ಪಾವಗಡ: ತಾಲೂಕು ಕೆ.ಟಿ. ಹಳ್ಳಿ ಕ್ಲಸ್ಟರ್ ಸಿ.ಅರ್. ಪಿ. ಬಸವರಾಜ್ ಅವರಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದ ಕೆ.ಟಿ.ಹಳ್ಳಿ. ಗ್ರಾಮದಲ್ಲಿ ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಗಳ ವತಿಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು
ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ. ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಕಲಿಕೆಗೆ ಉತ್ತಮ ರೀತಿಯ ಸಹಾಯ ಸಹಕಾರ ನೀಡಿ ಐದು ವರ್ಷಗಳ ಕಾಲ ಸಲ್ಲಿಸಿರುವ ಸೇವೆಯನ್ನು ಪ್ರಶಂಸಿಸಿದರು.
ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಸಿ.ಅರ್. ಪಿ. ಬಸವರಾಜು, ಸುಮಾರು ಐದು ವರ್ಷಗಳ ಕಾಲ ಕ್ಲಸ್ಟರ್ ಶಾಲೆಗಳ ಸಂಪನ್ಮೂಲ ವ್ಯಕ್ತಿಯಾಗಿ ಎಲ್ಲಾ ಶಾಲೆಗಳ ಶಿಕ್ಷಕರುಗಳ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಗಳ ಸಹಾಯ ಸಹಕಾರದೊಂದಿಗೆ ಉತ್ತಮ ರೀತಿಯ ಕೆಲಸಗಳನ್ನು ಮಾಡಿದ್ದೇನೆ. ನನಗೆ ಶಿಕ್ಷಕರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದು, ಕ್ಲಸ್ಟರ್ ಗೆ ಉತ್ತಮ ಹೆಸರು ಬರಲು ಶಿಕ್ಷಕರ ಸಹಕಾರವೇ ಕಾರಣ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು. ಮುಂದಿನ ದಿನಗಳಲ್ಲಿ ತಮ್ಮ ಶಾಲೆಗಳನ್ನು ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಶಾಲೆಗಳನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಕರಾದ ರಾಜಗೋಪಾಲ್ ನಾಯಕ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಕ್ಲಸ್ಟರ್ ಮಟ್ಟದ ಪ್ರಾರ್ಥಮಿಕ ಕಿರಿಯ., ಹಿರಿಯ , ಪ್ರೌಢಶಾಲೆಗಳ. ಶಿಕ್ಷಕರುಗಳಾದ ರಾಘವೇಂದ್ರ., ನಾಗರಾಜ್. ಟಿ., ಕಾಪು ರಾಧಾಕೃಷ್ಣ , ಡಿ.ಎನ್. ಸತ್ಯನಾರಾಯಣ, ಮಂಜುನಾಥ್, ಸಿದ್ದೇಶ್ವರಪ್ಪ, ಗುಜ್ಜಾರಪ್ಪ, ನರಸಪ್ಪ ಜಯಮ್ಮ, ಭಾರತಿ, ಎಚ್ .ನಾಗಶ್ರೀ, ವಾಣಿ ಮುಂತಾದವರು ಭಾಗವಹಿಸಿದ್ದರು.
ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB