nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025
    Facebook Twitter Instagram
    ಟ್ರೆಂಡಿಂಗ್
    • ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ
    • ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು
    • ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ
    • ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ
    • ಏನೂ ಮಾಡದ ಸ್ಪಂದನಾ ಸೇಫ್ ಆಗುತ್ತಿರುವುದು ಹೇಗೆ? | ಮಾಳು ನಿಪನಾಳ್ ಅಸಮಾಧಾನ
    • ಮನೆಯವರಿಗೆ, ಸ್ನೇಹಿತರಿಗೆ ಗೊತ್ತಾಗದಂತೆ ಮಾಸ್ಕ್ ಧರಿಸಿ  14 ಕೋಟಿ ಲಾಟರಿ ಬಹುಮಾನ ಪಡೆದ ಯುವಕ: ಕಾರಣ ಕೇಳಿದ್ರೆ ಶಾಕ್ ಆಗ್ತೀರಿ…!
    • ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಗೆಲುವು ಕಟ್ಟಟ್ಟ ಬುತ್ತಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ವಾಜಪೇಯಿ ಅವರ 101ನೇ ಜಯಂತಿ:  ವಾಜಪೇಯಿ ನಡೆದು ಬಂದ ಹಾದಿ ಸದಾ ಪ್ರೇರಣೆ:  ವಿಹೆಚ್ ಪಿ ಜಿಲ್ಲಾಧ್ಯಕ್ಷರಾದ ಪ್ರದೀಪ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜೆಟ್ ಮೇಲೆ ವಿಕಲಚೇತನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ: ಎಂ.ಪಿ. ನಟೇಶ್ ಕುಮಾರ್
    ತುರುವೇಕೆರೆ March 12, 2022

    ಬಜೆಟ್ ಮೇಲೆ ವಿಕಲಚೇತನರು ಇಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ: ಎಂ.ಪಿ. ನಟೇಶ್ ಕುಮಾರ್

    By adminMarch 12, 2022No Comments2 Mins Read
    thuruvecare

    ತುರುವೇಕೆರೆ: ಬಜೆಟ್ ಮೇಲಿನ ವಿಕಲಚೇತನ ನಿರೀಕ್ಷೆ ಹುಸಿಯಾಗಿದೆ. ವಿಕಲಚೇತನರ ಜನಸಂಖ್ಯೆ ಅನುಗುಣವಾಗಿ ವಿಕಲಚೇತನರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕೆಂದು ಶ್ರೀವಿವೇಕಾನಂದ ಅಂಗವಿಕಲರ ಸಂಘದ ಕಾರ್ಯದರ್ಶಿ ಎಂ.ಪಿ. ನಟೇಶ್ ಕುಮಾರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳಾದ ಬಸವರಾಜ ಎಸ್.ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ವಿಕಲಚೇತನರಿಗೆ ಅನೇಕ ನಿರೀಕ್ಷೆಗಳಿದ್ದವು.


    Provided by
    Provided by

    ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ವಿಕಲಚೇತನರ ಬಗ್ಗೆ ಒಲವು ತೋರಿ, ಅನೇಕ ಭರವಸೆಗಳೊಂದಿಗೆ ನಿರೀಕ್ಷೆಯಲ್ಲಿದ್ದವರಿಗೆ ಬಹಳ ನೋವಾಗಿದೆ. ಶೇ. 75%ಹೆಚ್ಚು ಮನೋವೈಕಲ್ಯ ಹೊಂದಿದ್ದವರಿಗೆ 1,400 ರೂ. ಗಳಿಂದ, 2,000 ರೂ.ಗಳಿಗೆ ಮಾಶಾಸನ ಹೆಚ್ಚಿಸುವ ಭರವಸೆ ಮತ್ತು ಬಸ್ ಪಾಸ್ ಪ್ರಸ್ತುತ ದರದಲ್ಲಿಯೇ ಹೆಚ್ಚಿನ ದೂರದ ಪ್ರಯಾಣ ನೀಡುವುದರ ಮೂಲಕ ಅನೇಕ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆಗಳು ಹುಸಿಯಾಗಿವೆ.

    ಸದನದಲ್ಲಿ ರಾಜ್ಯದ ಎಲ್ಲಾ ಶಾಸಕರು ತಮ್ಮ ವೇತನವನ್ನು ಹೆಚ್ಚಿಸಿಕೊಂಡರು. ಆದರೆ ಅಂಗವಿಕಲರ ಸಮಸ್ಯೆಯ ಬಗ್ಗೆ ಯಾರು ಪರಿಗಣಿಸಲಿಲ್ಲ. ಶೇ.75% ಮತ್ತು 25%ನ ತಾರತಮ್ಯವನ್ನು ಹೋಗಲಾಡಿಸಬೇಕು. ಗ್ರಾಮೀಣ ಪ್ರದೇಶದ ಪುನರ್ವಸತಿ ಕೇಂದ್ರಗಳ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಬೇಕು. ಸಮಾಜದಲ್ಲಿ ತಂದೆ-ತಾಯಿಗೆ ಬೇಡವಾದ ಕಟ್ಟಕಡೆಯ ವ್ಯಕ್ತಿಗಳೆಂದರೆ ವಿಕಲಚೇತನರಾಗಿದ್ದೇವೆ. ವಿಕಲಚೇತನರ ಆರ್ಥಿಕ ಸಬಲೀಕರಣ ಸೇರಿದಂತೆ ವಿಕಲಚೇತನರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಪ್ರಯತ್ನ ಮಾಡದೇ ಇರುವುದು ಖಂಡನೀಯವಾಗಿದೆ. ಸ್ಥಳೀಯ ಶಾಸಕರು ಸಹ ವಿಕಲಚೇತನರ ಅನುದಾನದಲ್ಲಿ ದೊರೆಯುವ ಯಾವುದೇ ಸೌಲಭ್ಯಗಳನ್ನು ನೀಡುವಲ್ಲಿ ವಿಫಲರಾಗಿದ್ದಾರೆ. ಈ ಸಂಬಂಧ ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ವಿಕಲಚೇತನರ ಜೊತೆಗೂಡಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಸಂಘದ ಸಹಕಾರ್ಯದರ್ಶಿ ಎಸ್. ಗುರುಲಿಂಗಮೂರ್ತಿ ಮತ್ತು ಖಜಾಂಚಿ ವಿ.ಎಸ್. ಲಕ್ಷ್ಮಿಕಾಂತ್ ಮಾತನಾಡಿ, ತೈಲ ಬೆಲೆ ಏರಿಕೆ ಮತ್ತು ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ದುಡಿಯುವ ಮಧ್ಯಮ ಮತ್ತು ಕಾರ್ಮಿಕ ವರ್ಗ ಜೀವನ ನಡೆಸಲು ಹೈರಾಣಾಗಿದೆ. ಇಂತಹ ಸಂದರ್ಭದಲ್ಲಿ ಮಾಶಾಸನದ ಮೇಲೆ ಅವಲಂಬಿತರಾಗಿರುವ ವಿಕಲಚೇತನರ ಮಾಶಾಸನ ಹೆಚ್ಚಳ ಸೇರಿದಂತೆ ಅನೇಕ ಬೇಡಿಕೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ವಿಕಲಚೇತನರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳಾದ ಬಸವರಾಜು ಎಸ್. ಬೊಮ್ಮಾಯಿ ಅವರು ಮುಂದಾಗಬೇಕು. ತಾಲೂಕಿನಲ್ಲಿ ಕೋವಿಡ್ ನಂತಹ ಪರಿಸ್ಥಿತಿಯಲ್ಲಿಯೂ ಸಹ ನಮಗೆ ಸ್ಥಳೀಯ ಶಾಸಕರಾಗಲಿ, ಯಾವುದೇ ಜನಪ್ರತಿನಿಧಿಗಳಾಗಲಿ ನೆರವಾಗಿಲ್ಲ ಎಂದು ದೂರಿದರು.

    ಸುದ್ದಿಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಮಹಾಲಿಂಗಪ್ಪ, ಅಧ್ಯಕ್ಷರಾದ ಟಿ.ಎಲ್.ನಾಗರಾಜು ಉಪಾಧ್ಯಕ್ಷರಾದ ರವಿಕುಮಾರ್., ನಿರ್ದೇಶಕರುಗಳಾದ ಕೃಷ್ಣಮೂರ್ತಿ, ಲತಾ ಕುಮಾರ್, ಶಿವಬಸವಯ್ಯ, ಮಂಗಳ ಗೌರಮ್ಮ, ಸಂತೋಷ್ ಕುಮಾರ್, ಶಾಂತಕುಮಾರ್, ರಮೇಶ್, ಮಹೇಶ್, ಮುಗಳೂರು ಪರಮೇಶ್ ಸೇರಿದಂತೆ ನಗರ ಮತ್ತು ಗ್ರಾಮೀಣ ಪ್ರದೇಶದ ಎಲ್ಲಾ ವಿ.ಆರ್. ಡಬ್ಲ್ಯೂ./ ಯೂ.ಆರ್. ಡಬ್ಲ್ಯೂ./ ಎಂ.ಆರ್.ಡಬ್ಲ್ಯೂ. ಕಾರ್ಯಕರ್ತರು ಪಾಲ್ಗೊಂಡಿದ್ದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    ತುರುವೇಕೆರೆ:  ಡಿ.30: ಸಂಪಿಗೆಯಲ್ಲಿ ವೈಕುಂಠ ಏಕಾದಶಿ ಮಹೋತ್ಸವ

    December 28, 2025

    ತುರುವೇಕೆರೆ: ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಸ್ಥಾಪನೆಗೆ ತೀರ್ಮಾನ

    December 28, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ: ತುರುವೇಕೆರೆಯಲ್ಲಿ ಕೆಎಸ್ ಆರ್‌ ಟಿಸಿ ಬಸ್ ತಡೆದು ಪ್ರತಿಭಟನೆ

    December 30, 2025

    ತುರುವೇಕೆರೆ: ತಾಲೂಕಿನ ದಬ್ಬೆಘಟ್ಟ ರಸ್ತೆಯ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ನೂರಾರು ವಿದ್ಯಾರ್ಥಿಗಳು ಕೆಎಸ್ ಆರ್‌ ಟಿಸಿ ಬಸ್ಸುಗಳನ್ನು…

    ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್: ಕಂದೇಗಾಲ ಶಿವರಾಜು

    December 29, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    ಅಭಿವೃದ್ಧಿ ಕಾಮಗಾರಿಗಳಿಗೆ ವೇಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಗತಿ ಪರಿಶೀಲನೆ

    December 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.