ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿಯಲ್ಲಿ ಮುಳುಗಿರುವುದು ಸಾಕು. ಗ್ಯಾರಂಟಿ ಒಂದು ಕಡೆ ಇರಲಿ, ಅದು ತಪ್ಪಲ್ಲ. ಆದರೆ, ಅದರಲ್ಲೇ ಮುಳುಗಿದರೆ ಆಗುವುದಿಲ್ಲ. ಚುನಾವಣೆ ವೇಳೆ ಪ್ರಕಟಿಸಿದ ಪ್ರಣಾಳಿಕೆಯ ಭರವಸೆಗಳನ್ನೂ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೇಲ್ಮನೆ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಸಲಹೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ಹಿಂಪಡೆದಿದೆ. ಆದರೆ, ನಾವಿನ್ನೂ ಹಿಂಪಡೆದಿಲ್ಲ. ಈ ಕುರಿತು ಕೂಡಲೇ ಆ ಕೆಲಸ ಮಾಡಬೇಕು. ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಕಾನೂನುಬಾಹಿರವಾಗಿ ಮಾಡಿತ್ತು. ಅದನ್ನು ನಾವು ಹಿಂಪಡೆಯಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಘ–ಪರಿವಾರದವರೇ ಇದ್ದಾರೆ. ಅದನ್ನು ಬದಲಾಯಿಸಬೇಕು. ಜಾತಿ ಗಣತಿ ವರದಿ ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇವುಗಳನ್ನು ಅನುಷ್ಠಾನಕ್ಕೆ ತರದೇ ಇದ್ದರೆ ಮುಂದೆ ನಮಗೆ ಕಷ್ಟ ಆಗಲಿದೆ. ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳು ಇವು. ಕೃಷಿ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಿದರೆ ಮಾತ್ರ ಪಕ್ಷಕ್ಕೆ ಒಳ್ಳೆಯದಾಗಲು ಸಾಧ್ಯ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4