nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವನಗೌಡ ಪಾಟೀಲ್ ಯತ್ನಾಳರ ಅಜ್ಞಾನ ಪ್ರದರ್ಶನ: ಡಾ.ಡಿ.ಎನ್.ಯೋಗೀಶ್ವರಪ್ಪ
    ತುಮಕೂರು December 2, 2024

    ಬಸವನಗೌಡ ಪಾಟೀಲ್ ಯತ್ನಾಳರ ಅಜ್ಞಾನ ಪ್ರದರ್ಶನ: ಡಾ.ಡಿ.ಎನ್.ಯೋಗೀಶ್ವರಪ್ಪ

    By adminDecember 2, 2024No Comments2 Mins Read
    basavanna

    ಹನ್ನೆರಡನೇ ಶತಮಾನದ ದಾರ್ಶನಿಕ ಬಸವಣ್ಣನವರ ಅಂತ್ಯದ ಬಗ್ಗೆ ಇನ್ನೂ ಖಚಿತವಾದ ಸಂಶೋಧನೆಗಳು ನಡೆಯದೇ ಇರುವ ಸಂದರ್ಭದಲ್ಲಿ ಶಾಸಕರಾದ ಯತ್ನಾಳರು ಬಸವಣ್ಣ ಹೊಳೆಗೆ ಹಾರಿ ಬಿದ್ದು ಸತ್ತುಹೋದ ಎಂದು ಹೇಳಿರುವುದು ಅವರ ಅಜ್ಞಾನದ ಪರಮಾವಧಿ. ಈ ಮೂಲಕ ಅವರು ಬಸವಾನುಯಾಯಿಗಳ ಭಾವನೆಗಳಿಗೆ ಧಕ್ಕೆ ತಂದಿರುವುದೇ ಅಲ್ಲದೆ ಲಿಂಗಾಯಿತರನ್ನು ಅವಮಾನಿಸುವ ಮೂಲಕ ವೈದಿಕರನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಹೇಳಿದರು.

    ಅವರು ಬಸವಕೇಂದ್ರ, ಜಯದೇವ ವಿದ್ಯಾರ್ಥಿ ನಿಲಯಟ್ರಸ್ಟ್ ಮತ್ತು ಜಾಗತಿಕ ಲಿಂಗಾಯತ ಮಹಾಸಭಾದವರು ಮುರುಘರಾಜೇಂದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಶರಣಸಂಗಮ ಮತ್ತು ವಿಜಯಕುಮಾರ ಕಮ್ಮಾರ್ ಅವರ ಶರಣ ಸಿದ್ಧಾಂತಗಳು ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.


    Provided by
    Provided by

    ಸಾಮಾಜಿಕ ಕಳಕಳಿ ಇದ್ದ ಬಸವಣ್ಣ ದುರ್ಬಲ ಮನಸ್ಸಿನವರಾಗಿದ್ದರೆ ಅವರು ಅಂದು ಅಧಿಕಾರದ ಉನ್ನತ ಅಧಿಕಾರದಲ್ಲಿದ್ದರು ಇಡೀ ರಾಜಪ್ರಭುತ್ವವನ್ನು ಎದುರು ಹಾಕಿಕೊಂಡು ಸಾಮಾನ್ಯ ಜನರ ಪರವಾಗಿ ಹೋರಾಟ ಮಾಡುತ್ತಿರಲಿಲ್ಲ. ಅವರ ಉದ್ದೇಶ ಸಮಸಮಾಜ ನಿರ್ಮಾಣ ಮಾಡುವುದು, ಸಮಪಾಲು, ಸಮಬಾಳು ಎಂಬುದೇ ಬಸವಣ್ಣನ ಘೋಷಮಂತ್ರವಾಗಿತ್ತು ಎಂದರು.

    ಉಪನ್ಯಾಸ ನೀಡಿದ ಸಾಹಿತಿಗಳಾದ ಡಾ. ಬಿ.ಸಿ.ಶೈಲಾನಾಗರಾಜ್ ಅವರು ಕುಲಮೂಲ ಕಾಯಕ ಜೀವಿಗಳನ್ನು ಒಂದೆಡೆ ಸಂಘಟಿಸಿದ ಬಸವಣ್ಣ ಅವರ ಕಾಯಕಕ್ಕೆ ದೈವದ ಸ್ಪರ್ಶವನ್ನು ನೀಡಿ ದಲಿತ ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ ಸಮುದಾಯಗಳಿಗೆ ಆತ್ಮವಿಶ್ವಾಸವನ್ನು ತುಂಬಲು ಪ್ರಯತ್ನಿಸಿದ ಐತಿಹಾಸಿಕ ಮಹಾಪುರುಷ ಎಂದು ಬಣ್ಣಿಸಿದರು.

    ವಚನಗಳು ಆತ್ಮಸಾಕ್ಷಿಯ ನುಡಿಗಳು ಆಗಿದ್ದು ಕೆಲವೇ ಸಮುದಾಯಕ್ಕೆ ಮೀಸಲಾಗಿದ್ದ ಅಕ್ಷರ ಜ್ಞಾನವನ್ನು ಎಲ್ಲ ಸಮುದಾಯಗಳಿಗೆ ವಿಸ್ತರಿಸಿ ಅವರನ್ನೂ ಅಕ್ಷರವಂತರನ್ನಾಗಿ ಮಾಡಿದ ಬಸವಣ್ಣ ಸಾಕ್ಷರತಾ ಆಂದೋಲನದ ಜನಕನಾಗಿದ್ದಾನೆ. ಕುಲಕಸುಬನ್ನು ಮಾಡುತ್ತಿದ್ದ ಜನಾಂಗದ ಅನೇಕ ಶರಣರು ವಚನಗಳನ್ನು ರಚಿಸಿದ್ದು ಸುಮಾರು ಇಪ್ಪತ್ತೈದು ಸಾವಿರ ವಚನಗಳು ಲಭ್ಯವಿದೆ. 770 ವಚನಕಾರರಲ್ಲಿ 33 ವಚನಕಾರ್ತಿಯರೂ ಇರುವುದು ಬಸವಣ್ಣನವರ ಚಳುವಳಿಯ ಫಲಶ್ರುತಿಯಾಗಿದೆ ಎಂದರು.

    ಕೃತಿಯ ಲೇಖಕರಾದ ವಿಜಯಕುಮಾರ ಕಮ್ಮಾರ್ ಅವರು ಮಾತನಾಡಿ ದೇಹವನ್ನೇ ದೇವಾಲಯವಾಗಿ ರೂಪಿಸಿದ ಬಸವಣ್ಣ ಪ್ರತಿಯೊಬ್ಬರಿಗೂ ಇಷ್ಟಲಿಂಗಧಾರಣೆ ಮಾಡುವ ಮೂಲಕ ಶಿವಸಂಸ್ಕೃತಿಯ ನೇತಾರನೆನಿಸಿಕೊಂಡಿದ್ದಾನೆ. ಇಷ್ಟಲಿಂಗವೆಂಬುದು ಸಮಾನತೆಯ ಸಂಕೇತವಾಗಿದ್ದು ಅದರ ಮೂಲಕ ದೇವರನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟರು.

    ವೇದಿಕೆಯಲ್ಲಿ ಕೈಗಾರಿಕೋದ್ಯಮಿ ಡಿ.ವಿ.ಶಿವಾನಂದ್ ಹಾಜರಿದ್ದರು. ಸಿದ್ದಗಂಗಮ್ಮ ಬಿ. ಸಿದ್ಧರಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ಶಿವಾನಂದ್ ಪ್ರಾರ್ಥಿಸಿದರು. ಜಾಗತಿಕ ಲಿಂಗಾಯತ ಮಹಾಸಭಾದ ನಾಗಭೂಷಣ್ ಸ್ವಾಗತಿಸಿದರು. ತಾಲ್ಲೂಕು ಕ.ಸಾ.ಪ. ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್ ವಂದಿಸಿದರು. ಬಸವಕೇಂದ್ರದ ಕಾರ್ಯದರ್ಶಿ ಚಂದ್ರಶೇಖರ್ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಧುಗಿರಿ: ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗಿನ…

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.