nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಲಿಜ ಸಂಕಲ್ಪ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ
    ಕೊರಟಗೆರೆ January 25, 2023

    ಬಲಿಜ ಸಂಕಲ್ಪ ಹೋರಾಟ ಪ್ರತಿಭಟನೆಯಲ್ಲಿ ಭಾಗವಹಿಸಲು ಮನವಿ

    By adminJanuary 25, 2023No Comments2 Mins Read
    balija sankalpa

    ಕೊರಟಗೆರೆ: ಬಲಿಜ ಸಮುದಾಯಕ್ಕೆ ಪೂರ್ಣ ಪ್ರಮಾಣದಲ್ಲಿ 2ಎ ಮೀಸಲಾತಿ ಸ್ವೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಜ.27 ರಂದು ಶುಕ್ರವಾರ ಬೆಂಗಳೂರಿನ ಗಾಂಧಿನಗರದ ಪ್ರೀಡಂ ಪಾರ್ಕ್ನಲ್ಲಿ ನಡೆಯುವ ಬೃಹತ್ ಸಂಕಲ್ಪ ಪ್ರತಿಭಟನೆ ಕಾರ್ಯಕ್ರಮದಲ್ಲಿ ತಾಲೂಕಿನ ಬಲಿಜ ಸಮುದಾಯದ ಪ್ರತಿಯೊಬ್ಬರು ಭಾಗವಹಿಸುವಂತೆ ತಾಲೂಕು ಬಲಿಜ ಸಂಘದ ಅಧ್ಯಕ್ಷ ಎನ್.ಪದ್ಮನಾಭ್ ಮನವಿ ಮಾಡಿದ್ದಾರೆ.

    ಕಾಮಧೇನು ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪುರ್ವಭಾವಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲಿನಿಂದ ಬಲಿಜ ಸಮುದಾಯ ಶೇ. 28% ರಷ್ಟು ಇದ್ದ ವೀಸಲಾತಿಯನ್ನು 1994 ರಲ್ಲಿ ಯಾವುದೇ ಸೂಚನೆ ಹಾಗೂ ಸಮಿತಿಯ ವರದಿಯ ಶಿಫಾರಸ್ಸು ಇಲ್ಲದೆ ತೆಗೆದು ರಾಜಕೀಯ ಮತ್ತು ಉದ್ಯೋಗಕ್ಕೆ ಕೇವಲ ಶೇ. 4% ರಷ್ಟು ಮೀಸಲಾತಿ ಇರುವ 3ಎ ಗೆ ಸೇರಿಸಿದ್ದು, ಇದನ್ನು ಪ್ರತಿಭಟಿಸಿ ಕಳೆದ 28 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಮೀಸಲಾತಿ ನೀಡದೆ ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ, ಸತತ ಹೋಟದ ಫಲವಾಗಿ ಕೇವಲ ವಿದ್ಯಾಬ್ಯಾಸಕ್ಕಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ 2ಎ ಮೀಸಲಾತಿ ಸೌಲಭ್ಯ ನೀಡಲಾಗಿದೆ ಅದರೆ ಪೂರ್ಣಪ್ರಮಾಣದ 2ಎ ಮೀಸಲಾತಿ ಗಾಗಿ ಅನೇಕ ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗದ ಕಾರಣದಿಂದ ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಎಂ.ಆರ್.ಜಯರಾಮ್ ಮತ್ತು ಎಂ.ಆರ್.ಸೀತಾರಾಮ್ ನೇತೃತ್ವದಲ್ಲಿ ಜ.27 ರಂದು ಶುಕ್ರವಾರ ಬೆಂಗಳೂರಿನ ಗಾಂಧಿನಗರದ ಪ್ರೀಡಂ ಪಾರ್ಕ್ನಲ್ಲಿ ನಡೆಯುವ ಬೃಹತ್ ಸಂಕಲ್ಪ ಪ್ರತಿಭಟನೆ ನಡೆಯುತ್ತಿದ್ದು ಪ್ರತಿಯೊಬ್ಬ ಬಲಿಜ ಬಾಂಧವರು ಭಾಗವಹಿಸುವಂತೆ ಮನವಿ ಮಾಡಿದರು.

    ತಾಲೂಕು ಬಲಿಜ ಸಂಘದ ಪತ್ರಿಕಾ ವಕ್ತಾರ ಹಾಗೂ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ, ಸುಮಾರು ವರ್ಷಗಳಿಂದ ಬಲಿಜ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುಲಾಗುತ್ತಿದೆ, ರಾಜ್ಯದಲ್ಲಿ ಪ್ರಬಲ ಸಮುದಾಯಗಳಿಗೆ ಸರ್ಕಾರ ಎ.ಬಿ.ಸಿ.ಡಿ. ಎಂಬ ಹೊಸ ಮೀಸಲಾತಿಯ ಸೌಲಬ್ಯವನ್ನು ಕಲ್ಪಿಸಲು ಹೊರಟ್ಟಿದ್ದು ಆದರೆ ಹಿಂದುಳಿದ ದ್ವನಿಯಿಲ್ಲದ ಬಲಿಜ ಜನಾಂಗದ ಕೂಗಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ ಬಲಿಜ ಸಮುದಾಯ ರಾಜ್ಯದ 54 ವಿಧಾನ ಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.

    ಮೀಸಲಾತಿಯಲ್ಲಿ ಅನ್ಯಾಯವಾಗಿರುವ ಬಲಿಜ ಸಮುದಾಯಕ್ಕೆ ನ್ಯಾಯವದಗಿಸಿ ಕೊಡುವಂತೆ ಜ.27 ರಂದು ಸಂಕಲ್ಪ ಪ್ರತಿಭಟನೆಸುತ್ತಿದ್ದು ಸರ್ಕಾರ ನಮ್ಮ ಮನವಿಗೆ ಸ್ಪಂದಿಸದೆ ಇದ್ದರೆ ಮುಂದಿನ ದಿನಗಳಲ್ಲಿ ಮೀಸಲಾತಿ ಕೂಡುವವರೆಗೂ ಉಗ್ರ ಹೋರಾಟದೊಂದಿಗೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಅವರು ಬಲಿಜ ಸಮುದಾಯ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕಾಗಿದೆ ಎಂದರು.

    ಜಿಲ್ಲಾ ಸಂಘದ ಪ್ರತಿನಿಧಿ ಹಾಗೂ ಮುಖಂಡ ಕೆ.ಎಲ್.ಆನಂದ್ ಮಾತನಾಡಿ, 2ಎ ಮೀಸಲಾತಿ ವಿಚಾರದಲ್ಲಿ ಸಮುದಾಯವು ಒಗ್ಗಟ್ಟು ಪ್ರದರ್ಶಿಸಬೇಕು ಎಂದ ಅವರು ರಾಜ್ಯದಲ್ಲಿ ಬಲಿಜ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರ್ಕಾರ ಸರಿಪಡಿಸಬೇಕು, ತಪ್ಪಿದಲ್ಲಿ ಉಗ್ರಹೋರಾಟದ ಕ್ರಾಂತಿಕಾರಕ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕು ಎಂದರೆ ಪ್ರತಿಯೊಬ್ಬರೂ ಜ.27 ರಂದು ನಡೆಯುವ ಸಂಕಲ್ಪ ಸಭೆಯಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

    ತಾಲೂಕು ಪ್ರಧಾನ ಕಾರ್ಯದರ್ಶಿ ನವೀನ್ಕುಮಾರ್ ಮಾಹಿತಿ ನೀಡಿ 27 ರಂದು ಸಂಕಲ್ಪಯಾತ್ರೆಯಲ್ಲಿ ಬಾಗವಹಿಸುವ ಸಮುದಾಯದವರಿಗೆ ಕೊರಟಗೆರೆ ಯಿಂದ ವಾಹನದ ವ್ಯವಸ್ಥೆಮಾಡಲಾಗುತ್ತಿದ್ದು ಜ.25 ರಂದು ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸುವಂತೆ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಸಂಘದ ಖಜಾಂಜಿ ವೆಂಕಟೇಶ್, ಕಾರ್ಯದರ್ಶಿ ನವೀನ್ಕುಮಾರ್, ಸಹ ಕಾರ್ಯದರ್ಶಿ ಪ್ರೇಂಡ್ಸ್ ಗ್ರೂಪ್ ರವಿಕುಮಾರ್, ಯುವ ಬಲಿಜ ಸಂಘದ ಅಧ್ಯಕ್ಷ ಸಂಜಯ್, ಸಂಘದ ನಿರ್ದೇಶ ಕರುಗಳಾದ ಬೆನಕಾ ವೆಂಕಟೇಶ್, ಕೆ.ಬಿ.ಲೋಕೇಶ್, ದೇವರಾಜು, ಅಕ್ಕಿರಾಂಪುರ ಮಂಜುನಾಥ್, ಎಸ್.ಆರ್.ಟೈಲರ್ ಶ್ರೀನಿವಾಸ್, ವೆಂಕಟಾಚಲಿ, ದಯಾನಂದ್, ಡೈರಿ ಶ್ರೀನಿವಾಸ್, ಹನುಮೇನಹಳ್ಳಿ ವೆಂಕಟೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ. ಎಂ. ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.