ತುರುವೇಕೆರೆ: ತಾಲ್ಲೂಕಿನಲ್ಲಿ ಅತಿ ಹೆಚ್ಚು ರಿವಿನ್ಯೂ ಇರುವ ಪಂಚಾಯ್ತಿ ಎಂದರೆ ಅದು ಮಾಯಸಂದ್ರ ಗ್ರಾಮ ಪಂಚಾಯ್ತಿ. ಈ ಪಂಚಾಯ್ತಿಗೆ ಹೋಟೆಲ್, ಸಂತೆ, ಆಟೋರೀಕ್ಷಾ, ಬೀದಿ ವ್ಯಾಪಾರಿಗಳು ಮುಂತಾದ ಕಡೆಯಿಂದ ಆದಾಯ ಹರಿದು ಬಂದರೂ , ಮಾಯಸಂದ್ರದ ಬಸ್ಟ್ಯಾಂಡ್ ಮಾತ್ರ ಅಭಿವೃದ್ಧಿ ಆಗಿಲ್ಲ.
ಕಳೆದ ವರ್ಷ ಬಸ್ಟ್ಯಾಂಡ್’ ಗೆ ಅಂಟಿಕೊಂಡಿರುವ 5 ಅಡಿ ಅಳವಾದ ಹಳೆಯ ಮೋರಿಯೊಂದನ್ನು ಸ್ವಚ್ಚ ಮಾಡಲು ತೆರೆದು ಹಾಗೆಯೇ ಬಿಟ್ಟಿರುವ ಕಾರಣ ರಾತ್ರಿ ಬಸ್ ಹತ್ತಲು ಬರುವ ಪ್ರಯಾಣಿಕರಿಗೆ ಪ್ರಾಣ ಕಂಟಕವಾಗಿದೆ.
ಇದರಿಂದ ಮುಂದೆ ಏನಾದರೂ ಸಾವು ಸಂಭವಿಸಿದರೆ ಅದಕ್ಕೆ ಪಂಚಾಯ್ತಿಯೇ ಕಾರಣ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿದೆ. ಇನ್ನಾದರೂ ಗ್ರಾಮ ಪಂಚಾಯ್ತಿಯ ಸದಸ್ಯರು,ಅಧ್ಯಕ್ಷರು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆಗೆ ಪರಿಹಾರ ನೀಡಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿದೆ.
ವರದಿ: ವೆಂಕಟೇಶ ಜೆ.ಎಸ್. ( ವಿಕ್ಕಿ ) ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy