nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
    • ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
    • ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    • ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
    • ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
    • ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
    • ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಲ್ಲಿ ಪ್ರವಾಹ: 7,700 ಮನೆಗೆ ಹಾನಿ, 397 ಕಿಮೀ. ರಸ್ತೆ ಹಾನಿಯಿಂದ 337 ಕೋಟಿ ನಷ್ಟ: ಬಿಬಿಎಂಪಿ
    ರಾಜ್ಯ ಸುದ್ದಿ September 26, 2022

    ಬೆಂಗಳೂರಲ್ಲಿ ಪ್ರವಾಹ: 7,700 ಮನೆಗೆ ಹಾನಿ, 397 ಕಿಮೀ. ರಸ್ತೆ ಹಾನಿಯಿಂದ 337 ಕೋಟಿ ನಷ್ಟ: ಬಿಬಿಎಂಪಿ

    By adminSeptember 26, 2022No Comments2 Mins Read
    banglore

    ರಾಜ್ಯ ರಾಜಧಾನಿಯಲ್ಲಿ ಆಗಸ್ಟ್‌ ಅಂತ್ಯದಿಂದ ಸೆಪ್ಟಂಬರ್ ಮೊದಲ ವಾರದವರೆಗೆ ಭಾರಿ ಮಳೆ ದಾಖಲಾಗಿ ಪ್ರವಾಹ ಸೃಷ್ಟಿಯಾಗಿತ್ತು. ಸಾವಿರಾರು ಮನೆಗಳು ಹಾನಿಗೀಡಾಗಿದ್ದು, ನೂರಾರು ಕೋಟಿ ರೂ. ನಷ್ಟವಾಗಿದೆ. ಕೇವಲ ರಸ್ತೆ ಹಾನಿಯಿಂದ 337 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಬಿಬಿಎಂಪಿ ಅಂದಾಜಿಸಿದೆ.

    ಬೆಂಗಳೂರಿನ ಐಟಿ ಬಿಟಿ ಕಂಪನಿಗಳು ಇರುವ ಪ್ರದೇಶಗಳಲ್ಲಿಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದಾಗಿ ಸುಮಾರು 7,700 ಮನೆಗಳು ಜಲಾವೃತಗೊಂಡಿದ್ದರೆ, ಅದರಲ್ಲಿ 170 ಮನೆಗಳಿಗೆ ಭಾಗಶಃ ಧಕ್ಕೆ ಉಂಟಾಗಿದೆ. ಒಟ್ಟು ಮನೆಗಳಿಂದ ಸುಮಾರು 16 ಕೋಟಿ ರೂ. ಮತ್ತು 170ಮನೆಗಳಿಂದ 2ಕೋಟಿ ರೂ. ಆರ್ಥಿಕ ನಷ್ಟವಾಗಿದೆ ಎಂದು ಬಿಬಿಎಂಪಿ ವರದಿ ಮಾಹಿತಿ ನೀಡಿದೆ.


    Provided by
    Provided by

    ಸೆಪ್ಟಂಬರ್ ಆರಂಭಿಕ ವಾರದಲ್ಲಿ ನಿರಂತರ ಮಳೆಗೆ ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಯಾಗಿತ್ತು. ಪ್ರವಾಹಕ್ಕೆ ತತ್ತರಿಸಿದ ಸಂತ್ರಸ್ತರಿಗೆ ಬಿಬಿಎಂಪಿ ಪರಿಹಾರ ವಿತರಿಸುತ್ತಿದೆ. ಈ ನಿಟ್ಟಿನಲ್ಲಿ ಈವರೆಗೆ ನಾಗರಿಕರಿಗೆ 14ಕೋಟಿ ರೂಪಾಯಿ ಮೃತರ ಕುಟುಂಬಕ್ಕೆ ಪರಿಹಾರ ವಿತರರಣೆ ಸೇರಿ ಒಟ್ಟು ಪರಿಹಾರವನ್ನು 18.4 ಕೋಟಿ ನೀಡಲು ಸರ್ಕಾರ ಅಂದಾಜು ಮಾಡಿದೆ.

    ಐದು ದಶಕದಲ್ಲೇ ಬೆಂಗಳೂರಿಗೆ ವರುಣಾರ್ಭಟದ ಕಾವು ಹೆಚ್ಚಾಗಿ. ಈ ವೇಳೆ ನಿರಂತರವಾಗಿ ಧಾರಾಕಾರ ಮಳೆ ಅಬ್ಬರಿಸಿತ್ತು. ಪರಿಣಾಮ ಬೆಂಗಳೂರಿನಲ್ಲಿ ಮಹದೇವಪುರ, ಬೊಮ್ಮನಹಳ್ಳಿ ವಲಯ ಸೇರಿದಂತೆ ವಿವಿಧೆಡೆ ಸುಮಾರು 397 ಕಿ.ಮೀ. ರಸ್ತೆಗಳು ಹಾನಿಗೀಡಾಗಿವೆ. ಇದರಿಂದ ಪಾಲಿಕೆಗೆ 337 ಕೋಟಿ ರೂ.ನಷ್ಟು ನಷ್ಟವಾಗಿದೆ. ಅಂದಾಜು 3ಕಿ.ಮೀ.ವರೆಗಿನ ಪಾದಾಚಾರಿ ಮಾರ್ಗ ಹಾಳಾಗಿದ್ದು, ಅದಕ್ಕಾಗಿ 4 ಕೋಟಿ ರೂ. ಹಣ ಭರಿಸಬೇಕಿದೆ.

    ಒಟ್ಟು ಪ್ರವಾಹದಲ್ಲಿ ಮಹದೇವಪುರ ವಲಯದ ಹಲವು ಪ್ರದೇಶಗಳು ಹೆಚ್ಚು ಹಾನಿ ಆಗಿದೆ. ಆ ಭಾಗದಲ್ಲಿ ಸುಮಾರು 3,000 ಕ್ಕೂ ಹೆಚ್ಚು ಮನೆಗಳು ಮಳೆಗೆ ಜಲಾವೃತಗೊಂಡಿದ್ದರಿಂದ ನಿವಾಸಿಗಳು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಇದರಲ್ಲಿ 21 ಮನೆಗಳು ಭಾಗಶಃ ಹಾಳಾಗಿವೆ. ಈ ಪ್ರದೇಶಲ್ಲಿಯೇ ಒಟ್ಟು 165 ಕಿಮೀ ರಸ್ತೆ ಹಾಳಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಉಳಿದಂತೆ ಬಿಬಿಎಂಪಿ ವ್ಯಾಪ್ತಿಯ ಪೂರ್ವ ಹಾಗೂ ದಕ್ಷಿಣ ವಲಯಗಳಲ್ಲಿ ಕ್ರಮವಾಗಿ ಸುಮಾರು 1,141 ಹಾಗೂ 1,048 ಮನೆಗಳಿಗೆ ನೀರು ನುಗ್ಗಿ ಕೆಲವು ದಿವಸಗಳ ಕಾಲ ಸಮಸ್ಯೆ ಸೃಷ್ಟಿಯಾಗಿತ್ತು. ದಾಸರಹಳ್ಳಿಯಲ್ಲಿ ವ್ಯಾಪ್ತಿಯಲ್ಲಿ 261 ಮನೆಗಳು ಮಾಲೀಕರು ಮಳೆಯಿಂದಾಗಿ ಸಂಕಷ್ಟ ಅನುಭವಿಸಿದ್ದಾರೆ. ಆ ಭಾಗದಲಿ ಸಹ ಪಾಲಿಕೆ ಪರಿಹಾರ ಕಾರ್ಯ ಕೈಗೊಂಡಿತ್ತು.

    ಕಳೆದ ಎರಡು ವಾರದಿಂದ ಮುಂಗಾರು ಸಂಪೂರ್ಣ ದುರ್ಬಲವಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ನಗರದ ರಸ್ತೆಗಳ ದುರಸ್ತಿ ಕಾರ್ಯ ಮಾಡುತ್ತಿದೆ. ಅಲ್ಲದೇ ಮಳೆಯಿಂದ ಉಂಟಾದ ಸಮಸ್ಯೆಗಳ ಪರಿಹಾರಾರ್ಥವಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ 500 ಕೋಟಿ ರೂ. ನೀಡುವುದಾಗಿ ತಿಳಿಸಿದೆ. ಹಾನಿಗೊಳಗಾಗಿದ್ದ ಶಾಲಾ ಕಾಲೇಜು ಕಟ್ಟಡಗಳು ಸೇರಿದಂತೆ ಒಟ್ಟು 11 ಸರ್ಕಾರಿ ಕಟ್ಟಡಗಳನ್ನು ಈಗಾಗಲೇ ಬಿಬಿಎಂಪಿ ಸರಿಪಡಿಸುವ ಕಾರ್ಯ ನಡೆಸಿದೆ. ಕಟ್ಟಡ ಹಾನಿಯಿಂದಾಗಿ ಪಾಲಿಕೆಗೆ 65 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಬಿಬಿಎಂಪಿ ಅಂಕಿ ಅಂಶಗಳು ತಿಳಿಸಿವೆ.

    ಒಬ್ಬರು ಗಾಯಗೊಂಡಿದ್ದರು. ಆ ಎರಡು ಜೀವ ಹಾನಿಗಳು ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಘಟಿಸಿವೆ. ಇನ್ನೂ ಗಾಯಾಳು ಬೊಮ್ಮನಹಳ್ಳಿ ನಿವಾಸಿ ಎನ್ನಲಾಗಿದೆ. ಇಬ್ಬರು ಮೃತರಿಗೆ ತಲಾ ಐದು ಲಕ್ಷ ರೂ. ಹಾಗೂ ಒಬ್ಬ ಗಾಯಾಳುಗೆ ಎರಡು ಲಕ್ಷ ರೂ. ಪಾಲಿಕೆ ನೀಡಿದೆ. ಈಗಾಗಲೇ ಹೆಚ್ಚು ಹಾನಿಗೀಡಾದ ಸಂತ್ರಸ್ತರಿಗೆ ಪರಿಹಾರ ನೀಡಲಾಗಿದ್ದು, ಉಳಿದವರಿಗೆ ಶೀಘ್ರವೇ ಹಂತ ಹಂತವಾಗಿ ಬಿಬಿಎಂಪಿ ನೆರವು ಒದಗಿಸಲಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ : ದೇಶದ ಶೇ.60 ಭಾಗ ಉದ್ಯೋಗ ಸೃಷ್ಠಿ ಮಾಡಿ 140 ಕೋಟಿ ಜನಸಂಖ್ಯೆಗೆ ಅನ್ನ ನೀಡುವ ಕೃಷಿ ಕ್ಷೇತ್ರ.…

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.