nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ

    January 20, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    • ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?
    • ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ
    • 8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!
    • ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ
    • ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ
    • ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ
    • ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜೆಟ್  ಮೇಲೆ  ವಿಕಲಚೇತನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ:  ಎಂ.ಪಿ. ನಟೇಶ್ ಕುಮಾರ್
    ತುರುವೇಕೆರೆ March 12, 2022

    ಬಜೆಟ್  ಮೇಲೆ  ವಿಕಲಚೇತನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ:  ಎಂ.ಪಿ. ನಟೇಶ್ ಕುಮಾರ್

    By adminMarch 12, 2022No Comments2 Mins Read
    thuruvecare

    ತುರುವೇಕೆರೆ: ಬಜೆಟ್ ಮೇಲಿನ ವಿಕಲಚೇತನ ನಿರೀಕ್ಷೆ ಹುಸಿಯಾಗಿದೆ. ವಿಕಲಚೇತನರ ಜನಸಂಖ್ಯೆ ಅನುಗುಣವಾಗಿ ವಿಕಲಚೇತನರ ಅಭಿವೃದ್ಧಿಗಾಗಿ ನಿಗಮ  ಸ್ಥಾಪಿಸಬೇಕೆಂದು ಶ್ರೀವಿವೇಕಾನಂದ ಅಂಗವಿಕಲರ ಸಂಘದ ಕಾರ್ಯದರ್ಶಿ ಎಂ.ಪಿ. ನಟೇಶ್ ಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಮುಖ್ಯಮಂತ್ರಿಗಳಾದ ಬಸವರಾಜ ಎಸ್.ಬೊಮ್ಮಾಯಿ  ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಕಲಚೇತನರಿಗೆ ಅನೇಕ ನಿರೀಕ್ಷೆಗಳಿದ್ದವು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಕಲಚೇತನರ ಬಗ್ಗೆ ಒಲವು ತೋರಿ, ಅನೇಕ ಭರವಸೆಗಳೊಂದಿಗೆ ನಿರೀಕ್ಷೆಯಲ್ಲಿದ್ದವರಿಗೆ ಬಹಳ ನೋವಾಗಿದೆ. ಶೇ. 75%ಹೆಚ್ಚು ಮನೋವೈಕಲ್ಯ ಹೊಂದಿದ್ದವರಿಗೆ 1,400 ರೂ. ಗಳಿಂದ,  2,000 ರೂ.ಗಳಿಗೆ ಮಾಶಾಸನ ಹೆಚ್ಚಿಸುವ ಭರವಸೆ ಮತ್ತು ಬಸ್ ಪಾಸ್ ಪ್ರಸ್ತುತ ದರದಲ್ಲಿಯೇ ಹೆಚ್ಚಿನ ದೂರದ ಪ್ರಯಾಣ ನೀಡುವುದರ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆಗಳು ಹುಸಿಯಾಗಿವೆ.


    Provided by
    Provided by

    ಸದನದಲ್ಲಿ ರಾಜ್ಯದ ಎಲ್ಲಾ ಶಾಸಕರು ತಮ್ಮ ವೇತನವನ್ನು ಹೆಚ್ಚಿಸಿಕೊಂಡರು. ಆದರೆ ಅಂಗವಿಕಲರ ಸಮಸ್ಯೆಯ ಬಗ್ಗೆ ಯಾರು ಪರಿಗಣಿಸಲಿಲ್ಲ. ಶೇ.75% ಮತ್ತು 25%ನ ತಾರತಮ್ಯವನ್ನು ಹೋಗಲಾಡಿಸಬೇಕು. ಗ್ರಾಮೀಣ ಪ್ರದೇಶದ ಪುನರ್ವಸತಿ ಕೇಂದ್ರಗಳ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಬೇಕು. ಸಮಾಜದಲ್ಲಿ ತಂದೆ-ತಾಯಿಗೆ ಬೇಡವಾದ ಕಟ್ಟಕಡೆಯ ವ್ಯಕ್ತಿಗಳೆಂದರೆ ವಿಕಲಚೇತನರಾಗಿದ್ದೇವೆ.  ವಿಕಲಚೇತನರ ಆರ್ಥಿಕ ಸಬಲೀಕರಣ ಸೇರಿದಂತೆ ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಪ್ರಯತ್ನ ಮಾಡದೇ ಇರುವುದು ಖಂಡನೀಯವಾಗಿದೆ. ಸ್ಥಳೀಯ ಶಾಸಕರು ಸಹ ವಿಕಲಚೇತನರ ಅನುದಾನದಲ್ಲಿ ದೊರೆಯುವ ಯಾವುದೇ ಸೌಲಭ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ.  ಈ ಸಂಬಂಧ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ವಿಕಲಚೇತನರ ಜೊತೆಗೂಡಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಸಂಘದ ಸಹಕಾರ್ಯದರ್ಶಿ ಎಸ್. ಗುರುಲಿಂಗಮೂರ್ತಿ ಮತ್ತು ಖಜಾಂಚಿ ವಿ.ಎಸ್. ಲಕ್ಷ್ಮಿಕಾಂತ್ ಮಾತನಾಡಿ, ತೈಲ ಬೆಲೆ ಏರಿಕೆ ಮತ್ತು ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ  ದುಡಿಯುವ ಮಧ್ಯಮ ಮತ್ತು ಕಾರ್ಮಿಕ ವರ್ಗ ಜೀವನ ನಡೆಸಲು ಹೈರಾಣಾಗಿದೆ. ಇಂತಹ ಸಂದರ್ಭದಲ್ಲಿ ಮಾಶಾಸನದ ಮೇಲೆ ಅವಲಂಬಿತರಾಗಿರುವ ವಿಕಲಚೇತನರ ಮಾಶಾಸನ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ವಿಕಲಚೇತನರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳಾದ ಬಸವರಾಜು ಎಸ್. ಬೊಮ್ಮಾಯಿ ಅವರು ಮುಂದಾಗಬೇಕು. ತಾಲೂಕಿನಲ್ಲಿ ಕೋವಿಡ್ ನಂತಹ ಪರಿಸ್ಥಿತಿಯಲ್ಲಿಯೂ ಸಹ ನಮಗೆ ಸ್ಥಳೀಯ ಶಾಸಕರಾಗಲಿ, ಯಾವುದೇ ಜನಪ್ರತಿನಿಧಿಗಳಾಗಲಿ ನೆರವಾಗಿಲ್ಲ ಎಂದು ದೂರಿದರು.

    ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಮಹಾಲಿಂಗಪ್ಪ, ಅಧ್ಯಕ್ಷರಾದ ಟಿ.ಎಲ್.ನಾಗರಾಜು ಉಪಾಧ್ಯಕ್ಷರಾದ ರವಿಕುಮಾರ್.,  ನಿರ್ದೇಶಕರುಗಳಾದ ಕೃಷ್ಣಮೂರ್ತಿ, ಲತಾ ಕುಮಾರ್, ಶಿವಬಸವಯ್ಯ,  ಮಂಗಳ ಗೌರಮ್ಮ, ಸಂತೋಷ್ ಕುಮಾರ್, ಶಾಂತಕುಮಾರ್, ರಮೇಶ್, ಮಹೇಶ್, ಮುಗಳೂರು ಪರಮೇಶ್ ಸೇರಿದಂತೆ ನಗರ ಮತ್ತು ಗ್ರಾಮೀಣ ಪ್ರದೇಶದ ಎಲ್ಲಾ ವಿ.ಆರ್. ಡಬ್ಲ್ಯೂ./ ಯೂ.ಆರ್. ಡಬ್ಲ್ಯೂ./ ಎಂ.ಆರ್.ಡಬ್ಲ್ಯೂ. ಕಾರ್ಯಕರ್ತರು ಪಾಲ್ಗೊಂಡಿದ್ದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!

    January 17, 2026

    ಎನ್.ವಿ.ಶಶಿಕಲಾ ಅಧ್ಯಕ್ಷತೆಯಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

    January 13, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    January 7, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಕೊರಟಗೆರೆ: ರಾಜ್ಯ ಸರ್ಕಾರವು ಡಿಜಿಟಲ್ ಸೇವೆಯಡಿ ಜಾರಿಗೊಳಿಸಿದ ‘ಇ–ಸ್ವತ್ತು’ ಯೋಜನೆ ಕೊರಟಗೆರೆ ತಾಲ್ಲೂಕಿನಲ್ಲಿ ತಾಂತ್ರಿಕ ದೋಷಗಳಿಂದಾಗಿ ಹಳ್ಳ ಹಿಡಿದಿದೆ. ಸಾಫ್ಟ್‌ವೇರ್…

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ

    January 20, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.