nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಗಂಗಾಧರನಾಥ ಸ್ವಾಮೀಜಿಯವರ 9ನೇ ಪುಣ್ಯಾರಾಧನಾ ಸಮಾರಂಭ
    ತಿಪಟೂರು January 13, 2022

    ಬಾಲಗಂಗಾಧರನಾಥ ಸ್ವಾಮೀಜಿಯವರ 9ನೇ ಪುಣ್ಯಾರಾಧನಾ ಸಮಾರಂಭ

    By adminJanuary 13, 2022No Comments2 Mins Read
    swamiji

    ತಿಪಟೂರು : ಸಾಮಾಜಿಕ ಕೆಳಸ್ತರದ ವರ್ಗದಿಂದ ಉನ್ನತ ವರ್ಗದವರಿಗೂ ಸರ್ವ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನದೇ ಆದ ವಿಶಿಷ್ಟ ಸೇವೆಗಳ ಮೂಲಕ ಸಾಮರಸ್ಯವನ್ನು ಮೂಡಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ಆದಿಚುಂಚನಗಿರಿ ಶಾಖಾ ಮಠ ದಸರೀಘಟ್ಟದ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ ಗುರುವಾರ ಆದಿಚುಂಚನಗಿರಿಯ  ಬಾಲಗಂಗಾಧರನಾಥ ಸ್ವಾಮೀಜಿಯವರು 9ನೇ ಪುಣ್ಯಾರಾಧನಾ ಸಮಾರಂಭ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಕಳಕಳಿ ಕಾರಣದಿಂದಲೇ ಜಗತ್ತಿನಾದ್ಯಂತ ಚಿರಸ್ಮರಣಿಯಾರಾದ್ದು ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಪ್ರಜ್ವಲಿಸುತ್ತಿದ್ದಾರೆ. ಸ್ವಾಮೀಜಿಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಕ್ಕೆ ಸಾಕ್ಷಿಯಾಗಿ “ಕರ್ನಾಟಕ ವನಸಂವರ್ಧನ ಟ್ರಸ್ಟ್” ಪ್ರಾರಂಭಿಸಿ ರಾಜ್ಯದಾದ್ಯಂತ ಕೋಟ್ಯಾಂತರ ಸಸಿ ನಡೆಸುವ ಕಾರ್ಯಕ್ರಮವನ್ನು ಜಾರಿಗೆ ತಂದು ಯಶಸ್ವಿಯಾಗಿ ಇತರರಿಗೆ ಪ್ರೇರಣೆಯಾದರು. ಆದ್ದರಿಂದ ಪ್ರತಿಯೊಬ್ಬರು ಸ್ವಾಮೀಜಿಯವರ ಚಿಂತನೆ, ಆದರ್ಶಗಳನ್ನು ಅರಿತು ನಡೆಯಬೇಕಿದೆ ಎಂದರು.

    ಶ್ರೀರಂಗ ಆಸ್ಪತ್ರೆಯ ವೈದ್ಯ ಡಾ.ವಿವೇಚನ್ ಮಾತನಾಡಿ, ಶಿಕ್ಷಣ, ಧಾರ್ಮಿಕ ಚಿಂತನೆ, ಸಾಮಾಜಿಕ ಸೇವಾ ಮನೋಭಾವದಿಂದ ವಿಶ್ವದಲ್ಲಿಯೇ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದು ಸ್ವಾಮೀಜಿಯವರ ಕಾರ್ಯಕ್ಕೆ ಸಾಟಿ ಮತ್ತೊಂದಿಲ್ಲ. ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದಂತಹ ವಿಶಿಷ್ಟ ಯೋಜನೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಿ ಎಲ್ಲರೂ ಒಂದೇ ಎನ್ನುವಂತಹ ಮನೋಭಾವ ಮೂಡುವ ಸಲುವಾಗಿ ಎಲ್ಲರನ್ನು ಗೌರವವಿಸುತ್ತಿದ್ದರು. ಪ್ರಕೃತಿಯ ವಿನಾಶದಿಂದ ಮಾನವ ಅಂತ್ಯ ಎಂಬ ಸಂದೇಶವನ್ನು ಅರಿತಿದ್ದ ಅವರು ಸಸಿಗಳನ್ನು ನೆಟ್ಟು ಪೋಷಣೆಯನ್ನು ಮಾಡುವಂತಹ ಕಾರ್ಯದಲ್ಲಿ ತೊಡಗಿದ್ದರು. ಸೇವಾ ಮನೋಭಾವಕ್ಕೆ ಉದಾಹರಣೆಯಾಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮುಖಾಂತರ ಉಚಿತ ಸೇವೆ, ಜ್ಞಾನ ಪ್ರಸರಣವನ್ನು ಇಂದಿಗೂ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಈ ಸಮಾರಂಭದಲ್ಲಿ ಗುಡಿಗೌಡರು ಹುಚ್ಚೇಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಚಿದಾನಂದ್, ರುಕ್ಷ್ಮೀಣಿ ಪಾಟೀಲ್, ಶ್ರೀನಿವಾಸ್, ಕೃಷ್ಣಸ್ವಾಮಿ, ಮಾಜಿ ಗ್ರಾ.ಪಂ.ಸದಸ್ಯ ಮೋಹನ್ ಕುಮಾರ್, ನಂಜುಂಡೇಗೌಡ, ರಂಗಪ್ಪ, ಕಾಂತರಾಜು, ಡಿ.ಕೆ.ಸೋಮಶೇಖರ್, ಕೃಷ್ಣೇಗೌಡ.ಡಿ.ಟಿ., ಜಯಕುಮಾರ್.ಡಿ.ಟಿ., ಮಠದ ಸಿಬ್ಬಂದಿಗಳು ಹಾಗೂ ಭಕ್ತಾಧಿಗಳು ಇದ್ದರು.

    ವರದಿ: ಆನಂದ್ ತಿಪಟೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    Leave A Reply Cancel Reply

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.