ಮಧುಗಿರಿ: ಬಡವನಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿಯ ಜಲದಿ ಉತ್ಸವ ಅದ್ದೂರಿಯಾಗಿ ನಡೆಯಿತು.
ಮಧುಗಿರಿ ತಾಲೂಕು ದೊಡ್ಡೇರಿ ಹೋಬಳಿಯ ಬಡವನಹಳ್ಳಿ ಗ್ರಾಮದಲ್ಲಿ ಶ್ರೀ ರಂಗನಾಥ ಸ್ವಾಮಿ ಉತ್ಸವ ಹಾಗೂ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿಯ ಮೆರವಣಿಗೆ ಮತ್ತು ಬಡವನಹಳ್ಳಿ ಗ್ರಾಮದ ಸುತ್ತಮುತ್ತಲಿನ ರಂಗನಾಥಸ್ವಾಮಿಯ ಪೂಜಾ ಭಕ್ತರಿಂದ ಸ್ನಾನ ಮಾಡಿ ಪೂಜೆ ಸಲ್ಲಿಸುವ ಮುಖಾಂತರ ಲಕ್ಷ್ಮಿ ರಂಗನಾಥ ಕೃಪೆಗೆ ಪಾತ್ರರಾದರು.
ಬಡವನಹಳ್ಳಿ ಗ್ರಾಮದ ಸುವರ್ಣಮುಖಿ ನದಿಯಲ್ಲಿ ಶ್ರೀ ಲಕ್ಷ್ಮೀ ರಂಗನಾಥನ ಗಂಗೆ ಸ್ನಾನ ಪೂಜೆ ಪುರಸ್ಕಾರ ಬಾಣ ಯಾತ್ರೆ ಹಾಗೂ ಭೂತನ ಸೇವೆ ನಡೆಯಿತು. ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಸೇರಿದ್ದರು
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy