ತುಮಕೂರು: ಬಸವ ಜಯಂತಿ ಪ್ರಯುಕ್ತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿತ ದಿನವೆಂದು ಘೋಷಿಸಲ್ಪಟ್ಟಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ವೀರೇಶ್ ಕಲ್ಮಠ್ ತಿಳಿಸಿದ್ದಾರೆ.
ಬಸವ ಜಯಂತಿ ನಿಮಿತ್ತ ಏಪ್ರಿಲ್ 29ರ ಸಂಜೆ 5 ಗಂಟೆಯಿಂದ ಏ.30ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಕಸಾಯಿಖಾನೆ ಮುಚ್ಚತಕ್ಕದ್ದು ಹಾಗೂ ಮಾಂಸ ಮಾರಾಟ ಮಾಡುವುದು, ಸಂಗ್ರಹಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಕಸಾಯಿ ಖಾನೆ ತೆರೆಯುವುದು ಹಾಗೂ ಮಾಂಸ ಮಾರಾಟ ಮಾಡುವುದು ಕಂಡ ಬಂದಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW