nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026
    Facebook Twitter Instagram
    ಟ್ರೆಂಡಿಂಗ್
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    • ತುಮಕೂರಿನಲ್ಲಿ ಅತ್ಯಾಧುನಿಕ ‘ಸಿ.ಜಿ. ಕಿಡ್ನಿಕೇರ್ ಮಲ್ಟಿ ಸ್ಪೆಷಾಲಿಟಿ’ ಆಸ್ಪತ್ರೆ ಲೋಕಾರ್ಪಣೆ; ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
    • ಕೊರಟಗೆರೆ: ಪ್ರಜಾಸೇವಾ ಸಭೆಯಲ್ಲಿ 203 ಅರ್ಜಿ ಸ್ವೀಕಾರ, 10 ಸ್ಥಳದಲ್ಲೇ ಇತ್ಯರ್ಥ! | ಸಮಸ್ಯೆ ನಿವಾರಣೆಗೆ ರೈತರ ಆಗ್ರಹ
    • ಸೆ.30ರೊಳಗೆ ಔರಾದ್‌ ಬರಪೀಡಿತ ತಾಲೂಕು ಘೋಷಣೆ: ಡಾ.ಭೀಮಸೇನರಾವ ಶಿಂಧೆ ವಿಶ್ವಾಸ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವನಗೌಡ ಪಾಟೀಲ್ ಯತ್ನಾಳರ ಅಜ್ಞಾನ ಪ್ರದರ್ಶನ: ಡಾ.ಡಿ.ಎನ್.ಯೋಗೀಶ್ವರಪ್ಪ
    ತುಮಕೂರು December 2, 2024

    ಬಸವನಗೌಡ ಪಾಟೀಲ್ ಯತ್ನಾಳರ ಅಜ್ಞಾನ ಪ್ರದರ್ಶನ: ಡಾ.ಡಿ.ಎನ್.ಯೋಗೀಶ್ವರಪ್ಪ

    By adminDecember 2, 2024No Comments2 Mins Read
    basavanna

    ಹನ್ನೆರಡನೇ ಶತಮಾನದ ದಾರ್ಶನಿಕ ಬಸವಣ್ಣನವರ ಅಂತ್ಯದ ಬಗ್ಗೆ ಇನ್ನೂ ಖಚಿತವಾದ ಸಂಶೋಧನೆಗಳು ನಡೆಯದೇ ಇರುವ ಸಂದರ್ಭದಲ್ಲಿ ಶಾಸಕರಾದ ಯತ್ನಾಳರು ಬಸವಣ್ಣ ಹೊಳೆಗೆ ಹಾರಿ ಬಿದ್ದು ಸತ್ತುಹೋದ ಎಂದು ಹೇಳಿರುವುದು ಅವರ ಅಜ್ಞಾನದ ಪರಮಾವಧಿ. ಈ ಮೂಲಕ ಅವರು ಬಸವಾನುಯಾಯಿಗಳ ಭಾವನೆಗಳಿಗೆ ಧಕ್ಕೆ ತಂದಿರುವುದೇ ಅಲ್ಲದೆ ಲಿಂಗಾಯಿತರನ್ನು ಅವಮಾನಿಸುವ ಮೂಲಕ ವೈದಿಕರನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಹೇಳಿದರು.

    ಅವರು ಬಸವಕೇಂದ್ರ, ಜಯದೇವ ವಿದ್ಯಾರ್ಥಿ ನಿಲಯಟ್ರಸ್ಟ್ ಮತ್ತು ಜಾಗತಿಕ ಲಿಂಗಾಯತ ಮಹಾಸಭಾದವರು ಮುರುಘರಾಜೇಂದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಶರಣಸಂಗಮ ಮತ್ತು ವಿಜಯಕುಮಾರ ಕಮ್ಮಾರ್ ಅವರ ಶರಣ ಸಿದ್ಧಾಂತಗಳು ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

    ಸಾಮಾಜಿಕ ಕಳಕಳಿ ಇದ್ದ ಬಸವಣ್ಣ ದುರ್ಬಲ ಮನಸ್ಸಿನವರಾಗಿದ್ದರೆ ಅವರು ಅಂದು ಅಧಿಕಾರದ ಉನ್ನತ ಅಧಿಕಾರದಲ್ಲಿದ್ದರು ಇಡೀ ರಾಜಪ್ರಭುತ್ವವನ್ನು ಎದುರು ಹಾಕಿಕೊಂಡು ಸಾಮಾನ್ಯ ಜನರ ಪರವಾಗಿ ಹೋರಾಟ ಮಾಡುತ್ತಿರಲಿಲ್ಲ. ಅವರ ಉದ್ದೇಶ ಸಮಸಮಾಜ ನಿರ್ಮಾಣ ಮಾಡುವುದು, ಸಮಪಾಲು, ಸಮಬಾಳು ಎಂಬುದೇ ಬಸವಣ್ಣನ ಘೋಷಮಂತ್ರವಾಗಿತ್ತು ಎಂದರು.

    ಉಪನ್ಯಾಸ ನೀಡಿದ ಸಾಹಿತಿಗಳಾದ ಡಾ. ಬಿ.ಸಿ.ಶೈಲಾನಾಗರಾಜ್ ಅವರು ಕುಲಮೂಲ ಕಾಯಕ ಜೀವಿಗಳನ್ನು ಒಂದೆಡೆ ಸಂಘಟಿಸಿದ ಬಸವಣ್ಣ ಅವರ ಕಾಯಕಕ್ಕೆ ದೈವದ ಸ್ಪರ್ಶವನ್ನು ನೀಡಿ ದಲಿತ ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ ಸಮುದಾಯಗಳಿಗೆ ಆತ್ಮವಿಶ್ವಾಸವನ್ನು ತುಂಬಲು ಪ್ರಯತ್ನಿಸಿದ ಐತಿಹಾಸಿಕ ಮಹಾಪುರುಷ ಎಂದು ಬಣ್ಣಿಸಿದರು.

    ವಚನಗಳು ಆತ್ಮಸಾಕ್ಷಿಯ ನುಡಿಗಳು ಆಗಿದ್ದು ಕೆಲವೇ ಸಮುದಾಯಕ್ಕೆ ಮೀಸಲಾಗಿದ್ದ ಅಕ್ಷರ ಜ್ಞಾನವನ್ನು ಎಲ್ಲ ಸಮುದಾಯಗಳಿಗೆ ವಿಸ್ತರಿಸಿ ಅವರನ್ನೂ ಅಕ್ಷರವಂತರನ್ನಾಗಿ ಮಾಡಿದ ಬಸವಣ್ಣ ಸಾಕ್ಷರತಾ ಆಂದೋಲನದ ಜನಕನಾಗಿದ್ದಾನೆ. ಕುಲಕಸುಬನ್ನು ಮಾಡುತ್ತಿದ್ದ ಜನಾಂಗದ ಅನೇಕ ಶರಣರು ವಚನಗಳನ್ನು ರಚಿಸಿದ್ದು ಸುಮಾರು ಇಪ್ಪತ್ತೈದು ಸಾವಿರ ವಚನಗಳು ಲಭ್ಯವಿದೆ. 770 ವಚನಕಾರರಲ್ಲಿ 33 ವಚನಕಾರ್ತಿಯರೂ ಇರುವುದು ಬಸವಣ್ಣನವರ ಚಳುವಳಿಯ ಫಲಶ್ರುತಿಯಾಗಿದೆ ಎಂದರು.

    ಕೃತಿಯ ಲೇಖಕರಾದ ವಿಜಯಕುಮಾರ ಕಮ್ಮಾರ್ ಅವರು ಮಾತನಾಡಿ ದೇಹವನ್ನೇ ದೇವಾಲಯವಾಗಿ ರೂಪಿಸಿದ ಬಸವಣ್ಣ ಪ್ರತಿಯೊಬ್ಬರಿಗೂ ಇಷ್ಟಲಿಂಗಧಾರಣೆ ಮಾಡುವ ಮೂಲಕ ಶಿವಸಂಸ್ಕೃತಿಯ ನೇತಾರನೆನಿಸಿಕೊಂಡಿದ್ದಾನೆ. ಇಷ್ಟಲಿಂಗವೆಂಬುದು ಸಮಾನತೆಯ ಸಂಕೇತವಾಗಿದ್ದು ಅದರ ಮೂಲಕ ದೇವರನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟರು.

    ವೇದಿಕೆಯಲ್ಲಿ ಕೈಗಾರಿಕೋದ್ಯಮಿ ಡಿ.ವಿ.ಶಿವಾನಂದ್ ಹಾಜರಿದ್ದರು. ಸಿದ್ದಗಂಗಮ್ಮ ಬಿ. ಸಿದ್ಧರಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ಶಿವಾನಂದ್ ಪ್ರಾರ್ಥಿಸಿದರು. ಜಾಗತಿಕ ಲಿಂಗಾಯತ ಮಹಾಸಭಾದ ನಾಗಭೂಷಣ್ ಸ್ವಾಗತಿಸಿದರು. ತಾಲ್ಲೂಕು ಕ.ಸಾ.ಪ. ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್ ವಂದಿಸಿದರು. ಬಸವಕೇಂದ್ರದ ಕಾರ್ಯದರ್ಶಿ ಚಂದ್ರಶೇಖರ್ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬರಪೀಡಿತ ಕ್ಷೇತ್ರದಲ್ಲಿ ಹೇಮಾವತಿ ನೀರಿಗಾಗಿ ಪಟ್ಟು: ದಸರಾ ಉತ್ಸವ ಬಹಿಷ್ಕರಿಸಿದ ಶಾಸಕ ಸುರೇಶ್ ಗೌಡ

    September 19, 2026

    ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಅರ್ಜಿ ಆಹ್ವಾನ

    September 18, 2026

    ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ

    September 17, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    ಬೀದರ್: ತಾಲ್ಲೂಕಿನ ಜನವಾಡಾ ಬಳಿ ಇರುವ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯ (ಎನ್‌ಎಸ್‌ಎಸ್‌ಕೆ) ಬಡ್ಡಿ ಮನ್ನಾ…

    ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ

    September 20, 2026

    ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್

    September 20, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.