nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವನಗೌಡ ಪಾಟೀಲ್ ಯತ್ನಾಳರ ಅಜ್ಞಾನ ಪ್ರದರ್ಶನ: ಡಾ.ಡಿ.ಎನ್.ಯೋಗೀಶ್ವರಪ್ಪ
    ತುಮಕೂರು December 2, 2024

    ಬಸವನಗೌಡ ಪಾಟೀಲ್ ಯತ್ನಾಳರ ಅಜ್ಞಾನ ಪ್ರದರ್ಶನ: ಡಾ.ಡಿ.ಎನ್.ಯೋಗೀಶ್ವರಪ್ಪ

    By adminDecember 2, 2024No Comments2 Mins Read
    basavanna

    ಹನ್ನೆರಡನೇ ಶತಮಾನದ ದಾರ್ಶನಿಕ ಬಸವಣ್ಣನವರ ಅಂತ್ಯದ ಬಗ್ಗೆ ಇನ್ನೂ ಖಚಿತವಾದ ಸಂಶೋಧನೆಗಳು ನಡೆಯದೇ ಇರುವ ಸಂದರ್ಭದಲ್ಲಿ ಶಾಸಕರಾದ ಯತ್ನಾಳರು ಬಸವಣ್ಣ ಹೊಳೆಗೆ ಹಾರಿ ಬಿದ್ದು ಸತ್ತುಹೋದ ಎಂದು ಹೇಳಿರುವುದು ಅವರ ಅಜ್ಞಾನದ ಪರಮಾವಧಿ. ಈ ಮೂಲಕ ಅವರು ಬಸವಾನುಯಾಯಿಗಳ ಭಾವನೆಗಳಿಗೆ ಧಕ್ಕೆ ತಂದಿರುವುದೇ ಅಲ್ಲದೆ ಲಿಂಗಾಯಿತರನ್ನು ಅವಮಾನಿಸುವ ಮೂಲಕ ವೈದಿಕರನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಹೇಳಿದರು.

    ಅವರು ಬಸವಕೇಂದ್ರ, ಜಯದೇವ ವಿದ್ಯಾರ್ಥಿ ನಿಲಯಟ್ರಸ್ಟ್ ಮತ್ತು ಜಾಗತಿಕ ಲಿಂಗಾಯತ ಮಹಾಸಭಾದವರು ಮುರುಘರಾಜೇಂದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಶರಣಸಂಗಮ ಮತ್ತು ವಿಜಯಕುಮಾರ ಕಮ್ಮಾರ್ ಅವರ ಶರಣ ಸಿದ್ಧಾಂತಗಳು ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.


    Provided by

    ಸಾಮಾಜಿಕ ಕಳಕಳಿ ಇದ್ದ ಬಸವಣ್ಣ ದುರ್ಬಲ ಮನಸ್ಸಿನವರಾಗಿದ್ದರೆ ಅವರು ಅಂದು ಅಧಿಕಾರದ ಉನ್ನತ ಅಧಿಕಾರದಲ್ಲಿದ್ದರು ಇಡೀ ರಾಜಪ್ರಭುತ್ವವನ್ನು ಎದುರು ಹಾಕಿಕೊಂಡು ಸಾಮಾನ್ಯ ಜನರ ಪರವಾಗಿ ಹೋರಾಟ ಮಾಡುತ್ತಿರಲಿಲ್ಲ. ಅವರ ಉದ್ದೇಶ ಸಮಸಮಾಜ ನಿರ್ಮಾಣ ಮಾಡುವುದು, ಸಮಪಾಲು, ಸಮಬಾಳು ಎಂಬುದೇ ಬಸವಣ್ಣನ ಘೋಷಮಂತ್ರವಾಗಿತ್ತು ಎಂದರು.

    ಉಪನ್ಯಾಸ ನೀಡಿದ ಸಾಹಿತಿಗಳಾದ ಡಾ. ಬಿ.ಸಿ.ಶೈಲಾನಾಗರಾಜ್ ಅವರು ಕುಲಮೂಲ ಕಾಯಕ ಜೀವಿಗಳನ್ನು ಒಂದೆಡೆ ಸಂಘಟಿಸಿದ ಬಸವಣ್ಣ ಅವರ ಕಾಯಕಕ್ಕೆ ದೈವದ ಸ್ಪರ್ಶವನ್ನು ನೀಡಿ ದಲಿತ ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ ಸಮುದಾಯಗಳಿಗೆ ಆತ್ಮವಿಶ್ವಾಸವನ್ನು ತುಂಬಲು ಪ್ರಯತ್ನಿಸಿದ ಐತಿಹಾಸಿಕ ಮಹಾಪುರುಷ ಎಂದು ಬಣ್ಣಿಸಿದರು.

    ವಚನಗಳು ಆತ್ಮಸಾಕ್ಷಿಯ ನುಡಿಗಳು ಆಗಿದ್ದು ಕೆಲವೇ ಸಮುದಾಯಕ್ಕೆ ಮೀಸಲಾಗಿದ್ದ ಅಕ್ಷರ ಜ್ಞಾನವನ್ನು ಎಲ್ಲ ಸಮುದಾಯಗಳಿಗೆ ವಿಸ್ತರಿಸಿ ಅವರನ್ನೂ ಅಕ್ಷರವಂತರನ್ನಾಗಿ ಮಾಡಿದ ಬಸವಣ್ಣ ಸಾಕ್ಷರತಾ ಆಂದೋಲನದ ಜನಕನಾಗಿದ್ದಾನೆ. ಕುಲಕಸುಬನ್ನು ಮಾಡುತ್ತಿದ್ದ ಜನಾಂಗದ ಅನೇಕ ಶರಣರು ವಚನಗಳನ್ನು ರಚಿಸಿದ್ದು ಸುಮಾರು ಇಪ್ಪತ್ತೈದು ಸಾವಿರ ವಚನಗಳು ಲಭ್ಯವಿದೆ. 770 ವಚನಕಾರರಲ್ಲಿ 33 ವಚನಕಾರ್ತಿಯರೂ ಇರುವುದು ಬಸವಣ್ಣನವರ ಚಳುವಳಿಯ ಫಲಶ್ರುತಿಯಾಗಿದೆ ಎಂದರು.

    ಕೃತಿಯ ಲೇಖಕರಾದ ವಿಜಯಕುಮಾರ ಕಮ್ಮಾರ್ ಅವರು ಮಾತನಾಡಿ ದೇಹವನ್ನೇ ದೇವಾಲಯವಾಗಿ ರೂಪಿಸಿದ ಬಸವಣ್ಣ ಪ್ರತಿಯೊಬ್ಬರಿಗೂ ಇಷ್ಟಲಿಂಗಧಾರಣೆ ಮಾಡುವ ಮೂಲಕ ಶಿವಸಂಸ್ಕೃತಿಯ ನೇತಾರನೆನಿಸಿಕೊಂಡಿದ್ದಾನೆ. ಇಷ್ಟಲಿಂಗವೆಂಬುದು ಸಮಾನತೆಯ ಸಂಕೇತವಾಗಿದ್ದು ಅದರ ಮೂಲಕ ದೇವರನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟರು.

    ವೇದಿಕೆಯಲ್ಲಿ ಕೈಗಾರಿಕೋದ್ಯಮಿ ಡಿ.ವಿ.ಶಿವಾನಂದ್ ಹಾಜರಿದ್ದರು. ಸಿದ್ದಗಂಗಮ್ಮ ಬಿ. ಸಿದ್ಧರಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ಶಿವಾನಂದ್ ಪ್ರಾರ್ಥಿಸಿದರು. ಜಾಗತಿಕ ಲಿಂಗಾಯತ ಮಹಾಸಭಾದ ನಾಗಭೂಷಣ್ ಸ್ವಾಗತಿಸಿದರು. ತಾಲ್ಲೂಕು ಕ.ಸಾ.ಪ. ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್ ವಂದಿಸಿದರು. ಬಸವಕೇಂದ್ರದ ಕಾರ್ಯದರ್ಶಿ ಚಂದ್ರಶೇಖರ್ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.