ಮಾಯಸಂದ್ರ: ಕಳೆದ ವರ್ಷ ಮಾಯಸಂದ್ರ ಬಸ್ ಸ್ಟ್ಯಾಂಡ್ ಗೆ ಅಂಟಿಕೊಂಡಿದ್ದ ಚರಂಡಿಯನ್ನು ತೆರೆದು ಮುಚ್ಚದೇ ಹಾಗೆಯೇ ಬಿಡಲಾಗಿತ್ತು. ಈ ಸಂಬಂಧ ನಮ್ಮ ತುಮಕೂರು ಮಾಧ್ಯಮ ಮಾಡಿದ ವರದಿಯಿಂದ ಎಚ್ಚೆತ್ತುಕೊಂಡ ಗ್ರಾಮ ಪಂಚಾಯ್ತಿಯು ಇದೀಗ ಚರಂಡಿಯನ್ನು ಮುಚ್ಚಿ ಸಾರ್ವಜನಿಕರಿಗೆ ಅನುಕೂಲ ಮಾಡಿದೆ.
ಕಳೆದ ವರ್ಷ ಬಸ್ಟ್ಯಾಂಡ್’ ಗೆ ಅಂಟಿಕೊಂಡಿರುವ 5 ಅಡಿ ಅಳವಾದ ಹಳೆಯ ಮೋರಿಯೊಂದನ್ನು ಸ್ವಚ್ಚ ಮಾಡಲು ತೆರೆದು ಹಾಗೆಯೇ ಬಿಡಲಾಗಿತ್ತು. ಈ ಪ್ರದೇಶದಲ್ಲಿ ರಾತ್ರಿ ವೇಳೆ ಬಸ್ ಹತ್ತಲು ಬರುವ ಪ್ರಯಾಣಿಕರಿಗೆ ಇದು ಅಪಾಯಕಾರಿಯಾಗಿ ಪರಿಣಮಿಸಿತ್ತು. ಈ ಸಂಬಂಧ ನಮ್ಮತುಮಕೂರು.ಕಾಂ‘ಬಲಿಗಾಗಿ ಕಾಯುತ್ತಿದೆ ತೆರೆದ ಮೋರಿ” ಎಂಬ ಶೀರ್ಷಿಕೆಯೊಂದಿಗೆ ವಿವರವಾದ ವರದಿಯನ್ನು ಮಾಡಿತ್ತು.
ನಮ್ಮ ತುಮಕೂರು ವರದಿಯಿಂದ ಎಚ್ಚೆತ್ತ ಗ್ರಾಮ ಪಂಚಾಯತ್ ಇದೀಗ ತೆರೆದ ಚರಂಡಿಯನ್ನು ಮುಚ್ಚಿ ಇದೀಗ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ಸಮಸ್ಯೆಯೊಂದ ಬಗೆಹರಿದಂತಾಗಿದೆ.
ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB