nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026
    Facebook Twitter Instagram
    ಟ್ರೆಂಡಿಂಗ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    • ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
    • ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
    • ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
    • ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬದುಕು ಧೈರ್ಯಕ್ಕೆ ಕಾರಣ
    ಲೇಖನ January 29, 2023

    ಬದುಕು ಧೈರ್ಯಕ್ಕೆ ಕಾರಣ

    By adminJanuary 29, 2023No Comments2 Mins Read
    yathish kumar

    ಇದೊಂದು ಇಸೋಪನ ನೀತಿ ಕಥೆ ಯೆಂಬ ಪ್ರತೀತಿ ಇದೆ.ದಟ್ಟವಾದ ಕಾಡಿನಲ್ಲಿನ ಸರೋವರದ ಬದಿಯಲ್ಲಿ ಸಾವಿರಾರು ಮೊಲಗಳು ವಾಸವಾಗಿದ್ದವು. ಅವುಗಳಿಗೆ ಅಲ್ಲಿ ಬೇಕಾದಷ್ಟು ಆಹಾರ ಸಿಗುತ್ತಿತ್ತು. ಅವುಗಳ ಪರಿವಾರ ದಿನದಿಂದ ದಿನಕ್ಕೆ ವೃದ್ಧಿಸುತ್ತಲೇ ಇತ್ತು. ಮೊಲಗಳು ಮೊದಲೇ ತುಂಬ ಪುಕ್ಕಲು ಸ್ವಭಾವದ ಪ್ರಾಣಿಗಳು. ಒಂದು ಚೂರು ಸದ್ದಾದರೂ ಹೆದರಿ ಓಡುವಂಥ ಜೀವಿಗಳು.

    ಒಂದು ಬಾರಿ ಮೊಲಗಳೆಲ್ಲ ಸಭೆ ಸೇರಿದ್ದಾಗ ಹಿರಿಯ ಮೊಲವೊಂದು ಗಂಭೀರವಾಗಿ ಮಾತನಾಡಿತು, ‘ಬಂಧುಗಳೇ, ನಾವೆಲ್ಲ ಈ ಅರಣ್ಯದಲ್ಲಿ ಚೆನ್ನಾಗಿದ್ದೇವೆ ಎಂಬುದು ಒಂದು ಭಾವನೆ. ಆದರೆ, ನಿಜವಾಗಿ ನೋಡಿದರೆ ನಾವು ಇರುವಷ್ಟು ಆತಂಕದಲ್ಲಿ ಬೇರೆ ಯಾವ ಪ್ರಾಣಿಯೂ ಕಾಡಿನಲ್ಲಿ ಇರುವುದು ಸಾಧ್ಯವಿಲ್ಲ. ನಮ್ಮ ಸ್ವಭಾವವೇ ಪುಕ್ಕಲು. ನಾವು ಪಕ್ಕಾ ಸಸ್ಯಾಹಾರಿಗಳು, ಯಾರಿಗೂ ತೊಂದರೆ ಕೊಡುವವರಲ್ಲ. ಆದರೆ, ಎಲ್ಲರೂ ನಮ್ಮ ಮೇಲೆ ಯಾಕೆ ಇಷ್ಟು ದ್ವೇಷ ಸಾಧಿಸುತ್ತಾರೋ ತಿಳಿಯದು.


    Provided by
    Provided by

    ಮಾಂಸಾಹಾರಿಗಳಾದ ಪ್ರಾಣಿಗಳು ನಮಗೋಸ್ಕರ ಕಾಯುತ್ತಿರುತ್ತವೆ. ಸಿಕ್ಕಸಿಕ್ಕಲ್ಲಿ ನಮ್ಮವರನ್ನು ಹೊಡೆದು ತಿನ್ನುತ್ತವೆ. ಇನ್ನೊಂದೆಡೆಗೆ ಬೇಟೆಗಾರರೂ ನಮ್ಮನ್ನೇ ಹುಡುಕಿಕೊಂಡು ಬರುತ್ತಾರೆ. ಅಲ್ಲಲ್ಲಿ ಬಲೆ ಹಾಕಿ ನಮ್ಮನ್ನು ಹಿಡಿಯುತ್ತಾರೆ. ಸಿಕ್ಕವರನ್ನು ಹಿಡಿದುಕೊಂಡು ಹೋಗಿ ಕೆಲವರನ್ನು ಕೊಂದು ಮಾಂಸ ಮಾರುತ್ತಾರೆ. ಇನ್ನೂ ಕೆಲವರನ್ನು ಹಿಡಿದುಕೊಂಡು ಹೋಗಿ ಪಂಜರದಲ್ಲಿಟ್ಟು ಸಾಕುತ್ತಾರೆ. ಪಾಪ! ಆ ಮೊಲಗಳಿಗೆ ಜೀವನಪರ್ಯಂತ ಜೈಲು ವಾಸ. ನಾವು ಏನು ಮಾಡಬೇಕು ಎಂಬುದು ತಿಳಿಯದಾಗಿದೆ.

    ಒಂದೆಡೆಗೆ ನಮ್ಮನ್ನು ಬೇಟೆಯಾಡುವ ಕಾಡುಪ್ರಾಣಿಗಳು, ಮತ್ತೊಂದೆಡೆಗೆ ಬೇಟೆಗಾರರು. ಇಬ್ಬರಿಂದಲೂ ಹೇಗೆ ಪಾರಾಗಬೇಕೆಂಬುದನ್ನು ನಾವು ಯೋಚಿಸಬೇಕಲ್ಲವೇ?’. ಹಿರಿಯ ಮೊಲದ ಮಾತುಗಳನ್ನು ಶ್ರದ್ಧೆಯಿಂದ ಎಲ್ಲ ಮೊಲಗಳು ಕೇಳಿದವು. ಅವುಗಳ ಕಣ್ಣ ಮುಂದೆ ತಮ್ಮ ಅತ್ಯಂತ ಅನಿಶ್ಚಿತವಾದ ಬದುಕು ತೇಲಿಬಂತು. ಪ್ರತಿಕ್ಷಣವೂ ಸಾವಿಗೆ ಹೆದರಿ ಓಡಬೇಕಾದ ಪರಿಸ್ಥಿತಿ ತಮ್ಮದು ಎಂದು ಚಿಂತಿಸಿ ಕಂಗಾಲಾದವು.

    ಆಗ ಮತ್ತೊಂದು ಮೊಲ ಎದ್ದು ನಿಂತಿತು. ಅದು ಕಣ್ಣೀರು ಸುರಿಸುತ್ತಲೇ ಹೇಳಿತು, ‘ಹೌದು, ಹಿರಿಯರು ಹೇಳಿದಂತೆ ನಮ್ಮ ಬದುಕಿಗೆ ಯಾವ ಅರ್ಥವೂ ಇಲ್ಲ. ಹೀಗೆ ಕ್ಷಣಕ್ಷಣವೂ ಸಾಯುವುದಕ್ಕಿಂತ ಒಮ್ಮೆಯೇ ಸತ್ತು ಹೋಗುವುದು ವಾಸಿ. ನನ್ನ ಮಾತು ಕೇಳುವುದಾದರೆ ನಾವೆಲ್ಲ ಒಂದೇ ಬಾರಿ ಕೊಳದಲ್ಲಿ ಮುಳುಗಿ ಸತ್ತು ಹೋಗುವುದು ಸರಿಯಾದ ದಾರಿ’. ಅಲ್ಲಿ ಸೇರಿದ ಎಲ್ಲ ಮೊಲಗಳಿಗೆ ಈ ವಿಚಾರ ಅತ್ಯಂತ ಸರಿ ಎನ್ನಿಸಿತು. ಹಾಗಾದರೆ ತಡವೇಕೆ? ಇಂದೇ, ಈಗಲೇ ಹೋಗಿ ಕೊಳದಲ್ಲಿ ಹಾರಿಕೊಳ್ಳೋಣ ಎಂದು ಸಾವಿರಾರು ಮೊಲಗಳು ಕೊಳದ ಕಡೆಗೆ ನಡೆದವು.

    ಆಗ ಒಂದು ಘಟನೆ ನಡೆಯಿತು. ಸಾವಿರಾರು ಮೊಲಗಳು ಕೊಳದ ಹತ್ತಿರ ಬಂದಾಗ ದಂಡೆಯಲ್ಲಿ ಕುಳಿತಿದ್ದ ಸಾವಿರಾರು ಕಪ್ಪೆಗಳು ಗಾಬರಿಯಾಗಿ ನೀರಿಗೆ ಹಾರಿದವು. ಇದನ್ನು ಕಂಡ ಒಂದು ತರುಣ ಮೊಲ ಕೂಗಿತು, ‘ಎಲ್ಲರೂ ನಿಲ್ಲಿ, ಯಾರೂ ನೀರಿಗೆ ಹಾರಬೇಕಿಲ್ಲ. ನಾವು ಬರುವುದನ್ನು ಕಂಡು ಗಾಬರಿಯಾಗಿ ಹಾರಿದ ಕಪ್ಪೆಗಳನ್ನು ಕಂಡಿರಾ? ಅಂದರೆ ನಮ್ಮಂತಹ ಪುಕ್ಕಲು ಪ್ರಾಣಿಗಳಿಗೂ ಹೆದರುವ ಪ್ರಾಣಿಗಳಿವೆಯಲ್ಲ! ನಮ್ಮ ಬದುಕು ಅವುಗಳಿಗಿಂತ ಎಷ್ಟೋ ವಾಸಿ. ಕಪ್ಪೆಗಳೇ ಬದುಕುವುದಕ್ಕೆ ಉತ್ಸಾಹ ತೋರುವಾಗ ನಾವೇಕೆ ಬದುಕಿನಿಂದ ಮುಖ ತಿರುಗಿಸಬೇಕು?’ ಮೊಲಗಳಿಗೆ ಮಾತು ಸರಿ ಎನ್ನಿಸಿತು.

    ಅವುಗಳ ಮುಖದಲ್ಲಿ ಸಂತೋಷ ತೇಲಾಡಿತು. ಅವು ಮತ್ತೆ ಕುಪ್ಪಳಿಸುತ್ತ ಕಾಡಿಗೆ ನಡೆದವು. ನಮಗೂ ಅನೇಕ ಬಾರಿ ಹೀಗೆಯೇ ಅನ್ನಿಸುತ್ತದೆ, ನಿರಾಸೆ ಮೂಡುತ್ತದೆ, ಬದುಕು ವ್ಯರ್ಥವೆನ್ನಿಸುತ್ತದೆ. ಆಗ ಸುತ್ತಲೂ ಕಣ್ತೆರದು ನೋಡಿದರೆ ನಮಗಿಂತ ಹೆಚ್ಚು ಕಷ್ಟದಲ್ಲಿರುವವರು ನಗುನಗುತ್ತ ಬದುಕುವುದು ಕಾಣುತ್ತದೆ. ಅವರೇ ಸಂತೋಷವಾಗಿರುವಾಗ ನಮಗೇಕೆ ಕೊರಗು ಎಂಬ ಧೈರ್ಯ ಮೂಡುತ್ತದೆ. ಕಾರಿನಲ್ಲಿ ಹೋಗುವವರನ್ನು ನೋಡಿ ಸಂಕಟಪಡುವುದಕ್ಕಿಂತ ಕಾಲಿನಲ್ಲಿ ಚಪ್ಪಲಿ ಕೂಡ ಇಲ್ಲದವರನ್ನು ನೋಡಿ ಸಮಾಧಾನ ಪಡುವುದು ಒಳ್ಳೆಯದು.
    ಬದುಕನ್ನು ಧೈರ್ಯದಿಂದ ಎದುರಿಸೋಣ.

    ಬರಹಗಾರು: ಕೃಷ್ಣಮೂರ್ತಿ ಕೆ.ಕೆ.
    ಹಿಂದಿ ಶಿಕ್ಷಕರು, ವರಿನ್ ಅಂತರಾಷ್ಟ್ರೀಯ ವಸತಿ ಶಾಲೆ,
    ತುಮಕೂರು.


    ಪ್ರತಿಕ್ರಿಯೆ:

     

    ●ತಮ್ಮ ಲೇಖನ ಹೀಗೆ ಮುಂದುವರೆಯಲಿ ಸರ್… ದೇವರು ತಮಗೆ ಇನ್ನೂ ಹೆಚ್ಚಿನ ಲೇಖನ ಬರೆಯುವ ಶಕ್ತಿ ಕೊಡುವುದರ ಜೊತೆಗೆ ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತಾ ಶುಭ ಕೋರುತ್ತಿದ್ದೇನೆ.

    ಯತೀಶ್ ಕುಮಾರ್
    ಚಿತ್ರಕಲಾ ಶಿಕ್ಷಕರು
    ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ,
    ಚಂದ್ರಶೇಖರ ಪುರ. ಹಾಗೂ
    ರಾಜ್ಯ ಮಟ್ಟದ “ಶಿಕ್ಷಕ ರತ್ನ” ಪ್ರಶಸ್ತಿ ಪುರಸ್ಕೃತರು,
    ಮತ್ತು ಪ್ರಧಾನ ಕಾರ್ಯದರ್ಶಿ, ಸರ್ಕಾರಿ ಚಿತ್ರಕಲಾ ಮಹಾ ವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘ (ರಿ.,)
    ತುಮಕೂರು.

    admin
    • Website

    Related Posts

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಉದ್ಧಟತನ ಕಲಿಸಿದ ಪಾಠ

    January 7, 2026

    ವಾಸ್ತವ ಒಡೆದು ನೋಡಿದಾಗ?

    January 2, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    January 11, 2026

    ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಪ್ರಥಮ ಭಾಷೆಯಾಗಿ ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾವಿತ ಮಸೂದೆಯ ವಿರುದ್ಧ…

    ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!

    January 11, 2026

    ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    January 10, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.