ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ್ ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು: ಚಿಕ್ಕನಾಯಕನಹಳ್ಳಿ, ಹೊಯ್ಸಳಕಟ್ಟೆ, ತಿಮ್ಮನಹಳ್ಳಿ ಹಾಗೂ ದೊಡ್ಡರಾಂಪುರ ವಸತಿ ನಿಲಯಗಳಲ್ಲಿ ತಲಾ 50 ಸ್ಥಾನಗಳು, ಹುಳಿಯಾರು ಮತ್ತು ಕಂದಿಕೆರೆ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 45 ಸ್ಥಾನಗಳು ಹಾಗೂ ಚಿಕ್ಕನಾಯಕನಹಳ್ಳಿಯ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 50 ಸ್ಥಾನಗಳು ಲಭ್ಯವಿವೆ.
ಹುಳಿಯಾರಿನ ಕನಕದಾಸ ಸಾರ್ವಜನಿಕ ಖಾಸಗಿ ಅನುದಾನಿತ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 50 ಸ್ಥಾನಗಳು ಹಾಗೂ ಕುಪ್ಪೂರು ತಮ್ಮಡಿಹಳ್ಳಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಅನಾಥಾಲಯದಲ್ಲಿ 45 ಸ್ಥಾನಗಳು ಲಭ್ಯವಿವೆ.
ಚಿಕ್ಕನಾಯಕನಹಳ್ಳಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 250 ಸ್ಥಾನಗಳು, ಹುಳಿಯಾರಿನ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 125 ಸ್ಥಾನಗಳು ಹಾಗೂ ಚಿಕ್ಕನಾಯಕನಹಳ್ಳಿಯ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ 100 ಸ್ಥಾನಗಳಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 8 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 16 ಅಂತಿಮ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಸಹಾಯವಾಣಿ ಸಂಖ್ಯೆ 80507 70004 ನ್ನು ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


