nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಬಲ್ ಮರ್ಡರ್: ಬೆಚ್ಚಿಬಿದ್ದ ಸಾರ್ವಜನಿಕರು: ನಡು ರಸ್ತೆಯಲ್ಲೇ ಮೂವರ ಮೇಲೆ ಭೀಕರ ದಾಳಿ
    ಮಧುಗಿರಿ September 23, 2022

    ಡಬಲ್ ಮರ್ಡರ್: ಬೆಚ್ಚಿಬಿದ್ದ ಸಾರ್ವಜನಿಕರು: ನಡು ರಸ್ತೆಯಲ್ಲೇ ಮೂವರ ಮೇಲೆ ಭೀಕರ ದಾಳಿ

    By adminSeptember 23, 2022No Comments2 Mins Read
    madhugiri

    Provided by
    Provided by

    ಮಧುಗಿರಿ: ನಿವೇಶನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ವೇಳೆ ಮಹಿಳೆ ಸಹಿತ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ.

    ರಾಮಾಂಜನೇಯ. (48) ಶಿಲ್ವಾ (36) ಹತ್ಯೆಗೀಡಾದವರಾಗಿದ್ದು, ಶ್ರೀಧರ್ ಗುಪ್ತ ಮತ್ತು ಸಹಚರರು ಕೃತ್ಯ ನಡೆಸಿದ ಆರೋಪಿಗಳಾಗಿದ್ದಾರೆ. ದೇವಸ್ಥಾನದ ಜಾಗಕ್ಕೆ ಸಂಬಂಧಿಸಿದ ತಕರಾರು ಹತ್ಯೆಯಲ್ಲಿ ಅಂತ್ಯಗೊಂಡಿದೆ ಎಂದು ಹೇಳಲಾಗಿದೆ.

    ಗಣಪತಿ ದೇವಸ್ಥಾನದ ಜಾಗದ ವಿಚಾರವಾಗಿ ಆರೋಪಿ ಶ್ರೀಧರ್ ಗುಪ್ತ ಹಾಗೂ ಹತ್ಯೆಗೀಡಾದ ರಾಮಾಂಜನೇಯ ಹಾಗೂ ಶಿಲ್ಪಾ ನಡುವೆ ನ್ಯಾಯಾಲಯದಲ್ಲಿ ಪ್ರಕರಣ ಇತ್ತು. ಈ ಪ್ರಕರಣದಲ್ಲಿ ರಾಮಾಂಜನೇಯ ಹಾಗೂ ಶಿಲ್ಪಾ ಅವರ ಪರವಾಗಿ ತೀರ್ಪು ಬಂದಿತ್ತು. ಇದೇ ದ್ವೇಷದಲ್ಲಿ ಹತ್ಯೆ ನಡೆದಿದೆ ಎನ್ನಲಾಗಿದೆ.

    ರಾಮಾಂಜನೇಯ,  ಶಿಲ್ಪಾ, ಮತ್ತು ಮಲ್ಲಿಕಾರ್ಜುನ ಎಂಬವರು ರಸ್ತೆಯಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಶ್ರೀಧರ್ ಗುಪ್ತ ಮತ್ತು ಸಹಚರರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಪರಿಣಾಮವಾಗಿ ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ರಾಮಾಂಜನೇಯ,  ಶಿಲ್ಪಾ ಮೃತಪಟ್ಟರೆ, ಮಲ್ಲಿಕಾರ್ಜುನ ಅವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಘಟನಾ ಸ್ಥಳಕ್ಕೆ ಸಿಪಿಐ M.R.ಸರ್ದಾರ್, ಪಿಎಸ್ ಐ, ತಾರಾ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮಧುಗಿರಿ ಶವಗಾರದಲ್ಲಿ ಇರಿಸಲಾಗಿದೆ. ಕೃತ್ಯದ ಬಳಿಕ ಆರೋಪಿ ಶ್ರೀಧರ್ ಗುಪ್ತ ಮತ್ತು ಸಹಚರರು ತಲೆಮರೆಸಿಕೊಂಡಿದ್ದರು. ಮಿಡಿಗೇಶಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಎಸ್ಪಿ ರಾಹುಲ್ ಕುಮಾರ್ ಶಹಪೂರ್  ರ್ವಾಡ್ ಭೇಟಿ:

    ಘಟನೆ ಸಂಬಂಧ ಜಿಲ್ಲಾ ಎಸ್ಪಿ ರಾಹುಲ್ ಕುಮಾರ್ ಶಹಪೂರ್‌ವಾಡ್  ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ,  ಸಂಜೆ 7:30 ರಲ್ಲಿ ಮಿಡಿಗೇಶಿ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ನಡೆದು 2 ಕೊಲೆಯಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ, ಪ್ರಥಮ ತನಿಖಾ ವರದಿಯ ಪ್ರಕಾರ ಜಾಗದ ವಿಚಾರವಾಗಿ ಗಲಾಟೆ ನಡೆದಿದ್ದು, ಇದು ನ್ಯಾಯಾಲಯದಲ್ಲಿ ಪ್ರಕರಣ ಇತ್ತು ಎನ್ನಲಾಗಿದೆ. ಈಗಾಗಲೇ ಓರ್ವ ಆರೋಪಿ ಶ್ರೀಧರ್ ಗುಪ್ತನನ್ನು  ಬಂಧಿಸಲಾಗಿದೆ.

    ಒಬ್ಬನಿಂದ ಕೊಲೆ ನಡೆದಿಲ್ಲ ಇನ್ನು ಆರೋಪಿಗಳಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು ಈ ಬಗ್ಗೆ ಆರೋಪಿಯಿಂದ ಹೆಚ್ಚಿನ ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.  ಇಬ್ಬರು ಮೃತಪಟ್ಟಾಗ ಗ್ರಾಮದಲ್ಲಿ ಸಹಜವಾಗಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತದೆ. ಆದರೆ ಆ ರೀತಿ ಆಗವುದು ಬೇಡ ಗ್ರಾಮದಲ್ಲಿ ಪ್ರಚೋದನೆ ಕೊಟ್ಟಿ ಬೇರೆ ಯಾವುದೆ ರೀತಿಯ ಅನಾಹುತಕ್ಕೆ ಅವಕಾಶ ಆಗುವುದು ಬೇಡ, ಆದ್ದರಿಂದ  ಎರಡು ಕುಟುಂಬಗಳಿಗೆ ಭೇಟಿ ನೀಡಿದ್ದೇನೆ. ನಮ್ಮ ತನಿಖಾಧಿಕಾರಿಗಳು ಈ ಪ್ರಕರಣವನ್ನು  ಸಂಪೂರ್ಣ ತನಿಖೆ ಮಾಡಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು  ಮಾಧ್ಯಮ ಮೂಲಕ ಮೃತರ ಕುಟುಂಬಕ್ಕೆ ಸಾಂತ್ವಾನ ತಿಳಿಸಿ ಭರವಸೆ ನೀಡಿದರು.

    ವರದಿ: ದೊಡ್ಡೇರಿ ಮಹಲಿಂಗಯ್ಯ | ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    BreakingNews district news international news KannadaNews madhugiri mahanayaka mahanayakanews national news ಅಂತಾರಾಷ್ಟ್ರೀಯ ಸುದ್ದಿ ಕನ್ನಡ ಸುದ್ದಿ ಜಿಲ್ಲಾ ಸುದ್ದಿ ಬ್ರೇಕಿಂಗ್ ನ್ಯೂಸ್ ಮಹಾನಾಯಕ ಮಹಾನಾಯಕ ಡಾಟ್ ಇನ್ ರಾಷ್ಟ್ರೀಯ ಸುದ್ದಿ
    admin
    • Website

    Related Posts

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026

    ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ

    June 17, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.