nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ
    • ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ
    • ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್
    • ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ
    • ಗ್ರಾ.ಪಂ. ಕರ ವಸೂಲಿಗಾರರ ಹುದ್ದೆ ಸ್ಥಳೀಯರಿಗೆ ನೀಡಿ
    • ಬಾಲಕಿಗೆ ಆಸೆ ಹುಟ್ಟಿಸಿ ಕರೆದೊಯ್ದ ವ್ಯಕ್ತಿ ವಿರುದ್ಧ ದೂರು ದಾಖಲು
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಬಸವಣ್ಣ ಪ್ರೇರಣೆ: ಬಸವರಾಜ ಬೊಮ್ಮಾಯಿ
    ರಾಜ್ಯ ಸುದ್ದಿ November 17, 2023

    ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಬಸವಣ್ಣ ಪ್ರೇರಣೆ: ಬಸವರಾಜ ಬೊಮ್ಮಾಯಿ

    By adminNovember 17, 2023No Comments2 Mins Read
    basavaraja bommayi

    ಬೆಂಗಳೂರು: ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ. ಕಳಬೇಡ ಕೊಲಬೇಡ ಎನ್ನುವುದು ನಮ್ಮ ಧ್ಯೇಯವಾಗಬೇಕು. ಅದನ್ನು ಪಾಲಿಸಿದರೆ ಮನುಷ್ಯ ಸಂತೋಷ ಮತ್ತು ಸಮಾಧಾನದಿಂದ ಸರಳ ಜೀವನ ನಡೆಸಬಹುದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಹಾಗೂ ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


    Provided by
    Provided by

    ಶರಣ ಸಾಹಿತ್ಯ ವಚನದ ರೂಪದಲ್ಲಿ ಬರದೇ ಇದ್ದರೆ ಕನ್ನಡ ಸಾಹಿತ್ಯ ಎಷ್ಟು ಬಡವಾಗುತ್ತಿತ್ತು ಎಂದು ಎಲ್ಲರೂ ಯೋಚನೆ ಮಾಡಬೇಕಿದೆ. ಮಾತಿಗೆ ಅರ್ಥ ಬರಬೇಕಾದರೆ ನಡೆ ನುಡಿ ಬಹಳ ಮುಖ್ಯ, ಜ್ಞಾನ, ವಿಜ್ಞಾನ ತಂತ್ರಜ್ಞಾನ ಎಲ್ಲವೂ ಇದೆ. ಅದರಲ್ಲಿ ನಮ್ಮ ತನದ ಭಾವ ಮೂಡಬೇಕಿರುವುದು ಮುಖ್ಯವಾಗಿದೆ. ವಚನಗಳು ಶುದ್ದ ಕನ್ನಡದಲ್ಲಿ ಶರಣರು ಕರ್ನಾಟಕಕ್ಕೆ  ಕೊಟ್ಟಿರುವ ಶಾಸ್ವತ ಕೊಡುಗೆಯಾಗಿದೆ ಎಂದು ಹೇಳಿದರು.

    ಇವನಾರವ ಇವನಾರವ ಎನ್ನುವ ಬದಲು ಇವನಮ್ಮವ ಎನ್ನುವ ವಚನದಲ್ಲಿ ಸಮಾನತೆ ಅಡಗಿದೆ. ದಯವೇ ಧರ್ಮದ ಮೂಲವಯ್ಯ ಎನ್ನುವ ವಚನದಲ್ಲಿ ಧರ್ಮದ ಸಾರ ಅಡಗಿದೆ. ಬಸವಣ್ಣನವರು ತಾವಷ್ಟೇ ವಚನ ಸಾಹಿತ್ಯ ನೀಡದೇ ಎಲ್ಲ ಸಮುದಾಯಗಳ ಅನುಭವಗಳನ್ನು ವಚನಗಳ ಮೂಲಕ ತರುವ ಪ್ರಯತ್ನ ಮಾಡಿದ್ದಾರೆ. ಬಸವಣ್ಣನವರು ದೇವರು ಮತ್ತು ಮನುಷ್ಯರ ನಡುವೆ ಮಧ್ಯವರ್ತಿಗಳನ್ನು ತೆಗೆದು ಹಾಕಿದ್ದಾರೆ. ಇದು ಬಹಳ ಚಿಂತನೆ ಮಾಡುವ ವಿಚಾರ.  ನಾನು ಮತ್ತು ನನ್ನ ಆತ್ಮಸಾಕ್ಷಿಯ ನಡುವೆ ಯಾರೂ ಬೇಕಾಗಿಲ್ಲ ಅಂತ ಹೇಳಿದ್ದಾರೆ ಎಂದರು.

    ಕ್ಷಣ ಹೊತ್ತು ಅಣಿ ಮುತ್ತು ಕೃತಿಕಾರ ಷಡಕ್ಷರಿಯವರು ಎಂದೂ ಕೂಡ ಅಸಮಾಧಾನಗೊಂಡಿಲ್ಲ. ಅವರು ಯಾವಾಗಲೂ ಸಮಾಧಾನದಿಂದ ಎಲ್ಲರೊಂದಿಗೆ ಬೆರೆಯುವ ಗುಣ ಅನುಕರಣೀಯ ಎಂದರು.

    ಸಿದ್ದರಾಮಯ್ಯ ಅವರ ನಡೆ ಭಿನ್ನ

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಮೂಲ ಪ್ರೇರಣೆ ಬಸವಣ್ಣ ಮತ್ತು ವಚನ ಸಾಹಿತ್ಯ. ಅವರು  ಬಸವಣ್ಣನವರ ತತ್ವಗಳನ್ನು ನಂಬಿದವನು ಎಂದು ಬಲವಾಗಿ ಹೇಳುತ್ತಾರೆ. ಹೀಗಾಗಿ ಅವರ ಕೆಲಸಗಳು ಮತ್ತು ನಡೆ ಎಲ್ಲರಿಗಿಂತ ಬಿನ್ನವಾಗಿ ಕಾಣುತ್ತದೆ. ಸಮಾಜದ ತುಳಿತಕ್ಕೊಳಗಾದವರ ಸಮಾನತೆಗಾಗಿ ನಿರಂತರವಾಗಿ ಕೆಲಸ ಮಾಡುವುದೇ ಒಬ್ಬ ನಿಜವಾದ ನಾಯಕನ ಜವಾಬ್ದಾರಿ. ರಾಜಕಾರಣಿಯ ಕಣ್ಣು ಮುಂದಿನ ಚುನಾವಣೆಯ ಮೇಲೆ ಇದ್ದರೆ, ಒಬ್ಬ ಸ್ಟೇಟ್ಸ್ ಮನ್ ಕಣ್ಣು ಮುಂದಿನ ಜನಾಂಗದ‌ ಮೇಲೆ ಇದೆ. ನಾವು ವಿರೋಧ ಪಕ್ಷದಲ್ಲಿ ಇದ್ದರೂ ಕೂಡ ಸಿದ್ದರಾಮಯ್ಯ ಅವರ ಈ ವಿಚಾರಧಾರೆಯನ್ನು ನಾವು ಮೊದಲಿನಿಂದಲೂ ನೋಡಿಕೊಂಡು ಬಂದಿದ್ದೇವೆ. ಅವರ ನಡೆ ನುಡಿ ಎಲ್ಲರಿಗೂ ಅರ್ಥವಾಗಿದೆ. ಅವರಿಂದ ಶರಣ ಸಾಹಿತ್ಯ ಪ್ರಶಸ್ತಿ ನೀಡಿರುವುದು ಅತ್ಯಂತ ಸೂಕ್ತವಾಗಿದೆ. ಇದರಿಂದ ಅವರಲ್ಲಿ ಇನ್ನಷ್ಟು ಬಸವ ತತ್ವ ವಿಚಾರಗಳು ಗಟ್ಟಿಯಾಗುತ್ತವೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ವಿ.‌ಸೋಮಣ್ಣ, ಕೃತಿಕಾರ ಷಡಕ್ಷರಿ ಸೇರಿದಂತೆ ಗಣ್ಯರು ಹಾಜರಿದ್ದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೆಂಗೇರಿ: ಶೇಷಾದ್ರಿಪುರಂ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಅಂತರ್ ಕಾಲೇಜು ಯುವ ಸಮಾವೇಶ

    May 1, 2026

    ಕೆಂಗೇರಿ: ಉಪನಗರದಲ್ಲಿರುವ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಕಾಲೇಜಿನಲ್ಲಿ ಮಂಗಳವಾರದಂದು “ಸಶಕ್ತ ಭಾರತಕ್ಕಾಗಿ ಸಮಾನ ಅವಕಾಶಗಳು” ಎಂಬ ವಿಷಯದಡಿ…

    ತಿಪಟೂರು–ಹುಳಿಯಾರು ಸಂಪರ್ಕ ರಸ್ತೆ: ಎಚ್.ಭೈರಾಪುರದಲ್ಲಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ

    May 1, 2026

    ಡಾ.ಬಿ.ಆರ್.ಅಂಬೇಡ್ಕರ್ ರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಚಾರ: ಡಾ.ಬಿ.ಎನ್.ನಾಗಭೂಷಣ್

    May 1, 2026

    ಮೇ 3ರಿಂದ ಪತ್ರೆಮತ್ತಿಘಟ್ಟದಲ್ಲಿ ಶ್ರೀ ಜೋಡಿಬಸವೇಶ್ವರಸ್ವಾಮಿ ಜಾತ್ರೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.