ಪಾವಗಡ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ತಾಲೂಕು ನಿಡಗಲ್ಲು ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಿ.ಕೆ.ಪುರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿ.ಡಿ.ಪಿ.ಒ ಅಧಿಕಾರಿಗಳಾದ ನಾರಾಯಣ್, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಅವರ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ನಾವೆಲ್ಲರೂ ಸಹಕಾರ ಕೊಡಬೇಕು. ಪ್ರಜೆಗಳು, ತಾಯಂದಿರು, ಪೋಷಕರು ಎಲ್ಲರೂ ಸೇರಿ ಬಾಲ್ಯವಿವಾಹ ನಿಷೇಧದ ಬಗ್ಗೆ ಅರಿವು ಮೂಡಿಸಬೇಕು. ಈ ಮೂಲಕ ಬಾಲ್ಯ ವಿವಾಹವನ್ನು ತಡೆಯಬೇಕು ಎಂದರು.
ನಾವು ಅಧಿಕಾರಿಗಳು ಪಿಡಿಒ ಆರ್ ಐ ಗಳ ಜೊತೆಗೆ ನಾವು ಇರುತ್ತೇವೆ. ಶಾಲಾ ಮುಖ್ಯೋಪಾಧ್ಯಾಯರು ಎಲ್ಲರೂ ಸೇರಿ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳಾಗಿರುತ್ತಾರೆ. ಬಾಲ್ಯ ವಿವಾಹ ಮಾಡಿದರೆ ಕನಿಷ್ಠ ಎರಡು ವರ್ಷ ಜೈಲು ಶಿಕ್ಷೆಯಾಗುತ್ತದೆ. ಸಣ್ಣ ವಯಸ್ಸಿನಲ್ಲಿಯೇ ಮದುವೆ ಮಾಡಿದರೆ, ಹೆಣ್ಣು ಮಕ್ಕಳು ದೈಹಿಕ ಹಾಗೂ ಮಾನಸಿಕವಾಗಿ ಅನಾರೋಗ್ಯಕ್ಕೊಳಗಬಹುದು. ತಾಯಂದಿರ ಮರಣ ಕೂಡ ಹೆಚ್ಚಾಗಿ ಸಂಭವಿಸುತ್ತಿದೆ. ಬಾಲ್ಯ ವಿವಾಹ ಮಾಡಿದರೆ, ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಇದೇ ವೇಳೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಕ್ಷ್ಮಮ್ಮ ಈರಣ್ಣ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಮಪ್ಪ , ಪಿ.ಟಿ. ಮಾಸ್ಟರ್ ಲಕ್ಷ್ಮಿ ನಾರಾಯಣ್, ವಿಶ್ವೇಶ್ವರಯ್ಯ ಮುಖ್ಯೋಪಾಧ್ಯಾಯರು, ಮೇಲ್ವಿಚಾರಕರು ಜಯಲಕ್ಷ್ಮಿ. ಪೋಷಣಾ ಅಭಿಯಾನ ಸಂಯೋಜಕರಾದ ಪ್ರದೀಪ್. ಹಾಗೂ ಸುತ್ತಮುತ್ತಲಿನ ಸಿ.ಕೆ.ಪುರ ವೃತ್ತದ ಅಂಗನವಾಡಿ ಕಾರ್ಯಕರ್ತೆಯರು ಊರಿನ ಗ್ರಾಮಸ್ಥರು ಹಾಗೂ ಶಾಲೆಯ ಮಕ್ಕಳು ಹಾಜರಿದ್ದರು.
ವರದಿ. ರಾಮಪ್ಪ ಸಿ.ಕೆ.ಪುರ. ಪಾವಗಡ ತಾಲೂಕು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5