nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    • ಸ್ಥಳೀಯ ಇತಿಹಾಸ ಅಧ್ಯಯನವಿಲ್ಲದೆ ರಾಷ್ಟ್ರಿಯ ಇತಿಹಾಸ ಕಟ್ಟಲು ಸಾಧ್ಯವಿಲ್ಲ: ಸಂಶೋಧಕ ಡಾ.ಡಿ.ಎನ್.ಯೋಗೀಶ್ವರಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಜೆಪಿ ಅವಧಿಯಲ್ಲಾಗಿದೆ ಬರೋಬ್ಬರಿ 21 ಹಗರಣ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ July 20, 2024

    ಬಿಜೆಪಿ ಅವಧಿಯಲ್ಲಾಗಿದೆ ಬರೋಬ್ಬರಿ 21 ಹಗರಣ: ಸಿಎಂ ಸಿದ್ದರಾಮಯ್ಯ

    By adminJuly 20, 2024No Comments3 Mins Read
    siddaramaiah

    ರಾಜ್ಯದಲ್ಲಿ ಮುಡಾ ಹಗರಣ ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ ಈ ಹಗರಣಗಳದ್ದೇ ಕಾರುಬಾರು. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಈ ವಿಚಾರಗಳನ್ನು ಇಟ್ಟುಕೊಂಡೇ ಹರಿಹಾಯುತ್ತಿವೆ. ಇದಕ್ಕೆ ಎದಿರೇಟು ನೀಡಿರುವ ಸಿದ್ದರಾಮಯ್ಯ ಅವರು ಬಿಜೆಪಿ ಅವಧಿಯಲ್ಲಾಗಿದ್ದ ಬರೋಬ್ಬರಿ 21 ಹಗರಣಗಳ ಪಟ್ಟಿಯನ್ನು ಬಯಲುಮಾಡಿದ್ದಾರೆ.

    ಸಿಎಂ ಸಿದ್ದರಾಮಯ್ಯ ಸದನದಲ್ಲಿ ಹೇಳಿದಂತೆ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಪಟ್ಟಿಯನ್ನು ಮುಂದಿಟ್ಟು ವಿಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದು, ಈ ಮೂಲಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ಬಿಜೆಪಿ ಆರೋಪಕ್ಕೆ ಅವರು ತಿರುಗೇಟು ನೀಡಿದ್ದಾರೆ.


    Provided by
    Provided by

    ಸಿಎಂ ಬಿಡುಗಡೆ ಮಾಡಿದ ಹಗರಣಗಳ ಪಟ್ಟಿ:

    * ಎಪಿಎಂಸಿ ಹಗರಣ – 2020-21 – 47.16 ಕೋಟಿ ರೂ.

    * ಭೋವಿ ಅಭಿವೃದ್ಧಿ ನಿಗಮ – 2021-22 – 87.00 ಕೋಟಿ ರೂ.ಗಿಂತಲೂ ಹೆಚ್ಚು

    * ದೇವರಾಜ ಅರಸು ಟ್ರಕ್ ಟರ್ಮಿನಲ್ – 2022-23 – ಶ್ರೀರಾಮುಲು 50.00 ಕೋಟಿ ರೂ.ಗಿಂತ ಅಧಿಕ

    * ಗಂಗಾ ಕಲ್ಯಾಣ ಯೋಜನೆ – (ಅಂಬೇಡ್ಕರ್, ಭೋವಿ, ಆದಿಜಾಂಬವ, ಮುಂತಾದ ನಿಗಮಗಳು) 2021-22 – 430.00 ಕೋಟಿ ರೂ.ಗಿಂತ ಅಧಿಕ

    * ಪ್ರವಾಸೋದ್ಯಮ ಇಲಾಖೆ 2021-22 – ಸಿ.ಪಿ ಯೋಗೇಶ್ವರ್ 2.47 ಕೋಟಿ ರೂ.

    * ಕಿಯೋನಿಕ್ಸ್ ಹಗರಣ 2019 ರಿಂದ 2023 – ಅಶ್ವತ್ಥ್ನಾರಾಯಣ – 500 ಕೋಟಿ ರೂ. – ಸಿ.ಎ.ಜಿ. ವರದಿಯಲ್ಲಿ ಉಲ್ಲೇಖ

    * ಕೋವಿಡ್ ಹಗರಣ – 2019-20 – ಕೆ.ಸುಧಾಕರ್ – 40,000 ಕೋಟಿಗೂ ಹೆಚ್ಚು ಹಗರಣ

    * 40% ಹಗರಣ – 2019-20 – 2,000 ಕೋಟಿ ರೂ.ಗಿಂತ ಅಧಿಕ ಹಗರಣ

    * ಪಿಎಸ್‌ಐ ಮತ್ತು ಇತರೆ ನೇಮಕಾತಿ – 2019-20 ಹಾಗೂ 2022-23 – ನೂರಾರು ಕೋಟಿ ರೂ.

    * ಪರಶುರಾಮ ಥೀಮ್ ಪಾರ್ಕ್ ಹಗರಣ – 2022-23 – ವಿ. ಸುನೀಲ್‌ಕುಮಾರ್ – 11.00 ಕೋಟಿಗೂ ಹೆಚ್ಚು

    * ಬಿಟ್‌ಕಾಯಿನ್ ಹಗರಣ – 2021 ರಿಂದ 2023 – ಸಾವಿರಾರು ಕೋಟಿ ರೂ. ಹಗರಣ

    * ಯಡಿಯೂರಪ್ಪ ನವರ ಅಕ್ರಮ ಆಸ್ತಿ – 2021 – 750 ಕೋಟಿ ರೂ.ಗಿಂತ ಹೆಚ್ಚು

    * ಯಡಿಯೂರಪ್ಪ ಮತ್ತು ವಿಜಯೇಂದ್ರ ಕುಟುಂಬದ ಆದಾಯ ಮೀರಿದ ಆಸ್ತಿ ಪ್ರಕರಣ – ನೂರಾರು ಕೋಟಿ

    * ಯಡಿಯೂರಪ್ಪ ಅವರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು.

    * ಬಿಜೆಪಿ ಸರ್ಕಾರದ ಅಬಕಾರಿ ಸಚಿವರ ಹಗರಣದ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದರು – ನೂರಾರು ಕೋಟಿ ರೂ. ಅಬಕಾರಿ

    * ಕೆಕೆಆರ್‌ಡಿಬಿ ಹಗರಣ – 2019-20 ರಿಂದ ಏಪ್ರಿಲ್-2023 – ಪಿ. ಮುನಿರತ್ನ 200 ಕೋಟಿಗೂ ಹೆಚ್ಚು (ದತ್ತಾತ್ರೇಯ ಪಾಟೀಲರೇವೂರ ನಿಗಮದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಗರಣ)

    * ಕಂದಾಯ ಇಲಾಖೆಯ ಹಗರಣ 2019-20 ರಿಂದ ಏಪ್ರಿಲ್-2023 – ಅಶೋಕ್ ಮೇಲೆ ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ

    * ಕೃಷಿ ಇಲಾಖೆಯಲ್ಲಿ 2021 ರಿಂದ 2023 – ಬಿ.ಸಿ.ಪಾಟೀಲ್ – ಕೃಷಿ ಇಲಾಖೆಯ ನೌಕರರೇ ಲಂಚ ವಸೂಲಿ ಮಾಡುತ್ತಿದ್ದ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

    * ಮೊಟ್ಟೆ ಹಗರಣ – 2019 ರಿಂದ 2021 – ಶಶಿಕಲಾ ಜೊಲ್ಲೆ ಪರಣ್ಣ ಮುನವಳ್ಳಿ ಕೂಡ ಭಾಗಿಯಾಗಿದ್ದರು.

    * ಕೆಐಎಡಿಬಿ 2008 ರಿಂದ 2013 – ಕಟ್ಟಾ ಸುಬ್ರಮಣ್ಯ ನಾಯ್ಡು, ಮುರುಗೇಶ ನಿರಾಣಿ, ಮುಂತಾದವರು ಭಾಗಿಯಾಗಿದ್ದ ಬೃಹತ್ ಹಗರಣ ಕಾಂಡದ ಬಿಸಿ ಇನ್ನೂ ಆರಿಲ್ಲ.

    * ಗಣಿ ಹಗರಣ, ಬಿಡಿಎ ಮತ್ತು ಕೆಐಎಡಿಬಿ ಡಿನೋಟಿಫಿಕೇಶನ್ ಹಗರಣ – ಬಿಎಸ್‌ವೈ ಸೇರಿ ಹಲವು ಸಚಿವರಗಳು ಜೈಲಿಗೆ ಹೋಗಿದ್ದಾರೆ.

    * ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಬೃಹತ್ ಹಗರಣ – ಸಾವಿರಾರು ಕೋಟಿ ಹಗರಣ – ಐಟಿ, ಇಡಿ, ಸಿಬಿಐ ತನಿಖೆ ಇದುವರೆಗೆ ಯಾರನ್ನೂ ಬಂಧಿಸುವ ಕೆಲಸ ಆಗಿಲ್ಲ.

    ಪಟ್ಟಿ ಬಿಡುಗಡೆ ಮಾಡಿದ ಬಳಿಕ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ ಅವರು ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಈ ಹಗರಣಗಳ ಬಗ್ಗೆ ತನಿಖೆ ಏಕೆ ನಡೆದಿಲ್ಲ? ಸಿಬಿಐ, ಇಡಿ, ಐಟಿ ಏಕೆ ತನಿಖೆಗೆ ಮುಂದಾಗಿಲ್ಲ? ಎಂದು ಬಿಜೆಪಿ ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕರು ಘೋಷಣೆ ಕೂಗಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ತುಮಕೂರು ಜಿಲ್ಲೆಯ ಹೆಮ್ಮೆಯ ಗುರುತಾಗಿರುವ ಸಿದ್ಧಗಂಗಾ ಮಠದ ಮಹಾಸ್ವಾಮೀಜಿ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು ಕೇವಲ ಒಂದು ಪೀಠದಾಧಿಪತಿಯಾಗಿರಲಿಲ್ಲ; ಅವರು…

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.