ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರಿದೆ. ದಿನದಿಂದ ದಿನಕ್ಕೆ ಪ್ರಚಾರದ ಅಬ್ಬರ ಜೋರಾಗುತ್ತಿದೆ. ಈ ನಡುವೆ ನಾಮಪತ್ರಗಳ ಸ್ವೀಕೃತಿ ಕಾರ್ಯವು ಕೂಡ ಮುಗಿದು ಹೋಗಿದೆ. ಇದೀಗ ಅಚ್ಚರಿ ಎಂಬಂತೆ ಎಸ್ ಎಂ ಕೃಷ್ಣ ಹಾಗೂ ರಾಹುಲ್ ಗಾಂಧಿ ಅವರು ಬೆಂಗಳೂರಿಂದ ಕಣಕ್ಕಿಳಿದಿದ್ದಾರೆ ಎಂಬ ಸುದ್ದಿ ಬಂದಿದೆ.
ಚುನಾವಣೆಯಲ್ಲಿ ಎದರಾಳಿಯನ್ನು ಮಣಿಸಲು ಹಲವು ತಂತ್ರಗಳು ನಡೆಯುತ್ತವೆ. ಅದರಲ್ಲಿ ಪ್ರಮುಖವಾದುದು ಎಂದರೆ ಎದುರಾಳಿಯ ಹೆಸರಿನ ಮತ್ತೊಬ್ಬ ಕ್ಯಾಂಡಿಡೇಟ್ ನನ್ನು ಅಕಾಡಕ್ಕೆ ಇಳಿಸುವುದು. ಹೌದು, ಕೆಲವು ದಿನಗಳ ಹಿಂದಷ್ಟೇ ಬೆಂಗಳೂರಿನ ಗ್ರಾಮಾಂತರದಿಂದ ಬಿಜೆಪಿ ಅಭ್ಯರ್ಥಿ ಸಿ ಎನ್ ಮಂಜುನಾಥ್ ವಿರುದ್ಧ ಅಪ್ಪ, ಅಮ್ಮ, ಊರು, ಜಿಲ್ಲೆ ಎಲ್ಲದೂ ಒಂದೇ ಆಗಿದ್ದ ಮತ್ತೊಬ್ಬ ಸಿಎನ್ ಮಂಜುನಾಥ್ ನಾಮಪತ್ರ ಸಲ್ಲಿಸಿದ್ದರು. ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಅವರ ಅಣ್ಣನ ಹೆಸರಿನಂತೆ ಎಚ್ ಡಿ ರೇವಣ್ಣ ಎಂಬುವವರೂ ನಾಮಪತ್ರ ಸಲ್ಲಿಸಿದ್ದರು. ಇದೀಗ ಈ ಬೆನ್ನಲ್ಲೇ ರಾಜಕೀಯ ಪಕ್ಷಗಳ ನಾಯಕರ ಹೆಸರು ಇರುವ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದು ಗಮನ ಸೆಳೆದಿದ್ದಾರೆ.
ಬೆಂಗಳೂರು ಕೇಂದ್ರದಲ್ಲಿ ರಾಹುಲ್ ಗಾಂಧಿ ಎನ್. ಹಾಗೂ ಎಸ್.ಎಂ. ಕೃಷ್ಣ ಹೆಸರಿನ ಪಕ್ಷೇತರ ಸದಸ್ಯರು ನಾಮಪತ್ರ ಸಲ್ಲಿಸಿದ್ದಾರೆ. ಕೊನೇ ಗಳಿಗೆಯಲ್ಲಿ ಈ ಅಚ್ಚರಿ ವ್ಯಕ್ತಿಗಳು ಕಣಕ್ಕಿಳಿಯುತ್ತಿರುವುದು ಬಾರೀ ವಿಶೇಷ ಎನಿಸಿದೆ. ಅಲ್ಲದೆ ಪ್ರಮುಖ ರಾಜಕೀಯ ನಾಯಕರ ಹೆಸರನ್ನೇ ಅವರಿಟ್ಟುಕೊಂಡಿರುವುದು ಅಚ್ಚರಿ ಎನಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296