nammatumakuru

    Subscribe to Updates

    Get the latest creative news from FooBar about art, design and business.

    What's Hot

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026
    Facebook Twitter Instagram
    ಟ್ರೆಂಡಿಂಗ್
    •  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    • ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು
    • ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ
    • ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ
    • ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ
    • ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.
    • ಸಾಲ ಸೌಲಭ್ಯ: ಕಾಡುಗೊಲ್ಲ ಸಮುದಾಯದವರಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ
    • ಹೊಲದ ಕಟ್ಟೆಯಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ; 2.35 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home »  “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ
    ತುಮಕೂರು September 11, 2026

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    By Ganesh TumkuruSeptember 11, 2026No Comments3 Mins Read
    basava

    ತುಮಕೂರು: ಒಂಬೈನ್ನೂರು ವರ್ಷಗಳ ಹಿಂದೆ ಕಲ್ಯಾಣದಲ್ಲಿ ನಡೆದ ಶರಣ ಚಳವಳಿಯನ್ನು ಅವಲೋಕಿಸಿದರೆ, ಇದು ವಾಸ್ತವವೋ, ಕಟ್ಟು ಕಥೆಯೋ ಎಂಬಂತೆ ಭಾಸವಾಗುತ್ತದೆ. ಅಂತಹ ವಚನ ಚಳವಳಿಯನ್ನು ಪುಸ್ತಕ ರೂಪದಲ್ಲಿ ನೀಡಿರುವ ಬಸವಯುಗ ವೈಭವ ಪುಸ್ತಕ ಒಂದು ಐತಿಹಾಸಿಕ ಕೃತಿ ಎಂದು ರಾಷ್ಟ್ರೀಯ ಚಿಂತಕರು, ಮಾಜಿ ಸಂಸತ್ ಸದಸ್ಯರಾದ ಡಾ.ಬಸವರಾಜ ಪಾಟೀಲ್ ಸೇಡಂ ಅಭಿಪ್ರಾಯಪಟ್ಟಿದ್ದಾರೆ.

    ಶ್ರೀಸಿದ್ಧಗಂಗಾ ಮಠದಲ್ಲಿ ಲೇಖಕರಾದ ಶಾಮಲಿಂಗ ಜವಳಿ ಅವರು ಬರೆದಿರುವ ಬಸವಾದಿ ಶರಣರನ್ನು ಸ್ಮರಿಸುವ 12ನೇ ಶತಮಾನದಿಂದ 21ನೇ ಶತಮಾನದವರೆಗಿನ ಬಸವ ತತ್ವವನ್ನು ಪರಿಚಯಿಸುವ ಬಸವಯುಗ ವೈಭವ ಗ್ರಂಥ ಬಿಡುಗಡೆ ಮಾಡಿ ಮಾತನಾಡುತ್ತಿದ್ದ ಅವರು, ಶರಣ ತತ್ವದ 900 ವರ್ಷಗಳ ಇತಿಹಾಸವನ್ನು ದಾಖಲಿಸುವ ಈ ಕೃತಿ ನಾಡಿನ ಉದ್ದಗಕ್ಕೂ ಬೆಳಕಾಗಬೇಕು  ಎಂದರು.

    ಬಸವಯುಗ ವೈಭವ ಒಂದು ವಿಶಿಷ್ಟ ಗ್ರಂಥ. 12ನೇ ಶತಮಾನದಿಂದ 21ನೇ ಶತಮಾನದವರೆಗೆ ಬಸವಣ್ಣರ ಬಗ್ಗೆ ಯಾರುಯಾರು ಬಸವ ತತ್ವವನ್ನು ಪ್ರಸರಿಸಿದರೋ ಅವರನ್ನು ಪರಿಚಯಿಸುವ ಕೆಲಸ ಆಗಿದೆ. ಬಸವಯುಗ ಮಾನವನಿಗೆ ಘನತೆ ತಂದುಕೊಟ್ಟ ಯುಗ. ಮಾನವೀಯ ಅನುಕಂಪದ ಪ್ರತಿಪಾದಿಸಿದ ಯುಗ. ಕಾಯಕ, ದಾಸೋಹ, ಸ್ತ್ರೀಸಮಾನತೆ, ಜಾತ್ಯಾತೀತ, ಮೂಢನಂಬಿಕೆ ವಿರುದ್ಧ ಹೋರಾಟ ಮಾಡಿದ ಬಸವಣ್ಣನನ್ನು ಸೊರಗಾಸಿ ಶಾಮಲಿಂಗ ಜವಳಿ ನಿರೂಪಿಸಿದ್ದಾರೆ. ಬಸವಾದಿ ಶರಣರ ಬೆಳಕು ಹರಿಯುವಂತೆ ಮಾಡಿದ್ದಾರೆ. 856 ಪುಟಗಳ ಬೃಹತ್ ಗ್ರಂಥದಂತಹ ಕೃತಿಗಳು ಮತ್ತು ಹೊರಬರಲಿ, ಸಾಮರಸ್ಯ, ಸಹಬಾಳನ್ನು ಕಲಿಸಿದ ಬಸವಯುಗ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡಿರುವರು ಸಂತಸ ತಂದಿದೆ ಎಂದು.

    -ಡಾ.ಸಿ.ಸೋಮಶೇಖರ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು.

    ಒಟ್ಟಿಗೆ ತೆಗೆದುಕೊಂಡು ಹೋಗುವ ಗುಣ ನಮ್ಮ ಶರಣರಲ್ಲಿದೆ. ಈ ಕಾರ್ಯವನ್ನು ಮಾಡುವುದೇ ನಮ್ಮನ್ನು ಅಗಲಿದ ಶರಣರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದು ಡಾ.ಬಸವರಾಜ ಪಾಟೀಲ್ ಸೇಡಂ ನುಡಿದರು.

    ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು, ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್ ಮಾತನಾಡಿ, ಬಸವಯುಗ ವೈಭವ ಒಂದು ವಿಶಿಷ್ಟ ಗ್ರಂಥ. 12ನೇ ಶತಮಾನದಿಂದ 21ನೇ ಶತಮಾನದವರೆಗೆ ಬಸವಣ್ಣರ ಬಗ್ಗೆ ಯಾರುಯಾರು ಬಸವ ತತ್ವವನ್ನು ಪ್ರಸರಿಸಿದರೋ ಅವರನ್ನು ಪರಿಚಯಿಸುವ ಕೆಲಸ ಆಗಿದೆ. ಬಸವಯುಗ ಮಾನವನಿಗೆ ಘನತೆ ತಂದುಕೊಟ್ಟ ಯುಗ, ಮಾನವೀಯ ಅನುಕಂಪದ ಪ್ರತಿಪಾದಿಸಿದ ಯುಗ. ಕಾಯಕ, ದಾಸೋಹ, ಸ್ತ್ರೀಸಮಾನತೆ, ಜಾತ್ಯಾತೀತ, ಮೂಢನಂಬಿಕೆ ವಿರುದ್ಧ ಹೋರಾಟ ಮಾಡಿದ ಬಸವಣ್ಣನನ್ನು ಸೊರಗಾಸಿ ಶಾಮಲಿಂಗ ಜವಳಿ ನಿರೂಪಿಸಿದ್ದಾರೆ. ಬಸವಾದಿ ಶರಣರ ಬೆಳಕು ಹರಿಯುವಂತೆ ಮಾಡಿದ್ದಾರೆ. 856 ಪುಟಗಳ ಬೃಹತ್ ಗ್ರಂಥದಂತಹ ಕೃತಿಗಳು ಮತ್ತು ಹೊರಬರಲಿ, ಸಾಮರಸ್ಯ, ಸಹಬಾಳನ್ನು ಕಲಿಸಿದ ಬಸವಯುಗ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡಿರುವರು ಸಂತಸ ತಂದಿದೆ ಎಂದರು.

    ಆಶಯ ನುಡಿಗಳನ್ನಾಡಿದ ಲೇಖಕ ಶಾಮಲಿಂಗ ಜವಳಿ, ಇಂತಹ ಬೃಹತ್ ಗ್ರಂಥವನ್ನು ತಯಾರಿಸಲು 40 ವರ್ಷಗಳ ನಿರಂತರ ಶ್ರಮವಿದೆ. 1986ರಲ್ಲಿ ಬಿಡುಗಡೆಯಾದ ಶರಣರ ದರ್ಶನ ಪುಸ್ತಕದಿಂದ ಪ್ರೇರೇಪಿತಗೊಂಡು, ಈ ಕೃತಿಯ ರಚನೆಗೆ ಇಳಿದೆ. 2012 ರಿಂದ 2023ರವರೆಗೆ ನಿರಂತರವಾಗಿ ಓಡಾಟ ನಡೆಸಿ, ಹಲವು ಧರ್ಮ, ಜಾತಿಯ ಪ್ರಾಜ್ಞರನ್ನು ಭೇಟಿಯಾಗಿ, ಅವರ ಮಾತುಗಳನ್ನು ಆಲಿಸಿ, ಹಲವು ಮತಮಾನ್ಯಗಳಿಗೆ ಪ್ರವಾಸ ಮಾಡಿ ಯಾರಿಂದುಲೂ ಈ ಕೃತಿಯ ಬಗ್ಗೆ ವಿವಾದ ಭೀಪದಂತೆ ನೋಡಿಕೊಂಡಿದ್ದೇವೆ. ಇದುವರೆಗೂ 150ಕ್ಕೂ ಹೆಚ್ಚು ವಿದ್ವಾಂಸರು, ಸಂಶೋಧಕರು ಈ ಕೃತಿಯನ್ನು ಓದಿ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಇಂತಹ ಕೃತಿಯನ್ನು ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಸಿದ್ಧಗಂಗಾ ಮಠದ ಶ್ರೀಸಿದ್ಧಲಿಂಗಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

    ಪ್ರಾಸ್ತಾವಿಕ ನುಡಿಗಳನ್ನಾಡಿದ ವಿದ್ವಾನ್ ಎಂ.ಜಿ. ಸಿದ್ಧರಾಮಯ್ಯ ಮಾತನಾಡಿ, ಸಿದ್ಧಗಂಗಾ ಮಠ ನತ್ಸಂಥಹ ಅಜ್ಞಾನದ ಮಕ್ಕಳತೆ ಆಸರೆ ನೀಡಿದೆ. ಇಲ್ಲಿನ ಮಕ್ಕಳಿಗೆ ಶಿಕ್ಷಣದ ಜೊತೆಗೆ, ಸಂಸ್ಕಾರವನ್ನು ನೀಡಿ, ಅವರ ಬೆಳವಣಿಗೆಗೆ ಕಾರಣರಾಗಿದ್ದಾರೆ. ಅವರು ಪುಸ್ತಕ ಬಿಡುಗಡೆ ಅವಕಾಶ ಕಲ್ಪಿಸಿರುವುದು ನಮ್ಮೆಲ್ಲರ ಭಾಗ್ಯ ಎಂದರು. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿ ಮಾತನಾಡಿ, ಶಾಮಲಿಂಗ ಜವಳಗಿ ಅವರು ಹೊರತಂದಿರುವ ಬಸವಯುಗ ವೈಭವ ಅತ್ಯಂತ ಮಹತ್ವ ಕೃತಿ. ಬಸವಯುಗದ ಬೆಳಕು ಎಲ್ಲಾ ಶತಮಾನಕ್ಕೂ ಬೇಕಿದೆ. ಒಳ್ಳೆಯ ಮನುಷ್ಯನಾಗಲು ಬಸವಣ್ಣನವರ ವಿಚಾರಧಾರೇಗಳು ಬೇಕಿದೆ. ಪ್ರಚಾರಕ್ಕಿಂತ ಆಚರಣೆ ಮುಖ್ಯವಾಗಿದೆ. ಬಸವಣ್ಣನವರ ಬಗ್ಗೆ ಅಪಾರ ಕೃತಿಗಳಿವೆ. ಅವುಗಳಿಗೆ ಕಳಸವಿಟ್ಟಂತೆ ಈ ಕೃತಿ ಇದೆ. ಬಸವಣ್ಣನವರ ಬಗ್ಗೆ ಸಂಶೋಧನೆ ನಡೆಸುವವರಿಗೆ ಆಕರ ಗ್ರಂಥವಾಗಿದೆ. ನಾವೆಲ್ಲರೂ ಕೊಂಡು ಓದುವ ಮೂಲಕ ಪ್ರೋತ್ಸಾಹಿಸಬೇಕಿದೆ ಎಂದರು.ಕಾರ್ಯಕ್ರಮದಲ್ಲಿ ಯುವ ಚಿಂತಕರಾದ ಮಹೇಶ್ ರೆಡ್ಡಿ ವೆಂಕಟರೆಡ್ಡಿ ಮುದ್ದಾಳ, ವಿನ್ಯಾಸಕರಾದ ರವಿಕಿರಣ್ ನರಗುಂದ, ಮುದ್ರಕರಾದ ಬಿ.ವಿ.ಪಾಟೀಲ್,ಅಕ್ಷರ ಜೋಡಿಸಿದ ಶರಣಕುಮಾರ್ ಮರಪತಿ ಸೇರಿದಂತೆ ಇತರರು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    ತುಮಕೂರು: ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ, ಪೌಷ್ಟಿಕಾಂಶದ ಅರಿವು ಕಾರ್ಯಕ್ರಮ

    September 10, 2026

    ವಸತಿ ಶಾಲೆಗಳಿಗೆ ವೈದ್ಯಾಧಿಕಾರಿಗಳ ಭೇಟಿ ಕಡ್ಡಾಯ: ಆಶ್ವಿಜಾ ಬಿ.ವಿ.

    September 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

     “ಸಮಾನತೆ ಕಲಿಸಿದ ಬಸವಣ್ಣ ನಾಡಿನ ಸಾಂಸ್ಕೃತಿಕ ನಾಯಕ” | ಬಸವಯುಗ ವೈಭವ ಗ್ರಂಥ ಬಿಡುಗಡೆ

    September 11, 2026

    ತುಮಕೂರು: ಒಂಬೈನ್ನೂರು ವರ್ಷಗಳ ಹಿಂದೆ ಕಲ್ಯಾಣದಲ್ಲಿ ನಡೆದ ಶರಣ ಚಳವಳಿಯನ್ನು ಅವಲೋಕಿಸಿದರೆ, ಇದು ವಾಸ್ತವವೋ, ಕಟ್ಟು ಕಥೆಯೋ ಎಂಬಂತೆ ಭಾಸವಾಗುತ್ತದೆ.…

    ಬೀದರ್: ಬಿಸಿಎಂ ವಸತಿ ನಿಲಯದಲ್ಲಿ ಅವ್ಯವಸ್ಥೆ: ಕಿರಿಯ ಮೇಲ್ವಿಚಾರಕಿ ಅಮಾನತು

    September 11, 2026

    ಡಿಜೆ, ಅತಿಯಾದ ಶಬ್ದಕ್ಕೆ ಕಡಿವಾಣ : ಇನ್ಸ್ಪೆಕ್ಟರ್ ಸುರೇಶ್ ಎಚ್ಚರಿಕೆ

    September 11, 2026

    ತುಮಕೂರು ದಸರಾ ಮಹೋತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

    September 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.