nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ

    January 8, 2026
    Facebook Twitter Instagram
    ಟ್ರೆಂಡಿಂಗ್
    • ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!
    • ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್
    • ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ
    • ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ
    • ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
    • ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ
    • ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾದ ಪಾವಗಡದ ಹೃತಿಕ್ ಎಚ್.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 
    ತುರುವೇಕೆರೆ January 7, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    By adminJanuary 7, 2026No Comments2 Mins Read
    turuvekere

    ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಂದ ಕುಂಟೆ ನಾಗರಾಜಯ್ಯ ನುಡಿ ನಮನ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಆಯೋಜನೆ ಮಾಡಲಾಗಿತ್ತು.

    ಹಿರಿಯ ದಲಿತ ಮುಖಂಡ ಹೋರಾಟಗಾರ ಕುಂದೂರು ತಿಮ್ಮಯ್ಯ ನೇತೃತ್ವದಲ್ಲಿ ನಾಗರಾಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.


    Provided by
    Provided by

    ಇದೇ ವೇಳೆ ಕುಂದೂರು ತಿಮ್ಮಯ್ಯ ಮಾತನಾಡಿ, 1972 –73 ರಲ್ಲಿ ತುಮಕೂರು ನಗರದ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಯಾಗಿದ್ದ ಬಂದ ಕುಂಟೆ ನಾಗರಾಜಯ್ಯ ಆ ದಿನಗಳಲ್ಲಿ ಕೆಲವು ದಲಿತ ವಿದ್ಯಾರ್ಥಿಗಳೊಂದಿಗೆ ಸೇರಿ ಅಸ್ಪೃಶ್ಯತಾ ನಿವಾರಣಾ ಸಂಘ ಹಾಗೂ 1974– 75 ರಲ್ಲಿ ದಲಿತ ವಿದ್ಯಾರ್ಥಿ ಸಂಘ ಸ್ಥಾಪಿಸುವ ಮೊದಲ ಹೋರಾಟದೊಂದಿಗೆ ನಾಗರಾಜಯ್ಯನವರ ಸಾಮಾಜಿಕ ನ್ಯಾಯದ ಹೋರಾಟ ಆರಂಭವಾಯಿತು. ನಂತರದ ದಿನಗಳಲ್ಲಿ ಇವರ ಹೋರಾಟ ಶಿಖರ ಶೃಂಗ ತಲುಪಿದ್ದು , ನಮ್ಮ ತುರುವೇಕೆರೆ ತಾಲೂಕಿನಲ್ಲೂ ಸಹ ಅನೇಕ ಹೋರಾಟಗಳ ಮುಂದಾಳತ್ವವನ್ನು ವಹಿಸಿ ಹೋರಾಟಕ್ಕೆ ಮುನ್ನುಡಿ ಬರೆದ ಏಕೈಕ ವ್ಯಕ್ತಿ ಬಂದ ಕುಂಟೆ ನಾಗರಾಜಯ್ಯ ಇವರೊಂದಿಗೆ ನಾನು ಸಹ ಅನೇಕ ಹೋರಾಟದಲ್ಲಿ ಪಾಲ್ಗೊಂಡಿದ್ದೇನೆ ಎಂದರು.

    ಜೊತೆಗೆ ನಾಗರಾಜಯ್ಯನವರಲ್ಲಿ ಪ್ರೌಢಶಾಲಾ ವಿದ್ಯಾರ್ಥಿಯಾಗಿದ್ದಾಗಲೇ ಅವರು ಪಟ್ಟನಾಯಕನಹಳ್ಳಿಯಲ್ಲಿರುವ ಒಂದು ಮಠದ ಸ್ವಾಮೀಜಿಯ ವಿರುದ್ಧ ತಿರುಗಿ ಬಿದ್ದ ಸನ್ನಿವೇಶವು ಕೂಡ ಇದೆ ಅನೇಕ ವಿದ್ಯಾರ್ಥಿಗಳಿಗೆ ಮತ್ತು  ದೊಣ್ಣೆಯಿಂದ ಭಾರಿಸಿದ ಸ್ವಾಮೀಜಿಯ ವಿರುದ್ಧ ಪ್ರತಿಭಟನೆಯ ಸಂಕೇತಾರ್ಥವಾಗಿ ತಲೆ ಮೇಲೆ ಟ್ರೆಂಕುಗಳನ್ನು ಹೊತ್ತು ಪಟ್ಟನಾಯಕನಹಳ್ಳಿ ಬೀದಿಗಳಲ್ಲಿ ಧಿಕ್ಕಾರ ಕೂಗುತ್ತಾ ಮೆರವಣಿಗೆ ನಡೆಸಿ ಹೋರಾಟ ರೂಪಿಸಿದವರು ಜೊತೆಗೆ ವಿದ್ಯಾರ್ಥಿಯ ದಿನಗಳ ಪ್ರತಿಭಟನೆಗೆ ಮುಂದಿನ ದಿನಗಳಲ್ಲಿ ಸ್ಪಷ್ಟ ಬೌದ್ಧಿಕ ಆಕಾರ ದೊರೆತದ್ದು ಪ್ರೊ,.ಬಿ.ಕೆ.ಜೊತೆಗಿನ ಒಡನಾಟದೊಂದಿಗೆ ಇದ್ದ ಫಲವಾಗಿ ದಲಿತ ಚಳುವಳಿ ಆರಂಭವಾಯಿತು, ಒಟ್ಟಾರೆ ಬಂದ ಕುಂಟೆ ನಾಗರಾಜಯ್ಯ ಅವರು ದಬ್ಬಾಳಿಕೆ ದೌರ್ಜನ್ಯ ವಿರುದ್ಧ ಹೋರಾಡುತ್ತಾ ದೀನ ದಲಿತರ ಪರವಾಗಿ ಸಾತ್ವಿಕ ಪ್ರತಿಭಟಕರಾಗಿದ್ದರು ಎಂದರು.

    ಬಳಿಕ ಸೋಮೇನಹಳ್ಳಿ ಜಗದೀಶ್ ಮಾತನಾಡಿ, ಬಂದ ಕುಂಟೆ ನಾಗರಾಜಯ್ಯರವರು 1974ರಲ್ಲಿ ರೂಪಿಸಲಾದ ದಲೇಖದಿಂದ ಹಿಡಿದು ದೇವರಾಯನ ದುರ್ಗದ ನಾಮದ ಚಿಲುಮೆಯಲ್ಲಿ ನಡೆದ ರಾಜ್ಯಮಟ್ಟದ ಮೊಟ್ಟ ಮೊದಲ ದಲಿತ ಕಾರ್ಯಕರ್ತರ ತರಬೇತಿ ಶಿಬಿರ, ಹಾಡ್ಯದ ಸೋಮಶೇಖರ್ ನಿರುಪಾಲು, ದುರ್ಮರಣ, ಬಂಡಾಯ, ಸಾಹಿತ್ಯ ಸಂಘಟನೆಯ ಪ್ರಥಮ ಸಮಾವೇಶ, ದಸಂಸದ ಭೂ ಹೋರಾಟಗಳು, ಜನಕಲಾ ಮೇಳ, ದಸಂಸ ಮುಖವಾಣಿಯಾದ ಪಂಚಮ ಮತ್ತು ಸುದ್ದಿ ಸಂಗಾತಿ ಪತ್ರಿಕೆಗಳ ಪ್ರಕಟಣೆ, ದಸಂಸದ ರಾಜಕೀಯ ಪ್ರವೇಶ, ದಲಿತ ಚಳುವಳಿಯ ವಿಘಟನೆ, ಮಂಡಲ್ ವರದಿ ಹೋರಾಟ, ಬ್ಯಾಕ್ಲ್ಯಾಕ್ ಹುದ್ದೆ ಬರ್ತಿ ಹೋರಾಟ, ಬಹುಜನ ಸಮಾಜ ಪಕ್ಷ ಒಳ ಮೀಸಲಾತಿ ವರ್ಗಿಕರಣ ಚಳವಳಿ, ದಲಿತ ಚಳುವಳಿಯಲ್ಲಿ ಮಿಂಚಿನಂತೆ ಹೊಳೆದು ನೆನಪು ಉಳಿಸಿ ಹೋದ ಚೇಳೂರು ವೆಂಕಟೇಶ್ ರವರ ಮುಂತಾದ ಅನೇಕ ಪ್ರಮುಖ ಸಂಗತಿಗಳಲ್ಲಿ ಬಂದ ಕುಂಟೆ ನಾಗರಾಜಯ್ಯ ದಲಿತ ಚಳುವಳಿಯ ಕಾಲ ಯಾನದ ಸಾಕ್ಷಿಪ್ರಜ್ಞೆಯಾಗಿದ್ಧರು ಎಂದು ನೆನಪಿಸಿದರು.

    ಇದೇ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತುರುವೇಕೆರೆ ತಾಲೂಕು ಸಂಚಾಲಕ ಕೃಷ್ಣ ಸ್ವಾಮಿ ಮಾತನಾಡಿ, ದಲಿತ ಚಳುವಳಿಯ ಮಾತೃಸ್ಥಾನದಲ್ಲಿರುವ ಮತ್ತು ಸರಳ ಸಜ್ಜನಿಕೆಯ ಪ್ರಾಮಾಣಿಕ ಹೋರಾಟಗಾರರಾದ ನಮ್ಮ ಬಂಧ ಕುಂಟೆ ನಾಗರಾಜಯ್ಯ ಇಂದು ನಮ್ಮನ್ನು ಅಗಲಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ನಾವು ಸಹ ಮುಂದಿನ ದಿನಗಳಲ್ಲಿ ಅವರಂತೆ ಹೋರಾಟ ಮುಂದುವರಿಸಿ ದೀನ ದಲಿತರ ಪರವಾಗಿ ಉತ್ತಮವಾದ ಹೋರಾಟ ಮಾಡಿ ನ್ಯಾಯ ದೊರಕಿಸಿ ಕೊಡುವಲ್ಲಿ ಹೆಜ್ಜೆ ಇಡುತ್ತೇವೆ ಎಂದರು.

    ಇನ್ನು ನುಡಿ ನಮನ ಕಾರ್ಯಕ್ರಮದಲ್ಲಿ ತಾಲೂಕಿನ ಹಿರಿಯ ದಲಿತ ಮುಖಂಡರುಗಳು ವಿವಿಧಪರ ಸಂಘಟನೆಗಳ ಮುಖಂಡರುಗಳು ಹಲವರು ಉಪಸ್ಥಿತರಿದ್ದರು.

    ವರದಿ: ಮಂಜುನಾಥ್ ಕೆ.ಎ., ತುರುವೇಕೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಕುರಿ ಮೇಕೆ ಸಾಕಾಣಿಕೆ ತರಬೇತಿ

    January 7, 2026

    ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್

    January 6, 2026

    ತುರುವೇಕೆರೆ: ಅಯ್ಯಪ್ಪ ಮಾಲಾಧಾರಿಗಳ ಯಾತ್ರೆ, ಜ.7ರಿಂದ 10ರವರೆಗೆ ಹಲವು ಕಾರ್ಯಕ್ರಮಗಳು

    January 5, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ಚಿಕ್ಕಮಗಳೂರು: ಹಣದ ಆಸೆಗಾಗಿ ಸ್ವಂತ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಅಮಾನವೀಯ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.…

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ

    January 8, 2026

    ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ

    January 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.