ತುಮಕೂರು: ಹೇಮಾವತಿ ಹೋರಾಟದಲ್ಲಿ ಐವರ ಬಂಧನ ಹಿನ್ನೆಲೆ ತುಮಕೂರು ಜೈಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ನವಚೇತನ್ ಹಾಗೂ ನಾಲ್ವರು ಯುವ ರೈತರನ್ನ ಭೇಟಿ ಮಾಡಿರುವ ವಿಜಯೇಂದ್ರ, ಬಂಧಿತರಿಗೆ ಧೈರ್ಯ ತುಂಬಿದರು. ಅಲ್ಲದೇ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದರು. ಹೋರಾಟದಿಂದ ಹಿಂದೆ ಸರಿಯದಂತೆ ವಿಜಯೇಂದ್ರ ಸಲಹೆ ನೀಡಿದ್ದಾರೆ.
ವಿಜಯೇಂದ್ರ ಜೊತೆ ಎಂಎಲ್ ಸಿ ಸಿ.ಟಿ. ರವಿ, ನಾರಾಯಣ ಸ್ವಾಮಿ, ದೀರಜ್ ಮುನಿರಾಜ್, ಶಾಸಕ ಸುರೇಶ್ ಗೌಡ ಸಾಥ್ ನೀಡಿದರು.
ಹೇಮಾವತಿ ಹೋರಾಟಕ್ಕೆ ಸಂಬಂಧಿಸಿದಂತೆ ಇದುವರೆಗೂ ಐವರು ಹೋರಾಟಗಾರನ್ನ ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW