ಕರ್ನಾಟಕ ಬಂಜಾರ ಜಾಗೃತಿ ದಳ ವತಿಯಿಂದ ರಾಜ್ಯಾಧ್ಯಕ್ಷ ತಿಪ್ಪ ಸರ್ ನಾಯ್ಕ್ ಅಧ್ಯಕ್ಷತೆಯಲ್ಲಿ 283ನೇ ಶ್ರೀ ಸಂತ ಸೇವಾಲಾಲ್ ಜಯಂತೋತ್ಸವ ಕಾರ್ಯಕ್ರಮ ಬೆಳಗುಂಬ ತಾಂಡದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭೋಗ್ ಪೂಜಾ ಕಾರ್ಯಕ್ರಮ, ಧಾರ್ಮಿಕ ಜಾಗೃತಿ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಅನ್ನಸಂತರ್ಪಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಜಯರಾಂ ನಾಯ್ಕ, ಮಹಿಳಾ ಘಟಕ ಅಧ್ಯಕ್ಷೆ ಶಾಂತಾ ಜಯರಾಂ, ಯುವ ಘಟಕ ಅಧ್ಯಕ್ಷ ಮಂಜಾನಾಯ್ಕ್, ಸಂಘಟನೆ ಕಾರ್ಯದರ್ಶಿ ಉಮೇಶ್ ನಾಯ್ಕ್ ಹಾಗೂ ದೇವಸ್ಥಾನ ಮಂಡಳಿ ಕಾರ್ಯಧ್ಯಕ್ಷ ದೇವರಾಜ್ ನಾಯ್ಕ್ ಹಾಗೂ ಊರಿನ ಮತ್ತು ಅಕ್ಕ ಪಕ್ಕದ ಗ್ರಾಮಸ್ಥರು ಭಾಗವಹಿಸಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB