nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 4, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
    • ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ
    • ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ
    • ಬಳ್ಳಾರಿ: ಗ್ರಾಮ ಒನ್ ಫ್ರಾಂಚೈಸಿ ನೇಮಕಾತಿಗೆ ಅರ್ಜಿ ಆಹ್ವಾನ
    • ತಿಪಟೂರು ಬಿಜೆಪಿ ಟಿಕೆಟ್ ವಿಚಾರ ಪ್ರಸ್ತಾಪ ಅಪ್ರಸ್ತುತ: ಶ್ರೀ ರುದ್ರಮುನಿಸ್ವಾಮೀಜಿ
    • ವಿದೇಶದಲ್ಲಿ ಉನ್ನತ ವ್ಯಾಸಂಗ: ಹೊಳೆನರಸೀಪುರದಲ್ಲಿ ‘ವಿದೇಶದಲ್ಲಿ ಅಧ್ಯಯನ 2026’ ಕಾರ್ಯಕ್ರಮದ ಪ್ರಚಾರಕ್ಕೆ ಚಾಲನೆ
    • ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಕಬ್ಬನ್‌ಪಾರ್ಕ್: 34ಕೋಟಿ ವೆಚ್ಚದ ಅಭಿವೃದ್ಧಿ ಕೆಲಸ ಬಹುತೇಕ ಪೂರ್ಣ
    ರಾಜ್ಯ ಸುದ್ದಿ September 30, 2022

    ಬೆಂಗಳೂರು ಕಬ್ಬನ್‌ಪಾರ್ಕ್: 34ಕೋಟಿ ವೆಚ್ಚದ ಅಭಿವೃದ್ಧಿ ಕೆಲಸ ಬಹುತೇಕ ಪೂರ್ಣ

    By adminSeptember 30, 2022No Comments2 Mins Read
    kaban park

    ಬೆಂಗಳೂರು ಸೆಪ್ಟಂಬರ್ 30: ಉದ್ಯಾನ ನಗರಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ ಮುಂದಿನ ನವೆಂಬರ್ ತಿಂಗಳಲ್ಲಿ ಸಾರ್ವಜನಿಕರಿಗೆ ಹೊಸ ಅನುಭವ ನೀಡಲು ತಯಾರಾಗಿದೆ.
    ಕಬ್ಬನ್ ಉದ್ಯಾನದ ಸುಮಾರು 100ಎಕರೆ ವಿಸ್ತೀರ್ಣವನ್ನು ಅಭಿವೃದ್ಧಿಪಡಿಸಲು ಈ ಹಿಂದೆಯೆ ಯೋಜಿಸಲಾಗಿತ್ತು. ಅದಕ್ಕಾಗಿ ಒಟ್ಟು ಸುಮಾರು 34 ಕೋಟಿ ರು ವ್ಯಯಿಸಿ ಅನೇಕ ಕಾಮಗಾರಿ ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲ ಕಾಮಗಾರಿ ಯೋಜನೆಗಳು ಅಂತಿಮ ಹಂತಕ್ಕೆ ಬಂದಿದ್ದು, ನವೆಂಬರ್‌ನಲ್ಲಿ ಹೊಸ ರೂಪದಲ್ಲಿ ಉದ್ಯಾನವು ಎಲ್ಲರನ್ನು ಸೆಳೆಯಲಿದೆ.

    ಉದ್ಯಾನದ ಹಸಿರನ್ನು ಹೆಚ್ಚಿಸಲು, ನಿತ್ಯ ವಾಯುವಿಹಾರ ಇನ್ನಿತರ ಕಾರಣಗಳಿಗೆ ಉದ್ಯಾನಕ್ಕೆ ಬರುವ ಜನರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ನೂರು ಎಕರೆ ಪ್ರದೇಶದ ಬಳಕೆ ಮಾಡಿಕೊಳ್ಳಲಾಗಿದೆ. ಉದ್ಯಾನ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ನಗರದಲ್ಲಿರುವ ಅತ್ಯಂತ ಹಳೆಯ ಸುಮಾರು 9,000 ಕ್ಕೂ ಅಧಿಕ ಮರಗಳನ್ನು ಮ್ಯಾಪಿಂಗ್ ಮತ್ತು ಜಿಯೋ ಟ್ಯಾಗ್ ಮೂಲಕ ಗುರುತಿಸುವ ಅಭಿಯಾನ ಕೈಗೊಂಡಿದ್ದಾರೆ.

    ಈಗಾಗಲೇ ಕಬ್ಬನ್ ಉದ್ಯಾನದ ಹಸಿರನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕಾಯೋನ್ಮುಖರಾಗಿರುವ ಸಿಬ್ಬಂದಿ 3,000 ಸಸಿಗಳನ್ನು ನೆಡುವ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್ ಪಾರ್ಕ್) ಎಚ್.ಟಿ.ಬಾಲಕೃಷ್ಣ ಅವರು ಮಾಹಿತಿ ನೀಡಿದ್ದಾರೆ.

    ಈ ಎಲ್ಲ ಅಭಿವೃದ್ಧಿ ಕೆಲಸಗಳು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಉದ್ಯಾನದಲ್ಲಿ ಹೊಸ ಜಾಗಿಂಗ್ ಟ್ರ್ಯಾಕ್, ನವೀಕರಿಸಿದ ಫುಟ್‌ಪಾತ್‌ಗಳು ಹಾಗೂ ನೀರು ಕಾರಂಜಿಗಳು, ಉತ್ತಮ ಒಳರಸ್ತೆಗಳು ಮತ್ತು ಲ್ಯಾಂಡ್‌ಸ್ಕೇಪಿಂಗ್ ಕಾರ್ಯ ಪ್ರಗತಿಯಲ್ಲಿದೆ. ಇವೆಲ್ಲವು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿವೆ. ನವೆಂಬರ್‌ಗೆ ಸಾರ್ವಜನಿಕರಗೆ ಮುಕ್ತವಾಗಬಹದು. ಒಟ್ಟು ಯೋಜನೆಯನ್ನು ಎರಡು ಹಂತದಲ್ಲಿ ಆರಂಭಿಸಲಾಗಿತ್ತು ಎಂದರು.

    ಉದ್ದೇಶಿತ ಉದ್ಯಾನದ ವಿಶಾಲ ಪ್ರದೇಶದಲ್ಲಿ ಕಮಲದ ಕೊಳ, ಕರಗದ ಕುಂಟೆ ಕೊಳ ಮತ್ತು ಬೋಟಿಂಗ್ ಪಾಯಿಂಟ್, ಉದ್ಯಾನದ ಸುತ್ತಲಿನ ಗ್ರಿಲ್ ಕಾಮಗಾರಿ, ಬೆಂಕಿಗೆ ತುತ್ತಾಗುವ ಒಣಗಿದ ಬಿದಿರು ಗುಂಪು ತೆಗೆದು ಹೊಸ ಬಿದಿರು ನೆಡುವ ಕೆಲಸಗಳು ಪೂರ್ಣಗೊಂಡಿವೆ. ಎರಡು ವರ್ಷಗಳ ಹಿಂದೆಯೇ ಕಾಮಗಾರಿ ಆರಂಭವಾಗಿದ್ದರೂ ಸಹ ಉದ್ಯಾನಕ್ಕೆ ಆಗಮಿಸುವ ವಾಕರ್ಸ್ ಅಸೋಸಿಯೇಷನ್ ​​ಸೇರಿದಂತೆ ಐದು ಗುಂಪುಗಳು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ವಿವರವಾದ ಯೋಜನಾ ವರದಿ ಅನ್ನು ಆರಂಭಿಕ ಹಂತದಲ್ಲಿ ಬದಲಿಸಬೇಕಾದ ಅನಿವಾರ್ಯತೆ ಎದುರಾಯಿತು ಎಂದು ಅವರು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

    September 3, 2026

    ಚುನಾವಣೆಗೆ 2 ವರ್ಷ ಬಾಕಿ ಇದೆ, ಎಸ್ ಐಆರ್ ಪ್ರಕ್ರಿಯೆ ಮುಗಿಸಲು ಆತುರ ಏಕೆ?: ನಟ ಪ್ರಕಾಶ್ ರಾಜ್ ಪ್ರಶ್ನೆ

    September 1, 2026

    ರೈತರಿಗೆ ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಸ್‌ ಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಜಿ. ಪರಮೇಶ್ವರ್ ಎಚ್ಚರಿಕೆ

    September 1, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶ್ರೀ ಕರಿಯಮ್ಮ ದೇವಿ–ಶ್ರೀ ಬನಶಂಕರಿ ದೇವಿಯ ನೂತನ ದೇವಾಲಯ ಪ್ರವೇಶ ಮತ್ತು ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ

    September 5, 2026

    ಅರಸೀಕೆರೆ: ತಾಲ್ಲೂಕಿನ ಗಂಡಸಿ ಹೋಬಳಿಯ ಮುದುಡಿ ಬಿ ತಾಂಡ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕರಿಯಮ್ಮ ದೇವಿ ಹಾಗೂ ಶ್ರೀ ಬನಶಂಕರಿ…

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ತುಮಕೂರು: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 4, 2026

    ತುಮಕೂರು:  ಶಿಕ್ಷಕ ಪ್ರಶಸ್ತಿ ಆಯ್ಕೆ ಪಟ್ಟಿ ಪ್ರಕಟ

    September 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.