nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    • ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
    • ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಕಬ್ಬನ್‌ಪಾರ್ಕ್: 34ಕೋಟಿ ವೆಚ್ಚದ ಅಭಿವೃದ್ಧಿ ಕೆಲಸ ಬಹುತೇಕ ಪೂರ್ಣ
    ರಾಜ್ಯ ಸುದ್ದಿ September 30, 2022

    ಬೆಂಗಳೂರು ಕಬ್ಬನ್‌ಪಾರ್ಕ್: 34ಕೋಟಿ ವೆಚ್ಚದ ಅಭಿವೃದ್ಧಿ ಕೆಲಸ ಬಹುತೇಕ ಪೂರ್ಣ

    By adminSeptember 30, 2022No Comments2 Mins Read
    kaban park

    ಬೆಂಗಳೂರು ಸೆಪ್ಟಂಬರ್ 30: ಉದ್ಯಾನ ನಗರಿ ಎಂದು ಕರೆಸಿಕೊಳ್ಳುವ ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ ಮುಂದಿನ ನವೆಂಬರ್ ತಿಂಗಳಲ್ಲಿ ಸಾರ್ವಜನಿಕರಿಗೆ ಹೊಸ ಅನುಭವ ನೀಡಲು ತಯಾರಾಗಿದೆ.
    ಕಬ್ಬನ್ ಉದ್ಯಾನದ ಸುಮಾರು 100ಎಕರೆ ವಿಸ್ತೀರ್ಣವನ್ನು ಅಭಿವೃದ್ಧಿಪಡಿಸಲು ಈ ಹಿಂದೆಯೆ ಯೋಜಿಸಲಾಗಿತ್ತು. ಅದಕ್ಕಾಗಿ ಒಟ್ಟು ಸುಮಾರು 34 ಕೋಟಿ ರು ವ್ಯಯಿಸಿ ಅನೇಕ ಕಾಮಗಾರಿ ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲ ಕಾಮಗಾರಿ ಯೋಜನೆಗಳು ಅಂತಿಮ ಹಂತಕ್ಕೆ ಬಂದಿದ್ದು, ನವೆಂಬರ್‌ನಲ್ಲಿ ಹೊಸ ರೂಪದಲ್ಲಿ ಉದ್ಯಾನವು ಎಲ್ಲರನ್ನು ಸೆಳೆಯಲಿದೆ.

    ಉದ್ಯಾನದ ಹಸಿರನ್ನು ಹೆಚ್ಚಿಸಲು, ನಿತ್ಯ ವಾಯುವಿಹಾರ ಇನ್ನಿತರ ಕಾರಣಗಳಿಗೆ ಉದ್ಯಾನಕ್ಕೆ ಬರುವ ಜನರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ನೂರು ಎಕರೆ ಪ್ರದೇಶದ ಬಳಕೆ ಮಾಡಿಕೊಳ್ಳಲಾಗಿದೆ. ಉದ್ಯಾನ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ನಗರದಲ್ಲಿರುವ ಅತ್ಯಂತ ಹಳೆಯ ಸುಮಾರು 9,000 ಕ್ಕೂ ಅಧಿಕ ಮರಗಳನ್ನು ಮ್ಯಾಪಿಂಗ್ ಮತ್ತು ಜಿಯೋ ಟ್ಯಾಗ್ ಮೂಲಕ ಗುರುತಿಸುವ ಅಭಿಯಾನ ಕೈಗೊಂಡಿದ್ದಾರೆ.


    Provided by
    Provided by

    ಈಗಾಗಲೇ ಕಬ್ಬನ್ ಉದ್ಯಾನದ ಹಸಿರನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಕಾಯೋನ್ಮುಖರಾಗಿರುವ ಸಿಬ್ಬಂದಿ 3,000 ಸಸಿಗಳನ್ನು ನೆಡುವ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾರೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ (ಕಬ್ಬನ್ ಪಾರ್ಕ್) ಎಚ್.ಟಿ.ಬಾಲಕೃಷ್ಣ ಅವರು ಮಾಹಿತಿ ನೀಡಿದ್ದಾರೆ.

    ಈ ಎಲ್ಲ ಅಭಿವೃದ್ಧಿ ಕೆಲಸಗಳು ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ. ಉದ್ಯಾನದಲ್ಲಿ ಹೊಸ ಜಾಗಿಂಗ್ ಟ್ರ್ಯಾಕ್, ನವೀಕರಿಸಿದ ಫುಟ್‌ಪಾತ್‌ಗಳು ಹಾಗೂ ನೀರು ಕಾರಂಜಿಗಳು, ಉತ್ತಮ ಒಳರಸ್ತೆಗಳು ಮತ್ತು ಲ್ಯಾಂಡ್‌ಸ್ಕೇಪಿಂಗ್ ಕಾರ್ಯ ಪ್ರಗತಿಯಲ್ಲಿದೆ. ಇವೆಲ್ಲವು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳ್ಳಲಿವೆ. ನವೆಂಬರ್‌ಗೆ ಸಾರ್ವಜನಿಕರಗೆ ಮುಕ್ತವಾಗಬಹದು. ಒಟ್ಟು ಯೋಜನೆಯನ್ನು ಎರಡು ಹಂತದಲ್ಲಿ ಆರಂಭಿಸಲಾಗಿತ್ತು ಎಂದರು.

    ಉದ್ದೇಶಿತ ಉದ್ಯಾನದ ವಿಶಾಲ ಪ್ರದೇಶದಲ್ಲಿ ಕಮಲದ ಕೊಳ, ಕರಗದ ಕುಂಟೆ ಕೊಳ ಮತ್ತು ಬೋಟಿಂಗ್ ಪಾಯಿಂಟ್, ಉದ್ಯಾನದ ಸುತ್ತಲಿನ ಗ್ರಿಲ್ ಕಾಮಗಾರಿ, ಬೆಂಕಿಗೆ ತುತ್ತಾಗುವ ಒಣಗಿದ ಬಿದಿರು ಗುಂಪು ತೆಗೆದು ಹೊಸ ಬಿದಿರು ನೆಡುವ ಕೆಲಸಗಳು ಪೂರ್ಣಗೊಂಡಿವೆ. ಎರಡು ವರ್ಷಗಳ ಹಿಂದೆಯೇ ಕಾಮಗಾರಿ ಆರಂಭವಾಗಿದ್ದರೂ ಸಹ ಉದ್ಯಾನಕ್ಕೆ ಆಗಮಿಸುವ ವಾಕರ್ಸ್ ಅಸೋಸಿಯೇಷನ್ ​​ಸೇರಿದಂತೆ ಐದು ಗುಂಪುಗಳು ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ವಿವರವಾದ ಯೋಜನಾ ವರದಿ ಅನ್ನು ಆರಂಭಿಕ ಹಂತದಲ್ಲಿ ಬದಲಿಸಬೇಕಾದ ಅನಿವಾರ್ಯತೆ ಎದುರಾಯಿತು ಎಂದು ಅವರು ತಿಳಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ

    May 26, 2026

    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತಿ ಅಂಚಿನಲ್ಲಿರುವ ಮುಖ್ಯೋಪಾಧ್ಯಾಯ ಅರೆಸ್ಟ್

    May 25, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ

    May 27, 2026

    ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ 58 ತಾಂಡಾಗಳ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ (SSLC), ಪಿಯುಸಿ (PUC), ಪದವಿ ಹಾಗೂ ಸ್ನಾತಕೋತ್ತರ ಪದವಿ…

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.