ಮುಂಬೈ : ಬಾಳಾಸಾಹೇಬ್ ಅವರು ಏಕೈಕ ಹಿಂದೂ ಹೃದಯ ಸಾಮ್ರಾಟ್ ಎಂದು ಹೇಳಿದ್ದು, ಪಕ್ಷದ ಸಂಸ್ಥಾಪಕರಿಗೆ ಭಾರತ ರತ್ನ ನೀಡುವಂತೆ ಶಿವಸೇನೆ ಸಂಸದ ಸಂಜಯ್ ರಾವತ್ ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರದ ನಿಜವಾಗಿಯೂ ಹಿಂದುತ್ವದ ಬಗ್ಗೆ ಗೌರವವಿದ್ದರೆ, ವೀರ್ ಸಾವರ್ಕರ್ ಜೊತೆಗೆ ಬಾಳಾಸಾಹೇಬ್ ಠಾಕ್ರೆಯವರಿಗೂ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಬೇಕು.
ಅವರು ಅದನ್ನು ಏಕೆ ಘೋಷಿಸುತ್ತಿಲ್ಲ.. ಕಳೆದ ಹದಿನೈದು ವರ್ಷಗಳಿಂದ ನಾವು ಈ ಬೇಡಿಕೆಯನ್ನು ಸಲ್ಲಿಸುತ್ತಿದ್ದೇವೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ವಾಸ್ತವವಾಗಿ, ಭಾರತ ರತ್ನ ಪ್ರಶಸ್ತಿಯಿಂದ ವೀರ್ ಸಾವರ್ಕರ್ ಮತ್ತು ಬಾಳಾಸಾಹೇಬ್ ಠಾಕ್ರೆ ಅವರ ಸ್ಥಾನಮಾನವು ಹೆಚ್ಚಾಗುವುದಿಲ್ಲ. ಆದರೆ ಅಂತಹ ಮಹಾನ್ ನಾಯಕರಿಗೆ ನೀಡಿದ ನಂತರ ಪ್ರಶಸ್ತಿಯ ಮಹತ್ವವು ಹಲವು ಪಟ್ಟು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.
ಕೆಲವು ಜನರ ರಾಜಕೀಯ ಲಾಭಕ್ಕಾಗಿ ಹಲವು ರಾಜ್ಯ ನಾಯಕರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.
ವೀರ್ ಸಾವರ್ಕರ್ ಬಗ್ಗೆ ನಕಲಿ ಪ್ರೀತಿ ಮತ್ತು ಗೌರವವನ್ನು ಪ್ರದರ್ಶಿಸುವುದನ್ನು ನಿಲ್ಲಿಸಿ, ಸಾಧ್ಯವಾದಷ್ಟು ಬೇಗ ಪ್ರಶಸ್ತಿಯನ್ನು ಘೋಷಿಸಿ ಎಂದು ಒತ್ತಾಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz