ಛತ್ತೀಸ್ ಗಢ : ಬಾಲಕೊಬ್ಬ ಯುವಕನ ಜೊತೆಗೆ ಅಸಹಜ ಲೈಂಗಿಕ ಕ್ರಿಯೆಗೆ ವಿರೋಧಿಸಿದಕ್ಕೆ ಆತನನ್ನ 20 ವರ್ಷದ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಛತ್ತೀಸ್ ಗಢದ ಬೆಮೆತಾರಾದಲ್ಲಿ ನಡೆದಿದೆ.
ಆರೋಪಿಯನ್ನು ಪಂಕಜ್ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಮೊದಲಿಗೆ ಲೈಂಗಿಕ ಕ್ರಿಯೆಗೆ ಪ್ರಯತ್ನಿಸಿ ಒಪ್ಪದೇ ಹೋದಾಗ ಆತನನ್ನ ಕೊಂದು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಬೆಮೆತಾರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy