nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026
    Facebook Twitter Instagram
    ಟ್ರೆಂಡಿಂಗ್
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    • ಜನರ ತೆರಿಗೆ ಹಣ ಜಾಹೀರಾತಿಗೆ ಪೋಲು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ
    • ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!
    • ಜೇನು ಕೃಷಿ: ಕಡಿಮೆ ಖರ್ಚಿನಲ್ಲಿ ಲಾಭದಾಯಕ ಉದ್ಯೋಗ ಆರಂಭಿಸುವುದು ಹೇಗೆ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಂಡೀಪುರದಲ್ಲಿರುವ ರಾಜ್ಯದ ಮೊಟ್ಟ ಮೊದಲ ‘ಪ್ರಾಜೆಕ್ಟ್ ಟೈಗರ್’ ಯೋಜನೆಗೆ 50 ವರ್ಷ
    ರಾಜ್ಯ ಸುದ್ದಿ November 17, 2022

    ಬಂಡೀಪುರದಲ್ಲಿರುವ ರಾಜ್ಯದ ಮೊಟ್ಟ ಮೊದಲ ‘ಪ್ರಾಜೆಕ್ಟ್ ಟೈಗರ್’ ಯೋಜನೆಗೆ 50 ವರ್ಷ

    By adminNovember 17, 2022No Comments2 Mins Read
    bandipura

    ಈ ವರ್ಷ ಬಂಡೀಪುರ ಹುಲಿ ಮೀಸಲಿನ ರಾಜ್ಯದ ಮೊಟ್ಟ ಮೊದಲ ‘ಪ್ರಾಜೆಕ್ಟ್ ಟೈಗರ್’ಗೆ ಸುರ್ವಣ ಮಹೋತ್ಸವದ ಸಂಭ್ರಮವಾಗಿದೆ. ಈ 50 ವರ್ಷಗಳಲ್ಲಿ, ಈ ಯೋಜನೆಯು ಇಡೀ ದೇಶಕ್ಕೆ ಮಾದರಿಯಾಗಿ ವಿಕಸನಗೊಂಡಿದೆ.
    ೧೯೭೨ರಲ್ಲಿ ಹುಲಿಗಳ ಸಂತತಿಯನ್ನು ಸಂರಕ್ಷಿಸಲು ದೇಶದಾದ್ಯಂತ ಹುಲಿ ಮೀಸಲು ಪ್ರದೇಶಗಳಲ್ಲಿ ‘ಪ್ರಾಜೆಕ್ಟ್ ಟೈಗರ್’ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ನವೆಂಬರ್ ೧೬, ೧೯೭೩ರಂದು ಕರ್ನಾಟಕದ ಅಂದಿನ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಬಂಡೀಪುರದಲ್ಲಿ ಈ ‘ಪ್ರಾಜೆಕ್ಟ್ ಟೈಗರ್’ ಗೆ ಚಾಲನೆ ನೀಡಿದ್ದರು.

    ಈ ಯೋಜನೆಯ ಉದ್ಘಾಟನೆಯ ಸಮಯದಲ್ಲಿ ಬಂಡೀಪುರದಲ್ಲಿ ಕೇವಲ ೧೨ ಹುಲಿಗಳಿದ್ದವು. ೨೦೨೦ರಲ್ಲಿ ನಡೆಸಿದಂತಹ ಹುಲಿಗಳ ಗಣತಿಯ ಪ್ರಕಾರ ಪ್ರಸ್ತುತ ಬಂಡೀಪುರ ಇಡೀ ದೇಶದಲ್ಲಿಯೇ ಎರಡನೇ ಅತೀ ಹೆಚ್ಚಿನ, ಅಂದರೆ ೧೪೩ ಹುಲಿಗಳು ಹಾಗೂ ೨೦೦ ಚಿರತೆಗಳನ್ನು ಹೊಂದಿರುವ ಮೀಸಲು ಪ್ರದೇಶವಾಗಿ ರೂಪುಗೊಂಡಿದೆ.


    Provided by
    Provided by

    ಬಂಡೀಪುರದ ‘ಪ್ರಾಜೆಕ್ಟ್ ಟೈಗರ್’ನ ನಿರ್ದೇಶಕ ಡಾ. ರಮೇಶ್ ಕುಮಾರ್ ಅವರ ಪ್ರಕಾರ, ಬಂಡೀಪುರ ದೇಶದಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯ ಆನೆಗಳನ್ನು (೩,೦೪೬) ಹೊಂದಿವೆ. ಜೊತೆಗೆ ಇಲ್ಲಿ ಜಿಂಕೆಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಇತರೆ ಪ್ರಾಣಿಗಳು ಸೇರಿದಂತೆ ೨೬೦ಕ್ಕೂ ಹೆಚ್ಚಿನ ವಿವಿಧ ತಳಿಗಳ ಪಕ್ಷಿಗಳೂ ಇವೆ.
    ಬಂಡೀಪುರ ಹುಲಿ ಮೀಸಲು ಪ್ರದೇಶ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ಹಾಗೂ ಹೆಚ್.ಡಿ.ಕೋಟೆ ತಾಲ್ಲೂಕುಗಳನ್ನೂ ವ್ಯಾಪಿಸುವಂತೆ ಒಟ್ಟು ೧,೦೩೬ ಚದರ ಕಿ.ಮೀ.ಗಳ ವ್ಯಾಪ್ತಿಯನ್ನು ಹೊಂದಿದೆ. ಮೈಸೂರು ಜಿಲ್ಲೆ, ತಮಿಳುನಾಡಿನ ಮುದುಮಲೈ ಹಾಗೂ ಕೇರಳದ ವಯನಾಡ್ ಹುಲಿ ಮೀಸಲು ಪ್ರದೇಶಗಳಿಂದ ಕೂಡಿರುವ ನಾಗರಹೊಳೆ ಹುಲಿ ಮೀಸಲು ಪ್ರದೇಶಕ್ಕೆ ಹೊಂದಿಕೊಂಡಂತಿದೆ.

    ಫೆಬ್ರವರಿ ೧೯, ೧೯೪೧ರಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ವೇಣುಗೋಪಾಲ ವನ್ಯಜೀವನಧಾಮ ಹಾಗೂ ಸುತ್ತಲಿನ ಇತರೆ ಅರಣ್ಯಗಳನ್ನು ವಿಲೀನಗೊಳಿಸಲಾಯಿತು. ೧೯೭೫ರಲ್ಲಿ ಈ ಭಾಗದ ಸುತ್ತಮುತ್ತಲಿನಲ್ಲಿರುವ ಇನ್ನೂ ಹಲವಾರು ಮೀಸಲು ಅರಣ್ಯ ಪ್ರದೇಶಗಳನ್ನು ಸೇರ್ಪಡೆಗೊಳಿಸಿ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಎಂದು ಹೆಸರಿಸಲಾಯಿತು. ನಂತರ ಇದರ ಪ್ರದೇಶ ವ್ಯಾಪ್ತಿ ೮೭೪.೨೦ ಚದರ ಕಿ.ಮೀ.ಗಳಿಗೆ ವಿಸ್ತಾರವಾಯಿತು.

    ಪರಿಸರ-ಪ್ರವಾಸೋದ್ಯಮದ ತಾನ ಎಂದೂ ಗುರುತಿಸಿಕೊಂಡಿರುವ ಬಂಡೀಪುರ, ಪ್ರಸ್ತುತ ಸಫಾರಿಗಳು ಹಾಗೂ ಅತಿಥಿ ಗೃಹಗಳ ಮೂಲಕ ವಾರ್ಷಿಕ ರೂ. ೧೦ ರಿಂದ ರೂ.೧೨ ಕೋಟಿ ಆದಾಯ ಗಳಿಸುತ್ತಿದೆ.

    ಬಂಡೀಪುರ ಅರಣ್ಯ ಪ್ರದೇಶ ಲಂಟಾನ ಸಸ್ಯಗಳಿಂದ ಆವೃತ್ತವಾಗಿದ್ದು, ಈವರೆಗೆ ಎಂಜಿಎನ್‌ ಆರ್‌ ಇಜಿಎ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ) ಹಾಗೂ ವಿವಿಧ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಗಳ ಸಹಾಯದೊಂದಿಗೆ ೮೦೦ ಹೆಕ್ಟೇರ್‌ ಗಳಷ್ಟು ಪ್ರದೇಶದಲ್ಲಿ ಇವುಗಳನ್ನು ತೆರವುಗೊಳಿಸಲಾಗಿದ್ದರೂ ಸಹ ಶೇ.60ರಷ್ಟು ಅರಣ್ಯ ಕಳೆಗಳಿಂದ ಕೂಡಿ ಸಮಸ್ಯೆ ಎದುರಿಸುತ್ತಿದೆ.

    ಮಾನವ-ಪ್ರಾಣಿಗಳ ನಡುವಿನ ಸಂಘರ್ಷ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯಿರುವ ೧೫೬ ಗ್ರಾಮಗಳಿರುವ ಈ ಹುಲಿ ಮೀಸಲು ಪ್ರದೇಶದಲ್ಲಿ ಎದುರಾಗುತ್ತಿರುವ ಮತ್ತೊಂದು ಸವಾಲಾಗಿದೆ. ಜೊತೆಗೆ ಆಗಾಗ ಕಾಡ್ಗಿಚ್ಚು ಹಾಗೂ ಪ್ರಾಣಿಗಳ ಕಾನೂನುಬಾಹಿರ ಕಳ್ಳ ಸಾಗಣೆಗಳಂತಹ ಪ್ರಕರಣಗಳೂ ವರದಿಯಾಗುತ್ತಿರುತ್ತವೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ, ಮಾರ್ಚ್ 18 ರಿಂದ SSLC ಪರೀಕ್ಷೆ ಪ್ರಾರಂಭ

    February 17, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ

    February 18, 2026

    ಕಾರವಾರ: ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಆಯೋಜಿಸಿರುವ…

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ

    February 17, 2026

    ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ

    February 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.