nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026
    Facebook Twitter Instagram
    ಟ್ರೆಂಡಿಂಗ್
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    • ಸಿರಾ: ಸೆ.6: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಬಲ್ ಮರ್ಡರ್: ಬೆಚ್ಚಿಬಿದ್ದ ಸಾರ್ವಜನಿಕರು: ನಡು ರಸ್ತೆಯಲ್ಲೇ ಮೂವರ ಮೇಲೆ ಭೀಕರ ದಾಳಿ
    ಮಧುಗಿರಿ September 23, 2022

    ಡಬಲ್ ಮರ್ಡರ್: ಬೆಚ್ಚಿಬಿದ್ದ ಸಾರ್ವಜನಿಕರು: ನಡು ರಸ್ತೆಯಲ್ಲೇ ಮೂವರ ಮೇಲೆ ಭೀಕರ ದಾಳಿ

    By adminSeptember 23, 2022No Comments2 Mins Read
    madhugiri

    ಮಧುಗಿರಿ: ನಿವೇಶನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ವೇಳೆ ಮಹಿಳೆ ಸಹಿತ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ.

    ರಾಮಾಂಜನೇಯ. (48) ಶಿಲ್ವಾ (36) ಹತ್ಯೆಗೀಡಾದವರಾಗಿದ್ದು, ಶ್ರೀಧರ್ ಗುಪ್ತ ಮತ್ತು ಸಹಚರರು ಕೃತ್ಯ ನಡೆಸಿದ ಆರೋಪಿಗಳಾಗಿದ್ದಾರೆ. ದೇವಸ್ಥಾನದ ಜಾಗಕ್ಕೆ ಸಂಬಂಧಿಸಿದ ತಕರಾರು ಹತ್ಯೆಯಲ್ಲಿ ಅಂತ್ಯಗೊಂಡಿದೆ ಎಂದು ಹೇಳಲಾಗಿದೆ.

    ಗಣಪತಿ ದೇವಸ್ಥಾನದ ಜಾಗದ ವಿಚಾರವಾಗಿ ಆರೋಪಿ ಶ್ರೀಧರ್ ಗುಪ್ತ ಹಾಗೂ ಹತ್ಯೆಗೀಡಾದ ರಾಮಾಂಜನೇಯ ಹಾಗೂ ಶಿಲ್ಪಾ ನಡುವೆ ನ್ಯಾಯಾಲಯದಲ್ಲಿ ಪ್ರಕರಣ ಇತ್ತು. ಈ ಪ್ರಕರಣದಲ್ಲಿ ರಾಮಾಂಜನೇಯ ಹಾಗೂ ಶಿಲ್ಪಾ ಅವರ ಪರವಾಗಿ ತೀರ್ಪು ಬಂದಿತ್ತು. ಇದೇ ದ್ವೇಷದಲ್ಲಿ ಹತ್ಯೆ ನಡೆದಿದೆ ಎನ್ನಲಾಗಿದೆ.

    ರಾಮಾಂಜನೇಯ,  ಶಿಲ್ಪಾ, ಮತ್ತು ಮಲ್ಲಿಕಾರ್ಜುನ ಎಂಬವರು ರಸ್ತೆಯಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಶ್ರೀಧರ್ ಗುಪ್ತ ಮತ್ತು ಸಹಚರರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಪರಿಣಾಮವಾಗಿ ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ರಾಮಾಂಜನೇಯ,  ಶಿಲ್ಪಾ ಮೃತಪಟ್ಟರೆ, ಮಲ್ಲಿಕಾರ್ಜುನ ಅವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಘಟನಾ ಸ್ಥಳಕ್ಕೆ ಸಿಪಿಐ M.R.ಸರ್ದಾರ್, ಪಿಎಸ್ ಐ, ತಾರಾ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮಧುಗಿರಿ ಶವಗಾರದಲ್ಲಿ ಇರಿಸಲಾಗಿದೆ. ಕೃತ್ಯದ ಬಳಿಕ ಆರೋಪಿ ಶ್ರೀಧರ್ ಗುಪ್ತ ಮತ್ತು ಸಹಚರರು ತಲೆಮರೆಸಿಕೊಂಡಿದ್ದರು. ಮಿಡಿಗೇಶಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಎಸ್ಪಿ ರಾಹುಲ್ ಕುಮಾರ್ ಶಹಪೂರ್  ರ್ವಾಡ್ ಭೇಟಿ:

    ಘಟನೆ ಸಂಬಂಧ ಜಿಲ್ಲಾ ಎಸ್ಪಿ ರಾಹುಲ್ ಕುಮಾರ್ ಶಹಪೂರ್‌ವಾಡ್  ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ,  ಸಂಜೆ 7:30 ರಲ್ಲಿ ಮಿಡಿಗೇಶಿ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ನಡೆದು 2 ಕೊಲೆಯಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ, ಪ್ರಥಮ ತನಿಖಾ ವರದಿಯ ಪ್ರಕಾರ ಜಾಗದ ವಿಚಾರವಾಗಿ ಗಲಾಟೆ ನಡೆದಿದ್ದು, ಇದು ನ್ಯಾಯಾಲಯದಲ್ಲಿ ಪ್ರಕರಣ ಇತ್ತು ಎನ್ನಲಾಗಿದೆ. ಈಗಾಗಲೇ ಓರ್ವ ಆರೋಪಿ ಶ್ರೀಧರ್ ಗುಪ್ತನನ್ನು  ಬಂಧಿಸಲಾಗಿದೆ.

    ಒಬ್ಬನಿಂದ ಕೊಲೆ ನಡೆದಿಲ್ಲ ಇನ್ನು ಆರೋಪಿಗಳಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು ಈ ಬಗ್ಗೆ ಆರೋಪಿಯಿಂದ ಹೆಚ್ಚಿನ ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.  ಇಬ್ಬರು ಮೃತಪಟ್ಟಾಗ ಗ್ರಾಮದಲ್ಲಿ ಸಹಜವಾಗಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತದೆ. ಆದರೆ ಆ ರೀತಿ ಆಗವುದು ಬೇಡ ಗ್ರಾಮದಲ್ಲಿ ಪ್ರಚೋದನೆ ಕೊಟ್ಟಿ ಬೇರೆ ಯಾವುದೆ ರೀತಿಯ ಅನಾಹುತಕ್ಕೆ ಅವಕಾಶ ಆಗುವುದು ಬೇಡ, ಆದ್ದರಿಂದ  ಎರಡು ಕುಟುಂಬಗಳಿಗೆ ಭೇಟಿ ನೀಡಿದ್ದೇನೆ. ನಮ್ಮ ತನಿಖಾಧಿಕಾರಿಗಳು ಈ ಪ್ರಕರಣವನ್ನು  ಸಂಪೂರ್ಣ ತನಿಖೆ ಮಾಡಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು  ಮಾಧ್ಯಮ ಮೂಲಕ ಮೃತರ ಕುಟುಂಬಕ್ಕೆ ಸಾಂತ್ವಾನ ತಿಳಿಸಿ ಭರವಸೆ ನೀಡಿದರು.

    ವರದಿ: ದೊಡ್ಡೇರಿ ಮಹಲಿಂಗಯ್ಯ | ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    BreakingNews district news international news KannadaNews madhugiri mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಕರಡಿಗಳ ಜಗಳ: ಬಂಡೆ ಮೇಲಿನಿಂದ ಬಿದ್ದ ಕರಡಿಯ ಕಾಲು ಮುರಿತ!

    September 1, 2026

    ಮಧುಗಿರಿ: ಸೇವಾ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಬೀಳ್ಕೊಡುಗೆ

    August 29, 2026

    ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ

    August 23, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಹೊಳೆನರಸೀಪುರ / ಹಳ್ಳಿಮೈಸೂರು:  ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಪಂಚಾಯತಿ ಆವರಣದಲ್ಲಿ ಇತ್ತೀಚೆಗೆ ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಪಟೇಲ್…

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.