ ಶಿಕ್ಷಣಕ್ಕೆ ನೆರವು ನೀಡಲು ನಮ್ಮ ಸಂಸ್ಥೆ ಒಂದು ಹೆಜ್ಜೆ ಮುಂದಿರುತ್ತದೆ ಎಂದು ತಿಳಿಸಿದರಲ್ಲದೇ ಮಾಧವಿ ರವರಿಗೆ ಶುಭಕೋರಿ ಅಭಿನಂದಿಸಿದರು.
ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಧವಿ, ಫಲಿತಾಂಶವನ್ನು ಗುರುತಿಸಿ ಶುಭಕೋರಿ ಅಭಿನಂದಿಸಿದ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅವರಿಗೆ ಮತ್ತು ಬಳಗದವರಿಗೆ ಧನ್ಯವಾದವುಗಳು ಎಂದರು.
ಈ ಸಂದರ್ಭದಲ್ಲಿ ಸನ್ಮಾನಿತೆಯ ಕುಟುಂಬದವರು ಹಾಗೂ ಹೆಲ್ಪ್ ಸೊಸೈಟಿ ಪದಾಧಿಕಾರಿಗಳಾದ ಬ್ಲಡ್ ಶಶಿಕಲಾ, ಎಸ್.ಆರ್.ಪಾಳ್ಯ ರಾಕೇಶ್, ಎನ್ಟಿಆರ್ ಅನಿಲ್, ಮಂಜುನಾಥ್, ರವಿಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA