nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿ–ಖಾತಾ ಆಂದೋಲನ : ಶಾಸಕರಿಂದ ಚಾಲನೆ
    ತುಮಕೂರು February 21, 2025

    ಬಿ–ಖಾತಾ ಆಂದೋಲನ : ಶಾಸಕರಿಂದ ಚಾಲನೆ

    By adminFebruary 21, 2025No Comments2 Mins Read
    b khatha

    Provided by
    Provided by

    ತುಮಕೂರು:  ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ–ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು.

    ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ. ಕಾಂಪ್ಲೆಕ್ಸ್ ನಲ್ಲಿಂದು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಂದೋಲನದಲ್ಲಿ ಇ–ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಲು ಮಾಲೀಕರಿಗೆ ನಿಗದಿತ ಅರ್ಜಿಯನ್ನು ವಿತರಿಸಲಾಗುವುದು.

    ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸ್ವೀಕರಿಸಲು ವಾರ್ಡ್ ವಾರು ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕರು ಸೀಮಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಿ ತಮ್ಮ ಆಸ್ತಿಯನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.

    ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ 11 ಸ್ಥಳಗಳಲ್ಲಿ ಬಿ–ಖಾತಾ ರಿಜಿಸ್ಟರ್ ದಾಖಲಾತಿ ಆಂದೋಲನ ನಡೆಯಲಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಹಣವನ್ನು ಪಾವತಿಸಬೇಕು. ಇದರಿಂದ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೆರವಾಗುತ್ತದೆ ಎಂದು ತಿಳಿಸಿದರು.

    ಸಾರ್ವಜನಿಕರು ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಬಿ ಅಥವಾ ಎ ಖಾತಾ ಪಡೆಯಲು ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳನ್ನ ಭೇಟಿ ಮಾಡಬೇಕು ಎಂದು ಸೂಚನೆ ನೀಡಿದರು.

    ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಮಾತನಾಡಿ, ಕಳೆದ 4 ತಿಂಗಳಿಂದ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರಿಗೆ 10 ಸಾವಿರ ಎ–ಖಾತೆಗಳನ್ನು ವಿತರಿಸಲಾಗಿದೆ. ಬಿ–ಖಾತಾ ಪಡೆಯಲು ಮೇ 10ರವರಗೆ ಕಾಲಾವಕಾಶವಿದ್ದು, ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಬಿ–ಖಾತಾಗೆ ದಾಖಲಿಸಲಿಚ್ಛಿಸುವ ಆಸ್ತಿ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ 2024ರ ಸೆಪ್ಟೆಂಬರ್ 10ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರ/ದಾನಪತ್ರ/ವಿಭಾಗ ಪತ್ರ/ಹಕ್ಕು ಖುಲಾಸೆ ಪತ್ರ, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ(ಇಸಿ/ನಮೂನೆ-15), ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಮತ್ತು ಸ್ವತ್ತಿನ ಫೋಟೋ ಹಾಗೂ ಗುರುತಿನ ದಾಖಲೆ ಪ್ರತಿ ಸೇರಿದಂತೆ ಮತ್ತಿತರ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು ಎಂದು ಮಾಹಿತಿ ನೀಡಿದರು.

    ಬಿ–ಖಾತಾ ರಿಜಿಸ್ಟರ್‌ಗೆ ದಾಖಲಿಸಲು ನಿಗದಿಪಡಿಸಿರುವ ಸ್ಥಳಗಳ ವಿವರ:

    ಸಾರ್ವಜನಿಕರ ಅನುಕೂಲಕ್ಕಾಗಿ ಬಿ–ಖಾತಾ ರಿಜಿಸ್ಟರ್‌ಗೆ ದಾಖಲಿಸಲು ಪಾಲಿಕೆ ವತಿಯಿಂದ ವಾರ್ಡ್ ಗನುಗುಣವಾಗಿ ದಿನಾಂಕವಾರು ಸ್ಥಳವನ್ನು ನಿಗದಿಪಡಿಸಲಾಗಿದ್ದು, ಫೆಬ್ರವರಿ 21ರಂದು ವಾರ್ಡ್ ಸಂಖ್ಯೆ 1, 2, 3ರ ನಾಗರಿಕರು ಶಿರಾಗೇಟ್ ಐಡಿಎಸ್‌ಎಂಟಿ ಕಾಂಪ್ಲೆಕ್ಸ್ ಹಾಗೂ ವಾರ್ಡ್ ಸಂಖ್ಯೆ 4, 5, 6-ಚಿಕ್ಕಪೇಟೆಯ ಪೂರ್ಣಯ್ಯ ಛತ್ರ; ಫೆ.27 ಮತ್ತು 28ರಂದು ವಾರ್ಡ್ ಸಂಖ್ಯೆ 7 ರಿಂದ 11–ಪಿ.ಎಚ್ ಕಾಲೋನಿಯ ಆಜಾದ್ ಪಾರ್ಕ್ ಹಾಗೂ ವಾರ್ಡ್ ಸಂಖ್ಯೆ 10, 14, 15, 23, 29–ಕುಣಿಗಲ್ ಮುಖ್ಯರಸ್ತೆಯ ವಾಲ್ಮೀಕಿ ಸಮುದಾಯ ಭವನ; ಮಾರ್ಚ್ 3 ಮತ್ತು 4ರಂದು ವಾರ್ಡ್ ಸಂಖ್ಯೆ 12,13,17,22- ಮಹಾನಗರ ಪಾಲಿಕೆ ಆವರಣ ಹಾಗೂ ವಾರ್ಡ್ ಸಂಖ್ಯೆ 16, 18, 19, 20–ಕೋತಿತೋಪು ಸರ್ಕಾರಿ ಶಾಲೆ; ಮಾ.6 ಮತ್ತು 7ರಂದು ವಾರ್ಡ್ ಸಂಖ್ಯೆ 24 ರಿಂದ 27- ಅಶೋಕ ನಗರದ ಆಜಾದ್ ಪಾರ್ಕ್ ಹಾಗೂ ವಾರ್ಡ್ ಸಂಖ್ಯೆ 21, 28–ಹನುಮಂತಪುರದ ಕೊಲ್ಲಾಪುರದಮ್ಮನ ದೇವಸ್ಥಾನ; ಮಾ.11 ಮತ್ತು 12ರಂದು ವಾರ್ಡ್ ಸಂಖ್ಯೆ 33, 34-ಎಸ್.ಎಲ್.ಎನ್.ನಗರದ ಮಹಾನಗರಪಾಲಿಕೆ ಪಂಪ್‌ಹೌಸ್ ಹಾಗೂ ವಾರ್ಡ್ ಸಂಖ್ಯೆ 30, 31–ಮಾರುತಿ ನಗರ ಪಾರ್ಕ್; ಮಾ.14ರಂದು ವಾರ್ಡ್ ಸಂಖ್ಯೆ 32, 35ರ ನಾಗರಿಕರಿಗಾಗಿ ಬಟವಾಡಿಯ ಬಸವ ಭವನದಲ್ಲಿ ಬಿ-ಖಾತಾ ರಿಜಿಸ್ಟರ್‌ಗೆ ದಾಖಲಿಸಲು ಅರ್ಜಿಗಳನ್ನು ಸ್ವೀಕರಿಸಲಾಗುವುದು.  ಕಾರ್ಯಕ್ರಮದಲ್ಲಿ ಪಾಲಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ತುಮಕೂರು : 2026–2027 ಸಾಲಿನ ಎಸ್ ಎಫ್ ಸಿ ಮುಕ್ತನಿಧಿ ಅನುದಾನದಲ್ಲಿ ಹಾಗೂ ನಗರಸಭಾ ನಿಧಿಯಲ್ಲಿ ಶೇ24.1, 7.25 ಹಾಗೂ…

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.