nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಗಂಗಾಧರನಾಥ ಸ್ವಾಮೀಜಿಯವರ 9ನೇ ಪುಣ್ಯಾರಾಧನಾ ಸಮಾರಂಭ
    ತಿಪಟೂರು January 13, 2022

    ಬಾಲಗಂಗಾಧರನಾಥ ಸ್ವಾಮೀಜಿಯವರ 9ನೇ ಪುಣ್ಯಾರಾಧನಾ ಸಮಾರಂಭ

    By adminJanuary 13, 2022No Comments2 Mins Read
    swamiji

    ತಿಪಟೂರು : ಸಾಮಾಜಿಕ ಕೆಳಸ್ತರದ ವರ್ಗದಿಂದ ಉನ್ನತ ವರ್ಗದವರಿಗೂ ಸರ್ವ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನದೇ ಆದ ವಿಶಿಷ್ಟ ಸೇವೆಗಳ ಮೂಲಕ ಸಾಮರಸ್ಯವನ್ನು ಮೂಡಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ ಗುರುವಾರ ಆದಿಚುಂಚನಗಿರಿಯ  ಬಾಲಗಂಗಾಧರನಾಥ ಸ್ವಾಮೀಜಿಯವರು 9ನೇ ಪುಣ್ಯಾರಾಧನಾ ಸಮಾರಂಭ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಕಳಕಳಿ ಕಾರಣದಿಂದಲೇ ಜಗತ್ತಿನಾದ್ಯಂತ ಚಿರಸ್ಮರಣಿಯಾರಾದ್ದು ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಪ್ರಜ್ವಲಿಸುತ್ತಿದ್ದಾರೆ. ಸ್ವಾಮೀಜಿಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಕ್ಕೆ ಸಾಕ್ಷಿಯಾಗಿ “ಕರ್ನಾಟಕ ವನಸಂವರ್ಧನ ಟ್ರಸ್ಟ್” ಪ್ರಾರಂಭಿಸಿ ರಾಜ್ಯದಾದ್ಯಂತ ಕೋಟ್ಯಾಂತರ ಸಸಿ ನಡೆಸುವ ಕಾರ್ಯಕ್ರಮವನ್ನು ಜಾರಿಗೆ ತಂದು ಯಶಸ್ವಿಯಾಗಿ ಇತರರಿಗೆ ಪ್ರೇರಣೆಯಾದರು. ಆದ್ದರಿಂದ ಪ್ರತಿಯೊಬ್ಬರು ಸ್ವಾಮೀಜಿಯವರ ಚಿಂತನೆ, ಆದರ್ಶಗಳನ್ನು ಅರಿತು ನಡೆಯಬೇಕಿದೆ ಎಂದರು.


    Provided by
    Provided by

    ಶ್ರೀರಂಗ ಆಸ್ಪತ್ರೆಯ ವೈದ್ಯ ಡಾ.ವಿವೇಚನ್ ಮಾತನಾಡಿ, ಶಿಕ್ಷಣ, ಧಾರ್ಮಿಕ ಚಿಂತನೆ, ಸಾಮಾಜಿಕ ಸೇವಾ ಮನೋಭಾವದಿಂದ ವಿಶ್ವದಲ್ಲಿಯೇ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದು ಸ್ವಾಮೀಜಿಯವರ ಕಾರ್ಯಕ್ಕೆ ಸಾಟಿ ಮತ್ತೊಂದಿಲ್ಲ. ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದಂತಹ ವಿಶಿಷ್ಟ ಯೋಜನೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಿ ಎಲ್ಲರೂ ಒಂದೇ ಎನ್ನುವಂತಹ ಮನೋಭಾವ ಮೂಡುವ ಸಲುವಾಗಿ ಎಲ್ಲರನ್ನು ಗೌರವವಿಸುತ್ತಿದ್ದರು. ಪ್ರಕೃತಿಯ ವಿನಾಶದಿಂದ ಮಾನವ ಅಂತ್ಯ ಎಂಬ ಸಂದೇಶವನ್ನು ಅರಿತಿದ್ದ ಅವರು ಸಸಿಗಳನ್ನು ನೆಟ್ಟು ಪೋಷಣೆಯನ್ನು ಮಾಡುವಂತಹ ಕಾರ್ಯದಲ್ಲಿ ತೊಡಗಿದ್ದರು. ಸೇವಾ ಮನೋಭಾವಕ್ಕೆ ಉದಾಹರಣೆಯಾಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮುಖಾಂತರ ಉಚಿತ ಸೇವೆ, ಜ್ಞಾನ ಪ್ರಸರಣವನ್ನು ಇಂದಿಗೂ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಈ ಸಮಾರಂಭದಲ್ಲಿ ಗುಡಿಗೌಡರು ಹುಚ್ಚೇಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಚಿದಾನಂದ್, ರುಕ್ಷ್ಮೀಣಿ ಪಾಟೀಲ್, ಶ್ರೀನಿವಾಸ್, ಕೃಷ್ಣಸ್ವಾಮಿ, ಮಾಜಿ ಗ್ರಾ.ಪಂ.ಸದಸ್ಯ ಮೋಹನ್ ಕುಮಾರ್, ನಂಜುಂಡೇಗೌಡ, ರಂಗಪ್ಪ, ಕಾಂತರಾಜು, ಡಿ.ಕೆ.ಸೋಮಶೇಖರ್, ಕೃಷ್ಣೇಗೌಡ.ಡಿ.ಟಿ., ಜಯಕುಮಾರ್.ಡಿ.ಟಿ., ಮಠದ ಸಿಬ್ಬಂದಿಗಳು ಹಾಗೂ ಭಕ್ತಾಧಿಗಳು ಇದ್ದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.